ಹಾಗಾದರೆ ಕೆಟ್ಟವರಾಗಿರುವ ನೀವು ನಿಮ್ಮ ಮಕ್ಕಳಿಗೆ ಒಳ್ಳೇದಾನಗಳನ್ನು ಕೊಡುವದು ಹೇಗೆಂಬದನ್ನು ತಿಳಿ ದವರಾಗಿದ್ದರೆ ಪರಲೋಕದಲ್ಲಿರುವ ನಿಮ್ಮ ತಂದೆಯು ಎಷ್ಟೋ ಹೆಚ್ಚಾಗಿ ತನ್ನನ್ನು ಬೇಡಿಕೊಳ್ಳುವವರಿಗೆ ಪವಿ ತ್ರಾತ್ಮನನ್ನು ದಯಪಾಲಿಸುವನಲ್ಲವೇ?
Cross references
ಮನುಷ್ಯನ ದುಷ್ಟತ್ವವು ಭೂಮಿಯಲ್ಲಿ ಹೆಚ್ಚಿದ್ದನ್ನೂ ಅವನ ಹೃದಯದ ಆಲೋಚನೆಗಳ ಕಲ್ಪನೆಗಳೆಲ್ಲಾ ಯಾವಾಗಲೂ ಬರೀ ಕೆಟ್ಟವುಗಳೆಂದೂ ದೇವರು ನೋಡಿದನು.
ಆಗ ಕರ್ತನಿಗೆ ಅದರ ಸುವಾಸನೆಯು ಗಮಗಮಿಸಲು ತನ್ನ ಹೃದಯದಲ್ಲಿ--ಇನ್ನು ಮೇಲೆ ನಾನು ಮನುಷ್ಯನಿಗೋಸ್ಕರ ಭೂಮಿಯನ್ನು ಶಪಿಸುವ ದಿಲ್ಲ; ಯಾಕಂದರೆ ಮನುಷ್ಯನ ಹೃದಯದ ಕಲ್ಪನೆಯು ಅವನ ಚಿಕ್ಕತನದಿಂದಲೇ ಕೆಟ್ಟದ್ದು. ನಾನು ಈಗ ಮಾಡಿದ ಪ್ರಕಾರ ಇನ್ನು ಮೇಲೆ ಜೀವಿಗಳನ್ನೆಲ್ಲಾ ಸಂಹರಿಸುವದಿಲ್ಲ.ಭೂಮಿಯು ಇರುವ ವರೆಗೆ ಬಿತ್ತುವ ಕಾಲವೂ ಕೊಯ್ಯುವ ಕಾಲವೂ ತಂಪೂ ಶೆಕೆಯೂ ಬೇಸಿಗೆಯೂ ಚಳಿಗಾಲವೂ ಹಗಲೂ ರಾತ್ರಿಯೂ ನಿಂತು ಹೋಗವು ಎಂದು ಅಂದು ಕೊಂಡನು.
ನಿರ್ಮಲನಾಗುವ ಹಾಗೆ ಮನುಷ್ಯನು ಎಷ್ಟರವನು? ನೀತಿವಂತನಾಗಿರುವ ಹಾಗೆ ಸ್ತ್ರೀಯಿಂದ ಹುಟ್ಟಿದವನು ಯಾರು?
ಇಗೋ, ನಾನು ಅಕ್ರ ಮದಲ್ಲಿ ರೂಪಿಸಲ್ಪಟ್ಟೆನು; ಪಾಪದಲ್ಲಿ ನನ್ನ ತಾಯಿ ನನ್ನನ್ನು ಗರ್ಭಧರಿಸಿದಳು.
ನನ್ನ ಗದರಿಕೆಗೆ ನೀವು ತಿರುಗಿ ಕೊಳ್ಳಿರಿ; ಇಗೋ, ನಿಮ್ಮ ಮೇಲೆ ನನ್ನ ಆತ್ಮವನ್ನು ಸುರಿಸಿ ನಿಮಗೆ ನನ್ನ ಮಾತುಗಳು ತಿಳಿಯುವಂತೆ ಮಾಡುವೆನು.
ನಾನು ಬಾಯಾರಿ ದವನ ಮೇಲೆ ನೀರನ್ನು ಸುರಿಸುವೆನು; ಒಣನೆಲದ ಮೇಲೆ ಪ್ರವಾಹಗಳನ್ನು ಬರಮಾಡುವೆನು; ನಿನ್ನ ಸಂತಾನದವರಲ್ಲಿ ನನ್ನ ಆತ್ಮವನ್ನೂ ನಿನ್ನಿಂದ ಹುಟ್ಟು ವಂಥದ್ದರ ಮೇಲೆ ನನ್ನ ಆಶೀರ್ವಾದವನ್ನೂ ಸುರಿಸು ವೆನು.
ತನ್ನ ಗರ್ಭದ ಮಗನ ಮೇಲೆ ಕರುಣಿಸದೆ ಒಬ್ಬ ಹೆಂಗಸು ತನ್ನ ಮೊಲೇ ಕೂಸನ್ನು ಮರೆತಾಳೇ? ಹೌದು, ಅವಳು ಮರೆಯಬಹುದು, ಆದರೂ ನಾನು ನಿನ್ನನ್ನು ಮರೆ ಯುವದಿಲ್ಲ.
ನನ್ನ ಆತ್ಮ ವನ್ನು ನಿಮ್ಮೊಳಗೆ ಇಡುವೆನು; ನೀವು ನನ್ನ ನಿಯಮ ಗಳಲ್ಲಿ ನಡೆಯುವ ಹಾಗೆ ಮಾಡುವೆನು ಮತ್ತು ನೀವು ನನ್ನ ನ್ಯಾಯವಿಧಿಗಳನ್ನು ಅನುಸರಿಸಿ ನಡೆಯುವಿರಿ.
ಆಮೇಲೆ ಆಗುವದೇನಂದರೆ--ಎಲ್ಲಾ ಶರೀರಗಳ ಮೇಲೆ ನನ್ನ ಆತ್ಮವನ್ನು ಸುರಿಸುವೆನು; ಆಗ ನಿಮ್ಮ ಕುಮಾರರೂ ಕುಮಾರ್ತೆಯರೂ ಪ್ರವಾದಿ ಸುವರು; ನಿಮ್ಮ ವೃದ್ಧರು ಕನಸುಗಳನ್ನು ಕಾಣುವರು; ನಿಮ್ಮ ಯೌವನಸ್ಥರು ದರ್ಶನಗಳನ್ನು ನೋಡುವರು.
ಅದರಂತೆಯೇ ಜನರು ನಿಮ್ಮ ಒಳ್ಳೇ ಕ್ರಿಯೆಗಳನ್ನು ನೋಡಿ ಪರಲೋಕದಲ್ಲಿರುವ ನಿಮ್ಮ ತಂದೆಯನ್ನು ಮಹಿಮೆಪಡಿಸುವ ಹಾಗೆ ನಿಮ್ಮ ಬೆಳಕು ಜನರ ಮುಂದೆ ಪ್ರಕಾಶಿಸಲಿ.
ಇದರಿಂದ ನೀವು ಪರಲೋಕದಲ್ಲಿರುವ ನಿಮ್ಮ ತಂದೆಗೆ ಮಕ್ಕಳಾ ಗುವಿರಿ; ಯಾಕಂದರೆ ಆತನು ಕೆಟ್ಟವರ ಮೇಲೆಯೂ ಒಳ್ಳೆಯವರ ಮೇಲೆಯೂ ತನ್ನ ಸೂರ್ಯನು ಉದಯಿಸುವಂತೆ ಮಾಡುತ್ತಾನೆ; ಮತ್ತು ನೀತಿವಂತರ ಮೇಲೆಯೂ ಅನೀತಿವಂತರ ಮೇಲೆಯೂ ಮಳೆ ಸುರಿಸುತ್ತಾನೆ.
ಆದದರಿಂದ ನೀವು ಮನುಷ್ಯರ ಅಪರಾಧ ಗಳನ್ನು ಕ್ಷಮಿಸುವದಾದರೆ ಪರಲೋಕದ ನಿಮ್ಮ ತಂದೆಯು ಸಹ ನಿಮ್ಮನ್ನು ಕ್ಷಮಿಸುವನು.
ಆದದರಿಂದ ಈ ಹೊತ್ತು ಇದ್ದು ನಾಳೆ ಒಲೆಗೆ ಹಾಕಲ್ಪಡುವ ಹೊಲದ ಹುಲ್ಲಿಗೆ ದೇವರು ಹೀಗೆ ಉಡಿಸಿದರೆ ಓ ಅಲ್ಪ ವಿಶ್ವಾಸಿಗಳೇ, ಆತನು ಇನ್ನೂ ಎಷ್ಟೋ ಹೆಚ್ಚಾಗಿ ನಿಮಗೆ ಉಡಿಸುವನಲ್ಲವೇ?
(ಯಾಕಂದರೆ ಇವೆಲ್ಲವುಗಳಿಗಾಗಿ ಅನ್ಯಜನರು ತವಕ ಪಡುತ್ತಾರೆ;) ಆದರೆ ಇವೆಲ್ಲವುಗಳು ನಿಮಗೆ ಅಗತ್ಯವಾಗಿವೆ ಎಂದು ಪರಲೋಕದ ನಿಮ್ಮ ತಂದೆಗೆ ತಿಳಿದದೆ.
ಕೆಟ್ಟವರಾದ ನೀವು ಒಳ್ಳೇ ದಾನಗಳನ್ನು ನಿಮ್ಮ ಮಕ್ಕಳಿಗೆ ಕೊಡುವದು ಹೇಗೆ ಎಂಬದನ್ನು ತಿಳಿದವರಾಗಿದ್ದರೆ ಪರಲೋಕ ದಲ್ಲಿರುವ ನಿಮ್ಮ ತಂದೆಯು ತನ್ನನ್ನು ಬೇಡಿಕೊಳ್ಳು ವವರಿಗೆ ಎಷ್ಟೋ ಹೆಚ್ಚಾಗಿ ಒಳ್ಳೆಯವುಗಳನ್ನು ಕೊಡುತ್ತಾನಲ್ಲವೇ?
ಆತನು ಅವರಿಗೆ--ನೀವು ಪ್ರಾರ್ಥನೆ ಮಾಡುವಾಗ--ಪರಲೋಕದಲ್ಲಿರುವ ನಮ್ಮ ತಂದೆ ಯೇ, ನಿನ್ನ ನಾಮವು ಪರಿಶುದ್ಧವಾಗಲಿ, ನಿನ್ನ ರಾಜ್ಯವು ಬರಲಿ, ನಿನ್ನ ಚಿತ್ತವು ಪರಲೋಕದಲ್ಲಿ ನೆರವೇರುವಂತೆ ಭೂಮಿಯಲ್ಲಿಯೂ ನೆರವೇರಲಿ.
ಆದರೆ ನಿನ್ನ ಬದುಕನ್ನು ಸೂಳೆಯ ರೊಂದಿಗೆ ನುಂಗಿಬಿಟ್ಟ ಈ ನಿನ್ನ ಮಗನು ಬಂದ ಕೂಡಲೆ ಅವನಿಗೋಸ್ಕರ ಕೊಬ್ಬಿದ ಕರುವನ್ನು ನೀನು ಕೊಯ್ಸಿದ್ದೀ ಅಂದನು.
ಯೇಸು ಪ್ರತ್ಯುತ್ತರವಾಗಿ ಅವನಿಗೆ--ನಿನಗೆ ನಿಜನಿಜ ವಾಗಿ ಹೇಳುತ್ತೇನೆ, ಒಬ್ಬನು ನೀರಿನಿಂದಲೂ ಆತ್ಮ ನಿಂದಲೂ ಹುಟ್ಟದಿದ್ದರೆ ಅವನು ದೇವರ ರಾಜ್ಯದೊಳಗೆ ಪ್ರವೇಶಿಸಲಾರನು.
ಯೇಸು ಪ್ರತ್ಯುತ್ತರವಾಗಿ ಆಕೆಗೆ--ದೇವರ ದಾನವೇನೆಂಬದೂ ಮತ್ತು--ನನಗೆ ಕುಡಿಯುವದಕ್ಕೆ ಕೊಡು ಎಂದು ನಿನ್ನನ್ನು ಕೇಳಿದಾತನು ಯಾರೆಂಬದೂ ನಿನಗೆ ತಿಳಿದಿದ್ದರೆ ನೀನು ಆತನನ್ನು ಕೇಳುತ್ತಿದ್ದಿ, ಆತನು ನಿನಗೆ ಜೀವಕರವಾದ ನೀರನ್ನು ಕೊಡುತ್ತಿದ್ದನು ಎಂದು ಹೇಳಿದನು.
ಹಬ್ಬದ ಆ ಮಹಾದಿವಸವಾದ ಕಡೇ ದಿನದಲ್ಲಿ ಯೇಸು ನಿಂತುಕೊಂಡು--ಯಾವನಿಗಾದರೂ ನೀರಡಿಕೆ ಯಾಗಿದ್ದರೆ ಅವನು ನನ್ನ ಬಳಿಗೆ ಬಂದು ಕುಡಿಯಲಿ.
ಆಗ ಪೇತ್ರನು ಅವರಿಗೆ--ನೀವು ಮಾನಸಾಂತರಪಟ್ಟು ಪಾಪಗಳ ಪರಿಹಾರಕ್ಕಾಗಿ ನಿಮ್ಮಲ್ಲಿ ಪ್ರತಿಯೊಬ್ಬನು ಯೇಸು ಕ್ರಿಸ್ತನ ಹೆಸರಿನಲ್ಲಿ ಬಾಪ್ತಿಸ್ಮ ಮಾಡಿಸಿಕೊಳ್ಳಿರಿ; ಆಗ ನೀವು ಪವಿತ್ರಾತ್ಮನ ದಾನವನ್ನು ಹೊಂದುವಿರಿ.
ಈಗ ನಾವು ಆತನ ರಕ್ತದಿಂದ ನೀತಿವಂತ ರಾಗಿರಲಾಗಿ ಬರುವ ಕೋಪದಿಂದ ಆತನ ಮೂಲಕ ರಕ್ಷಿಸಲ್ಪಡುವದು ಮತ್ತೂ ನಿಶ್ಚಯವಲ್ಲವೇ.
ಒಬ್ಬನ ಅಪರಾಧದಿಂದ ಮರಣವು ಉಂಟಾಗಿ ಆ ಒಬ್ಬನ ದೆಸೆಯಿಂದಲೇ ಆಳಿದ್ದರೆ ಕೃಪೆಯನ್ನೂ ನೀತಿಯ ದಾನವನ್ನೂ ಹೇರಳವಾಗಿ ಹೊಂದಿದವರು ಯೇಸು ಕ್ರಿಸ್ತನೆಂಬ ಈ ಒಬ್ಬನ ಮೂಲಕ ಜೀವದಲ್ಲಿ ಆಳುವದು ಮತ್ತೂ ನಿಶ್ಚಯವಲ್ಲವೇ).
ಯಾಕಂದರೆ ನನ್ನಲ್ಲಿ ಅಂದರೆ ನನ್ನ ಶರೀರದಲ್ಲಿ ಒಳ್ಳೆಯದೇನೂ ವಾಸವಾಗಿಲ್ಲವೆಂದು ನನಗೆ ತಿಳಿದದೆ; ಒಳ್ಳೇದನ್ನು ಮಾಡುವದಕ್ಕೆ ನನಗೇನೋ ಮನಸ್ಸುಂಟು; ಆದರೆ ಅದನ್ನು ಮಾಡುವದು ನನ್ನಿಂದಾಗದು.
ದೇವರು ತನ್ನ ಸ್ವಂತ ಮಗನನ್ನು ಉಳಿಸಿಕೊಳ್ಳದೆ ಆತನನ್ನು ನಮ್ಮೆಲ್ಲರಿಗೊಸ್ಕರ ಒಪ್ಪಿಸಿಕೊಟ್ಟ ಮೇಲೆ ಆತನೊಂದಿಗೆ ಎಲ್ಲವುಗಳನ್ನು ಉಚಿತವಾಗಿ ನಮಗೆ ಕೊಡದೆ ಇರುವನೇ?
ಅಪರಾಧ ನಿರ್ಣಯದ ಸೇವೆಯು ಪ್ರಭಾವದಿಂದಿರುವದಾದರೆ ನೀತಿಯ ಸೇವೆಯು ಎಷ್ಟೋ ಅಧಿಕವಾದ ಪ್ರಭಾವವುಳ್ಳದ್ದಾಗಿರಬೇಕು.
ನಾವು ಸಹ ಮೊದಲು ಅವಿವೇಕಿಗಳೂ ಅವಿಧೇಯರೂ ಮೋಸಹೋದ ವರೂ ನಾನಾ ವಿಧವಾದ ದುರಾಶೆಗಳಿಗೆ ಮತ್ತು ಭೋಗಗಳಿಗೆ ದಾಸರೂ ಕೆಟ್ಟತನ ಹೊಟ್ಟೇಕಿಚ್ಚುಗಳಲ್ಲಿ ಜೀವಿಸುವವರೂ ಅಸಹ್ಯರೂ ಒಬ್ಬರನ್ನೊಬ್ಬರು ಹಗೆ ಮಾಡುವವರೂ ಆಗಿದ್ದೆವು.
ಇದು ಮಾತ್ರವಲ್ಲದೆ ನಮ್ಮನ್ನು ಶಿಕ್ಷಿಸಿದಂಥ ಶರೀರ ಸಂಬಂಧವಾದ ತಂದೆಗಳನ್ನು ಸನ್ಮಾನಿ ಸಿದೆವಷ್ಟೆ; ಆತ್ಮಗಳಿಗೆ ತಂದೆಯಾಗಿರುವಾತನಿಗೆ ನಾವು ಇನ್ನೂ ಎಷ್ಟೋ ಹೆಚ್ಚಾಗಿ ಒಳಪಟ್ಟು ಜೀವಿಸಬೇಕಲ್ಲವೇ?