ಇವುಗಳಾದ ಮೇಲೆ ಕರ್ತನು ಬೇರೆ ಎಪ್ಪತ್ತು ಮಂದಿಯನ್ನು ಸಹ ನೇಮಿಸಿ ತಾನೇ ಸ್ವತಃ ಹೋಗಬೇಕೆಂದಿದ್ದ ಪ್ರತಿಯೊಂದು ಪಟ್ಟಣಕ್ಕೂ ಸ್ಥಳಕ್ಕೂ ಇಬ್ಬಿಬ್ಬರನ್ನಾಗಿ ತನ್ನ ಮುಂದಾಗಿ ಕಳುಹಿಸಿದನು.
Cross references
ಕರ್ತನು ಮೋಶೆಗೆ ಹೇಳಿದ್ದೇನಂದರೆ--ಜನರ ಹಿರಿಯರೆಂದೂ ಅವರ ಮೇಲಿನ ಉದ್ಯೋಗಸ್ಥರೆಂದೂ ನೀನು ತಿಳಿದುಕೊಂಡಂಥ ಇಸ್ರಾಯೇಲ್ಯರ ಹಿರಿಯರೊ ಳಗೆ ಎಪ್ಪತ್ತು ಮಂದಿಯನ್ನು ನನ್ನ ಬಳಿಗೆ ಕೂಡಿಸಿ ಸಭೆಯ ಗುಡಾರದ ಕಡೆಗೆ ಕರಕೊಂಡು ಬಾ. ಅವರು ಅಲ್ಲಿ ನಿನ್ನ ಸಂಗಡ ನಿಂತಿರಲಿ.
ಆಗ ಮೋಶೆ ಹೊರಟು ಕರ್ತನ ಮಾತುಗಳನ್ನು ಜನರಿಗೆ ಹೇಳಿ ಜನರ ಹಿರಿಯರಲ್ಲಿ ಎಪ್ಪತ್ತು ಮಂದಿಯನ್ನು ಕೂಡಿಸಿ ಗುಡಾರದ ಸುತ್ತಲೂ ನಿಲ್ಲಿಸಿದನು.
ಆತನು ತನ್ನ ಹನ್ನೆರಡು ಮಂದಿ ಶಿಷ್ಯರನ್ನು ತನ್ನ ಬಳಿಗೆ ಕರೆದು ಅಶುದ್ಧಾತ್ಮಗಳನ್ನು ಬಿಡಿಸುವಂತೆಯೂ ಎಲ್ಲಾ ತರವಾದ ರೋಗವನ್ನು ಮತ್ತು ಎಲ್ಲಾ ತರವಾದ ಅಸ್ವಸ್ಥತೆಯನ್ನು ಸ್ವಸ್ಥ ಮಾಡು ವಂತೆಯೂ ಅವರಿಗೆ ಅಧಿಕಾರ ಕೊಟ್ಟನು.
ಆತನು ಹನ್ನೆರಡು ಮಂದಿಯನ್ನು ತನ್ನ ಬಳಿಗೆ ಕರೆದು ಅವರಿಗೆ ಅಶುದ್ಧಾತ್ಮಗಳ ಮೇಲೆ ಅಧಿಕಾರ ಕೊಟ್ಟು ಇಬ್ಬಿಬ್ಬರನ್ನು ಕಳುಹಿಸಲಾರಂಭಿಸಿದನು.
ಅವನು ತಂದೆಗಳ ಹೃದಯಗಳನ್ನು ಮಕ್ಕಳಕಡೆಗೂ ಅವಿಧೇಯರನ್ನು ನೀತಿವಂತರ ಜ್ಞಾನಕ್ಕೂ ತಿರುಗಿಸಿ ಕರ್ತನಿಗೋಸ್ಕರ ಜನರನ್ನು ಸಿದ್ಧಮಾಡುವದಕ್ಕೆ ಎಲೀಯನ ಆತ್ಮದಲ್ಲಿ ಯೂ ಬಲದಲ್ಲಿಯೂ ಆತನ ಮುಂದೆ ಹೋಗುವನು ಎಂದು ಹೇಳಿದನು.
ಇದಲ್ಲದೆ ಮಗುವೇ, ನೀನಾದರೋ ಮಹೋನ್ನತನ ಪ್ರವಾದಿ ಎಂದು ಕರೆಯಲ್ಪಡುವಿ; ಯಾಕಂದರೆ ಕರ್ತನ ಮಾರ್ಗಗಳನ್ನು ಸಿದ್ಧಮಾಡು ವದಕ್ಕೆ ಆತನ ಮುಂದೆ ಹೋಗುವಿ.
ಪ್ರವಾದಿಯಾದ ಯೆಶಾಯನ ವಾಕ್ಯಗಳ ಪುಸ್ತಕ ದಲ್ಲಿ--ಕರ್ತನ ಮಾರ್ಗವನ್ನು ಸಿದ್ಧ ಮಾಡಿರಿ; ಆತನ ಹಾದಿಗಳನ್ನು ನೆಟ್ಟಗೆ ಮಾಡಿರಿ ಎಂದು ಅಡವಿಯಲ್ಲಿ ಕೂಗುವವನ ಶಬ್ದವದೆ ಎಂದೂ
ಕರ್ತನು ಆಕೆಯನ್ನು ನೋಡಿ ಆಕೆಯ ಮೇಲೆ ಕನಿಕರಪಟ್ಟು ಆಕೆಗೆ--ಅಳಬೇಡ ಅಂದನು.
ತರುವಾಯ ಆತನು ತನ್ನ ಹನ್ನೆರಡು ಮಂದಿ ಶಿಷ್ಯರನ್ನು ಒಟ್ಟಿಗೆ ಕರೆದು ಅವರಿಗೆ ಎಲ್ಲಾ ದೆವ್ವಗಳನ್ನು ಬಿಡಿಸುವದಕ್ಕೂ ರೋಗಗಳನ್ನು ಸ್ವಸ್ಥ ಮಾಡುವದಕ್ಕೂ ಶಕ್ತಿಯನ್ನು ಮತ್ತು ಅಧಿಕಾರವನ್ನು ಕೊಟ್ಟನು.
ತನಗೆ ಮುಂದಾಗಿ ದೂತರನ್ನು ಕಳುಹಿಸಿದನು. ಅವರು ಹೋಗಿ ಆತನಿಗಾಗಿ ಸಿದ್ಧ ಪಡಿಸುವಂತೆ ಸಮಾರ್ಯದ ಒಂದು ಹಳ್ಳಿಯೊಳಕ್ಕೆ ಪ್ರವೇಶಿಸಿದರು.
ಇವರು ಕರ್ತನನ್ನು ಸೇವಿಸುತ್ತಾ ಉಪವಾಸ ಮಾಡುತ್ತಾ ಇದ್ದಾಗ ಪವಿ ತ್ರಾತ್ಮನು--ನಾನು ಬಾರ್ನಬ ಸೌಲರನ್ನು ಕರೆದ ಕೆಲಸಕ್ಕೆ ನನಗಾಗಿ ಅವರನ್ನು ಪ್ರತ್ಯೇಕಿಸಿರಿ ಎಂದು ಹೇಳಿದನು.
ಇದಲ್ಲದೆ ನನ್ನ ಇಬ್ಬರು ಸಾಕ್ಷಿಗಳು ಗೋಣಿತಟ್ಟನ್ನು ಹೊದ್ದುಕೊಂಡು ಸಾವಿರದ ಇನ್ನೂರ ಅರವತ್ತು ದಿನಗಳ ತನಕ ಪ್ರವಾದಿಸುವ ಹಾಗೆ ಅವರಿಗೆ ಅಧಿಕಾರ ಕೊಡುವೆನು.