ಆತನು ದೊಡ್ಡವನಾಗಿದ್ದು ಮಹೋನ್ನತನ ಕುಮಾರನೆಂದು ಕರೆಯಲ್ಪಡುವನು; ದೇವರಾದ ಕರ್ತನು ಆತನ ತಂದೆ ಯಾದ ದಾವೀದನ ಸಿಂಹಾಸನವನ್ನು ಆತನಿಗೆ ಕೊಡು ವನು.
Cross references
ನಿನ್ನನ್ನು ನಿನ್ನ ಎಲ್ಲಾ ಶತ್ರುಗಳಿಗೆ ತಪ್ಪಿಸಿ ನಿನಗೆ ವಿಶ್ರಾಂತಿಯನ್ನು ಉಂಟುಮಾಡಿದೆನು.
ನಿನ್ನ ಮನೆಯೂ ನಿನ್ನ ರಾಜ್ಯವೂ ನಿನ್ನ ಮುಂದೆ ಸದಾಕಾಲಕ್ಕೂ ಸ್ಥಿರಮಾಡಲ್ಪಡುವವು; ನಿನ್ನ ಸಿಂಹಾಸನವು ಯುಗ ಯುಗಾಂತರಕ್ಕೂ ಶಾಶ್ವತವಾಗಿರುವದು ಎಂದು ಹೇಳಿ ದನು.
ಕರ್ತನು ದಾವೀದನಿಗೆ ಸತ್ಯದ ಆಣೆ ಇಟ್ಟಿದ್ದಾನೆ; ಅದರಿಂದ ತಿರುಗಿಕೊಳ್ಳನು; ಅದು--ನಿನ್ನ ಸಂತಾನ ವನ್ನು ನಿನ್ನ ಸಿಂಹಾಸನದ ಮೇಲೆ ಇರಿಸು ವದು.
ಒಂದು ಮಗು ನಮಗಾಗಿ ಹುಟ್ಟಿದೆಯಷ್ಟೆ, ಆ ಮಗನು ನಮಗೆ ಕೊಡಲ್ಪಟ್ಟಿದ್ದಾನೆ; ಆಡಳಿತವು ಆತನ ಬಾಹುವಿನ ಮೇಲಿರುವದು; ಅದ್ಭುತ ಸ್ವರೂಪನು, ಆಲೋಚನಾ ಕರ್ತನು, ಪರಾಕ್ರಮಿಯಾದ ದೇವರು, ನಿತ್ಯನಾದ ತಂದೆ, ಸಮಾಧಾನದ ಪ್ರಭು ಎಂದು ಆತನ ಹೆಸರು ಕರೆಯಲ್ಪಡುವದು.
ಕರುಣೆಯಲ್ಲಿ ಸಿಂಹಾಸನವು ಸ್ಥಾಪಿಸಲ್ಪಡುವದು; ನ್ಯಾಯತೀರಿಸು ವವನೂ ನ್ಯಾಯವನ್ನು ಹುಡುಕುವವನೂ ನೀತಿಗೋ ಸ್ಕರ ತ್ವರೆಪಡುವವನೂ ದಾವೀದನ ಗುಡಾರದಲ್ಲಿ ಅದರ ಮೇಲೆ ಸತ್ಯದಲ್ಲಿ ಕೂತುಕೊಳ್ಳುವನು.
ಇಸ್ರಾಯೇಲಿನ ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ಈ ಒಳ್ಳೇ ಅಂಜೂರದ ಹಣ್ಣುಗಳ ಹಾಗೆ ನಾನು ಈ ಸ್ಥಳದಿಂದ ಕಸ್ದೀಯರ ದೇಶಕ್ಕೆ ಒಳ್ಳೇದಕ್ಕಾಗಿ ಕಳುಹಿಸಿದ ಯೆಹೂದದ ಸೆರೆಯವರನ್ನು ಪರಾಮರಿ ಸುವೆನು.
ಈಗ ನೀವು ತಿರುಗಿ ಕೊಂಡು ನನ್ನ ದೃಷ್ಟಿಯಲ್ಲಿ ಸರಿಯಾದದ್ದನ್ನು ಮಾಡಿ ಒಬ್ಬೊಬ್ಬನು ತನ್ನ ತನ್ನ ನೆರೆಯವನಿಗೆ ಬಿಡುಗಡೆಯನ್ನು ಸಾರಿದಿರಿ; ನನ್ನ ಹೆಸರಿನಿಂದ ಕರೆಯಲ್ಪಟ್ಟಿರುವ ಮನೆ ಯಲ್ಲಿ ನನ್ನ ಮುಂದೆ ಒಡಂಬಡಿಕೆಯನ್ನು ಮಾಡಿದಿರಿ.
ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇದ ಲ್ಲದೆ ನಾನು ಉನ್ನತವಾದ ದೇವದಾರಿನ ಎತ್ತರವಾದ ರೆಂಬೆಗಳನ್ನು ತೆಗೆದುಕೊಂಡು ಅದನ್ನು ನೆಡುವೆನು; ಎಳೆಯದಾದ ಒಂದನ್ನು ಕತ್ತರಿಸಿ ಎತ್ತರವಾದ ಪರ್ವತದ ಮೇಲೆ ನಾಟುವೆನು.
ನಾನು ಅವುಗಳ ಮೇಲೆ ಒಬ್ಬ ಕುರುಬನನ್ನು ನೇಮಿಸುವೆನು; ಅವನು ಅವುಗಳನ್ನು ಮೇಯಿಸುತ್ತಾನೆ. ನನ್ನ ಸೇವಕನಾದ ದಾವೀದನೇ ಅವುಗಳನ್ನು ಮೇಯಿಸಿ ಅವುಗಳಿಗೆ ಕುರುಬನಾಗುತ್ತಾನೆ.
ನನ್ನ ಸೇವಕನಾದ ದಾವೀದನು ಅವರ ಮೇಲೆ ಅರಸನಾಗಿರುವನು; ಅವರೆಲ್ಲರಿಗೂ ಒಬ್ಬನೇ ಕುರುಬನಿರುವನು ನನ್ನ ನ್ಯಾಯನಿಯಮ ಗಳನ್ನೇ ಅನುಸರಿಸುವಂತೆ ಮಾಡುವೆನು.
ಆ ದಿನದಲ್ಲಿ ಬಿದ್ದ ದಾವೀದನ ಗುಡಾರವನ್ನು ನಾನು ನಿಲ್ಲಿಸಿ ಅದರ ಹರಕುಗಳನ್ನು ಮುಚ್ಚುವೆನು. ಅವನ ಹಾಳಾದದ್ದನ್ನು ಎಬ್ಬಿಸಿ ಹಿಂದಿನ ದಿವಸಗಳಲ್ಲಿ ಮಾಡಿದ ಹಾಗೆ ಕಟ್ಟುವೆನು.
ಯೇಸು ಕ್ರಿಸ್ತನ ವಂಶಾವಳಿಯ ಪುಸ್ತಕವು; ಆತನು ದಾವೀದನ ಮಗನು, ಆತನು ಅಬ್ರ ಹಾಮನ ಮಗನು.
ನಾನು ಮಾನ ಸಾಂತರದ ನಿಮಿತ್ತ ನಿಮಗೆ ನೀರಿನಲ್ಲಿ ಬಾಪ್ತಿಸ್ಮ ಮಾಡಿಸುವದು ನಿಜವೇ; ಆದರೆ ನನ್ನ ಹಿಂದೆ ಬರುವಾತನು ನನಗಿಂತಲೂ ಶಕ್ತನಾಗಿದ್ದಾನೆ. ಆತನ ಕೆರಗಳನ್ನು ಹೊರುವದಕ್ಕೂ ನಾನು ಯೋಗ್ಯನಲ್ಲ; ಆತನು ಪವಿತ್ರಾ ತ್ಮನಿಂದಲೂ ಬೆಂಕಿಯಿಂದಲೂ ನಿಮಗೆ ಬಾಪ್ತಿಸ್ಮ ಮಾಡಿ ಸುವನು.
ನ್ಯಾಯವಿಚಾರಣೆ ಯಲ್ಲಿ ದಕ್ಷಿಣದ ರಾಣಿಯು ಈ ಸಂತತಿಯವರೊಂದಿಗೆ ಎದ್ದು ಇವರನ್ನು ಖಂಡಿಸುವಳು; ಯಾಕಂದರೆ ಆಕೆಯು ಸೊಲೊಮೋನನ ಜ್ಞಾನವನ್ನು ಕೇಳುವದಕ್ಕಾಗಿ ಭೂಮಿ ಯ ಕಟ್ಟಕಡೆಯಿಂದ ಬಂದಳು; ಇಗೋ, ಇಲ್ಲಿ ಸೊಲೊ ಮೋನನಿಗಿಂತಲೂ ದೊಡ್ಡವನಿದ್ದಾನೆ.
ಯೇಸು ಬಂದು ಅವರೊಂದಿಗೆ ಮಾತ ನಾಡಿ-- ಪರಲೋಕದಲ್ಲಿಯೂ ಭೂಲೋಕದಲ್ಲಿಯೂ ಎಲ್ಲಾ ಅಧಿಕಾರ ನನಗೆ ಕೊಡಲ್ಪಟ್ಟಿದೆ;
ಮಹೋನ್ನತನಾದ ದೇವಕುಮಾರನಾಗಿ ರುವ ಯೇಸುವೇ, ನನ್ನ ಗೊಡವೆ ನಿನಗೆ ಯಾಕೆ? ನನ್ನನ್ನು ಯಾತನೆಪಡಿಸಬೇಡವೆಂದು ನಾನು ನಿನಗೆ ದೇವರಾಣೆ ಇಡುತ್ತೇನೆ ಎಂದು ಮಹಾ ಶಬ್ದದಿಂದ ಕೂಗಿ ಹೇಳಿದನು.
ಆದರೆ ಆತನು ಏನೂ ಉತ್ತರ ಕೊಡದೆ ಮೌನವಾಗಿದ್ದನು; ತಿರಿಗಿ ಮಹಾಯಾಜಕನು--ನೀನು ಆ ಕ್ರಿಸ್ತನೋ? ಸ್ತುತಿಹೊಂದುವಾತನ ಕುಮಾರನೋ ಎಂದು ಆತನನ್ನು ಕೇಳಿದನು.
ಯಾಕಂದರೆ ಅವನು ಕರ್ತನ ದೃಷ್ಟಿಯಲ್ಲಿ ದೊಡ್ಡವ ನಾಗಿದ್ದು ದ್ರಾಕ್ಷಾರಸವನ್ನಾಗಲಿ ಮದ್ಯವನ್ನಾಗಲಿ ಕುಡಿ ಯುವದೇ ಇಲ್ಲ; ಅವನು ತಾಯಿಯ ಗರ್ಭದಿಂದಲೇ ಪರಿಶುದ್ಧಾತ್ಮಭರಿತನಾಗಿರುವನು.
ಅದಕ್ಕೆ ಆ ದೂತನು ಪ್ರತ್ಯುತ್ತರವಾಗಿ ಆಕೆಗೆ--ಪವಿತ್ರಾತ್ಮನು ನಿನ್ನ ಮೇಲೆ ಬರುವನು, ಮಹೋನ್ನತನ ಶಕ್ತಿಯು ನಿನ್ನನ್ನು ಆವರಿಸಿ ಕೊಳ್ಳುವದು; ಆದದರಿಂದ ನಿನ್ನಿಂದ ಹುಟ್ಟುವ ಆ ಪವಿತ್ರವಾದ ಶಿಶುವು ದೇವರ ಮಗನೆಂದು ಕರೆಯ ಲ್ಪಡುವನು.
ಇದಲ್ಲದೆ ಮಗುವೇ, ನೀನಾದರೋ ಮಹೋನ್ನತನ ಪ್ರವಾದಿ ಎಂದು ಕರೆಯಲ್ಪಡುವಿ; ಯಾಕಂದರೆ ಕರ್ತನ ಮಾರ್ಗಗಳನ್ನು ಸಿದ್ಧಮಾಡು ವದಕ್ಕೆ ಆತನ ಮುಂದೆ ಹೋಗುವಿ.
ಆಗ ಯೋಹಾನನು ಪ್ರತ್ಯುತ್ತರವಾಗಿ ಅವರೆಲ್ಲ ರಿಗೆ--ನಾನಂತೂ ನಿಮಗೆ ನೀರಿನ ಬಾಪ್ತಿಸ್ಮ ಮಾಡಿಸು ವದು ನಿಜವೇ; ಆದರೆ ನನಗಿಂತ ಶಕ್ತನೊಬ್ಬನು ಬರು ತ್ತಾನೆ; ಆತನ ಕೆರಗಳ ಬಾರನ್ನು ಬಿಚ್ಚುವದಕ್ಕೂ ನಾನು ಯೋಗ್ಯನಲ್ಲ; ಆತನು ಪವಿತ್ರಾತ್ಮನಿಂದಲೂ ಬೆಂಕಿಯಿಂ ದಲೂ ನಿಮಗೆ ಬಾಪ್ತಿಸ್ಮ ಮಾಡಿಸುವನು
ಆದರೆ ನೀವು ನಿಮ್ಮ ವೈರಿಗಳನ್ನು ಪ್ರೀತಿಸಿರಿ, ಮತ್ತು ಒಳ್ಳೇದನ್ನು ಮಾಡಿರಿ. ಏನನ್ನೂ ತಿರಿಗಿ ನಿರೀಕ್ಷಿಸದೆ ಸಾಲ ಕೊಡಿರಿ; ಆಗ ನಿಮ್ಮ ಬಹುಮಾನವು ದೊಡ್ಡದಾಗಿರುವದು; ನೀವು ಮಹೋ ನ್ನತನ ಮಕ್ಕಳಾಗಿರುವಿರಿ; ಯಾಕಂದರೆ ಆತನು ಕೃತಜ್ಞತೆ ಯಿಲ್ಲದವರಿಗೂ ಕೆಟ್ಟವರಿಗೂ ದಯೆಯುಳ್ಳವನಾಗಿ ದ್ದಾನೆ,
ತಂದೆಯು ಮಗನನ್ನು ಪ್ರೀತಿಸಿ ಎಲ್ಲವುಗಳನ್ನು ಆತನ ಕೈಯಲ್ಲಿ ಕೊಟ್ಟಿದ್ದಾನೆ.ಮಗನ ಮೇಲೆ ನಂಬಿಕೆಯಿಡುವವನಿಗೆ ನಿತ್ಯಜೀವ ಉಂಟು; ಯಾವನು ಮಗನನ್ನು ನಂಬುವದಿಲ್ಲವೋ ಅವನು ಜೀವವನ್ನು ಕಾಣುವದಿಲ್ಲ; ಆದರೆ ದೇವರ ಕೋಪವು ಅವನ ಮೇಲೆ ನೆಲೆಗೊಂಡಿದೆ ಅಂದನು.
ತಂದೆಯು ಹೇಗೆ ಸತ್ತವರನ್ನು ಎಬ್ಬಿಸಿ ಬದುಕಿಸುತ್ತಾನೋ ಹಾಗೆಯೇ ಮಗನೂ ತನಗೆ ಇಷ್ಟವಿರು ವವರನ್ನು ಬದುಕಿಸುತ್ತಾನೆ.
ನೀನು ಜೀವವುಳ್ಳ ದೇವರಮಗನಾದ ಆ ಕ್ರಿಸ್ತನೆಂದು ನಾವು ಖಂಡಿತವಾಗಿ ನಂಬಿದ್ದೇವೆ ಅಂದನು.
ಜನರು ಆತ ನಿಗೆ--ಕ್ರಿಸ್ತನು ಸದಾಕಾಲವೂ ಇರುತ್ತಾನೆಂದು ನಾವು ನ್ಯಾಯಪ್ರಮಾಣದಲ್ಲಿ ಕೇಳಿದ್ದೇವೆ; ಹಾಗಾದರೆ ಮನುಷ್ಯಕುಮಾರನು ಎತ್ತಲ್ಪಡಬೇಕೆಂದು ನೀನು ಹೇಳುವದು ಹೇಗೆ? ಈ ಮನುಷ್ಯಕುಮಾರನು ಯಾರು ಎಂದು ಕೇಳಿದರು.
ದಾವೀದನು ಪ್ರವಾದಿಯಾಗಿದ್ದದರಿಂದ ಶರೀರದ ಪ್ರಕಾರ ತನ್ನ ಸಂತಾನದವರಲ್ಲಿ ದೇವರು ಕ್ರಿಸ್ತನನ್ನು ಎಬ್ಬಿಸಿ ತನ್ನ ಸಿಂಹಾಸನದ ಮೇಲೆ ಕೂತುಕೊಳ್ಳುವಂತೆ ಮಾಡುವನೆಂದು ಆಣೆಯಿಟ್ಟು ಪ್ರಮಾಣ ಪೂರ್ವಕ ವಾಗಿ ತನಗೆ ಹೇಳಿದ್ದನ್ನು ಅವನು ಬಲ್ಲವನಾಗಿದ್ದನು.
ಆದದರಿಂದ ನೀವು ಶಿಲುಬೆಗೆ ಹಾಕಿದ ಈ ಯೇಸುವನ್ನೇ ದೇವರು ಕರ್ತನನ್ನಾಗಿಯೂ ಕ್ರಿಸ್ತನನ್ನಾಗಿಯೂ ಮಾಡಿದ್ದಾನೆಂದು ಇಸ್ರಾಯೇಲ್ ಮನೆತನದವರೆಲ್ಲರಿಗೂ ನಿಶ್ಚಯವಾಗಿ ತಿಳಿದಿರಲಿ ಎಂದು ಹೇಳಿದನು.
ಆದರೂ ಮಹೋನ್ನತನು ಕೈಯಿಂದ ಕಟ್ಟಿದ ಆಲಯಗಳಲ್ಲಿ ವಾಸಮಾಡುವಾತನಲ್ಲ. ಯಾಕಂದರೆ--
ಈಕೆಯು ಪೌಲನನ್ನೂ ನಮ್ಮನ್ನೂ ಹಿಂಬಾಲಿಸಿ--ಇವರು ನಮಗೆ ರಕ್ಷಣೆಯ ಮಾರ್ಗವನ್ನು ತೋರಿಸುವ ಮಹೋನ್ನತ ನಾದ ದೇವರ ಸೇವಕರು ಎಂದು ಕೂಗಿ ಹೇಳುತ್ತಿದ್ದಳು.
ಪರಿಶುದ್ಧ ಆತ್ಮಕ್ಕನು ಸಾರವಾಗಿ ಸತ್ತವರೊಳ ಗಿಂದ ಪುನರುತ್ಥಾನ ಹೊಂದುವದರ ಮೂಲಕ ಆತನು ದೇವಕುಮಾರನೆಂದು ಬಲದೊಂದಿಗೆ ಪ್ರಕಟಿಸಲ್ಪ ಟ್ಟನು;
ಬಲಾತಿಶಯವು ಕ್ರಿಸ್ತನಲ್ಲಿ ತೋರಿಬಂದಿದೆ; ಹೇಗಂ ದರೆ ದೇವರು ಕ್ರಿಸ್ತನನ್ನು ಸತ್ತವರೊಳಗಿಂದ ಎಬ್ಬಿಸಿ
ಈ ಕಾರಣದಿಂದ ದೇವರು ಆತನನ್ನು ಅತ್ಯುನ್ನತವಾಗಿ ಏರಿಸಿ ಎಲ್ಲಾ ಹೆಸರುಗಳಿಗಿಂತ ಉನ್ನತವಾದ ಹೆಸರನ್ನು ಆತನಿಗೆ ದಯಪಾಲಿಸಿದ್ದಾನೆ.
ಈ ಅಂತ್ಯದಿನಗಳಲ್ಲಿ ನಮ್ಮ ಸಂಗಡ ತನ್ನ ಮಗನ ಮುಖಾಂತರ ಮಾತನಾಡಿದ್ದಾನೆ. ಈತನನ್ನು ಎಲ್ಲಕ್ಕೂ ಬಾಧ್ಯನನ್ನಾಗಿ ನೇಮಿಸಿದನು, ಈತನ ಮೂಲಕವೇ ಲೋಕಗಳನ್ನು ಉಂಟು ಮಾಡಿದನು.
ಫಿಲದೆಲ್ಫಿಯದಲ್ಲಿರುವ ಸಭೆಯ ದೂತನಿಗೆ ಬರೆ: ಪರಿಶುದ್ಧನೂ ಸತ್ಯವಂತನೂ ದಾವೀದನ ಬೀಗದ ಕೈಯುಳ್ಳವನೂ ಯಾರೂ ಮುಚ್ಚಕೂಡದಂತೆ ತೆರೆಯು ವಾತನೂ ಯಾರು ತೆರೆಯದಂತೆ ಮುಚ್ಚುವಾತನೂ ಆಗಿರುವವನು ಹೇಳುವಂಥವುಗಳೇನಂದರೆ,