ಅಲ್ಲಿರುವ ರೋಗಿಗಳನ್ನು ಸ್ವಸ್ಥಮಾಡಿರಿ; ಮತ್ತು ಅವರಿಗೆ--ದೇವರ ರಾಜ್ಯವು ನಿಮ್ಮ ಸವಿಾಪಕ್ಕೆ ಬಂದಿದೆ ಎಂದು ಹೇಳಿರಿ.
Cross references
ಅರ ಸರ ದಿವಸಗಳಲ್ಲಿ ಪರಲೋಕದ ದೇವರು ಎಂದಿಗೂ ನಾಶವಾಗದ ರಾಜ್ಯವನ್ನು ಸ್ಥಾಪಿಸುವನು. ಅದರ ರಾಜ್ಯ ವನ್ನು ಬೇರೆ ಜನರಿಗೆ ಕೊಡದೆ ಆ ರಾಜ್ಯಗಳನ್ನೆಲ್ಲಾ ಧ್ವಂಸ ಮಾಡಿ ಮುಗಿಸಿ ಎಂದೆಂದಿಗೂ ನಿಲ್ಲುವದು.
ನೀವು ಮಾನಸಾಂತರ ಪಡಿರಿ; ಯಾಕಂದರೆ ಪರಲೋಕರಾಜ್ಯವು ಸಮಾಪ ವಾಗಿದೆ ಎಂದು ಹೇಳಿದನು.
ಅಂದಿನಿಂದ ಯೇಸು--ಮಾನಸಾಂತರ ಪಡಿರಿ; ಯಾಕಂದರೆ ಪರಲೋಕರಾಜ್ಯವು ಸಮಾಪಿಸಿತು ಎಂದು ಸಾರಿ ಹೇಳುವದಕ್ಕೆ ಪ್ರಾರಂಭಿಸಿದನು.
ನೀವು ಹೋಗುವಾಗ-- ಪರಲೋಕ ರಾಜ್ಯವು ಸಮಾಪವಾಯಿತು ಎಂದು ಸಾರಿ ಹೇಳಿರಿ.
ಆತನು--ದೇವರ ರಾಜ್ಯವನ್ನು ನಾವು ಯಾವ ದಕ್ಕೆ ಹೋಲಿಸೋಣ? ಇಲ್ಲವೆ ಯಾವ ಹೋಲಿಕೆಗೆ ಅದನ್ನು ಹೋಲಿಸೋಣ?
ಅವರು ಅನೇಕ ದೆವ್ವಗಳನ್ನು ಬಿಡಿಸಿ ಬಹಳ ರೋಗಿಗಳಿಗೆ ಎಣ್ಣೆ ಹಚ್ಚಿ ಅವರನ್ನು ಸ್ವಸ್ಥಪಡಿಸಿದರು.
ದೇವರ ರಾಜ್ಯವನ್ನು ಸಾರುವದಕ್ಕೂ ರೋಗಿಗಳನ್ನು ಸ್ವಸ್ಥಮಾಡುವದಕ್ಕೂ ಆತನು ಅವರನ್ನು ಕಳುಹಿಸಿಕೊಟ್ಟನು.
ನಮ್ಮ ಮೇಲೆ ಅಂಟಿಕೊಂಡಿರುವ ನಿಮ್ಮ ಪಟ್ಟಣದ ಧೂಳನ್ನೇ ನಿಮಗೆ ವಿರೋಧವಾಗಿ ನಾವು ಝಾಡಿಸಿಬಿಡುತ್ತೇವೆ; ಆದಾಗ್ಯೂ ದೇವರ ರಾಜ್ಯವು ನಿಮ್ಮ ಸವಿಾಪಕ್ಕೆ ಬಂದಿದೆ ಎಂಬದು ನಿಮಗೆ ಖಚಿತವಾಗಿ ತಿಳಿದಿರಲಿ ಎಂದು ಹೇಳಿರಿ.
ದೇವರ ರಾಜ್ಯವು ಯಾವಾಗ ಬರುವದೆಂದು ಫರಿಸಾಯರು ಆತನನ್ನು ಕೇಳಲು ಆತನು ಅವರಿಗೆ ಪ್ರತ್ಯುತ್ತರವಾಗಿ--ದೇವರ ರಾಜ್ಯವು ಪ್ರತ್ಯಕ್ಷವಾಗಿ ಬರುವದಿಲ್ಲ.
ಯೇಸು ಪ್ರತ್ಯುತ್ತರವಾಗಿ ಅವನಿಗೆ--ನಾನು ನಿನಗೆ ನಿಜನಿಜವಾಗಿ ಹೇಳುತ್ತೇನೆ, ಒಬ್ಬನು ತಿರಿಗಿ ಹುಟ್ಟದಿದ್ದರೆ ಅವನು ದೇವರ ರಾಜ್ಯವನ್ನು ನೋಡಲಾರನು ಅಂದನು.
ಯೇಸು ಪ್ರತ್ಯುತ್ತರವಾಗಿ ಅವನಿಗೆ--ನಿನಗೆ ನಿಜನಿಜ ವಾಗಿ ಹೇಳುತ್ತೇನೆ, ಒಬ್ಬನು ನೀರಿನಿಂದಲೂ ಆತ್ಮ ನಿಂದಲೂ ಹುಟ್ಟದಿದ್ದರೆ ಅವನು ದೇವರ ರಾಜ್ಯದೊಳಗೆ ಪ್ರವೇಶಿಸಲಾರನು.
ಅದೇ ಸ್ಥಳದಲ್ಲಿ ಪೊಪ್ಲಿಯ ಎಂಬ ಆ ದ್ವೀಪದ ಮುಖ್ಯಸ್ಥನಿಗೆ ಆಸ್ತಿ ಇತ್ತು; ಅವನು ನಮ್ಮನ್ನು ಸೇರಿಸಿಕೊಂಡು ಮೂರು ದಿವಸ ಆದರದಿಂದ ಸತ್ಕರಿಸಿ ದನು.
ಆದಕಾರಣ ದೇವರ ರಕ್ಷಣೆಯು ಅನ್ಯಜನಾಂಗದವರಿಗೆ ಕಳುಹಿಸಲ್ಪಟ್ಟಿದೆ; ಅದನ್ನು ಅವರು ಕೇಳುವರು ಎಂಬದಾಗಿ ನಿಮಗೆ ತಿಳಿದಿರಲಿ ಅಂದನು.
ಅವನು ತುಂಬಾ ಧೈರ್ಯ ದೊಂದಿಗೆ ದೇವರರಾಜ್ಯವನ್ನು ಸಾರುತ್ತಾ ಕರ್ತನಾದ ಯೇಸು ಕ್ರಿಸ್ತನ ವಿಷಯವಾದವುಗಳನ್ನು ಬೋಧಿಸುತ್ತಿ ದ್ದನು. ಯಾವ ಮನುಷ್ಯನೂಅವನಿಗೆ ಅಡ್ಡಿಮಾಡಲಿಲ್ಲ.