ಅದೇ ಮನೆಯಲ್ಲಿದ್ದು ಅವರು ಕೊಟ್ಟದ್ದನ್ನು ತಿಂದು ಕುಡಿಯಿರಿ; ಯಾಕಂದರೆ ಕೆಲಸದವನು ತನ್ನ ಕೂಲಿಗೆ ಯೋಗ್ಯನು. ಮನೆಯಿಂದ ಮನೆಗೆ ಹೋಗ ಬೇಡಿರಿ;
Cross references
ನೀವೂ ನಿಮ್ಮ ಮನೆಯವರೂ ಅದನ್ನು ಸಕಲ ಸ್ಥಳಗಳಲ್ಲಿ ತಿನ್ನಬಹುದು. ಇದು ಸಭೆಯ ಗುಡಾರದಲ್ಲಿ ನೀವು ಮಾಡುವ ಸೇವೆಗೋಸ್ಕರ ನಿಮಗೆ ಪ್ರತಿಫಲ ವಾಗಿದೆ.ಆದಕಾರಣ ನೀವು ಅದರಲ್ಲಿಂದ ಅದರ ಉತ್ತಮವಾದದ್ದನ್ನು ಎತ್ತಿ ಅರ್ಪಿಸಿದಾಗ ನೀವು ಅದರ ದೆಸೆಯಿಂದ ಪಾಪವನ್ನು ಹೊತ್ತುಕೊಳ್ಳುವದಿಲ್ಲ; ಇಸ್ರಾಯೇಲ್ ಮಕ್ಕಳ ಪರಿಶುದ್ಧವಾದವುಗಳನ್ನು ಅಪವಿತ್ರ ಮಾಡದಿದ್ದರೆ ಸಾಯುವದಿಲ್ಲ ಅಂದನು.
ಅಲ್ಲಿ ನೀವು ನಿಮ್ಮ ದೇವರಾದ ಕರ್ತನ ಮುಂದೆ ಸಂತೋಷವಾಗಿರಬೇಕು; ನೀವೂ ನಿಮ್ಮ ಕುಮಾರ ಕುಮಾರ್ತೆಯರೂ ನಿಮ್ಮ ದಾಸದಾಸಿಯರೂ; ನಿಮ್ಮ ಬಾಗಲುಗಳಲ್ಲಿರುವ ಲೇವಿಯನು ಸಹ. ಅವನಿಗೆ ನಿಮ್ಮ ಸಂಗಡ ಪಾಲೂ ಸ್ವಾಸ್ತ್ಯವೂ ಇಲ್ಲ.
ಅವುಗಳನ್ನು ನಿನ್ನ ದೇವರಾದ ಕರ್ತನ ಮುಂದೆ ನಿನ್ನ ದೇವರಾದ ಕರ್ತನು ಆದುಕೊಳ್ಳುವ ಸ್ಥಳದಲ್ಲಿ ನೀನೂ ನಿನ್ನ ಮಗನೂ ಮಗಳೂ ದಾಸನೂ ದಾಸಿಯೂ ನಿನ್ನ ಬಾಗಲುಗಳ ಲ್ಲಿರುವ ಲೇವಿಯನೂ ತಿನ್ನಬೇಕು; ಆಗ ನಿನ್ನ ಎಲ್ಲಾ ಕೈ ಕೆಲಸದಲ್ಲಿ ನಿನ್ನ ದೇವರಾದ ಕರ್ತನ ಮುಂದೆ ನೀನು ಸಂತೋಷಪಡಬೇಕು.
ಅವರು ಪಿತ್ರಾರ್ಜಿತ ಆಸ್ತಿಯನ್ನು ಮಾರಿದ್ದಲ್ಲದೆ ಸಮವಾದ ಭಾಗಗಳನ್ನು ತಿನ್ನಬೇಕು.
ಪ್ರಯಾಣಕ್ಕೆ ಹಸಿಬೆಯನ್ನಾಗಲೀ ಎರಡು ಮೇಲಂಗಿಗಳ ನ್ನಾಗಲೀ ಕೆರಗಳನ್ನಾಗಲೀ ಕೋಲುಗಳನ್ನಾಗಲೀ ತಕ್ಕೊ ಳ್ಳಬೇಡಿರಿ; ಯಾಕಂದರೆ ಕೆಲಸ ಮಾಡುವವನು ತನ್ನ ಆಹಾರಕ್ಕೆ ಯೋಗ್ಯನಾಗಿದ್ದಾನೆ.
ಇದಲ್ಲದೆ ಆತನು ಅವರಿಗೆ--ಯಾವ ಸ್ಥಳದಲ್ಲಿಯಾದರೂ ಒಂದು ಮನೆಯೊಳಕ್ಕೆ ನೀವು ಪ್ರವೇಶಿಸಿದರೆ ಆ ಸ್ಥಳದಿಂದ ನೀವು ಹೊರಡುವ ತನಕ ಅಲ್ಲೇ ಇಳುಕೊಳ್ಳಿರಿ.
ನೀವು ಯಾವದಾದರೂ ಮನೆಯನ್ನು ಪ್ರವೇಶಿಸಿದಾಗ ಅಲ್ಲೇ ಇದ್ದು ಅಲ್ಲಿಂದಲೇ ಹೊರಡಿರಿ.
ಆಕೆಯೂ ಆಕೆಯ ಮನೆಯವರೂ ಬಾಪ್ತಿಸ್ಮ ಮಾಡಿಸಿಕೊಂಡ ಮೇಲೆ--ನಾನು ಕರ್ತನಿಗೆ ನಂಬಿಗಸ್ತಳಾದವಳೆಂದು ನೀವು ತೀರ್ಮಾನಿಸಿದರೆ ನನ್ನ ಮನೆಗೆ ಬಂದು ಇರಬೇಕು ಎಂದು ಆಕೆಯು ನಮ್ಮನ್ನು ಬೇಡಿಕೊಂಡು ಬಲವಂತಮಾಡಿದಳು.
ತರುವಾಯ ಅವರನ್ನು ತನ್ನ ಮನೆಗೆ ಕರಕೊಂಡು ಹೋಗಿ ಊಟಮಾಡಿಸಿ ತನ್ನ ಮನೆಯವರೆಲ್ಲರ ಸಂಗಡ ದೇವರಲ್ಲಿ ನಂಬಿಕೆಯಿಟ್ಟು ಉಲ್ಲಾಸಗೊಂಡನು.
ಆಗ ಅವರು ಸೆರೆಮನೆಯೊಳಗಿಂದ ಹೊರಟು ಲುದ್ಯಳ ಮನೆಗೆ ಬಂದು ಸಹೋದರರನ್ನು ನೋಡಿ ಅವರನ್ನು ಧೈರ್ಯಗೊಳಿಸಿ ಹೊರಟು ಹೋದರು.
ತಿನ್ನುವದಕ್ಕೂ ಕುಡಿಯು ವದಕ್ಕೂ ನಮಗೆ ಹಕ್ಕಿಲ್ಲವೇ?
ವಾಕ್ಯದಲ್ಲಿ ಉಪದೇಶಹೊಂದುವವನು ಉಪದೇಶ ಮಾಡುವವನಿಗೆ ತನಿಗರುವ ಎಲ್ಲಾ ಒಳ್ಳೆಯವುಗಳಲ್ಲಿ ಪಾಲುಕೊಡಲಿ.
ನಾನು ನಿಮ್ಮಿಂದ ದಾನವನ್ನು ಅಪೇಕ್ಷಿಸುವೆನೆಂತಲ್ಲ ಆದರೆ ನಿಮ್ಮ ಲೆಕ್ಕಕ್ಕೆ ಸಮೃದ್ಧಿಯಾದ ಫಲವನ್ನೇ ಅಪೇಕ್ಷಿಸು ತ್ತೇನೆ. ಆದರೆ ಬೇಕಾದದ್ದೆಲ್ಲ ನನಗುಂಟು, ಸಮೃದ್ಧಿ ಯಾಯಿತು.
ಇದಲ್ಲದೆ ಅವರು ಮನೆಯಿಂದ ಮನೆಗೆ ತಿರುಗಾಡುತ್ತಾ ಮೈಗಳ್ಳತನವನ್ನು ಕಲಿಯುತ್ತಾರೆ; ಮೈಗಳ್ಳರಾಗುವದ ಲ್ಲದೆ ಹರಟೆ ಮಾತನ್ನಾಡುವರು ಮತ್ತು ಇತರರ ಕೆಲಸ ದಲ್ಲಿ ಕೈಹಾಕುವವರಾಗಿ ಆಡಬಾರದ ಮಾತುಗಳನ್ನಾಡು ತ್ತಾರೆ.
ಚೆನ್ನಾಗಿ ಅಧಿಕಾರ ನಡಿಸುವ ಹಿರಿಯರನ್ನು, ಅವ ರೊಳಗೆ ವಿಶೇಷವಾಗಿ ವಾಕ್ಯದಲ್ಲಿಯೂ ಬೋಧನೆ ಯಲ್ಲಿಯೂ ಕಷ್ಟಪಡುವವರನ್ನು ಇಮ್ಮಡಿಯಾದ ಮಾನಕ್ಕೆ ಯೋಗ್ಯರೆಂದು ಎಣಿಸಬೇಕು.
ಪ್ರಯಾಸ ಪಡುವ ವ್ಯವಸಾಯಗಾರನು ಫಲಗಳಲ್ಲಿ ಮೊದಲನೆಯ ದಾಗಿ ಪಾಲುಗಾರನಾಗಿರತಕ್ಕದ್ದು.
ಪ್ರಿಯನೇ, ಸಹೋದರರಿಗೂ ಪರಿಚಯವಿಲ್ಲದವ ರಿಗೂ ನೀನು ಮಾಡುವದನ್ನೆಲ್ಲಾ ನಂಬಿಗಸ್ತನಾಗಿ ಮಾಡುತ್ತೀ.