ನಮ್ಮ ದೇವರ ಮಮತೆಯ ಕರುಣೆಯಿಂದ ಅದು ಆಗುವದ ಲ್ಲದೆ ಮೇಲಣದಿಂದ ಅರುಣೋದಯವು ಉಂಟಾಗಿ ನಮ್ಮನ್ನು ಸಂಧಿಸಿ
Cross references
ನಾನು ಅವನನ್ನು ನೋಡು ವೆನು, ಈಗಲ್ಲ; ಅವನನ್ನು ದೃಷ್ಟಿಸುವೆನು, ಸವಿಾಪದಲ್ಲಿ ಅಲ್ಲ; ಯಾಕೋಬನಿಂದ ನಕ್ಷತ್ರ ಉದಯಿಸುವದು; ಇಸ್ರಾಯೇಲ್ನಿಂದ ರಾಜದಂಡ ಏಳುವದು; ಅದು ಮೋವಾಬಿನ ಮೂಲೆಗಳನ್ನು ಹೊಡೆದು ಶೇತನ ಸಕಲ ಮಕ್ಕಳನ್ನು ಸಂಹರಿಸುವದು.
ಓ ಕರ್ತನೇ, ನಿನ್ನ ಅಂತಃಕರಣಗಳನ್ನೂ ನಿನ್ನ ಪ್ರೀತಿಯ ದಯೆಯನ್ನೂ ಜ್ಞಾಪಕಮಾಡಿಕೋ; ಅವು ಆದಿಯಿಂದ ಇದ್ದವುಗಳು.
ಇಷಯನ ಬುಡದಿಂದ ಒಂದು ಕೊಂಬೆ ಒಡೆಯುವದು ಅದರ ಬೇರಿನಿಂದ ಕೊಂಬೆ ಯು ಬೆಳೆಯುವದು.
ಕರ್ತನು ನಮಗೆ ಮಾಡಿದ್ದೆಲ್ಲಾದರ ಪ್ರಕಾರ, ಕರ್ತನ ಪ್ರೀತಿ ಕೃಪೆಗಳನ್ನೂ ಕರ್ತನ ಸ್ತೋತ್ರಗಳನ್ನೂ ಜ್ಞಾಪಕಪಡಿಸುವೆನು; ಆತನು ತನ್ನ ಅಂತಃಕರುಣೆಯ ಪ್ರಕಾರವೂ ತನ್ನ ಕೃಪೆಯ ಮಹಾ ಒಳ್ಳೇತನದ ಪ್ರಕಾರವೂ ಇಸ್ರಾಯೇಲಿನ ಮನೆಯವರಿಗೆ ದೊಡ್ಡ ಉಪಕಾರ ಮಾಡಿದನಲ್ಲಾ.
ಆಕಾಶದಿಂದ, ನಿನ್ನ ಪರಿ ಶುದ್ಧ ಮಹಿಮೆಯ ನಿವಾಸದಿಂದ ದೃಷ್ಟಿಸಿನೋಡು; ನಿನ್ನ ಆಸಕ್ತಿಯೂ ನಿನ್ನ ಪರಾಕ್ರಮವೂ ನಿನ್ನ ಕರುಳುಗಳ ಘೋಷವೂ ನನ್ನ ವಿಷಯವಾದ ನಿನ್ನ ಕರುಣೆಗಳೂ ಎಲ್ಲಿ? ಬಿಗಿ ಹಿಡುಕೊಂಡಿದ್ದೀಯೋ?
ಪ್ರಧಾನ ಯಾಜಕ ನಾದ ಓ ಯೆಹೋಶುವನೇ, ನೀನೂ ನಿನ್ನ ಮುಂದೆ ಕೂತುಕೊಳ್ಳುವ ನಿನ್ನ ಸಂಗಡಿಗರೂ ಈಗ ಕೇಳಿರಿ; ಅವರು ಆಶ್ಚರ್ಯವನ್ನುಂಟು ಮಾಡುವ ಮನುಷ್ಯರಾಗಿ ದ್ದಾರೆ; ಇಗೋ, ನಾನು ಕೊಂಬೆಯೆಂಬ ನನ್ನ ಸೇವಕ ನನ್ನು ಬರಮಾಡುವೆನು.
ಅವನಿಗೆ ಹೇಳತಕ್ಕದ್ದೇನಂದರೆ--ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಇಗೋ, ಚಿಗುರೆಂದು ಹೆಸರುಳ್ಳ ಮನುಷ್ಯನು, ಅವನು ತನ್ನ ಸ್ಥಳದೊಳಗಿಂದ ಚಿಗುರು ವನು, ಆತನೇ ಕರ್ತನ ದೇವಾಲಯವನ್ನು ಕಟ್ಟುವನು.
ಆದರೆ ನನ್ನ ಹೆಸರಿಗೆ ಭಯಪಡುವವರಾದ ನಿಮಗೆ ನೀತಿಯ ಸೂರ್ಯನು ತನ್ನ ರೆಕ್ಕೆಗಳಲ್ಲಿ ಸ್ವಸ್ಥತೆಯನ್ನುಂಟು ಮಾಡುವವನಾಗಿ ಉದಯಿಸುವನು; ನೀವು ಹೊರಟು ಕೊಟ್ಟಿಗೆಯಿಂದ ಬಿಟ್ಟ ಕರುಗಳ ಹಾಗೆ ಕುಣಿದಾಡುವಿರಿ.
ದೇವರು ಲೋಕವನ್ನು ಎಷ್ಟೋ ಪ್ರೀತಿಮಾಡಿ ತನ್ನ ಒಬ್ಬನೇ ಮಗನನ್ನು ಕೊಟ್ಟನು; ಆತನನ್ನು ನಂಬುವ ಯಾವನಾದರೂ ನಾಶವಾಗದೆ ನಿತ್ಯಜೀವ ವನ್ನು ಪಡೆದವನಾಗಿರುವನು.
ಆದರೆ ಕರುಣಾನಿಧಿಯಾದ ದೇವರು ತನ್ನ ಅಪಾರ ವಾದ ಪ್ರೀತಿಯ ನಿಮಿತ್ತ ನಮ್ಮನ್ನು ಪ್ರೀತಿಸಿ
ಆದದರಿಂದ-- ನಿದ್ರೆ ಮಾಡುವವನೇ, ಎಚ್ಚರವಾಗು, ಸತ್ತವರಿಂದ ಎದ್ದೇಳು; ಕ್ರಿಸ್ತನು ನಿನಗೆ ಪ್ರಕಾಶಕೊಡುವನು ಎಂದು ಆತನು ಹೇಳುತ್ತಾನೆ.
ಯೇಸು ಕ್ರಿಸ್ತನಿಗಿರುವಂಥ ಕನಿಕರದಿಂದ ನಿಮ್ಮೆಲ್ಲರಿ ಗೋಸ್ಕರ ನಾನು ಎಷ್ಟೋ ಹಂಬಲಿಸುತ್ತೇನೆ; ಇದಕ್ಕೆ ದೇವರೇ ನನ್ನ ಸಾಕ್ಷಿ.
ಕ್ರಿಸ್ತನಲ್ಲಿ ಆದರಣೆ, ಪ್ರೀತಿಯ ಸಂತೈಸುವಿಕೆ, ಆತ್ಮನ ಅನ್ಯೋನ್ಯತೆ, ದಯಾ ವಾತ್ಸಲ್ಯಗಳು ಇರುವದಾದರೆ
ಆದದರಿಂದ ನೀವು ದೇವರಿಂದ ಆರಿಸಿಕೊಂಡ ವರೂ ಪರಿಶುದ್ಧರೂ ಪ್ರಿಯರೂ ಆಗಿರುವವರಿಗೆ ತಕ್ಕಂತೆ ಕನಿಕರ ದಯೆ ದೀನಮನಸ್ಸು ಸಾತ್ವಿಕತ್ವ ದೀರ್ಘಶಾಂತಿ ಎಂಬ ಸದ್ಗುಣಗಳನ್ನು ಧರಿಸಿಕೊಳ್ಳಿರಿ.
ನಮಗೂ ಬಹು ದೃಢವಾದ ಪ್ರವಾದನೆಯ ವಾಕ್ಯವು ಇರುತ್ತದೆ; ಆ ದಿನವು ಬೆಳಗುವವರೆಗೆ ಉದಯ ನಕ್ಷತ್ರವು ನಿಮ್ಮ ಹೃದಯಗಳಲ್ಲಿ ಮೂಡುವ ತನಕ ಅದನ್ನು ಕತ್ತಲೆಯಾದ ಸ್ಥಳದಲ್ಲಿ ಪ್ರಕಾಶಿಸುವ ದೀಪ ವೆಂದೆಣಿಸಿ ಅದಕ್ಕೆ ನೀವು ಲಕ್ಷ್ಯಕೊಡುವದು ಒಳ್ಳೇದು.
ಆದರೆ ಈ ಲೋಕದ ಸಂಪತ್ತುಳ್ಳ ಯಾವನಾದರೂ ಕೊರತೆಯಲ್ಲಿರುವ ತನ್ನ ಸಹೋದರನನ್ನು ನೋಡಿ ಕರುಣಿಸದೆ ಬಿಟ್ಟರೆ ದೇವರ ಪ್ರೀತಿಯು ಅವನಲ್ಲಿ ನೆಲೆಗೊಂಡಿರುವದು ಹೇಗೆ?
ನಾವು ಆತನ ಮೂಲಕ ಜೀವಿಸು ವದಕ್ಕಾಗಿ ದೇವರು ತನ್ನ ಒಬ್ಬನೇ ಮಗನನ್ನು ಲೋಕಕ್ಕೆ ಕಳುಹಿಸಿಕೊಟ್ಟದ್ದರಲ್ಲಿಯೇ ದೇವರ ಪ್ರೀತಿಯು ನಮ್ಮ ಕಡೆಗೆ ಪ್ರತ್ಯಕ್ಷವಾಗಿದೆ.
ಯೇಸುವೆಂಬ ನಾನು ಸಭೆಗಳಲ್ಲಿ ಇವುಗಳ ವಿಷಯವಾಗಿ ನಿಮಗೆ ಸಾಕ್ಷಿ ಹೇಳುವದಕ್ಕೋಸ್ಕರ ನನ್ನ ದೂತನನ್ನು ಕಳುಹಿಸಿಕೊಟ್ಟೆನು. ನಾನು ದಾವೀದನ ಬೇರೂ ಸಂತತಿಯೂ ಉದಯದ ಪ್ರಕಾಶವುಳ್ಳ ನಕ್ಷತ್ರವೂ ಆಗಿದ್ದೇನೆ.