ದಹನಬಲಿಯನ್ನು ವಧಿಸಿದ ಸ್ಥಳದಲ್ಲಿಯೇ ಅತಿಕ್ರಮದ ಬಲಿಯನ್ನು ವಧಿಸಬೇಕು: ಅವನು ಅದರ ರಕ್ತವನ್ನು ಯಜ್ಞವೇದಿಯ ಮೇಲೆ ಸುತ್ತಲೂ ಚಿಮುಕಿಸ ಬೇಕು.
Cross references
ಅವನ ಯಜ್ಞವು ಹಿಂಡಿನ ದಹನಬಲಿಯಾಗಿದ್ದರೆ ಅವನು ದೋಷವಿಲ್ಲದ ಗಂಡನ್ನು ಅರ್ಪಿಸಲಿ; ಅವನು ಅದನ್ನು ತನ್ನ ಸ್ವಇಚ್ಛೆಯಿಂದ ಕರ್ತನ ಮುಂದೆ ಸಭೆಯ ಗುಡಾರದ ಬಾಗಿಲ ಬಳಿಯಲ್ಲಿ ಅರ್ಪಿಸಬೇಕು.
ಅವನು ಆ ಹೋರಿಯನ್ನು ಕರ್ತನ ಮುಂದೆ ವಧಿಸಬೇಕು; ಆಗ ಆರೋನನ ಕುಮಾರರಾದ ಯಾಜಕರು ರಕ್ತವನ್ನು ತಂದು ಸಭೆಯ ಗುಡಾರದ ಬಾಗಿಲ ಬಳಿಯಲ್ಲಿರುವ ಯಜ್ಞವೇದಿಯ ಸುತ್ತಲೂ ಚಿಮುಕಿಸಬೇಕು.
ಅವನು ಅದನ್ನು ಯಜ್ಞವೇದಿಯ ಉತ್ತರದ ಕಡೆಯಲ್ಲಿ ಕರ್ತನ ಮುಂದೆ ವಧಿಸಬೇಕು. ಇದಲ್ಲದೆ ಆರೋನನ ಕುಮಾರ ರಾದ ಯಾಜಕರು ಅದರ ರಕ್ತವನ್ನು ಯಜ್ಞವೇದಿಯ ಸುತ್ತಲೂ ಚಿಮುಕಿಸಬೇಕು.
ಅವನು ಸಮರ್ಪಿ ಸುವದರ ತಲೆಯ ಮೇಲೆ ತನ್ನ ಕೈಯನ್ನು ಇಟ್ಟು ಅದನ್ನು ಸಭೆಯ ಗುಡಾರದ ಬಾಗಿಲ ಬಳಿಯಲ್ಲಿ ವಧಿಸ ಬೇಕು; ಯಾಜಕರಾದ ಆರೋನನ ಕುಮಾರರು ಯಜ್ಞವೇದಿಯ ಮೇಲೆ ಸುತ್ತಲೂ ರಕ್ತವನ್ನು ಚಿಮುಕಿಸ ಬೇಕು.
ಅವನು ತನ್ನ ಅರ್ಪಣೆಯ ತಲೆಯ ಮೇಲೆ ತನ್ನ ಕೈಯನ್ನು ಇಟ್ಟು ಅದನ್ನು ಸಭೆಯ ಗುಡಾರದ ಎದುರಿನಲ್ಲಿ ವಧಿಸಬೇಕು. ಇದಲ್ಲದೆ ಆರೋನನ ಕುಮಾರರು ಯಜ್ಞವೇದಿಯ ಮೇಲೆ ಸುತ್ತಲೂ ರಕ್ತವನ್ನು ಚಿಮುಕಿಸಬೇಕು.
ಅವನು ತನ್ನ ಕೈಯನ್ನು ಆ ಮೇಕೆ ತಲೆಯ ಮೇಲೆ ಇಟ್ಟು ಕರ್ತನ ಮುಂದೆ ದಹನಬಲಿಯನ್ನು ವಧಿಸುವ ಸ್ಥಳದಲ್ಲಿ ಅದನ್ನು ವಧಿಸಬೇಕು; ಅದು ಪಾಪದ ಬಲಿಯಾಗಿರುವದು.
ಅವನು ತನ್ನ ಕೈಯನ್ನು ಪಾಪದ ಬಲಿಯ ಮೇಲಿಟ್ಟು ಆ ಪಾಪದ ಬಲಿಯನ್ನು ದಹನಬಲಿಯ ಸ್ಥಳದಲ್ಲಿ ವಧಿಸಬೇಕು.
ಅವನು ಅದರ ತಲೆಯ ಮೇಲೆ ತನ್ನ ಕೈಯನ್ನಿಟ್ಟು ಪಾಪದ ಬಲಿಗಾಗಿ ದಹನಬಲಿಯನ್ನು ವಧಿಸುವ ಸ್ಥಳದಲ್ಲಿ ವಧಿಸಬೇಕು.
ಇದಲ್ಲದೆ ಅವನು ಪಾಪದ ಬಲಿಯ ರಕ್ತವನ್ನು ಯಜ್ಞವೇದಿಯ ಬದಿಯಲ್ಲಿ ಚಿಮುಕಿಸಬೇಕು. ಉಳಿದ ರಕ್ತವನ್ನು ಯಜ್ಞವೇದಿಯ ಬದಿಯಲ್ಲಿ ಹಿಂಡಬೇಕು; ಅದು ಪಾಪದ ಬಲಿಯಾಗಿದೆ.
ಆರೋನನಿಗೂ ಅವನ ಕುಮಾರರಿಗೂ ಹೇಳಬೇಕಾ ದದ್ದೇನಂದರೆ, ಪಾಪದ ಬಲಿಯ ನಿಯಮವು ಇದೇ. ದಹನಬಲಿಯು ವಧಿಸಲ್ಪಡುವ ಸ್ಥಳದಲ್ಲಿ ಪಾಪದ ಬಲಿಯೂ ಕರ್ತನ ಸನ್ನಿಧಿಯಲ್ಲಿ ವಧಿಸಲ್ಪಡ ಬೇಕು; ಅದು ಅತಿ ಪರಿಶುದ್ಧವಾದದ್ದು.
ಇದಲ್ಲದೆ ಅವನು ಆ ಕುರಿಮರಿಯನ್ನು ಪರಿಶುದ್ಧ ಸ್ಥಳದಲ್ಲಿ ಪಾಪಬಲಿಯನ್ನೂ ದಹನಬಲಿಯನ್ನೂ ವಧಿಸುವ ಸ್ಥಳದಲ್ಲಿ ವಧಿಸಬೇಕು; ಯಾಕಂದರೆ ಪಾಪಬಲಿಯಂತೆಯೇ ಅಪರಾಧ ಬಲಿಯೂ ಯಾಜಕನದಾಗಿದೆ, ಅದು ಅತಿ ಪರಿಶುದ್ಧವಾದದ್ದು.
ಅವನು ಪ್ರತ್ಯೇಕಿಸಲ್ಪಟ್ಟ ತನ್ನ ದಿವಸಗಳನ್ನು ಕರ್ತನಿಗೆ ಪ್ರತ್ಯೇಕಿಸಿ ಅಪರಾಧ ಬಲಿಯಾಗಿ ಒಂದು ವರುಷದ ಕುರಿಮರಿ ಯನ್ನು ತರಬೇಕು; ಆದರೆ ಮೊದಲಿನ ದಿವಸಗಳು ವ್ಯರ್ಥವಾಗುವವು; ಅವನು ಪ್ರತ್ಯೇಕಿಸಲ್ಪಟ್ಟದ್ದು ಅಶುದ್ಧವಾಯಿತು.
ಹಾಗೆಯೇ ಅನೇಕ ಜನಾಂಗ ಗಳನ್ನು ಆತನು ಚಮಕಿತ ಮಾಡುವನು; ಅರಸರು ಆತನ ನಿಮಿತ್ತ ತಮ್ಮ ಬಾಯಿಗಳನ್ನು ಮುಚ್ಚಿಕೊಳ್ಳು ವರು; ಯಾಕಂದರೆ ಅವರಿಗೆ ತಿಳಿಸಲ್ಪಡದೇ ಇರುವ ದನ್ನು ಅವರು ನೋಡುವರು; ಕೇಳದೇ ಇರುವದನ್ನು ಗ್ರಹಿಸುವರು.
ಆಮೇಲೆ ನಾನು ನಿಮ್ಮ ಮೇಲೆ ಶುದ್ಧವಾದ ನೀರನ್ನು ಚಿಮುಕಿಸುತ್ತೇನೆ ಮತ್ತು ನೀವು ಶುದ್ಧರಾಗುವಿರಿ; ಅಶುದ್ಧತ್ವಗಳಿಂದಲೂ ನಿಮ್ಮ ಎಲ್ಲಾ ವಿಗ್ರಹಗಳಿಂದಲೂ ನಿಮ್ಮನ್ನು ಶುದ್ಧೀಕರಿಸುವೆನು.
ಬಾಗಲ ದ್ವಾರಾಂಗಣದಲ್ಲಿ ಎರಡು ಮೇಜುಗಳು ಆ ಕಡೆಗೆ ಇದ್ದವು. ದಹನಬಲಿ ಯನ್ನೂ ಪಾಪ ಬಲಿಯನ್ನೂ ಅಪರಾಧ ಬಲಿಯನ್ನೂ ವಧಿಸುವ ಹಾಗೆ ಅವು ಇದ್ದವು.
ಮೋಶೆಯು ಪ್ರತಿಯೊಂದು ವಿಧಿಯನ್ನು ನ್ಯಾಯಪ್ರಮಾಣದ ಪ್ರಕಾರ ಜನರೆಲ್ಲರಿಗೆ ಹೇಳಿದ ಮೇಲೆ ನೀರು, ಕೆಂಪು ಉಣ್ಣೇ, ಹಿಸ್ಸೋಪು ಇವು ಗಳೊಂದಿಗೆ ಕರುಗಳ ಮತ್ತು ಹೋತಗಳ ರಕ್ತವನ್ನು ತೆಗೆದುಕೊಂಡು ಗ್ರಂಥದ ಮೇಲೆ ಯೂ ಎಲ್ಲಾ ಜನರ ಮೇಲೆಯೂ ಪ್ರೋಕ್ಷಿಸಿ--
ಇಸ್ರಾಯೇಲ್ಯರ ಚೊಚ್ಚಲಮಕ್ಕಳನ್ನು ಸಂಹರಿಸುವವನು ಅವರನ್ನು ಮುಟ್ಟದಂತೆ ಅವನು ಪಸ್ಕವನ್ನೂ ರಕ್ತ ಪ್ರೋಕ್ಷಣೆಯನ್ನೂ ಆಚರಿಸಿದ್ದು ನಂಬಿಕೆಯಿಂದಲೇ.
ಹೊಸಒಡಂಬಡಿಕೆಗೆ ಮಧ್ಯಸ್ಥನಾಗಿರುವ ಯೇಸುವಿನ ಬಳಿಗೂ ಹೇಬೆಲನ ರಕ್ತಕ್ಕಿಂತ ಹಿತಕರವಾಗಿ ಮಾತನಾಡುವ ಪ್ರೋಕ್ಷಣ ರಕ್ತದ ಬಳಿಗೂ ಬಂದಿದ್ದೀರಿ.
ಪವಿತ್ರಾತ್ಮನಿಂದ ಪ್ರತಿಷ್ಟಿಸಲ್ಪಟ್ಟವರಾಗಿ ವಿಧೇಯರಾ ಗುವದಕ್ಕೂ ಯೇಸು ಕ್ರಿಸ್ತನ ರಕ್ತದಿಂದ ಪ್ರೋಕ್ಷಿತರಾಗು ವದಕ್ಕೂ ತಂದೆಯಾದ ದೇವರ ಭವಿಷ್ಯದ್ ಜ್ಞಾನಾನು ಸಾರವಾಗಿ ಆರಿಸಿಕೊಳ್ಳಲ್ಪಟ್ಟವರಿಗೆ ಬರೆಯುವದೇ ನಂದರೆ--ನಿಮಗೆ ಕೃಪೆಯೂ ಶಾಂತಿಯೂ ಹೆಚ್ಚೆಚ್ಚಾಗಿ ದೊರೆಯಲಿ.