ಆಗ ಕರ್ತನು ಅವನಿಗೆ-- ಫರಿಸಾಯರಾದ ನೀವು ಪಾತ್ರೆಯ ಮತ್ತು ತಟ್ಟೆಯ ಹೊರಭಾಗವನ್ನು ಶುಚಿಮಾಡುತ್ತೀರಿ; ಆದರೆ ನಿಮ್ಮ ಒಳಭಾಗವು ಸುಲಿಗೆಯಿಂದಲೂ ಕೆಟ್ಟತನ ದಿಂದಲೂ ತುಂಬಿರುತ್ತದೆ
Cross references
ಮನುಷ್ಯನ ದುಷ್ಟತ್ವವು ಭೂಮಿಯಲ್ಲಿ ಹೆಚ್ಚಿದ್ದನ್ನೂ ಅವನ ಹೃದಯದ ಆಲೋಚನೆಗಳ ಕಲ್ಪನೆಗಳೆಲ್ಲಾ ಯಾವಾಗಲೂ ಬರೀ ಕೆಟ್ಟವುಗಳೆಂದೂ ದೇವರು ನೋಡಿದನು.
ಅವನು ಕರ್ತನ ಸಮ್ಮುಖದಲ್ಲಿ ಸರಿಯಾದದ್ದನ್ನು ಮಾಡಿದನು; ಆದರೆ ಪೂರ್ಣಹೃದಯದಿಂದಲ್ಲ.
ಹೀಗೆಯೇ ಹಿಜ್ಕೀಯನು ಸಮಸ್ತ ಯೆಹೂದದಲ್ಲಿ ತನ್ನ ದೇವರಾದ ಕರ್ತನ ಸಮ್ಮುಖದಲ್ಲಿ ಉತ್ತಮವಾದ ದ್ದನ್ನೂ ಸರಿಯಾದದ್ದನ್ನೂ ಸತ್ಯವಾದದ್ದನ್ನೂ ನಡಿಸಿ ದನು.ಇದಲ್ಲದೆ ದೇವರ ಆಲಯದ ಸೇವೆಯ ಲ್ಲಿಯೂ ನ್ಯಾಯಪ್ರಮಾಣದಲ್ಲಿಯೂ ಆಜ್ಞೆಗಳಲ್ಲಿಯೂ ತನ್ನ ದೇವರನ್ನು ಹುಡುಕಲು ಆರಂಭಿಸಿದ ಸಮಸ್ತ ಕಾರ್ಯಗಳಲ್ಲಿ ಅವನು ತನ್ನ ಪೂರ್ಣಹೃದಯದಿಂದ ಮಾಡಿ ವೃದ್ಧಿಹೊಂದಿದನು.
ಹರಿದು ಬಿಡುವಂಥ ಗರ್ಜಿಸುವ ಸಿಂಹದ ಹಾಗೆ ನನ್ನ ಮೇಲೆ ತಮ್ಮ ಬಾಯಿ ತೆರೆದಿ ದ್ದಾರೆ.
ಸವಿ ಮಾತನ್ನಾಡಿದರೆ ಅವನನ್ನು ನಂಬಬೇಡ; ಅವನ ಹೃದಯದಲ್ಲಿ ಏಳು ಅಸಹ್ಯಗಳಿವೆ.
ತಮ್ಮ ಮಲಿನತ್ವದಿಂದ ಇನ್ನು ತೊಳೆಯಲ್ಪಡದೆ ತಮ್ಮ ದೃಷ್ಟಿಯಲ್ಲಿ ಶುದ್ಧವಾಗಿರುವ ಒಂದು ವಂಶಾವಳಿಯು ಇದೆ.
ಯೆರೂಸಲೇಮೇ, ನೀನು ರಕ್ಷಿಸಲ್ಪಡುವ ಹಾಗೆ ನಿನ್ನ ಹೃದಯವನ್ನು ಕೆಟ್ಟತನದಿಂದ ತೊಳೆದುಕೋ; ನಿನ್ನ ವ್ಯರ್ಥ ಆಲೋಚನೆಗಳು ಎಷ್ಟರ ವರೆಗೆ ನಿನ್ನಲ್ಲಿ ತಂಗುವವು?
ಕೊಳ್ಳೆಯನ್ನು ಸುಲಿದುಕೊಳ್ಳುವ ಘರ್ಜಿಸುವ ಸಿಂಹದ ಹಾಗೆ ಅದರ ಮಧ್ಯದಲ್ಲಿ ಪ್ರವಾದಿಗಳ ಒಳಸಂಚು ಉಂಟು; ಪ್ರಾಣಗಳನ್ನು ತಿಂದುಬಿಟ್ಟಿದ್ದಾರೆ. ಸಂಪತ್ತನ್ನೂ ಅಮೂಲ್ಯವಾದ ವಸ್ತುವನ್ನೂ ದೋಚಿ ಕೊಂಡಿದ್ದಾರೆ, ಅವರು ಅದರ ಮಧ್ಯದಲ್ಲಿ ಬಹಳ ಜನರನ್ನು ವಿಧವೆಯರನ್ನಾಗಿ ಮಾಡಿದ್ದಾರೆ.
ಅಲ್ಲಿನ ಪ್ರಧಾನರು ಸುಲಿಗೆಗಾಗಿ ರಕ್ತ ಸುರಿಸಿ ಪ್ರಾಣ ಗಳನ್ನು ನುಂಗುವ ಹಾಗೆ ಬೇಟೆಯ ತೋಳಗಳಂತಿ ದ್ದಾರೆ.
ಅದರ ಮಧ್ಯದಲ್ಲಿರುವ ಪ್ರಧಾನರುಗಳು ಗರ್ಜಿಸುವ ಸಿಂಹಗಳಾಗಿದ್ದಾರೆ; ಅದರ ನ್ಯಾಯಾಧಿಪತಿಗಳು ಸಂಜೆಯ ತೋಳಗಳಾಗಿದ್ದಾರೆ; ಮರುದಿನದ ವರೆಗೂ ಕಡಿಯುವದಕ್ಕೆ ಎಲುಬುಗಳಿಲ್ಲ.
ಕುರಿ ವೇಷ ಹಾಕಿಕೊಂಡು ನಿಮ್ಮ ಬಳಿಗೆ ಬರುವ ಸುಳ್ಳು ಪ್ರವಾದಿಗಳಿಗೆ ಎಚ್ಚರವಾಗಿರ್ರಿ; ಯಾಕಂದರೆ ಅವರು ಒಳಗೆ ದೋಚಿಕೊಳ್ಳುವ ತೋಳಗಳಾಗಿದ್ದಾರೆ.
ಮರವು ಒಳ್ಳೆಯದಾಗಿದ್ದರೆ ಅದರ ಫಲವೂ ಒಳ್ಳೆಯದೆಂದು ಎಣಿಸಿರಿ; ಇಲ್ಲವೇ ಮರವು ಕೆಟ್ಟದ್ದಾಗಿದ್ದರೆ ಅದರ ಫಲವೂ ಕೆಟ್ಟದ್ದೆಂದೆಣಿಸಿರಿ; ಯಾಕಂದರೆ ಮರವು ತನ್ನ ಫಲದಿಂದಲೇ ತಿಳಿಯಲ್ಪ ಡುವದು.
ಯಾಕಂದರೆ ಹೃದಯದೊಳಗಿಂದ ಕೆಟ್ಟ ಆಲೋಚನೆಗಳು, ಕೊಲೆಗಳು, ಹಾದರಗಳು, ಜಾರತ್ವ ಗಳು, ಕಳ್ಳತನಗಳು, ಸುಳ್ಳುಸಾಕ್ಷಿ, ದೇವ ದೂಷಣೆಗಳು ಹೊರಗೆ ಬರುತ್ತವೆ.
ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೋ! ನೀವು ಪಾತ್ರೆಯ ಮತ್ತು ತಟ್ಟೆಯ ಹೊರಭಾಗವನ್ನು ಶುಚಿಮಾಡುತ್ತೀರಿ. ಆದರೆ ಅವು ಒಳಗೆ ಸುಲಿಗೆಯಿಂದಲೂ ದುರಾಶೆಯಿಂದಲೂ ತುಂಬಿರುತ್ತವೆ.
ಕರ್ತನು ಆಕೆಯನ್ನು ನೋಡಿ ಆಕೆಯ ಮೇಲೆ ಕನಿಕರಪಟ್ಟು ಆಕೆಗೆ--ಅಳಬೇಡ ಅಂದನು.
ಆಗ ಆತನು ಅವರಿಗೆ--ಮನುಷ್ಯರ ಮುಂದೆ ನೀತಿವಂತರಾಗಿ ಮಾಡಿ ಕೊಳ್ಳುವವರು ನೀವೇ; ಆದರೆ ದೇವರು ನಿಮ್ಮ ಹೃದಯಗಳನ್ನು ತಿಳಿದಿದ್ದಾನೆ; ಯಾಕಂದರೆ ಮನುಷ್ಯರಲ್ಲಿ ಯಾವದು ಶ್ರೇಷ್ಠವೆಂದು ಎಣಿಸಲ್ಪ ಡುತ್ತದೋ ಅದು ದೇವರ ದೃಷ್ಟಿಯಲ್ಲಿ ಅಸಹ್ಯವಾಗಿದೆ.
ಅವನು ಬಡವರಿಗೋಸ್ಕರ ಚಿಂತಿಸಿದ್ದಕ್ಕಾಗಿ ಅಲ್ಲ , ಅವನು ಕಳ್ಳನಾಗಿದ್ದು ಹಣದ ಚೀಲವನ್ನು ಇಟ್ಟು ಕೊಂಡು ಅದರಲ್ಲಿ ಹಾಕಿದ್ದನ್ನು ತಕ್ಕೊಳ್ಳುವವನಾಗಿದ್ದ ದರಿಂದಲೇ ಇದನ್ನು ಹೇಳಿದನು.
ಊಟವಾದ ಮೇಲೆ ಆತನನ್ನು ಹಿಡುಕೊಡಬೇಕೆಂಬದನ್ನು ಸೀಮೋ ನನ ಮಗನಾದ ಯೂದ ಇಸ್ಕರಿಯೋತನ ಹೃದಯದಲ್ಲಿ ಸೈತಾನನು ಆಲೋಚನೆ ಹುಟ್ಟಿಸಿದನು.
ಆಗ ಪೇತ್ರನು--ಅನನೀಯನೇ, ಪವಿತ್ರಾತ್ಮನಿಗೆ ಸುಳ್ಳು ಹೇಳಿ ಹೊಲದ ಕ್ರಯದಲ್ಲಿ ಒಂದು ಭಾಗವನ್ನು ತೆಗೆದಿಡುವಂತೆ ಸೈತಾನನು ನಿನ್ನ ಹೃದಯವನ್ನು ತುಂಬಿ ಕೊಂಡದ್ದು ಯಾಕೆ?
ಈ ಕಾರ್ಯದಲ್ಲಿ ನಿನಗೆ ಭಾಗವೂ ಇಲ್ಲ, ಪಾಲೂ ಇಲ್ಲ; ನಿನ್ನ ಹೃದಯವು ದೇವರ ಮುಂದೆ ಸರಿಯಲ್ಲ.
ಇದಲ್ಲದೆ ನಾನು ನನ್ನ ಪಿತೃಗಳಿಂದ ಬಂದ ಸಂಪ್ರದಾಯಗಳಲ್ಲಿ ಬಹು ಅಭಿಮಾನವುಳ್ಳವನಾಗಿ ನನ್ನ ಸ್ವಂತ ಜನಾಂಗದವ ರೊಳಗೆ ಸಮಪ್ರಾಯದವರಾದ ಅನೇಕರಿಗಿಂತ ಯೆಹೂದ್ಯ ಮತದಲ್ಲಿ ಹೆಚ್ಚು ಆಸಕ್ತನಾಗಿದ್ದೆನು
ಭಕ್ತಿಯ ವೇಷವಿದ್ದು ಅದರ ಬಲವನ್ನು ಅಲ್ಲಗಳೆಯುವವರೂ ಆಗಿರುವರು; ಇಂಥವರಿಂದ ಪ್ರತ್ಯೇಕವಾಗಿರು.
ಶುದ್ಧರಿಗೆ ಎಲ್ಲವೂ ಶುದ್ಧವೇ; ಆದರೆ ಮಲಿನವಾದವರಿಗೂ ನಂಬಿಕೆಯಿಲ್ಲ ದವರಿಗೂ ಯಾವದೂ ಶುದ್ಧವಲ್ಲ; ಆದರೆ ಅವರ ಬುದ್ಧಿಯೂ ಮನಸ್ಸಾಕ್ಷಿಯೂ ಕೂಡ ಮಲಿನವಾಗಿವೆ.ಅವರು ತಾವು ದೇವರನ್ನು ಅರಿತವರೆಂದು ಹೇಳಿ ಕೊಳ್ಳುತ್ತಾರೆ; ಆದರೆ ಅವರು ಅಸಹ್ಯರೂ ಅವಿಧೇಯ ರೂ ಸತ್ಕಾರ್ಯಗಳಿಗೆಲ್ಲಾ ಭ್ರಷ್ಟರೂ ಆಗಿರುವದರಿಂದ ದೇವರನ್ನು ತಮ್ಮ ಕೃತ್ಯಗಳಿಂದಲೇ ಅಲ್ಲಗಳೆಯುವರು.
ದೇವರ ಸವಿಾಪಕ್ಕೆ ಬನ್ನಿರಿ, ಆಗ ಆತನು ನಿಮ್ಮ ಸವಿಾಪಕ್ಕೆ ಬರುವನು. ಪಾಪಿಗಳೇ, ನಿಮ್ಮ ಕೈಗಳನ್ನು ಶುಚಿ ಮಾಡಿಕೊಳ್ಳಿರಿ; ಎರಡು ಮನಸ್ಸುಳ್ಳವರೇ, ನಿಮ್ಮ ಹೃದಯಗಳನ್ನು ನಿರ್ಮಲ ಮಾಡಿಕೊಳ್ಳಿರಿ.