Home Bibles ಲೇವ್ಯಕಾಂಡ 9:2 · ಕನ್ನಡ ಬೈಬಲ್
ಲೇವ್ಯಕಾಂಡ 9:2 · ಕನ್ನಡ ಬೈಬಲ್

ಅವನು ಆರೋನನಿಗೆ ಹೇಳಿದ್ದೇನಂದರೆ--ಪಾಪದ ಬಲಿಗಾಗಿ ಒಂದು ಎಳೆಯ ಕರುವನ್ನೂ ದಹನ ಬಲಿಗಾಗಿ ದೋಷವಿಲ್ಲದ ಟಗರನ್ನೂ ನೀನು ತೆಗೆದು ಕೊಂಡು ಅವುಗಳನ್ನು ಕರ್ತನ ಸನ್ನಿಧಿಯಲ್ಲಿ ಸಮರ್ಪಿಸು.

Cross references

ನಿರ್ಗಮಕಾಂಡ 29:1

ಅವರು ನನಗೆ ಯಾಜಕ ಸೇವೆಮಾಡು ವಂತೆ ಅವರನ್ನು ಶುದ್ಧಮಾಡುವ ಹಾಗೆ ನೀನು ಅವರಿಗೆ ಮಾಡಬೇಕಾದದ್ದೇನಂದರೆ--ಒಂದು ಹೋರಿಯನ್ನೂ ದೋಷವಿಲ್ಲದ ಎರಡು ಟಗರುಗಳನೂ

ಲೇವ್ಯಕಾಂಡ 1:3

ಅವನ ಯಜ್ಞವು ಹಿಂಡಿನ ದಹನಬಲಿಯಾಗಿದ್ದರೆ ಅವನು ದೋಷವಿಲ್ಲದ ಗಂಡನ್ನು ಅರ್ಪಿಸಲಿ; ಅವನು ಅದನ್ನು ತನ್ನ ಸ್ವಇಚ್ಛೆಯಿಂದ ಕರ್ತನ ಮುಂದೆ ಸಭೆಯ ಗುಡಾರದ ಬಾಗಿಲ ಬಳಿಯಲ್ಲಿ ಅರ್ಪಿಸಬೇಕು.

ಲೇವ್ಯಕಾಂಡ 1:10

ದಹನಬಲಿಗೋಸ್ಕರ ತನ್ನ ಕಾಣಿಕೆಯು ಮಂದೆ ಯಿಂದಾದರೆ ಅವನು ಕುರಿಯನ್ನಾಗಲಿ ಆಡನ್ನಾಗಲಿ ದೋಷವಿಲ್ಲದ ಒಂದು ಗಂಡನ್ನು ತರಬೇಕು.

ಲೇವ್ಯಕಾಂಡ 4:3

ಜನರು ಪಾಪಮಾಡುವ ಹಾಗೆ ಅಭಿಷಿಕ್ತನಾದ ಯಾಜಕನು ಪಾಪಮಾಡಿದರೆ ಅವನು ತನ್ನ ಪಾಪಕ್ಕಾಗಿ ದೋಷವಿಲ್ಲದ ಒಂದು ಎಳೇ ಹೋರಿಯನ್ನು ಪಾಪದ ಬಲಿಗಾಗಿ ಕರ್ತನಿಗೆ ತರಬೇಕು.

ಲೇವ್ಯಕಾಂಡ 8:14

ಪಾಪದ ಬಲಿಗಾಗಿ ಅವನು ಹೋರಿಯನ್ನು ತಂದನು. ಆರೋನನೂ ಅವನ ಕುಮಾರರೂ ಪಾಪದ ಬಲಿಗಾಗಿ ಆ ಹೋರಿಯ ತಲೆಯ ಮೇಲೆ ತಮ್ಮ ಕೈಗಳನ್ನು ಇಟ್ಟರು.

ಲೇವ್ಯಕಾಂಡ 8:18

ದಹನಬಲಿಗಾಗಿ ಟಗರನ್ನು ತಂದನು. ಆರೋ ನನು ಅವನ ಕುಮಾರರು ಆ ಟಗರಿನ ತಲೆಯ ಮೇಲೆ ತಮ್ಮ ಕೈಗಳನ್ನು ಇಟ್ಟರು.

ಲೇವ್ಯಕಾಂಡ 9:7

ಮೋಶೆಯು ಆರೋನನಿಗೆ--ಯಜ್ಞವೇದಿಯ ಹತ್ತಿರಕ್ಕೆ ಹೋಗಿ ಕರ್ತನು ಆಜ್ಞಾಪಿಸಿದಂತೆಯೇ ನಿನ್ನ ಪಾಪದಬಲಿಯನ್ನೂ ದಹನಬಲಿಯನ್ನೂ ಅರ್ಪಿಸಿ, ನಿನಗಾಗಿಯೂ ಜನರಿಗಾಗಿಯೂ ಪ್ರಾಯಶ್ಚಿತ್ತವನ್ನು ಮಾಡು; ಜನರ ಸಮರ್ಪಣೆಗಳನ್ನು ಸಮರ್ಪಿಸಿ ಅವರಿ ಗಾಗಿಯೂ ಪ್ರಾಯಶ್ಚಿತ್ತವನ್ನು ಮಾಡು ಅಂದನು.

ಲೇವ್ಯಕಾಂಡ 16:3

ಆರೋನನು ಪಾಪಬಲಿಗಾಗಿ ಒಂದು ಹೋರಿಯನ್ನು ದಹನಬಲಿಗಾಗಿ ಒಂದು ಟಗರನ್ನು ತೆಗೆದುಕೊಂಡು ಪರಿಶುದ್ಧವಾದ ಸ್ಥಳಕ್ಕೆ ಬರಬೇಕು.

ಲೇವ್ಯಕಾಂಡ 16:5

ಅವನು ಪರಿ ಶುದ್ಧವಾದ ನಾರುಬಟ್ಟೆಯ ಮೇಲಂಗಿಯನ್ನು ತೊಟ್ಟು ಕೊಂಡು ತನ್ನ ಶರೀರದ ಮೇಲೆ ನಾರುಬಟ್ಟೆಯ ಇಜಾರುಗಳನ್ನು ಹಾಕಿಕೊಳ್ಳಬೇಕು ಮತ್ತು ನಾರಿನ ನಡುಕಟ್ಟನ್ನು ಕಟ್ಟಿಕೊಂಡು ನಾರಿನ ಮುಂಡಾಸವನ್ನು ಧರಿಸಬೇಕು. ಇವು ಪವಿತ್ರವಾದ ಉಡುಪುಗಳು; ಆದಕಾರಣ ಅವನು ತನ್ನ ಶರೀರವನ್ನು ನೀರಿನಿಂದ ತೊಳೆದುಕೊಂಡು ಅವುಗಳನ್ನು ಧರಿಸಿಕೊಳ್ಳಬೇಕು.

2 ಕೊರಿಂಥದವರಿಗೆ 5:21

ನಾವು ಆತನಲ್ಲಿ ದೇವರ ನೀತಿಯಾಗುವಂತೆ ದೇವರು ಪಾಪವನ್ನರಿಯ ಆತನನ್ನು ನಮಗೋಸ್ಕರ ಪಾಪವಾಗ ಮಾಡಿದನು.

ಹೆಬ್ರಿಯರಿಗೆ 5:3

ಆ ಬಲಹೀನತೆಯ ಕಾರಣದಿಂದ ಅವನು ಜನರಿಗೋಸ್ಕರ ಹೇಗೋ ಹಾಗೆಯೇ ತನಗೋಸ್ಕರವೂ ಪಾಪಗಳಿಗಾಗಿ ಅರ್ಪಿಸಬೇಕಾದವ ನಾಗಿದ್ದಾನೆ.

ಹೆಬ್ರಿಯರಿಗೆ 7:27

ಮೊದಲು ತನ್ನ ಸ್ವಂತ ಪಾಪಪರಿಹಾರಕ್ಕಾಗಿ ಆಮೇಲೆ ಜನರ ಪಾಪ ಪರಿಹಾರಕ್ಕಾಗಿ ಯಜ್ಞಾರ್ಪಣೆ ಮಾಡುವ ಮಹಾ ಯಾಜಕರಂತೆ ಈತನು ಪ್ರತಿನಿತ್ಯವೂ ಸಮರ್ಪಿಸ ಬೇಕಾದ ಅವಶ್ಯವಿಲ್ಲ. ಯಾಕಂದರೆ ಈತನು ತನ್ನನ್ನೇ ಸಮರ್ಪಿಸಿಕೊಂಡು ಒಂದೇ ಸಾರಿ ಆ ಕೆಲಸವನ್ನು ಮಾಡಿ ಮುಗಿಸಿದನು.ನ್ಯಾಯಪ್ರಮಾಣವು ನಿರ್ಬಲರಾದ ಮನುಷ್ಯರನ್ನು ಮಹಾಯಾಜಕರನ್ನಾಗಿ ಮಾಡುತ್ತದೆ; ಆದರೆ ನ್ಯಾಯಪ್ರಮಾಣದ ತರುವಾಯ ಆಣೆಯೊಡನೆ ಉಂಟಾದ ವಾಕ್ಯವು ಸದಾಕಾಲಕ್ಕೂ ಪ್ರತಿಷ್ಠೆ ಮಾಡಿಕೊಂಡ ಮಗನನ್ನೇ ಮಹಾಯಾಜಕ ನನ್ನಾಗಿ ಮಾಡುತ್ತದೆ.

ಹೆಬ್ರಿಯರಿಗೆ 10:10

ಯೇಸು ಕ್ರಿಸ್ತನು ಒಂದೇ ಸಾರಿ ಎಂದೆಂದಿಗೂ ಅರ್ಪಿಸಿದ ತನ್ನ ದೇಹದ ಮೂಲಕ ಆತನ ಚಿತ್ತದಿಂದ ನಾವು ಶುದ್ಧರಾದೆವು.

Interlinear

Choose Theme