ಇದಲ್ಲದೆ ಮಗುವೇ, ನೀನಾದರೋ ಮಹೋನ್ನತನ ಪ್ರವಾದಿ ಎಂದು ಕರೆಯಲ್ಪಡುವಿ; ಯಾಕಂದರೆ ಕರ್ತನ ಮಾರ್ಗಗಳನ್ನು ಸಿದ್ಧಮಾಡು ವದಕ್ಕೆ ಆತನ ಮುಂದೆ ಹೋಗುವಿ.
Cross references
ಚೀಯೋನಿನ ವಿಷಯ ಹೇಳುವದೇನಂದರೆ --ಇಂಥಿಂಥವರು ಅದರಲ್ಲಿ ಹುಟ್ಟಿದರೆಂದೂ ಮಹೋ ನ್ನತನು ತಾನೇ ಅದನ್ನು ಸ್ಥಾಪಿಸುವನು.
ಇಗೋ, ಒಂದು ವಾಣಿ, ಅರಣ್ಯದಲ್ಲಿ ಕರ್ತನ ದಾರಿಯನ್ನು ನೆಟ್ಟಗೆ ಮಾಡಿರಿ; ಅಡವಿಯಲ್ಲಿ ನಮ್ಮ ದೇವರಿಗೆ ರಾಜಮಾರ್ಗವನ್ನು ನೆಟ್ಟಗೆ ಮಾಡಿರಿ.
ಇಗೋ, ನನ್ನ ದೂತನನ್ನು ನಾನು ಕಳುಹಿಸುತ್ತೇನೆ; ಅವನು ನನ್ನ ಮುಂದೆ ಮಾರ್ಗವನ್ನು ಸಿದ್ಧಮಾಡುವನು; ನೀವು ಹುಡುಕುವ ಕರ್ತನು ಫಕ್ಕನೆ ತನ್ನ ಆಲಯಕ್ಕೆ ಬರುವನು; ನೀವು ಸಂತೋಷಪಡುವ ಒಡಂಬಡಿಕೆಯ ದೂತನೇ, ಇಗೋ, ಬರುತ್ತಾನೆಂದು ಸೈನ್ಯಗಳ ಕರ್ತನು ಹೇಳು ತ್ತಾನೆ.
ಇಗೋ, ಕರ್ತನ ದೊಡ್ಡ ಭಯಂಕರವಾದ ದಿನವು ಬರುವದಕ್ಕಿಂತ ಮುಂಚೆ ನಿಮಗೆ ಪ್ರವಾದಿಯಾದ ಎಲೀಯನನ್ನು ಕಳುಹಿಸುತ್ತೇನೆ.ನಾನು ಬಂದು ಭೂಮಿಯನ್ನು ಶಾಪದಿಂದ ಹೊಡೆಯದ ಹಾಗೆ ಅವನು ತಂದೆಗಳ ಹೃದಯವನ್ನು ಮಕ್ಕಳ ಕಡೆಗೂ ಮಕ್ಕಳ ಹೃದಯವನ್ನು ತಮ್ಮ ತಂದೆಗಳ ಕಡೆಗೂ ತಿರುಗಿಸುವನು.
ಯಾಕಂದರೆ--ಕರ್ತನ ಮಾರ್ಗವನ್ನು ಸಿದ್ಧಮಾಡಿರಿ; ಆತನ ಹಾದಿಗಳನ್ನು ನೆಟ್ಟಗೆ ಮಾಡಿರಿ ಎಂದು ಅಡವಿಯಲ್ಲಿ ಕೂಗುವ ಒಬ್ಬನ ಶಬ್ದವದೆ ಎಂಬದಾಗಿ ಪ್ರವಾದಿಯಾದ ಯೆಶಾಯ ನಿಂದ ಹೇಳಲ್ಪಟ್ಟವನು ಇವನೇ.
ನಾನು ಮಾನ ಸಾಂತರದ ನಿಮಿತ್ತ ನಿಮಗೆ ನೀರಿನಲ್ಲಿ ಬಾಪ್ತಿಸ್ಮ ಮಾಡಿಸುವದು ನಿಜವೇ; ಆದರೆ ನನ್ನ ಹಿಂದೆ ಬರುವಾತನು ನನಗಿಂತಲೂ ಶಕ್ತನಾಗಿದ್ದಾನೆ. ಆತನ ಕೆರಗಳನ್ನು ಹೊರುವದಕ್ಕೂ ನಾನು ಯೋಗ್ಯನಲ್ಲ; ಆತನು ಪವಿತ್ರಾ ತ್ಮನಿಂದಲೂ ಬೆಂಕಿಯಿಂದಲೂ ನಿಮಗೆ ಬಾಪ್ತಿಸ್ಮ ಮಾಡಿ ಸುವನು.
ಆದರೆ ನೀವು ಏನು ನೋಡುವದಕ್ಕಾಗಿ ಹೋದಿರಿ? ಪ್ರವಾದಿ ಯನ್ನೋ? ಹೌದು, ಪ್ರವಾದಿಗಿಂತಲೂ ಹೆಚ್ಚಿನವನು ಎಂದು ನಾನು ನಿಮಗೆ ಹೇಳುತ್ತೇನೆ.
ಆದದರಿಂದ ಅವನು ಯೋಹಾನನನ್ನು ಕೊಲ್ಲಬೇಕೆಂದಿದ್ದಾಗ ಜನ ಸಮೂಹಕ್ಕೆ ಭಯಪಟ್ಟನು; ಯಾಕಂದರೆ ಅವರು ಅವನನ್ನು ಪ್ರವಾದಿಯೆಂದು ಎಣಿಸಿದ್ದರು.
ಮನುಷ್ಯರಿಂದ ಎಂದು ನಾವು ಹೇಳಿ ದರೆ ಜನರಿಗೆ ಭಯಪಡುತ್ತೇವೆ; ಯಾಕಂದರೆ ಯೋಹಾನನು ಪ್ರವಾದಿಯೆಂದು ಎಲ್ಲರೂ ಎಣಿಸು ತ್ತಾರೆ ಎಂದು ಅಂದುಕೊಂಡರು.
ಪ್ರವಾದನೆಗಳಲ್ಲಿ ಬರೆಯಲ್ಪಟ್ಟ ಪ್ರಕಾರ--ಇಗೋ, ನಿನ್ನ ಮಾರ್ಗವನ್ನು ಸಿದ್ಧಮಾಡುವ ನನ್ನ ದೂತನನ್ನು ನಿನ್ನ ಮುಂದೆ ನಾನು ಕಳುಹಿಸುತ್ತೇನೆ.
ಆದರೆ ನಾವು--ಮನುಷ್ಯರಿಂದ ಎಂದು ಹೇಳುವದಾದರೆ ನಮಗೆ ಜನರ ಭಯವಿದೆ; ಯಾಕಂದರೆ ಯೋಹಾನನು ನಿಜವಾಗಿಯೂ ಪ್ರವಾದಿಯೆಂದು ಎಲ್ಲರೂ ಎಣಿಸಿಕೊಂಡಿರುವರು ಎಂದು ಅವರು ತಮ್ಮಲ್ಲಿ ತರ್ಕಿಸಿಕೊಂಡರು.ಅವರು ಪ್ರತ್ಯುತ್ತರವಾಗಿ ಯೇಸುವಿಗೆ--ನಾವು ಹೇಳಲಾರೆವು ಎಂದು ಉತ್ತರ ಕೊಟ್ಟರು. ಅದಕ್ಕೆ ಯೇಸು--ನಾನು ಯಾವ ಅಧಿಕಾರ ದಿಂದ ಇವುಗಳನ್ನು ಮಾಡುತ್ತೇನೆಂದು ನಾನೂ ನಿಮಗೆ ಹೇಳುವದಿಲ್ಲ ಎಂದು ಅವರಿಗೆ ಉತ್ತರ ಕೊಟ್ಟನು.
ಅವನು ಇಸ್ರಾ ಯೇಲಿನ ಮಕ್ಕಳಲ್ಲಿ ಅನೇಕರನ್ನು ಅವರ ದೇವರಾದ ಕರ್ತನ ಕಡೆಗೆ ತಿರುಗಿಸುವನು.
ಆತನು ದೊಡ್ಡವನಾಗಿದ್ದು ಮಹೋನ್ನತನ ಕುಮಾರನೆಂದು ಕರೆಯಲ್ಪಡುವನು; ದೇವರಾದ ಕರ್ತನು ಆತನ ತಂದೆ ಯಾದ ದಾವೀದನ ಸಿಂಹಾಸನವನ್ನು ಆತನಿಗೆ ಕೊಡು ವನು.
ಅದಕ್ಕೆ ಆ ದೂತನು ಪ್ರತ್ಯುತ್ತರವಾಗಿ ಆಕೆಗೆ--ಪವಿತ್ರಾತ್ಮನು ನಿನ್ನ ಮೇಲೆ ಬರುವನು, ಮಹೋನ್ನತನ ಶಕ್ತಿಯು ನಿನ್ನನ್ನು ಆವರಿಸಿ ಕೊಳ್ಳುವದು; ಆದದರಿಂದ ನಿನ್ನಿಂದ ಹುಟ್ಟುವ ಆ ಪವಿತ್ರವಾದ ಶಿಶುವು ದೇವರ ಮಗನೆಂದು ಕರೆಯ ಲ್ಪಡುವನು.
ಪ್ರವಾದಿಯಾದ ಯೆಶಾಯನ ವಾಕ್ಯಗಳ ಪುಸ್ತಕ ದಲ್ಲಿ--ಕರ್ತನ ಮಾರ್ಗವನ್ನು ಸಿದ್ಧ ಮಾಡಿರಿ; ಆತನ ಹಾದಿಗಳನ್ನು ನೆಟ್ಟಗೆ ಮಾಡಿರಿ ಎಂದು ಅಡವಿಯಲ್ಲಿ ಕೂಗುವವನ ಶಬ್ದವದೆ ಎಂದೂ
ಆದರೆ ನೀವು ನಿಮ್ಮ ವೈರಿಗಳನ್ನು ಪ್ರೀತಿಸಿರಿ, ಮತ್ತು ಒಳ್ಳೇದನ್ನು ಮಾಡಿರಿ. ಏನನ್ನೂ ತಿರಿಗಿ ನಿರೀಕ್ಷಿಸದೆ ಸಾಲ ಕೊಡಿರಿ; ಆಗ ನಿಮ್ಮ ಬಹುಮಾನವು ದೊಡ್ಡದಾಗಿರುವದು; ನೀವು ಮಹೋ ನ್ನತನ ಮಕ್ಕಳಾಗಿರುವಿರಿ; ಯಾಕಂದರೆ ಆತನು ಕೃತಜ್ಞತೆ ಯಿಲ್ಲದವರಿಗೂ ಕೆಟ್ಟವರಿಗೂ ದಯೆಯುಳ್ಳವನಾಗಿ ದ್ದಾನೆ,
ಇಗೋ, ನಿನ್ನ ದಾರಿಯನ್ನು ನಿನ್ನ ಮುಂದೆ ಸಿದ್ಧ ಮಾಡುವಂತೆ ನನ್ನ ದೂತನನ್ನು ನಿನ್ನ ಮುಂದೆ ಕಳುಹಿಸುತ್ತೇನೆ ಎಂದು ಯಾವನ ವಿಷಯದಲ್ಲಿ ಬರೆದಿತ್ತೋ ಅವನೇ ಇವನು.
ಅವನು--ಕರ್ತನ ದಾರಿಯನ್ನು ನೆಟ್ಟಗೆ ಮಾಡಿರಿ ಎಂದು ಅಡವಿ ಯಲ್ಲಿ ಕೂಗುವ ಒಬ್ಬನ ಶಬ್ದವದೆ ಎಂದು ಪ್ರವಾದಿ ಯಾದ ಯೆಶಾಯನು ಹೇಳಿದ ಶಬ್ದವೇ ನಾನು ಎಂದು ಉತ್ತರಕೊಟ್ಟನು.
ಆತನೇ ನನ್ನ ಹಿಂದೆ ಬರು ವಾತನಾಗಿದ್ದು ನನಗಿಂತ ಮುಂದಿನವನಾದನು; ಆತನ ಕೆರದ ಬಾರನ್ನು ಬಿಚ್ಚುವದಕ್ಕೆ ನಾನು ಯೋಗ್ಯನಲ್ಲ ಎಂದು ಹೇಳಿದನು.
ನಾನು ಕ್ರಿಸ್ತನಲ್ಲ, ಆದರೆ ಆತನ ಮುಂದಾಗಿ ಕಳುಹಿಸಲ್ಪಟ್ಟ ವನೆಂದು ನಾನು ಹೇಳಿದ್ದಕ್ಕೆ ನೀವೇ ನನಗೆ ಸಾಕ್ಷಿಗಳಾ ಗಿದ್ದೀರಿ.
ಆತನ ಆಗಮನಕ್ಕೆ ಮುಂಚೆ ಯೋಹಾನನು ಮೊದಲು ಇಸ್ರಾಯೇಲ್ ಜನರೆ ಲ್ಲರಿಗೆ ಮಾನಸಾಂತರದ ಬಾಪ್ತಿಸ್ಮವನ್ನು ಸಾರಿದನು.
ಈಕೆಯು ಪೌಲನನ್ನೂ ನಮ್ಮನ್ನೂ ಹಿಂಬಾಲಿಸಿ--ಇವರು ನಮಗೆ ರಕ್ಷಣೆಯ ಮಾರ್ಗವನ್ನು ತೋರಿಸುವ ಮಹೋನ್ನತ ನಾದ ದೇವರ ಸೇವಕರು ಎಂದು ಕೂಗಿ ಹೇಳುತ್ತಿದ್ದಳು.