Home Bibles ಲೂಕ 10:13 · ಕನ್ನಡ ಬೈಬಲ್
ಲೂಕ 10:13 · ಕನ್ನಡ ಬೈಬಲ್

ಖೊರಾಜಿನೇ, ನಿನಗೆ ಅಯ್ಯೋ! ಬೇತ್ಸಾಯಿದವೇ, ನಿನಗೆ ಅಯ್ಯೋ! ನಿನ್ನಲ್ಲಿ ನಡೆದ ಮಹತ್ಕಾರ್ಯಗಳು ತೂರ್‌ ಸೀದೋನ್‌ಗಳಲ್ಲಿ ನಡೆದಿದ್ದರೆ ಅಲ್ಲಿಯವರು ಬಹಳ ಕಾಲದ ಹಿಂದೆಯೇ ಗೋಣೀತಟ್ಟನ್ನು ಸುತ್ತಿಕೊಂಡು ಬೂದಿಯಲ್ಲಿ ಕೂತು ಮಾನಸಾಂತರ ಪಡುತ್ತಿದ್ದರು.

Cross references

ಯೋಬ 42:6

ಆದದರಿಂದ ನನ್ನನ್ನು ಅಸಹ್ಯಿಸಿಕೊಂಡು ದೂಳಿಯ ಲ್ಲಿಯೂ ಬೂದಿಯಲ್ಲಿಯೂ ಪಶ್ಚಾತ್ತಾಪ ಪಡುತ್ತೇನೆ ಅಂದನು.

ಯೆಶಾಯ 23:1

ತೂರಿನ ವಿಷಯವಾದ ದೈವೋಕ್ತಿ. ತಾರ್ಷೀಷಿನ ಹಡಗುಗಳೇ, ಗೋಳಾ ಡಿರಿ; ಅದು ಹಾಳಾಗಿರುವದರಿಂದ ನಿಮಗೆ ಮನೆಯಿಲ್ಲ ಮತ್ತು ಒಳಗೆ ಪ್ರವೇಶವೂ ಇಲ್ಲ. ಇದು ಕಿತ್ತೀಮ್‌ ದೇಶದವರಿಂದ ಅವರಿಗೆ ತಿಳಿಯಿತು.

ಯೆಶಾಯ 61:3

ಚೀಯೋ ನಿನಲ್ಲಿ ದುಃಖಿಸುವವರಿಗೆ ಬೂದಿಗೆ ಬದಲಾಗಿ ಸೌಂದರ್ಯವನ್ನೂ ದುಃಖಕ್ಕೆ ಬದಲಾಗಿ ಆನಂದ ತೈಲವನ್ನೂ ಕುಂದಿದ ಆತ್ಮಕ್ಕೆ ಬದಲಾಗಿ ಸ್ತೋತ್ರದ ವಸ್ತ್ರವನ್ನೂ ಕೊಡುವದಕ್ಕೆ ನನ್ನನ್ನು ನೇಮಿಸಿದ್ದಾನೆ. ಆಗ ಅವರಿಗೆ ನೀತಿವೃಕ್ಷಗಳೆಂದೂ ಕರ್ತನು ತಾನು ಮಹಿಮೆ ಹೊಂದುವದಕ್ಕೋಸ್ಕರ ನೆಟ್ಟ ಗಿಡಗಳೆಂದೂ ಹೆಸರಾಗುವದು.

ಯೆಹೆಜ್ಕೇಲ 3:6

ನೀನು ಕಠಿಣ ಭಾಷೆಯಲ್ಲಿ ಸೋಜಿಗದ ಮಾತುಗಳನ್ನಾಡುವವರ ಬಳಿಗೆ ಕಳುಹಿಸಲ್ಪಟ್ಟವನಲ್ಲ; ಇಂಥವರ ಕಡೆಗೆ ನಾನು ನಿನ್ನನ್ನು ಕಳುಹಿಸಿದ್ದ ಪಕ್ಷದಲ್ಲಿ ನಿಶ್ಚಯವಾಗಿ ಅವರು ನಿನ್ನ ಮಾತಿಗೆ ಕಿವಿಗೊಡುತ್ತಿದ್ದರು.

ಯೆಹೆಜ್ಕೇಲ 26:1

ಹನ್ನೊಂದನೇ ವರುಷದ ತಿಂಗಳಿನ ಮೊದಲನೇ ದಿನದಲ್ಲಿ ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇನಂದರೆ--

ದಾನಿಯೇಲ 9:3

ಉಪವಾಸದಿಂದ ಗೋಣಿತಟ್ಟನ್ನು ಸುತ್ತಿಕೊಂಡು, ಬೂದಿಯನ್ನು ಬಳಿದು ಕೊಂಡು, ದೇವರಾದ ಕರ್ತನನ್ನು ಹುಡುಕುವದಕ್ಕಾಗಿ ಪ್ರಾರ್ಥನೆಗಳಿಂದಲೂ ವಿಜ್ಞಾಪನೆ ಗಳಿಂದಲೂ ಆತನ ಕಡೆಗೆ ನನ್ನ ಮುಖವನ್ನು ತಿರುಗಿ ಸಿದೆನು.

ಯೋವೇಲ 3:4

ಹೌದು, ಓ ತೂರೇ, ಚೀದೋನೇ, ಪಾಲೆಸ್ತಿನದ ಎಲ್ಲಾ ಪ್ರಾಂತ್ಯಗಳೇ, ನನ್ನ ಕೂಡ ನಿಮಗೇನು? ನನಗೆ ಮುಯ್ಯಿಗೆ ಮುಯ್ಯಿ ಸಲ್ಲಿಸುವಿರೋ? ನೀವು ನನಗೆ ಸಲ್ಲಿಸಿದರೆ ಜಾಗ್ರತೆಯಾಗಿಯೂ ತ್ವರೆಯಾಗಿಯೂ ನಿಮ್ಮ ತಲೆಯ ಮೇಲೆ ಮುಯ್ಯಿಗೆ ಮುಯ್ಯಿ ತರಿಸುವೆನು.

ಮತ್ತಾಯ 11:20

ತರುವಾಯ ತಾನು ಹೆಚ್ಚಾದ ಮಹತ್ಕಾರ್ಯ ಗಳನ್ನು ನಡಿಸಿದ ಪಟ್ಟಣಗಳು ಮಾನಸಾಂತರಪಡದೆ ಇದ್ದದರಿಂದ ಆತನು ಅವುಗಳನ್ನು ಗದರಿಸತೊ ಡಗಿ --

ಮಾರ್ಕ 8:22

ತರುವಾಯ ಆತನು ಬೇತ್ಸಾಯಿದಕ್ಕೆ ಬಂದಾಗ ಅವರು ಒಬ್ಬ ಕುರುಡನನ್ನು ಆತನ ಬಳಿಗೆ ತಂದು ಅವನನ್ನು ಮುಟ್ಟಬೇಕೆಂದು ಆತನನ್ನು ಬೇಡಿಕೊಂಡರು.

ಲೂಕ 9:10

ತರುವಾಯ ಅಪೊಸ್ತಲರು ಹಿಂತಿರುಗಿ ಬಂದು ತಾವು ಮಾಡಿದವುಗಳನ್ನೆಲ್ಲಾ ಆತನಿಗೆ ತಿಳಿಸಿದರು. ಆಗ ಆತನು ಬೇತ್ಸಾಯಿದ ಎಂದು ಕರೆಯಲ್ಪಟ್ಟ ಪಟ್ಟಣಕ್ಕೆ ಸಂಬಂಧಿಸಿದ ಅರಣ್ಯಸ್ಥಳಕ್ಕೆ ಪ್ರತ್ಯೇಕವಾಗಿ ಅವರನ್ನು ಕರೆದುಕೊಂಡು ಹೋದನು.

ಯೋಹಾನ 3:5

ಯೇಸು ಪ್ರತ್ಯುತ್ತರವಾಗಿ ಅವನಿಗೆ--ನಿನಗೆ ನಿಜನಿಜ ವಾಗಿ ಹೇಳುತ್ತೇನೆ, ಒಬ್ಬನು ನೀರಿನಿಂದಲೂ ಆತ್ಮ ನಿಂದಲೂ ಹುಟ್ಟದಿದ್ದರೆ ಅವನು ದೇವರ ರಾಜ್ಯದೊಳಗೆ ಪ್ರವೇಶಿಸಲಾರನು.

ಅಪೋಸ್ತಲರ ಕೃತ್ಯಗಳು 28:25

ಹೀಗೆ ಅವರಲ್ಲಿ ವಿಭಾಗವಾದಾಗ ಪೌಲನು ಅವರಿಗೆ--ಯೆಶಾಯನು ಪವಿತ್ರಾತ್ಮನಿಂದ ನಮ್ಮ ಪಿತೃಗಳಿಗೆ ವಿಹಿತ ವಾಗಿ ಹೇಳಿದ್ದೇನಂದರೆ--

ರೋಮಾಪುರದವರಿಗೆ 9:29

ಯೆಶಾಯನು ಮುಂದಾಗಿ--ಸೈನ್ಯಗಳ ಕರ್ತನು ನಮಗಾಗಿ ಸಂತಾನ ವನ್ನು ಉಳಿಸದೆ ಹೋಗಿದ್ದರೆ ನಾವು ಸೊದೋಮಿನ ಹಾಗೆ ಇರುತ್ತಿದ್ದೆವು; ಗೊಮೋರದ ಸ್ಥಿತಿಯು ನಮ್ಮದಾ ಗುತ್ತಿತ್ತು ಎಂದು ಹೇಳಿದನು.

ರೋಮಾಪುರದವರಿಗೆ 11:8

(ಬರೆದಿರುವಂತೆ ದೇವರು ಅವರಿಗೆ ತೂಕಡಿಕೆಯ ಆತ್ಮವನ್ನೂ ಕಾಣದ ಕಣ್ಣುಗಳನ್ನೂ ಕೇಳದ ಕಿವಿಗಳನ್ನೂ ಕೊಟ್ಟಿದ್ದಾನೆ). ಉಳಿದವರು ಈ ದಿನದ ವರೆಗೂ ಕುರುಡರಾಗಿದ್ದಾರೆ.

1 ತಿಮೋಥೆಯ 4:2

ಅವರು ಕಪಟದಲ್ಲಿ ಸುಳ್ಳಾಡುವವರೂ ತಮ್ಮ ಮನಸ್ಸಾಕ್ಷಿಯ ಮೇಲೆ ಕಾಸಿದ ಕಬ್ಬಿಣದಿಂದ ಬರೆ ಹಾಕಲ್ಪಟ್ಟವರೂ ಆಗಿದ್ದು

ಪ್ರಕಟನೆ 11:3

ಇದಲ್ಲದೆ ನನ್ನ ಇಬ್ಬರು ಸಾಕ್ಷಿಗಳು ಗೋಣಿತಟ್ಟನ್ನು ಹೊದ್ದುಕೊಂಡು ಸಾವಿರದ ಇನ್ನೂರ ಅರವತ್ತು ದಿನಗಳ ತನಕ ಪ್ರವಾದಿಸುವ ಹಾಗೆ ಅವರಿಗೆ ಅಧಿಕಾರ ಕೊಡುವೆನು.

Interlinear

Choose Theme