ಹಸಿದವರನ್ನು ಒಳ್ಳೆಯವು ಗಳಿಂದ ತೃಪ್ತಿಪಡಿಸಿ ಐಶ್ವರ್ಯವಂತರನ್ನು ಬರಿದಾಗಿ ಕಳುಹಿಸಿಬಿಟ್ಟಿದ್ದಾನೆ.
Cross references
ತೃಪ್ತಿಪಟ್ಟವರು ರೊಟ್ಟಿಗೋಸ್ಕರ ಕೂಲಿ ಕೆಲಸಕ್ಕೆ ಹೋಗುತ್ತಾರೆ; ಹಸಿದವರು ತಿಂದು ತೃಪ್ತರಾದರು; ಬಂಜೆಯಾದವಳು ಏಳು ಮಂದಿ ಮಕ್ಕಳನ್ನು ಹೆತ್ತಳು, ಅನೇಕ ಮಂದಿ ಮಕ್ಕಳನ್ನು ಹೆತ್ತವಳು ಬಲಹೀನ ಳಾದಳು.
ಪ್ರಾಯದ ಸಿಂಹಗಳು ಕೊರತೆಯಾಗಿ ಹಸಿಯುತ್ತವೆ; ಆದರೆ ಕರ್ತನನ್ನು ಹುಡುಕುವವರು ಯಾವ ಒಳ್ಳೆಯ ದಕ್ಕಾದರೂ ಕೊರತೆ ಪಡುವದಿಲ್ಲ.
ಅವರು ಕರ್ತನನ್ನು ಆತನ ಒಳ್ಳೇತನಕ್ಕೋಸ್ಕರವೂ ಮನುಷ್ಯನ ಮಕ್ಕಳಿಗೆ ಆತನು ಮಾಡುವ ಅದ್ಭುತ ಗಳಿಗೋಸ್ಕರವೂ ಕೊಂಡಾಡಲಿ.
ಹಿಂಸೆಗೆ ಗುರಿಯಾದವರ ನ್ಯಾಯವನ್ನು ಸ್ಥಾಪಿಸುವವನೂ ಹಸಿ ದವರಿಗೆ ಆಹಾರ ಕೊಡುವವನೂ ಆತನೇ.
ನಾನು ಅವರಿಗಾಗಿ ಒಂದು ಪ್ರಸಿದ್ಧ ಫಲವೃಕ್ಷವನ್ನು ಬೆಳೆಯಿಸುವೆನು; ಇನ್ನು ಮೇಲೆ ಅವರು ದೇಶದಲ್ಲಿ ಹಸಿವೆಯಿಂದ ನಾಶವಾ ಗುವದಿಲ್ಲ; ಅವರು ಅನ್ಯಜನರ ತಿರಸ್ಕಾರಕ್ಕೆ ಇನ್ನು ಮೇಲೆ ಗುರಿಯಾಗುವದೇ ಇಲ್ಲ.
ನೀತಿಗೋಸ್ಕರ ಹಸಿದು ಬಾಯಾರಿದವರು ಧನ್ಯರು; ಯಾಕಂದರೆ ಅವರು ತೃಪ್ತಿ ಹೊಂದುವರು.
ಈಗ ಹಸಿದವರಾದ ನೀವು ಧನ್ಯರು; ಯಾಕಂದರೆ ನೀವು ತೃಪ್ತಿ ಹೊಂದುವಿರಿ. ಈಗ ಅಳುವವರಾದ ನೀವು ಧನ್ಯರು; ಯಾಕಂದರೆ ನೀವು ನಗುವಿರಿ.
ಆದರೆ ಐಶ್ವರ್ಯವಂತರೇ, ನಿಮಗೆ ಅಯ್ಯೋ! ನೀವು ನಿಮ್ಮ ಆದರಣೆಯನ್ನು ಹೊಂದಿದ್ದೀರಿ.
ಆತನು ಅವರಿಗೆ ಒಂದು ಸಾಮ್ಯವನ್ನು ಹೇಳಿದ್ದೇನಂದರೆ--ಒಬ್ಬಾ ನೊಬ್ಬ ಐಶ್ವರ್ಯವಂತನ ಭೂಮಿಯು ಸಮೃದ್ಧಿಯಾಗಿ ಬೆಳೆಯಿತು.
ಊದಾಬಣ್ಣದ ವಸ್ತ್ರಗಳನ್ನೂ ನಯವಾದ ನಾರು ಮಡಿಯನ್ನೂ ಧರಿಸಿಕೊಂಡು ಪ್ರತಿದಿನವೂ ಸಮೃದ್ಧಿ ಯಾಗಿ ಭೋಜನಮಾಡುತ್ತಿದ್ದ ಒಬ್ಬಾನೊಬ್ಬ ಐಶ್ವರ್ಯ ವಂತನಿದ್ದನು.
ಫರಿಸಾಯನು ನಿಂತುಕೊಂಡು ತನ್ನೊಳಗೆ ಹೀಗೆ ಪ್ರಾರ್ಥಿಸುತ್ತಾ--ದೇವರೇ, ಸುಲು ಕೊಳ್ಳುವವರೂ ಅನೀತಿವಂತರೂ ವ್ಯಭಿಚಾರಿಗಳೂ ಆಗಿರುವ ಮಿಕ್ಕಾದವರಂತೆ ಇಲ್ಲವೆ ಈ ಸುಂಕದವನ ಹಾಗೆ ನಾನು ಅಲ್ಲ, ಆದದರಿಂದ ನಾನು ನಿನಗೆ ಸ್ತೋತ್ರ ಸಲ್ಲಿಸುತ್ತೇನೆ.
ಅವನು ಬಹಳ ವ್ಯಥೆಗೊಂಡದ್ದನ್ನು ಯೇಸು ನೋಡಿ--ಐಶ್ವರ್ಯ ವಂತರು ದೇವರ ರಾಜ್ಯದಲ್ಲಿ ಸೇರುವದು ಎಷ್ಟೋ ಕಷ್ಟ.
ತರುವಾಯ ಯೇಸು ರೊಟ್ಟಿ ಗಳನ್ನು ತೆಗೆದುಕೊಂಡು ಸ್ತೋತ್ರಮಾಡಿ ಶಿಷ್ಯರಿಗೆ ಹಂಚಿದನು; ಅವರು ಕುಳಿತುಕೊಂಡವರಿಗೆ ಹಂಚಿ ದರು; ಅದೇ ರೀತಿಯಲ್ಲಿ ವಿಾನುಗಳನ್ನು ಅವರಿಗೆ ಬೇಕಾದಷ್ಟು ಹಂಚಿದರು.
ಅದಕ್ಕೆ ಯೇಸು ಅವರಿಗೆ--ನಾನೇ ಆ ಜೀವದ ರೊಟ್ಟಿ; ನನ್ನ ಬಳಿಗೆ ಬರುವವನಿಗೆ ಎಂದಿಗೂ ಹಸಿವೆಯಾಗುವದಿಲ್ಲ ಮತ್ತು ನನ್ನ ಮೇಲೆ ನಂಬಿಕೆ ಇಡುವವನಿಗೆ ಎಂದಿಗೂ ನೀರಡಿಕೆಯಾಗುವದಿಲ್ಲ.
ಸಹೋದರರೇ, ದೇವರು ನಿಮ್ಮನ್ನು ಕರೆದಾಗ ಎಂಥವರನ್ನು ಕರೆದನೆಂದು ಆಲೋಚಿಸಿರಿ; ನಿಮ್ಮೊಳಗೆ ಲೌಕಿಕದೃಷ್ಟಿಯಲ್ಲಿ ಜ್ಞಾನಿಗಳೂ ಅನೇಕರಿಲ್ಲ, ಬಲಿಷ್ಠರೂ ಅನೇಕರಿಲ್ಲ, ಕುಲೀನರೂ ಅನೇಕರಿಲ್ಲ.
ಈಗಾಗಲೇ ನೀವು ತೃಪ್ತರಾದಿರಿ, ಈಗಾಗಲೇ ಐಶ್ವರ್ಯವಂತರಾದಿರಿ, ನಾವಿಲ್ಲದೆ ನೀವು ಅರಸರಂತೆ ಆಳಿದಿರಿ; ನೀವು ಆಳುವಂತೆ ದೇವರು ಮಾಡಿದ್ದರೆ ಎಷ್ಟೋ ಒಳ್ಳೇದಾಗುತ್ತಿತ್ತು; ಆಗ ನಾವು ಸಹ ನಿಮ್ಮೊಂದಿಗೆ ಆಳುತ್ತಿದ್ದೆವು.
ನನ್ನ ಪ್ರಿಯ ಸಹೋದರರೇ, ಕೇಳಿರಿ; ದೇವರು ಈ ಲೋಕದ ಬಡವರನ್ನು ನಂಬಿಕೆಯಲ್ಲಿ ಐಶ್ವರ್ಯವಂತರಾಗಿಯೂ ತನ್ನನ್ನು ಪ್ರೀತಿಸುವವ ರಿಗೆ ತಾನು ವಾಗ್ದಾನ ಮಾಡಿದ ರಾಜ್ಯಕ್ಕೆ ಬಾಧ್ಯ ರಾಗಿಯೂ ಇರಬೇಕೆಂದು ಆರಿಸಿಕೊಳ್ಳಲಿಲ್ಲವೇ?
ಧನಿಕರೇ, ನಿಮಗೆ ಬರುವ ದುರ್ದಶೆ ಗಳಿಗಾಗಿ ಕಣ್ಣೀರಿಡಿರಿ, ಗೋಳಾಡಿರಿ
ನೀನು--ನಾನು ಐಶ್ವರ್ಯವಂತನು, ಧನವೃದ್ಧಿಯುಳ್ಳವನು, ಯಾವದರ ಲ್ಲಿಯೂ ಕೊರತೆಯಿಲ್ಲದವನು ಎಂದು ಹೇಳಿಕೊಳ್ಳುತ್ತೀ; ಆದರೆ ನೀನು ಕೇವಲ ನಿರ್ಗತಿಕನು, ದರಿದ್ರನು, ಬಡವನು, ಕುರುಡನು, ಬೆತ್ತಲೆಯಾದವನು ಆಗಿರುವ ದನ್ನು ತಿಳಿಯದೆ ಇದ್ದೀ.
ಇನ್ನು ಮೇಲೆ ಅವರಿಗೆ ಹಸಿವೆಯಾಗಲಿ ಬಾಯಾರಿಕೆಯಾಗಲಿ ಆಗುವದೇ ಇಲ್ಲ; ಇದಲ್ಲದೆ ಅವರಿಗೆ ಬಿಸಿಲಾದರೂ ಯಾವ ಝಳವಾದರೂ ಬಡಿಯುವದಿಲ್ಲ.ಸಿಂಹಾಸನದ ಮಧ್ಯದಲ್ಲಿರುವ ಕುರಿಮರಿಯಾದಾತನು ಅವರನ್ನು ಮೇಯಿಸಿ ಜೀವ ಜಲದ ಒರತೆಗಳ ಬಳಿಗೆ ನಡಿಸುತ್ತಾನೆ; ಮತ್ತು ದೇವರು ಅವರ ಕಣ್ಣೀರನ್ನೆಲ್ಲಾ ಒರಸಿಬಿಡುವನು ಎಂದು ಹೇಳಿದನು.