ಆದಾಗ್ಯೂ ದುರಾತ್ಮಗಳು ನಿಮಗೆ ಅಧೀನವಾದವೆಂದು ಸಂತೋಷಪಡಬೇಡಿರಿ; ಆದರೆ ನಿಮ್ಮ ಹೆಸರುಗಳು ಪರಲೋಕದಲ್ಲಿ ಬರೆಯಲ್ಪಟ್ಟಿರು ವದರಿಂದಲೇ ಸಂತೋಷಿಸಿರಿ ಅಂದನು.
Cross references
ಆದಾಗ್ಯೂ ಈಗ ನೀನು ಅವರ ಪಾಪವನ್ನು ಕ್ಷಮಿಸಬೇಕು. ಇಲ್ಲ ವಾದರೆ ನೀನು ಬರೆದ ನಿನ್ನ ಪುಸ್ತಕದಿಂದ ನನ್ನ ಹೆಸರನ್ನು ಅಳಿಸಿಬಿಡು ಎಂದು ಬೇಡಿಕೊಂಡನು.
ಜೀವದ ಪುಸ್ತಕದೊಳಗಿಂದ ಅವರು ಅಳಿಸಲ್ಪಡಲಿ; ನೀತಿವಂತರ ಸಂಗಡ ಅವರ ಹೆಸರು ಬರೆಯಲ್ಪಡದೆ ಇರಲಿ.
ಹೀಗಿರುವಲ್ಲಿ ಚೀಯೋನಿನಲ್ಲಿ ಬಿಡಲ್ಪಟ್ಟವರು, ಯೆರೂಸಲೇಮಿನಲ್ಲಿ ಉಳಿದವರು, ಹಾಗೂ ಯೆರೂ ಸಲೇಮಿನಲ್ಲಿ ವಾಸಿಸುವವರೊಳಗೆ ಬರೆದಿರುವ ಪ್ರತಿ ಯೊಬ್ಬ ಮನುಷ್ಯನು ಪರಿಶುದ್ಧನೆಂದು ಕರೆಯಲ್ಪಡು ವನು.
ವ್ಯರ್ಥವಾದದ್ದನ್ನು ದರ್ಶಿಸಿ, ಸುಳ್ಳು ಭವಿಷ್ಯಗಳನ್ನು ಹೇಳುವ ಪ್ರವಾದಿಗಳ ಮೇಲೆ ನನ್ನ ಕೈ ಮಾಡುವೆನು. ಅವರು ನನ್ನ ಜನರ ಸಭೆಯಲ್ಲಿ ಇರುವದೂ ಇಲ್ಲ, ಇಸ್ರಾಯೇಲನ ಮನೆತನದವರ ಪಟ್ಟಿಯಲ್ಲಿ ಬರೆಯಲ್ಪಡುವದೂ ಇಲ್ಲ; ಇಸ್ರಾಯೇಲಿನ ದೇಶದಲ್ಲಿ ಪ್ರವೇಶಿಸುವದೂ ಇಲ್ಲ; ನಾನೇ ದೇವರಾದ ಕರ್ತನೆಂದು ನೀವು ತಿಳಿದುಕೊಳ್ಳುವಿರಿ.
ಆ ಕಾಲದಲ್ಲಿ ನಿನ್ನ ಜನರ ಮಕ್ಕಳಿಗೋಸ್ಕರ ನಿಲ್ಲುವ ಮಹಾಪ್ರಧಾನನಾದ ವಿಾಕಾ ಯೇಲನು ಏಳುವನು; ಮೊಟ್ಟಮೊದಲು ಜನಾಂಗ ಉಂಟಾದಂದಿನಿಂದ ಇಂದಿನ ವರೆಗೂ ಸಂಭವಿಸದಂತ ಸಂಕಟವು ಸಂಭವಿಸುವದು. ಆಗ ನಿನ್ನ ಜನರೊಳಗೆ ಅಂದರೆ ಜೀವಬಾಧ್ಯರ ಪಟ್ಟಿಯಲ್ಲಿ ಯಾರ ಹೆಸರು ಬರೆಯಲ್ಪಟ್ಟಿದೆಯೋ ಅವರೆಲ್ಲರೂ ಬಿಡುಗಡೆಯಾಗು ವರು.
ಆ ದಿನದಲ್ಲಿ--ಕರ್ತನೇ, ಕರ್ತನೇ ನಿನ್ನ ಹೆಸರಿನಲ್ಲಿ ನಾವು ಪ್ರವಾದಿಸಲಿಲ್ಲವೇ? ಮತ್ತು ನಿನ್ನ ಹೆಸರಿನಲ್ಲಿ ದೆವ್ವಗಳನ್ನು ಬಿಡಿಸಲಿಲ್ಲವೇ? ಇದಲ್ಲದೆ ನಿನ್ನ ಹೆಸರಿನಲ್ಲಿ ಬಹಳ ಮಹತ್ಕಾರ್ಯಗಳನ್ನು ಮಾಡಲಿಲ್ಲವೇ ಎಂದು ಬಹಳ ಜನರು ನನಗೆ ಹೇಳುವರು.
ಆತನು ತನ್ನ ಹನ್ನೆರಡು ಮಂದಿ ಶಿಷ್ಯರನ್ನು ತನ್ನ ಬಳಿಗೆ ಕರೆದು ಅಶುದ್ಧಾತ್ಮಗಳನ್ನು ಬಿಡಿಸುವಂತೆಯೂ ಎಲ್ಲಾ ತರವಾದ ರೋಗವನ್ನು ಮತ್ತು ಎಲ್ಲಾ ತರವಾದ ಅಸ್ವಸ್ಥತೆಯನ್ನು ಸ್ವಸ್ಥ ಮಾಡು ವಂತೆಯೂ ಅವರಿಗೆ ಅಧಿಕಾರ ಕೊಟ್ಟನು.
ಮನುಷ್ಯಕುಮಾರನು ತನ್ನ ವಿಷಯದಲ್ಲಿ ಬರೆದಿರುವ ಪ್ರಕಾರ ಹೋಗುತ್ತಾನೆ; ಆದರೆ ಮನುಷ್ಯಕುಮಾರನು ಯಾವನಿಂದ ಹಿಡಿದು ಕೊಡಲ್ಪಡುತ್ತಾನೋ ಆ ಮನುಷ್ಯನಿಗೆ ಅಯ್ಯೋ! ಆ ಮನುಷ್ಯನು ಹುಟ್ಟದೆ ಹೋಗಿದ್ದರೆ ಅವನಿಗೆ ಒಳ್ಳೇದಾಗುತ್ತಿತ್ತು ಅಂದನು.
ಮತ್ತು ಅವನು ಆ ಬೆಳ್ಳಿಯ ನಾಣ್ಯಗಳನ್ನು ದೇವಾಲಯದಲ್ಲಿ ಬಿಸಾಡಿಬಿಟ್ಟು ಹೊರಟುಹೋಗಿ ಉರ್ಲು ಹಾಕಿಕೊಂಡನು.
ನನಗೆ ಪ್ರವಾದನ ವರವಿದ್ದರೂ ಎಲ್ಲಾ ರಹಸ್ಯಗಳನ್ನು ಮತ್ತು ಸಕಲ ಜ್ಞಾನವನ್ನು ತಿಳಿದುಕೊಂಡವನಾಗಿದ್ದರೂ ಬೆಟ್ಟಗಳನ್ನು ತೆಗೆದಿಡುವದಕ್ಕೆ ಬೇಕಾದಷ್ಟು ನಂಬಿಕೆಯಿದ್ದರೂ ನಾನು ಪ್ರೀತಿಯಿಲ್ಲದವನಾಗಿದ್ದರೆ ಏನೂ ಅಲ್ಲದವನಾಗಿ ದ್ದೇನೆ.
ನಿಜ ಜೊತೆಗಾರನೇ, ನೀನು ಆ ಸ್ತ್ರೀಯರಿಗೆ ಸಹಾಯಕ ನಾಗಿರಬೇಕೆಂದು ನಿನ್ನನ್ನೂ ಕೇಳಿಕೊಳ್ಳುತ್ತೇನೆ. ಅವರು ಕ್ಲೇಮೆನ್ಸ್ ಮುಂತಾದ ನನ್ನ ಜೊತೆಕೆಲಸದವರ ಸಹಿತವಾಗಿ ನನ್ನ ಕೂಡ ಸುವಾರ್ತೆಗೋಸ್ಕರ ಪ್ರಯಾಸ ಪಟ್ಟವರು. ಅವರ ಹೆಸರುಗಳು ಜೀವಗ್ರಂಥದಲ್ಲಿ ಬರೆದವೆ.
ಪರ ಲೋಕದಲ್ಲಿ ಹೆಸರು ಬರೆಸಿಕೊಂಡಿರುವ ಸಾರ್ವತ್ರಿಕ ಸಂಘಕ್ಕೂ ಚೊಚ್ಚಲ ಮಕ್ಕಳ ಸಭೆಗೂ ಎಲ್ಲರಿಗೆ ನ್ಯಾಯಾ ಧಿಪತಿಯಾಗಿರುವ ದೇವರ ಬಳಿಗೂ ಸಿದ್ದಿಗೆ ಬಂದಿರುವ ನೀತಿವಂತರ ಆತ್ಮಗಳ ಬಳಿಗೂ
ಜಯಹೊಂದುವ ಇವನೇ ಬಿಳೀ ವಸ್ತ್ರದಿಂದ ಹೊದಿಸಲ್ಪಡುವನು; ಜೀವದ ಪುಸ್ತಕದಿಂದ ನಾನು ಅವನ ಹೆಸರನ್ನು ಅಳಿಸಿ ಬಿಡುವದೇ ಇಲ್ಲ, ಆದರೆ ನನ್ನ ತಂದೆಯ ಮುಂದೆಯೂ ಆತನ ದೂತರ ಮುಂದೆಯೂ ಅವನ ಹೆಸರನ್ನು ಒಪ್ಪಿಕೊಳ್ಳುವೆನು.
ಜಗತ್ತಿಗೆ ಅಸ್ತಿವಾರ ಹಾಕಿದಂದಿನಿಂದ ಯಾರಾರ ಹೆಸರುಗಳು ವಧಿಸಲ್ಪಟ್ಟ ಕುರಿಮರಿಯಾದಾ ತನ ಜೀವಗ್ರಂಥದಲ್ಲಿ ಬರೆದಿರುವದಿಲ್ಲವೋ ಆ ಭೂನಿವಾಸಿಗಳೆಲ್ಲರೂ ಮೃಗವನ್ನು ಆರಾಧಿಸುವರು.
ಇದಲ್ಲದೆ ಸತ್ತವರಾದ ಚಿಕ್ಕವರೂ ದೊಡ್ಡವರೂ ದೇವರ ಮುಂದೆ ನಿಂತಿರುವದನ್ನು ನಾನು ಕಂಡೆನು. ಆಗ ಪುಸ್ತಕಗಳು ತೆರೆಯಲ್ಪಟ್ಟವು; ಜೀವಗ್ರಂಥವೆಂಬ ಇನ್ನೊಂದು ಪುಸ್ತಕವು ತೆರೆಯಲ್ಪಟ್ಟಿತು; ಆ ಪುಸ್ತಕಗಳಲ್ಲಿ ಬರೆದ ಪ್ರಕಾರ ಅವರವರ ಕೃತ್ಯಗಳಿಗೆ ತಕ್ಕಂತೆ ಸತ್ತವರಿಗೆ
ಯಾವನ ಹೆಸರು ಜೀವಗ್ರಂಥದಲ್ಲಿ ಬರೆದದ್ದಾಗಿ ಕಾಣಲಿಲ್ಲವೋ ಅವನು ಬೆಂಕಿಯ ಕೆರೆಗೆ ದೊಬ್ಬಲ್ಪಟ್ಟನು.
ಅದರಲ್ಲಿ ಹೊಲೆ ಮಾಡುವಂಥದ್ದು ಯಾವದೂ ಸೇರುವದಿಲ್ಲ. ಅಸಹ್ಯವಾದದ್ದನ್ನೂ ಸುಳ್ಳಾದದ್ದನ್ನೂ ನಡಿಸುವವನು ಅಲ್ಲಿ ಸೇರುವದಿಲ್ಲ. ಆದರೆ ಕುರಿಮರಿಯಾದಾತನ ಜೀವಗ್ರಂಥದಲ್ಲಿ ಬರೆಯಲ್ಪಟ್ಟವರು ಮಾತ್ರ ಸೇರುವರು.