Home Bibles ಲೇವ್ಯಕಾಂಡ 8:30 · ಕನ್ನಡ ಬೈಬಲ್
ಲೇವ್ಯಕಾಂಡ 8:30 · ಕನ್ನಡ ಬೈಬಲ್

ಮೋಶೆಯು ಅಭಿಷೇಕ ತೈಲವನ್ನೂ ಯಜ್ಞ ವೇದಿಯ ಮೇಲಿರುವ ರಕ್ತವನ್ನೂ ತೆಗೆದುಕೊಂಡು ಆರೋನನ ಮೇಲೆಯೂ ಅವನ ಉಡುಪುಗಳ ಮೇಲೆ ಯೂ ಅವನೊಂದಿಗೆ ಅವನ ಕುಮಾರರ ಮೇಲೆಯೂ ಅವರ ಉಡುಪುಗಳ ಮೇಲೆಯೂ ಚಿಮುಕಿಸಿದನು ಮತ್ತು ಆರೋನನನ್ನೂ ಅವನ ಉಡುಪುಗಳನ್ನೂ ಅವನೊಂದಿಗೆ ಅವನ ಕುಮಾರರನ್ನೂ ಅವರ ಉಡುಪು ಗಳನ್ನೂ ಪವಿತ್ರಮಾಡಿದನು.

Cross references

ನಿರ್ಗಮಕಾಂಡ 29:21

ಆರೋನನೂ ಅವನ ವಸ್ತ್ರಗಳೂ ಅವನೊಂದಿಗೆ ಅವನ ಕುಮಾರರೂ ಅವರ ವಸ್ತ್ರಗಳೂ ಪರಿಶುದ್ಧ ವಾಗುವ ಹಾಗೆ ಯಜ್ಞವೇದಿಯ ಮೇಲಿರುವ ರಕ್ತವನ್ನೂ ಅಭಿಷೇಕ ತೈಲವನ್ನೂ ತೆಗೆದುಕೊಂಡು ಆರೋನನ ಮೇಲೆಯೂ ಅವನ ವಸ್ತ್ರಗಳ ಮೇಲೆಯೂ ಅವನ ಕುಮಾರರ ಮೇಲೆಯೂ ಅವರ ವಸ್ತ್ರಗಳ ಮೇಲೆಯೂ ನೀನು ಚಿಮುಕಿಸಬೇಕು.

ನಿರ್ಗಮಕಾಂಡ 30:30

ಆರೋನನನ್ನೂ ಅವನ ಕುಮಾರರನ್ನೂ ಅಭಿಷೇಕಿಸಿ ಅವರು ನನಗೆ ಯಾಜಕ ಸೇವೆಮಾಡುವಂತೆ ಅವರನ್ನು ಪ್ರತಿಷ್ಠೆಮಾಡು ಅಂದನು.

ಲೇವ್ಯಕಾಂಡ 7:35

ಆರೋನನ ಅಭಿಷೇಕವೂ ಅವನ ಮಕ್ಕಳ ಅಭಿಷೇಕವೂ ಆಗುವ ದಿನದಲ್ಲಿ ಅವರು ತಮ್ಮನ್ನು ಯಾಜಕನ ಉದ್ಯೋಗದ ಸೇವೆಗಾಗಿ ಕರ್ತನಿಗೆ ಒಪ್ಪಿಸಿ ಕೊಳ್ಳುವಾಗ ಕರ್ತನಿಗೆ ಬೆಂಕಿಯಿಂದ ಮಾಡಲ್ಪಡುವ ಸಮರ್ಪಣೆಗಳಲ್ಲಿ ಇರುವ ಪಾಲು ಇದೇ.

ಲೇವ್ಯಕಾಂಡ 8:12

ಅವನು ಆರೋನನ ತಲೆಯ ಮೇಲೆ ಅಭಿಷೇಕ ತೈಲವನ್ನು ಸುರಿದು ಅವನನ್ನು ಪವಿತ್ರ ಮಾಡುವದಕ್ಕಾಗಿ ಅಭಿಷೇಕಿಸಿದನು.

ಲೇವ್ಯಕಾಂಡ 10:3

ತರುವಾಯ ಮೋಶೆಯು ಆರೋನನಿಗೆ--ಕರ್ತನು ಹೇಳಿದ್ದು ಇದೇ, ಅದೇನಂದರೆ--ನನ್ನನ್ನು ಸವಿಾಪಿಸು ವವರನ್ನು ನಾನು ಪರಿಶುದ್ಧಪಡಿಸುವೆನು, ಜನರೆಲ್ಲರ ಮುಂದೆ ನಾನು ಘನ ಹೊಂದುವೆನು ಅಂದನು. ಆಗ ಆರೋನನು ಸುಮ್ಮನಿದ್ದನು.

ಅಂಕೆಗಳ ಪುಸ್ತಕ 3:3

ಅಭಿಷೇ ಕಿಸಲ್ಪಟ್ಟ ಯಾಜಕರಾದ ಆರೋನನ ಮಕ್ಕಳ ಹೆಸರು ಗಳು ಇವೇ; ಇವರನ್ನು ಯಾಜಕೋದ್ಯೋಗ ಮಾಡುವ ದಕ್ಕೆ ಅವನು ಪ್ರತಿಷ್ಠೆಮಾಡಿದನು.

ಯೆಶಾಯ 61:1

ದೇವರಾದ ಕರ್ತನ ಆತ್ಮವು ನನ್ನ ಮೇಲೆ ಅದೆ; ದೀನರಿಗೆ ಶುಭಸಮಾಚಾರವನ್ನು ಸಾರುವದಕ್ಕೆ ಕರ್ತನು ನನ್ನನ್ನು ಅಭಿಷೇಕಿಸಿದ್ದಾನೆ; ಮುರಿದ ಹೃದಯವುಳ್ಳವರನ್ನು ಕಟ್ಟುವದಕ್ಕೂ ಸೆರೆಯವರಿಗೆ ಬಿಡುಗಡೆಯನ್ನು ಬಂಧಿಸಲ್ಪಟ್ಟವರಿಗೆ ಸೆರೆಮನೆಯ ಕದ ತೆರೆಯುವದನ್ನು ಪ್ರಸಿದ್ಧಿ ಮಾಡುವದಕ್ಕೂ

ಯೆಶಾಯ 61:3

ಚೀಯೋ ನಿನಲ್ಲಿ ದುಃಖಿಸುವವರಿಗೆ ಬೂದಿಗೆ ಬದಲಾಗಿ ಸೌಂದರ್ಯವನ್ನೂ ದುಃಖಕ್ಕೆ ಬದಲಾಗಿ ಆನಂದ ತೈಲವನ್ನೂ ಕುಂದಿದ ಆತ್ಮಕ್ಕೆ ಬದಲಾಗಿ ಸ್ತೋತ್ರದ ವಸ್ತ್ರವನ್ನೂ ಕೊಡುವದಕ್ಕೆ ನನ್ನನ್ನು ನೇಮಿಸಿದ್ದಾನೆ. ಆಗ ಅವರಿಗೆ ನೀತಿವೃಕ್ಷಗಳೆಂದೂ ಕರ್ತನು ತಾನು ಮಹಿಮೆ ಹೊಂದುವದಕ್ಕೋಸ್ಕರ ನೆಟ್ಟ ಗಿಡಗಳೆಂದೂ ಹೆಸರಾಗುವದು.

ಗಲಾತ್ಯದವರಿಗೆ 5:22

ಆದರೆ ಆತ್ಮನ ಫಲವೇನಂದರೆ--ಪ್ರೀತಿ ಸಂತೋಷ ಸಮಾಧಾನ ದೀರ್ಘಶಾಂತಿ ವಿನಯ ಸದ್ಗುಣ ನಂಬಿಕೆ

ಹೆಬ್ರಿಯರಿಗೆ 2:11

ಯಾಕಂದರೆ ಪವಿತ್ರ ಮಾಡುವಾತನೂ ಪವಿತ್ರರಾದವರೆಲ್ಲರೂ ಒಬ್ಬಾತನಿಗೆ ಸಂಬಂಧಪಟ್ಟವರಾಗಿದ್ದಾರೆ. ಈ ಕಾರಣದಿಂದ ಆತನು ಅವರನ್ನು ಸಹೋದರರೆಂದು ಕರೆಯುವದಕ್ಕೆ ನಾಚಿಕೆ ಪಡದೆ--

1 ಪೇತ್ರ 1:2

ಪವಿತ್ರಾತ್ಮನಿಂದ ಪ್ರತಿಷ್ಟಿಸಲ್ಪಟ್ಟವರಾಗಿ ವಿಧೇಯರಾ ಗುವದಕ್ಕೂ ಯೇಸು ಕ್ರಿಸ್ತನ ರಕ್ತದಿಂದ ಪ್ರೋಕ್ಷಿತರಾಗು ವದಕ್ಕೂ ತಂದೆಯಾದ ದೇವರ ಭವಿಷ್ಯದ್‌ ಜ್ಞಾನಾನು ಸಾರವಾಗಿ ಆರಿಸಿಕೊಳ್ಳಲ್ಪಟ್ಟವರಿಗೆ ಬರೆಯುವದೇ ನಂದರೆ--ನಿಮಗೆ ಕೃಪೆಯೂ ಶಾಂತಿಯೂ ಹೆಚ್ಚೆಚ್ಚಾಗಿ ದೊರೆಯಲಿ.

1 ಯೋಹಾನ 2:27

ಆದರೆ ಆತನಿಂದ ನೀವು ಹೊಂದಿದ ಅಭಿಷೇಕವು ನಿಮ್ಮಲ್ಲಿ ನೆಲೆಗೊಂಡಿರುವದರಿಂದ ಯಾವನಾದರೂ ನಿಮಗೆ ಉಪದೇಶಮಾಡುವದು ಅವಶ್ಯವಿಲ್ಲ. ಆ ಅಭಿಷೇಕವೇ ಎಲ್ಲಾ ವಿಷಯಗಳಲ್ಲಿ ನಿಮಗೆ ಉಪದೇಶ ಮಾಡುವಂಥ ದಾಗಿದ್ದು ಸತ್ಯವಾಗಿದೆ. ಸುಳ್ಳಲ್ಲ, ಅದು ನಿಮಗೆ ಉಪದೇಶ ಮಾಡಿದ ಪ್ರಕಾರವೇ ಆತನಲಿ

ಪ್ರಕಟನೆ 7:14

ಅದಕ್ಕೆ ನಾನು ಅಯ್ಯಾ, ನೀನೇ ಬಲ್ಲೆ ಅಂದೆನು. ಅವನು ನನಗೆ--ಇವರು ಮಹಾಸಂಕಟದೊಳಗಿಂದ ಬಂದವರು; ಕುರಿಮರಿಯಾ ದಾತನ ರಕ್ತದಲ್ಲಿ ತಮ್ಮ ನಿಲುವಂಗಿಗಳನ್ನು ತೊಳೆದು ಬೆಳ್ಳಗೆ ಮಾಡಿದ್ದಾರೆ.

Interlinear

Choose Theme