ಆದರೆ ಆ ದೂತನು ಅವನಿಗೆ--ಜಕರೀಯನೇ, ಭಯಪಡಬೇಡ; ಯಾಕಂದರೆ ನಿನ್ನ ಪ್ರಾರ್ಥನೆಯು ಕೇಳಲ್ಪಟ್ಟಿದೆ; ನಿನ್ನ ಹೆಂಡತಿಯಾದ ಎಲಿಸಬೇತಳು ನಿನಗೆ ಒಬ್ಬ ಮಗನನ್ನು ಹೆರುವಳು. ನೀನು ಅವನನ್ನು ಯೋಹಾನನೆಂದು ಕರೆಯಬೇಕು.
Cross references
ನನಗೂ ನಿನಗೂ ನಿನ್ನ ತರುವಾಯ ನಿನ್ನ ಸಂತಾನಕ್ಕೂ ಮಧ್ಯದಲ್ಲಿ ನೀವು ಕೈಕೊಳ್ಳತಕ್ಕ ನನ್ನ ಒಡಂಬಡಿಕೆ ಏನಂದರೆ--ನಿಮ್ಮಲ್ಲಿರುವ ಗಂಡಸರೆಲ್ಲರಿಗೆ ಸುನ್ನತಿಯಾಗಬೇಕು.
ಅದಕ್ಕೆ ದೇವರು--ನಿಶ್ಚಯ ವಾಗಿ ನಿನ್ನ ಹೆಂಡತಿಯಾದ ಸಾರಳು ನಿನಗೆ ಮಗನನ್ನು ಹೆರುವಳು. ಅವನಿಗೆ ಇಸಾಕನೆಂದು ಹೆಸರಿಡಬೇಕು. ಅವನ ಸಂಗಡಲೂ ತರುವಾಯ ಹುಟ್ಟುವ ಅವನ ಸಂತತಿಯವರ ಸಂಗಡಲೂ ನನ್ನ ಶಾಶ್ವತವಾದ ಒಡಂಬಡಿಕೆಯನ್ನು ಸ್ಥಾಪಿಸುವೆನು.
ಕರ್ತನಿಗೆ ಅಸಾಧ್ಯವಾದದ್ದು ಯಾವದಾದರೂ ಇದೆಯೋ? ಬರುವ ವರುಷ ಇದೇ ಸಮಯಕ್ಕೆ ನಾನು ನಿನ್ನ ಬಳಿಗೆ ತಿರಿಗಿ ಬರುವೆನು; ಆಗ ಸಾರಳಿಗೆ ಮಗನು ಇರುವನು ಅಂದನು.
ಆಕೆಯು ಬಂಜೆ ಯಾಗಿದ್ದದರಿಂದ ಇಸಾಕನು ತನ್ನ ಹೆಂಡತಿಗೋಸ್ಕರ ಕರ್ತನನ್ನು ಬೇಡಿಕೊಂಡನು. ಕರ್ತನು ಅವನ ಬೇಡಿಕೆ ಯನ್ನು ಕೇಳಿದನು. ಆದದರಿಂದ ಅವನ ಹೆಂಡತಿಯಾದ ರೆಬೆಕ್ಕಳು ಗರ್ಭಿಣಿಯಾದಳು.
ಆದರೆ ಕರ್ತನು ಅವನಿಗೆ--ನಿನಗೆ ಸಮಾಧಾನವಾಗಲಿ; ಭಯಪಡಬೇಡ, ನೀನು ಸಾಯುವದಿಲ್ಲ ಅಂದನು.
ಅವನ ಹೆಂಡತಿಯು ಹೆರದೆ ಬಂಜೆಯಾಗಿದ್ದಳು. ಕರ್ತನ ದೂತನು ಆ ಸ್ತ್ರೀಗೆ ಪ್ರತ್ಯಕ್ಷ ವಾಗಿ ಅವಳಿಗೆ--ಇಗೋ, ನೀನು ಹೆರದೆ ಬಂಜೆಯಾ ಗಿದ್ದೀ. ಆದರೆ ನೀನು ಗರ್ಭ ಧರಿಸಿ ಒಬ್ಬ ಮಗನನ್ನು ಹೆರುವಿ.
ಹನ್ನಳು ಗರ್ಭವತಿ ಯಾಗಿ ಕಾಲವು ಪೂರ್ತಿಯಾದ ತರುವಾಯ ಆದದ್ದೇ ನಂದರೆ, ಅವಳು ಮಗನನ್ನು ಹೆತ್ತು--ನಾನು ಅವನನ್ನು ಕರ್ತನ ಬಳಿಯಲ್ಲಿ ಕೇಳಿಕೊಂಡೆನು ಎಂದು ಹೇಳಿ ಅವನಿಗೆ ಸಮುವೇಲನೆಂದು ಹೆಸರಿಟ್ಟಳು.
ಅವರು ತಿರಿಗಿ ತಮ್ಮ ಮನೆಗೆ ಹೋದರು. ಹಾಗೆಯೇ ಕರ್ತನು ಹನ್ನಳನ್ನು ದರ್ಶಿಸಿ ದ್ದರಿಂದ ಅವಳು ಗರ್ಭಧರಿಸಿ ಮೂವರು ಕುಮಾರ ರನ್ನೂ ಇಬ್ಬರು ಕುಮಾರ್ತೆಯರನ್ನೂ ಹೆತ್ತಳು. ಇದಲ್ಲದೆ ಬಾಲಕನಾದ ಸಮುವೇಲನು ಕರ್ತನ ಸನ್ನಿಧಿಯಲ್ಲಿ ಬೆಳೆಯುತ್ತಿದ್ದನು.
ಆಗ ಅವನು--ನೀನು ಬರುವ ವರುಷ ಇದೇ ಕಾಲದಲ್ಲಿ ಒಬ್ಬ ಮಗನನ್ನು ಅಪ್ಪಿಕೊಳ್ಳುವಿ ಅಂದನು. ಅದಕ್ಕವಳುಹಾಗಲ್ಲ, ದೇವರ ಮನುಷ್ಯನೇ, ನನ್ನ ಒಡೆಯನೇ, ನಿನ್ನ ಸೇವಕಳಿಗೆ ನೀನು ಸುಳ್ಳು ಹೇಳಬೇಡ ಅಂದಳು.
ಬಂಜೆಯಾದವಳನ್ನು ಮಕ್ಕಳ ಸಂತೋಷ ವುಳ್ಳ ತಾಯಿಯಾಗಿ ಮನೆಯಲ್ಲಿ ನಿವಾಸಿಸುವಂತೆ ಮಾಡುತ್ತಾನೆ ಕರ್ತನನ್ನು ಸ್ತುತಿಸಿರಿ.
ನಿನ್ನನ್ನು ಕೊಂಡಾಡು ವೆನು; ನನಗೆ ನೀನು ಉತ್ತರಕೊಟ್ಟು, ನನ್ನ ರಕ್ಷಣೆಯಾದಿ.
ಇಗೋ, ಮಕ್ಕಳು ಕರ್ತನಿಂದ ಸಿಕ್ಕಿದ ಸ್ವಾಸ್ಥ್ಯವಾಗಿ ದ್ದಾರೆ; ಗರ್ಭಫಲವು ಆತನ ಬಹುಮಾನವಾಗಿದೆ.
ಅನಂತರ ನಾನು ಪ್ರವಾದಿನಿ ಯನ್ನು ಕೂಡಲು ಆಕೆಯು ಬಸುರಾಗಿ ಒಬ್ಬ ಮಗನನ್ನು ಹೆತ್ತಳು. ಆಗ ಕರ್ತನು ನನಗೆ--ಅವನಿಗೆ ಮಹೇರ್ ಶಾಲಾಲ್ ಹಾಷ್ ಬಜ್ ಎಂದು ಹೆಸರಿಡು ಎಂದು ಹೇಳಿದನು.
ಆಗ ಅವನು ನನಗೆ ಹೇಳಿದ್ದೇನಂದರೆ--ದಾನಿಯೇಲನೇ, ನೀನು ಭಯಪಡಬೇಡ, ಯಾಕಂದರೆ ನೀನು ತಿಳಿದುಕೊಳ್ಳು ವದಕ್ಕೂ ನಿನ್ನ ದೇವರ ಮುಂದೆ ನಿನ್ನನ್ನು ತಗ್ಗಿಸಿಕೊಳ್ಳು ವದಕ್ಕೂ ಮನಸ್ಸಿಟ್ಟ ಮೊದಲನೆಯ ದಿನದಲ್ಲಿಯೇ ನಿನ್ನ ಮಾತುಗಳು ಕೇಳಲ್ಪಟ್ಟವು. ಆ ನಿನ್ನ ಮಾತುಗಳ ನಿಮಿತ್ತವಾಗಿಯೇ ನಾನು ಬಂದಿದ್ದೇನೆ;
ಆಗ ಕರ್ತನು ಅವನಿಗೆ--ಅವನನ್ನು ಇಜ್ರೇಲ್ ಎಂಬ ಹೆಸರಿನಿಂದ ಕರೆ. ಇನ್ನೂ ಸ್ವಲ್ಪಕಾಲದಲ್ಲಿಯೇ ನಾನು ಇಜ್ರೇಲಿನ ರಕ್ತವನ್ನು ಯೆಹೂವಿನ ಮನೆತನದವರ ಮೇಲೆ ಸೇಡು ತೀರಿಸಿಕೊಳ್ಳುವೆನು; ಇಸ್ರಾಯೇಲಿನ ಮನೆತನದ ರಾಜ್ಯವು ನಿಂತುಹೋಗುವಂತೆ ಮಾಡು ವೆನು.
ಅವಳು ತಿರುಗಿ ಬಸುರಾಗಿ ಮಗಳನ್ನು ಹೆತ್ತಳು. ಆಗ ದೇವರು ಅವನಿಗೆ-- ಅವಳನ್ನು ಲೋರುಹಾಮ ಎಂಬ ಹೆಸರಿನಿಂದ ಕರೆ; ಯಾಕಂದರೆ ನಾನು ಇನ್ನು ಮೇಲೆ ಇಸ್ರಾಯೇಲಿನ ಮನೆತನ ದವರನ್ನು ಕರುಣಿಸುವದೇ ಇಲ್ಲ; ಆದರೆ ನಾನು ಅವರನ್ನು ಸಂಪೂರ್ಣವಾಗಿ ತೆಗೆದುಬಿಡುತ್ತೇನೆ.
ಆಗ ದೇವರು--ಅವನ ಹೆಸರನ್ನು ಲೋ ಅಮ್ಮಿ ಎಂದು ಕರೆ, ಯಾಕಂದರೆ ನೀವು ನನ್ನ ಜನರಲ್ಲ, ನಾನು ನಿಮ್ಮ ದೇವರಾಗಿರುವದಿಲ್ಲ ಅಂದನು.
ಆಕೆಯು ಒಬ್ಬ ಮಗನನ್ನು ಹೆರುವಳು; ನೀನು ಆತನಿಗೆ ಯೇಸು ಎಂದು ಕರೆಯಬೇಕು; ಯಾಕೆಂದರೆ ಆತನು ತನ್ನ ಜನರನ್ನು ಅವರ ಪಾಪಗಳಿಂದ ರಕ್ಷಿಸುವನು ಅಂದನು.
ಆದರೆ ಯೇಸು ತಕ್ಷಣವೇ ಮಾತನಾಡಿ ಅವರಿಗೆ--ಧೈರ್ಯವಾಗಿರ್ರಿ; ನಾನೇ, ಭಯಪಡಬೇಡಿರಿಅಂದನು.
ಆ ದೂತನು ಸ್ತ್ರೀಯರಿಗೆ-- ನೀವು ಭಯಪಡಬೇಡಿರಿ; ಯಾಕಂದರೆ ಶಿಲುಬೆಗೆ ಹಾಕಲ್ಪಟ್ಟವನಾದ ಯೇಸುವನ್ನು ನೀವು ಹುಡುಕುತ್ತೀರೆಂದು ನಾನು ಬಲ್ಲೆನು.
ಆದರೆ ಅವನು ಅವರಿಗೆ--ಭಯಪಡಬೇಡಿರಿ, ಶಿಲುಬೆಗೆ ಹಾಕಲ್ಪಟ್ಟ ನಜರೇತಿನ ಯೇಸುವನ್ನು ಹುಡುಕುತ್ತಿದ್ದೀರಿ; ಆತನು ಎದ್ದಿದ್ದಾನೆ; ಇಲ್ಲಿ ಇಲ್ಲ, ಆತನನ್ನು ಇಟ್ಟಿದ್ದ ಸ್ಥಳವನ್ನು ನೋಡಿರಿ;
ಆ ದೂತನು ಆಕೆಗೆ-- ಮರಿಯಳೇ, ಹೆದರಬೇಡ; ಯಾಕಂದರೆ ನೀನು ದೇವರ ದಯೆಯನ್ನು ಹೊಂದಿದ್ದೀ;
ಅದಕ್ಕೆ ಅವನ ತಾಯಿಯು ಪ್ರತ್ಯುತ್ತರ ವಾಗಿ--ಹಾಗಲ್ಲ. ಅವನು ಯೋಹಾನನೆಂದು ಕರೆಯ ಲ್ಪಡಬೇಕು ಅಂದಳು.
ಶಿಶುವಿಗೆ ಸುನ್ನತಿ ಮಾಡಿಸುವದಕ್ಕಾಗಿ ಎಂಟು ದಿನಗಳು ಕಳೆದ ಮೇಲೆ ಆತನನ್ನು ಗರ್ಭಧರಿಸು ವದಕ್ಕಿಂತ ಮುಂಚಿತವಾಗಿ ದೂತನು ಹೆಸರಿಟ್ಟಂತೆಯೇ ಆತನು ಯೇಸು ಎಂದು ಕರೆಯಲ್ಪಟ್ಟನು.
ಅವರು ಹೀಗೆ ಮಾತನಾಡುತ್ತಿರುವಾಗ ಯೇಸು ತಾನೇ ಅವರ ಮಧ್ಯದಲ್ಲಿ ನಿಂತು ಅವರಿಗೆ--ನಿಮಗೆ ಸಮಾಧಾನವಾಗಲಿ ಅಂದನು.
ಕೊರ್ನೇಲ್ಯನೇ, ನಿನ್ನ ಪ್ರಾರ್ಥನೆಯು ಕೇಳಬಂತು. ನಿನ್ನ ದಾನಗಳು ದೇವರ ಸನ್ನಿಧಾನದಲ್ಲಿ ನೆನಪಿಗೆ ಬಂದವು.