ಖೊರಾಜಿನೇ, ನಿನಗೆ ಅಯ್ಯೋ! ಬೇತ್ಸಾಯಿದವೇ, ನಿನಗೆ ಅಯ್ಯೋ! ನಿನ್ನಲ್ಲಿ ನಡೆದ ಮಹತ್ಕಾರ್ಯಗಳು ತೂರ್ ಸೀದೋನ್ಗಳಲ್ಲಿ ನಡೆದಿದ್ದರೆ ಅಲ್ಲಿಯವರು ಬಹಳ ಕಾಲದ ಹಿಂದೆಯೇ ಗೋಣೀತಟ್ಟನ್ನು ಸುತ್ತಿಕೊಂಡು ಬೂದಿಯಲ್ಲಿ ಕೂತು ಮಾನಸಾಂತರ ಪಡುತ್ತಿದ್ದರು.
Cross references
ಆದದರಿಂದ ನನ್ನನ್ನು ಅಸಹ್ಯಿಸಿಕೊಂಡು ದೂಳಿಯ ಲ್ಲಿಯೂ ಬೂದಿಯಲ್ಲಿಯೂ ಪಶ್ಚಾತ್ತಾಪ ಪಡುತ್ತೇನೆ ಅಂದನು.
ತೂರಿನ ವಿಷಯವಾದ ದೈವೋಕ್ತಿ. ತಾರ್ಷೀಷಿನ ಹಡಗುಗಳೇ, ಗೋಳಾ ಡಿರಿ; ಅದು ಹಾಳಾಗಿರುವದರಿಂದ ನಿಮಗೆ ಮನೆಯಿಲ್ಲ ಮತ್ತು ಒಳಗೆ ಪ್ರವೇಶವೂ ಇಲ್ಲ. ಇದು ಕಿತ್ತೀಮ್ ದೇಶದವರಿಂದ ಅವರಿಗೆ ತಿಳಿಯಿತು.
ಚೀಯೋ ನಿನಲ್ಲಿ ದುಃಖಿಸುವವರಿಗೆ ಬೂದಿಗೆ ಬದಲಾಗಿ ಸೌಂದರ್ಯವನ್ನೂ ದುಃಖಕ್ಕೆ ಬದಲಾಗಿ ಆನಂದ ತೈಲವನ್ನೂ ಕುಂದಿದ ಆತ್ಮಕ್ಕೆ ಬದಲಾಗಿ ಸ್ತೋತ್ರದ ವಸ್ತ್ರವನ್ನೂ ಕೊಡುವದಕ್ಕೆ ನನ್ನನ್ನು ನೇಮಿಸಿದ್ದಾನೆ. ಆಗ ಅವರಿಗೆ ನೀತಿವೃಕ್ಷಗಳೆಂದೂ ಕರ್ತನು ತಾನು ಮಹಿಮೆ ಹೊಂದುವದಕ್ಕೋಸ್ಕರ ನೆಟ್ಟ ಗಿಡಗಳೆಂದೂ ಹೆಸರಾಗುವದು.
ನೀನು ಕಠಿಣ ಭಾಷೆಯಲ್ಲಿ ಸೋಜಿಗದ ಮಾತುಗಳನ್ನಾಡುವವರ ಬಳಿಗೆ ಕಳುಹಿಸಲ್ಪಟ್ಟವನಲ್ಲ; ಇಂಥವರ ಕಡೆಗೆ ನಾನು ನಿನ್ನನ್ನು ಕಳುಹಿಸಿದ್ದ ಪಕ್ಷದಲ್ಲಿ ನಿಶ್ಚಯವಾಗಿ ಅವರು ನಿನ್ನ ಮಾತಿಗೆ ಕಿವಿಗೊಡುತ್ತಿದ್ದರು.
ಹನ್ನೊಂದನೇ ವರುಷದ ತಿಂಗಳಿನ ಮೊದಲನೇ ದಿನದಲ್ಲಿ ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇನಂದರೆ--
ಉಪವಾಸದಿಂದ ಗೋಣಿತಟ್ಟನ್ನು ಸುತ್ತಿಕೊಂಡು, ಬೂದಿಯನ್ನು ಬಳಿದು ಕೊಂಡು, ದೇವರಾದ ಕರ್ತನನ್ನು ಹುಡುಕುವದಕ್ಕಾಗಿ ಪ್ರಾರ್ಥನೆಗಳಿಂದಲೂ ವಿಜ್ಞಾಪನೆ ಗಳಿಂದಲೂ ಆತನ ಕಡೆಗೆ ನನ್ನ ಮುಖವನ್ನು ತಿರುಗಿ ಸಿದೆನು.
ಹೌದು, ಓ ತೂರೇ, ಚೀದೋನೇ, ಪಾಲೆಸ್ತಿನದ ಎಲ್ಲಾ ಪ್ರಾಂತ್ಯಗಳೇ, ನನ್ನ ಕೂಡ ನಿಮಗೇನು? ನನಗೆ ಮುಯ್ಯಿಗೆ ಮುಯ್ಯಿ ಸಲ್ಲಿಸುವಿರೋ? ನೀವು ನನಗೆ ಸಲ್ಲಿಸಿದರೆ ಜಾಗ್ರತೆಯಾಗಿಯೂ ತ್ವರೆಯಾಗಿಯೂ ನಿಮ್ಮ ತಲೆಯ ಮೇಲೆ ಮುಯ್ಯಿಗೆ ಮುಯ್ಯಿ ತರಿಸುವೆನು.
ತರುವಾಯ ತಾನು ಹೆಚ್ಚಾದ ಮಹತ್ಕಾರ್ಯ ಗಳನ್ನು ನಡಿಸಿದ ಪಟ್ಟಣಗಳು ಮಾನಸಾಂತರಪಡದೆ ಇದ್ದದರಿಂದ ಆತನು ಅವುಗಳನ್ನು ಗದರಿಸತೊ ಡಗಿ --
ತರುವಾಯ ಆತನು ಬೇತ್ಸಾಯಿದಕ್ಕೆ ಬಂದಾಗ ಅವರು ಒಬ್ಬ ಕುರುಡನನ್ನು ಆತನ ಬಳಿಗೆ ತಂದು ಅವನನ್ನು ಮುಟ್ಟಬೇಕೆಂದು ಆತನನ್ನು ಬೇಡಿಕೊಂಡರು.
ತರುವಾಯ ಅಪೊಸ್ತಲರು ಹಿಂತಿರುಗಿ ಬಂದು ತಾವು ಮಾಡಿದವುಗಳನ್ನೆಲ್ಲಾ ಆತನಿಗೆ ತಿಳಿಸಿದರು. ಆಗ ಆತನು ಬೇತ್ಸಾಯಿದ ಎಂದು ಕರೆಯಲ್ಪಟ್ಟ ಪಟ್ಟಣಕ್ಕೆ ಸಂಬಂಧಿಸಿದ ಅರಣ್ಯಸ್ಥಳಕ್ಕೆ ಪ್ರತ್ಯೇಕವಾಗಿ ಅವರನ್ನು ಕರೆದುಕೊಂಡು ಹೋದನು.
ಯೇಸು ಪ್ರತ್ಯುತ್ತರವಾಗಿ ಅವನಿಗೆ--ನಿನಗೆ ನಿಜನಿಜ ವಾಗಿ ಹೇಳುತ್ತೇನೆ, ಒಬ್ಬನು ನೀರಿನಿಂದಲೂ ಆತ್ಮ ನಿಂದಲೂ ಹುಟ್ಟದಿದ್ದರೆ ಅವನು ದೇವರ ರಾಜ್ಯದೊಳಗೆ ಪ್ರವೇಶಿಸಲಾರನು.
ಹೀಗೆ ಅವರಲ್ಲಿ ವಿಭಾಗವಾದಾಗ ಪೌಲನು ಅವರಿಗೆ--ಯೆಶಾಯನು ಪವಿತ್ರಾತ್ಮನಿಂದ ನಮ್ಮ ಪಿತೃಗಳಿಗೆ ವಿಹಿತ ವಾಗಿ ಹೇಳಿದ್ದೇನಂದರೆ--
ಯೆಶಾಯನು ಮುಂದಾಗಿ--ಸೈನ್ಯಗಳ ಕರ್ತನು ನಮಗಾಗಿ ಸಂತಾನ ವನ್ನು ಉಳಿಸದೆ ಹೋಗಿದ್ದರೆ ನಾವು ಸೊದೋಮಿನ ಹಾಗೆ ಇರುತ್ತಿದ್ದೆವು; ಗೊಮೋರದ ಸ್ಥಿತಿಯು ನಮ್ಮದಾ ಗುತ್ತಿತ್ತು ಎಂದು ಹೇಳಿದನು.
(ಬರೆದಿರುವಂತೆ ದೇವರು ಅವರಿಗೆ ತೂಕಡಿಕೆಯ ಆತ್ಮವನ್ನೂ ಕಾಣದ ಕಣ್ಣುಗಳನ್ನೂ ಕೇಳದ ಕಿವಿಗಳನ್ನೂ ಕೊಟ್ಟಿದ್ದಾನೆ). ಉಳಿದವರು ಈ ದಿನದ ವರೆಗೂ ಕುರುಡರಾಗಿದ್ದಾರೆ.
ಅವರು ಕಪಟದಲ್ಲಿ ಸುಳ್ಳಾಡುವವರೂ ತಮ್ಮ ಮನಸ್ಸಾಕ್ಷಿಯ ಮೇಲೆ ಕಾಸಿದ ಕಬ್ಬಿಣದಿಂದ ಬರೆ ಹಾಕಲ್ಪಟ್ಟವರೂ ಆಗಿದ್ದು
ಇದಲ್ಲದೆ ನನ್ನ ಇಬ್ಬರು ಸಾಕ್ಷಿಗಳು ಗೋಣಿತಟ್ಟನ್ನು ಹೊದ್ದುಕೊಂಡು ಸಾವಿರದ ಇನ್ನೂರ ಅರವತ್ತು ದಿನಗಳ ತನಕ ಪ್ರವಾದಿಸುವ ಹಾಗೆ ಅವರಿಗೆ ಅಧಿಕಾರ ಕೊಡುವೆನು.