ಆ ಗಳಿಗೆಯಲ್ಲಿ ಯೇಸು ಆತ್ಮದಲ್ಲಿ ಉಲ್ಲಾಸ ಗೊಂಡು -- ಓ ತಂದೆಯೇ, ಪರಲೋಕ, ಭೂಲೋಕ ಗಳ ಒಡೆಯನೇ, ನೀನು ಈ ಸಂಗತಿಗಳನ್ನು ಜ್ಞಾನಿ ಗಳಿಗೂ ಬುದ್ಧಿವಂತರಿಗೂ ಮರೆಮಾಡಿ ಕೂಸುಗಳಿಗೆ ಪ್ರಕಟಮಾಡಿರುವದರಿಂದ ನಿನ್ನನ್ನು ಕೊಂಡಾಡುತ್ತೇನೆ; ಹೌದು, ತಂದೆಯೇ, ಅದು ನಿನ್ನ ದೃ
Cross references
ಆತನು ಯುಕ್ತಿವಂತರ ಯೋಚನೆಗಳನ್ನು ಭಂಗಪಡಿಸುತ್ತಾನೆ; ಅವರ ಕೈಗಳು ಪ್ರಯತ್ನವನ್ನು ನಡಿಸುವದಿಲ್ಲ.
ಶತ್ರುವನ್ನೂ ಮುಯ್ಯಿಗೆ ಮುಯ್ಯಿ ಕೊಡುವವನನ್ನೂ ನಿಲ್ಲಿಸಿಬಿಡುವದಕ್ಕೆ ನಿನ್ನ ವೈರಿಗಳ ನಿಮಿತ್ತ ಶಿಶುಗಳ ಮತ್ತು ಮೊಲೆ ಕೂಸುಗಳ ಬಾಯಿಂದ ನೀನು ನಿನ್ನ ಬಲವನ್ನು ಸ್ಥಾಪಿಸಿದ್ದೀ.
ಭೂಮಿಯೂ ಅದರ ಸಮಸ್ತವೂ ಭೂಲೋಕವೂ ಅದರಲ್ಲಿ ವಾಸಿಸುವವುಗಳೂ ಕರ್ತನವುಗಳು.
ಕರ್ತನ ಗುಟ್ಟು ಆತ ನಿಗೆ ಭಯಪಡುವವರೊಂದಿಗೆ ಅದೆ; ತನ್ನ ಒಡಂಬಡಿಕೆ ಯನ್ನು ಆತನು ಅವರಿಗೆ ತಿಳಿಸುವನು.
ಹೀಗಿರುವದ ರಿಂದ ಇಗೋ, ನಾನು ಈ ಜನರ ಮಧ್ಯದಲ್ಲಿ ಅಧಿಕ ಆಶ್ಚರ್ಯವೂ ಅದ್ಭುತವೂ ಆದ ಕಾರ್ಯವನ್ನು ಮಾಡು ವೆನು; ಅವರ ಜ್ಞಾನಿಗಳ ಜ್ಞಾನವು ಅಳಿಯುವದು (ನಾಶ), ಅವರ ವಿವೇಕಿಗಳ ತಿಳುವಳಿಕೆಯು ಅಡಗಿ ಕೊಳ್ಳುವದು ಅಂದನು.
ಆ ದಿನದಲ್ಲಿ ಕಿವುಡರು ಪುಸ್ತಕದ ಮಾತುಗಳನ್ನು ಕೇಳುವರು ಕುರುಡರ ಕಣ್ಣುಗಳು ಕತ್ತಲೆಯೊಳಗಿಂದಲೂ ಅಂಧಕಾರದೊಳಗಿಂದಲೂ ನೋಡುವವು.
ಅಲ್ಲಿ ರಾಜ ಮಾರ್ಗವಿರುವದು, ಅದು ಪರಿಶುದ್ಧ ಮಾರ್ಗವೆನಿಸಿಕೊಳ್ಳುವದು; ಯಾವ ಅಶು ದ್ಧನು ಅದರ ಮೇಲೆ ಹಾದುಹೋಗನು; ಅವರಿಗೋ ಸ್ಕರವೇ ಇರುವದು; ಅಲ್ಲಿ ಹೋಗುವ ಮೂಢನೂ ದಾರಿತಪ್ಪನು.
ಆತನು ತನ್ನ ಆತ್ಮದ ವೇದನೆಯನ್ನು ಕಂಡು ತೃಪ್ತನಾಗುವನು; ತನ್ನ ತಿಳುವ ಳಿಕೆಯಿಂದ ನೀತಿವಂತನಾದ ನನ್ನ ಸೇವಕನು ಅನೇಕ ರಿಗೆ ನೀತಿಯನು ಉಂಟುಮಾಡುವನು; ಯಾಕಂದರೆ ಆತನು ಅವರ ದುಷ್ಕೃತ್ಯಗಳನ್ನು ಹೊತ್ತುಕೊಳ್ಳುವನು.ಆದದರಿಂದ ನಾನು ಆತನಿಗೋಸ್ಕರ ದೊಡ್ಡ ವರೊಂದಿಗೆ ಭಾಗಮಾಡುವೆನು ಆತನು ಬಲಿಷ್ಠರ ಸಂಗಡ ಕೊಳ್ಳೆಯಲ್ಲಿ ಪಾಲುಮಾಡುವನು; ಆತನು ತನ್ನ ಪ್ರಾಣವನ್ನು ಮರಣದ ವರೆಗೆ ಹೊಯ್ದು ಬಿಟ್ಟು ದ್ರೋಹಿಗಳೊಂದಿಗೆ ಎಣಿಸಲ್ಪಟ್ಟನು; ಅನೇಕರ ಪಾಪ ವನ್ನು ಹೊತ್ತುಕೊಂಡು ದ್ರೋಹಿಗಳಿಗೋಸ್ಕರ ವಿಜ್ಞಾ ಪನೆ ಮಾಡಿದನು.
ಯೌವನಸ್ಥನು ಕನ್ಯಾಸ್ತ್ರೀಯನ್ನು ಮದುವೆಮಾಡಿ ಕೊಳ್ಳುವ ಪ್ರಕಾರ ನಿನ್ನ ಕುಮಾರರು ನಿನ್ನನ್ನು ಮದುವೆ ಮಾಡಿಕೊಳ್ಳುವರು; ಮದಲಿಂಗನು ಮದಲಗಿತ್ತಿಯಲ್ಲಿ ಆನಂದಪಡುವ ಪ್ರಕಾರ ನಿನ್ನ ದೇವರು ನಿನ್ನಲ್ಲಿ ಆನಂದಪಡುವನು.
ಕರ್ತನು ಹೇಳುವದೇನಂದರೆ--ಆಕಾಶವು ನನ್ನ ಸಿಂಹಾಸನವು; ಭೂಮಿಯು ನನ್ನ ಪಾದ ಪೀಠವು: ನೀವು ನನಗೋಸ್ಕರ ಕಟ್ಟುವ ಮನೆ ಎಲ್ಲಿ? ನನ್ನ ವಿಶ್ರಾಂತಿಯ ಸ್ಥಳವು ಎಲ್ಲಿ?
ನಿನ್ನ ದೇವರಾದ ಕರ್ತನು ನಿನ್ನ ಮಧ್ಯದಲ್ಲಿ ಪರಾಕ್ರಮಿಯಾಗಿದ್ದಾನೆ. ಆತನು ರಕ್ಷಿಸು ವಂಥ ವನು; ಆನಂದದಿಂದ ನಿನ್ನಲ್ಲಿ ಸಂತೋಷಿಸು ವನು; ತನ್ನ ಪ್ರೀತಿಯಲ್ಲಿ ಮೌನವಾಗಿರುವನು; ಆನಂದ ಸ್ವರದಿಂದ ನಿನ್ನ ಮೇಲೆ ಉಲ್ಲಾಸಿಸುವನು.
ಆ ಸಮಯದಲ್ಲಿ ಯೇಸು--ತಂದೆಯೇ, ಪರಲೋಕ ಮತ್ತು ಭೂಲೋಕಗಳ ಒಡೆಯನೇ, ನೀನು ಈ ಸಂಗತಿಗಳನ್ನು ಜ್ಞಾನಿಗಳಿಗೂ ಬುದ್ಧಿವಂತ ರಿಗೂ ಮರೆಮಾಡಿ ಶಿಶುಗಳಿಗೆ ಪ್ರಕಟಮಾಡಿ ರುವದಕ್ಕಾಗಿ ನಾನು ನಿನ್ನನ್ನು ಕೊಂಡಾಡುತ್ತೇನೆ.
ಆತನು ಪ್ರತ್ಯುತ್ತರವಾಗಿ ಅವ ರಿಗೆ--ಪರಲೋಕರಾಜ್ಯದ ಮರ್ಮಗಳನ್ನು ತಿಳುಕೊಳ್ಳು ವದಕ್ಕೆ ನಿಮಗೆ ಕೊಡಲ್ಪಟ್ಟಿದೆ; ಆದರೆ ಅವರಿಗೆ ಕೊಡ ಲ್ಪಟ್ಟಿಲ್ಲ.
ಆಗ ಯೇಸು ಪ್ರತ್ಯುತ್ತರವಾಗಿ ಅವನಿಗೆ--ಯೋನನ ಮಗನಾದ ಸೀಮೋನನೇ, ನೀನು ಧನ್ಯನು; ಯಾಕಂದರೆ ರಕ್ತಮಾಂಸವಲ್ಲ (ಮನುಷ್ಯರಲ್ಲ), ಪರಲೋಕದಲ್ಲಿರುವ ನನ್ನ ತಂದೆಯೇ ಅದನ್ನು ನಿನಗೆ ಪ್ರಕಟಿಸಿದನು ಎಂದು ಹೇಳಿದನು.
ಇವರು ಹೇಳುವದೇನೆಂದು ನೀನು ಕೇಳುತ್ತೀಯೋ ಎಂದು ಕೇಳಿದ್ದಕ್ಕೆ ಯೇಸು ಅವರಿಗೆ -- ಹೌದು, ಸಣ್ಣ ಮಕ್ಕಳ ಮತ್ತು ಮೊಲೇಕೂಸುಗಳ ಬಾಯಿಂದ ನೀನು ಸ್ತೋತ್ರವನ್ನು ಸಿದ್ಧಿಗೆ ತಂದಿದ್ದೀ ಎಂಬದನ್ನು ನೀವು ಎಂದಾದರೂ ಓದಲಿಲ್ಲವೋ ಅಂದನು.
ನಾನು ನಿಮಗೆ ನಿಜವಾಗಿ ಹೇಳುವದೇ ನಂದರೆ--ಯಾವನಾದರೂ ಚಿಕ್ಕ ಮಗುವಿನಂತೆ ದೇವರ ರಾಜ್ಯವನ್ನು ಅಂಗೀಕರಿಸದಿದ್ದರೆ ಅವನು ಅದರೊಳಗೆ ಪ್ರವೇಶಿಸುವದಿಲ್ಲ.
ಅವನು ಆ ಕುರಿಯನ್ನು ಕಂಡುಕೊಂಡ ಮೇಲೆ ಸಂತೋಷ ಪಡುತ್ತಾ ಅದನ್ನು ತನ್ನ ಹೆಗಲುಗಳ ಮೇಲೆ ಹೊತ್ತು ಕೊಳ್ಳುವನು.
ಅವಳು ಅದನ್ನು ಕಂಡುಕೊಂಡ ಮೇಲೆ ತನ್ನ ಸ್ನೇಹಿತರನ್ನೂ ನೆರೆಯವರನ್ನೂ ಒಟ್ಟಾಗಿ ಕರೆದು ಅವರಿಗೆ--ನನ್ನ ಸಂಗಡ ಸಂತೋಷಪಡಿರಿ; ಯಾಕಂ ದರೆ ನಾನು ಕಳಕೊಂಡಿದ್ದ ನಾಣ್ಯವನ್ನು ಕಂಡುಕೊಂಡೆನು ಅನ್ನುವಳು.
ಆಗ ಅವರು ಸತ್ತವನನ್ನು ಇಟ್ಟಿದ್ದ ಸ್ಥಳದಿಂದ ಕಲ್ಲನ್ನು ತೆಗೆದುಹಾಕಿದರು. ಯೇಸು ಕಣ್ಣೆತ್ತಿ ಮೇಲಕ್ಕೆ ನೋಡಿ--ತಂದೆಯೇ, ನೀನು ನನ್ನ ಪ್ರಾರ್ಥನೆಯನ್ನು ಕೇಳಿದ್ದಕ್ಕೆ ನಾನು ನಿನ್ನನ್ನು ಕೊಂಡಾಡುತ್ತೇನೆ.
ತಂದೆ ಯೇ, ನೀನು ನನಗೆ ಕೊಟ್ಟಿರುವ ಮಹಿಮೆಯನ್ನು ನೀನು ನನಗೆ ಕೊಟ್ಟವರು ಸಹ ನೋಡುವ ಹಾಗೆಯೂ ನಾನಿರುವಲ್ಲಿ ಅವರು ನನ್ನೊಂದಿಗೆ ಇರುವಂತೆಯೂ ನಾನು ಇಚ್ಛೈಸುತ್ತೇನೆ. ಜಗದುತ್ಪತ್ತಿಗೆ ಮುಂಚೆ ನೀನು ನನ್ನನ್ನು ಪ್ರೀತಿಸಿದಿ.
ದೇವರು ನಂಬಿ ಗಸ್ತನು; ನಮ್ಮ ಕರ್ತನಾದ ಯೇಸು ಕ್ರಿಸ್ತನೆಂಬ ತನ್ನ ಮಗನ ಅನ್ಯೋನ್ಯತೆಗೆ ನಿಮ್ಮನ್ನು ಕರೆದವನು ಆತನೇ.
ಆದರೂ ಪರಿಪೂರ್ಣರಾದವರಲ್ಲಿ ಜ್ಞಾನವನ್ನೇ ನಾವು ಹೇಳುತ್ತೇವೆ; ಆದಾಗ್ಯೂ ಅದು ಇಹಲೋಕದ ಜ್ಞಾನವಲ್ಲ ಇಲ್ಲವೆ ಇಲ್ಲದೆ ಹೋಗುವ ಇಹ ಲೋಕಾಧಿಪತಿಗಳ ಜ್ಞಾನವೂ ಅಲ್ಲ.
ಯಾವನೂ ತನ್ನನ್ನು ತಾನೇ ಮೋಸಗೊಳಿಸ ದಿರಲಿ; ನಿಮ್ಮಲ್ಲಿ ಯಾವನಾದರೂ ಈ ಲೋಕ ಸಂಬಂಧವಾಗಿ ಜ್ಞಾನಿಯಾಗಿದ್ದೇನೆಂದು ಭಾವಿಸಿ ಕೊಂಡರೆ ಜ್ಞಾನಿಯಾಗುವಂತೆ ಹುಚ್ಚನಾಗಲಿ.
ನಮ್ಮ ಸುವಾರ್ತೆಯು ಮರೆಯಾಗಿರುವದಾದರೆ ಅದು ತಪ್ಪಿಹೋದವರಿಗೆ ಮರೆಯಾಗಿದೆ.
ಆತನು ತನ್ನ ಚಿತ್ತದ ದಯಾ ಪೂರ್ವಕವಾದ ಆನಂದಕ್ಕನುಸಾರವಾಗಿ ಯೇಸು ಕ್ರಿಸ್ತನ ಮೂಲಕ ನಮ್ಮನ್ನು ತನಗೋಸ್ಕರ ದತ್ತುಪುತ್ರ ಸ್ವೀಕಾರ ಮಾಡುವಂತೆ ಮೊದಲೇ ಸಂಕಲ್ಪಿಸಿ.
ಆತನ ಸ್ವಚಿತ್ತದ ಆಲೋಚನೆಗನುಸಾರವಾಗಿ ಎಲ್ಲಾ ಕಾರ್ಯ ಗಳನ್ನು ಸಾಧಿಸುವ ಆತನ ಉದ್ದೇಶದ ಮೇರೆಗೆ ಮೊದಲೇ ನೇಮಿಸಲ್ಪಟ್ಟವರಾದ ನಾವು ಆತನಲ್ಲಿ ಬಾಧ್ಯತೆಯನ್ನು ಸಹ ಹೊಂದಿದೆವು.
ಹೇಗಂದರೆ, ಅವರ ಹೃದಯಗಳು ಪ್ರೀತಿಯಲ್ಲಿ ಹೊಂದಿಕೊಂಡು ಆದರಣೆ ಹೊಂದಿ ಸಂಪೂರ್ಣ ನಿಶ್ಚಯವೆಂಬ ಭಾಗ್ಯವನ್ನು ಪಡೆದು ತಂದೆಯಾದ ದೇವರ ಮತ್ತು ಕ್ರಿಸ್ತನ ಮರ್ಮವನ್ನು ತಿಳಿಯುವದೇ;
ಆದಕಾರಣ ಎಲ್ಲಾ ಕೆಟ್ಟತನವನ್ನೂ ಎಲ್ಲಾ ವಂಚನೆಯನ್ನೂ ಕಪಟವನ್ನೂ ಹೊಟ್ಟೇ ಕಿಚ್ಚನ್ನೂ ಎಲ್ಲಾ ಕೆಟ್ಟ ಮಾತುಗಳನ್ನೂ ವಿಸರ್ಜಿಸಿರಿ.