ಮನುಷ್ಯರು ಕರ್ತನಿಗೆ ಬೆಂಕಿಯಿಂದ ಸಮರ್ಪಿಸಿದ ಪ್ರಾಣಿಯ ಕೊಬ್ಬನ್ನು ಯಾವನಾದರೂ ತಿಂದರೆ ಅವನು ತನ್ನ ಜನರಿಂದ ತೆಗೆಯಲ್ಪಡಬೇಕು.
Cross references
ಸುನ್ನತಿಯಾಗದ ಗಂಡಸಿಗೆ ನನ್ನ ಒಡಂಬಡಿಕೆಯನ್ನು ವಿಾರಿದ ಕಾರಣ ಅವನು ಜನರೊಳಗಿಂದ ತೆಗೆದುಹಾಕಲ್ಪಡಬೇಕು ಅಂದನು.
ನೀನು ಅವುಗಳನ್ನು ಅವರ ಕೈಯಿಂದ ತೆಗೆದುಕೊಂಡು ಯಜ್ಞವೇದಿಯ ಮೇಲೆ ದಹನಬಲಿ ಯಾಗಿ ಕರ್ತನ ಮುಂದೆ ಸುವಾಸನೆಗೋಸ್ಕರ ದಹಿಸ ಬೇಕು. ಅದು ಕರ್ತನಿಗೆ ಬೆಂಕಿಯಿಂದ ಮಾಡಿದ ಅರ್ಪಣೆ.
ನೀವು ಕೊಬ್ಬನ್ನಾಗಲಿ ರಕ್ತವನ್ನಾಗಲಿ ತಿನ್ನದಂತೆ ಇದು ನಿಮ್ಮ ಸಂತತಿಯ ವರಿಗೆಲ್ಲಾ ಎಲ್ಲಾ ನಿವಾಸಗಳಲ್ಲಿ ನಿರಂತರವಾದ ಕಟ್ಟಳೆಯಾಗಿರುವದು.
ಯಾವನಾದರೂ ಅಶುದ್ಧನಾಗಿದ್ದು ಕರ್ತ ನಿಗೆ ಸಂಬಂಧಪಟ್ಟ ಸಮಾಧಾನ ಬಲಿಗಳ ಯಜ್ಞದ ಮಾಂಸವನ್ನು ತಿನ್ನುವನೋ ಅವನು ತನ್ನ ಜನರಿಂದ ತೆಗೆಯಲ್ಪಡಬೇಕು.
ಇದಲ್ಲದೆ ಯಾವನಾದರೂ ಮನುಷ್ಯನ ಅಶುದ್ಧತ್ವವನ್ನಾಗಲಿ ಯಾವುದೇ ಅಶುದ್ಧ ವಾದದ್ದನ್ನಾಗಲಿ ಇಲ್ಲವೆ ಯಾವುದೇ ಹೊಲೆಯಾದ ಅಶುದ್ಧ ವಸ್ತುವನ್ನಾಗಲಿ ಯಾವುದೇ ಅಶುದ್ಧ ಪ್ರಾಣಿ ಯನ್ನಾಗಲಿ ಮುಟ್ಟಿದರೂ ಮತ್ತು ಕರ್ತನಿಗೆ ಸಂಬಂಧಿ ಸಿದ ಸಮಾಧಾನ ಬಲಿಯ ಯಜ್ಞದ ಮಾಂಸವನ್ನು ತಿಂದರೂ ಅವನು ತನ್ನ ಜನರಿಂದ ತೆಗೆದುಹಾಕಲ್ಪಡ ಬೇಕು ಅಂದನು.
ಯಾವುದೇ ತರದ ರಕ್ತವನ್ನು ತಿಂದವನು ಯಾವನೇ ಆಗಿರಲಿ ಅವನು ತನ್ನ ಜನರಿಂದ ತೆಗೆದು ಹಾಕಲ್ಪಡಬೇಕು ಎಂಬದೇ.