ನಮಗೆ ಸಾಲಗಾರ ರಾಗಿರುವ ಪ್ರತಿಯೊಬ್ಬನನ್ನು ಕ್ಷಮಿಸುವಂತೆಯೇ ನಮ್ಮ ಪಾಪಗಳನ್ನು ನಮಗೆ ಕ್ಷಮಿಸು; ನಮ್ಮನ್ನು ಶೋಧನೆ ಯೊಳಗೆ ಸೇರಿಸಬೇಡ; ಆದರೆ ಕೇಡಿನಿಂದ ನಮ್ಮನ್ನು ತಪ್ಪಿಸು ಎಂದು ಹೇಳಿರಿ ಅಂದನು.
Cross references
ಎಲ್ಲಾ ಕೇಡಿನಿಂದ ನನ್ನನ್ನು ತಪ್ಪಿಸಿದ ದೂತನು ಈ ಹುಡುಗರನ್ನು ಆಶೀರ್ವದಿಸಲಿ. ನನ್ನ ಹೆಸರಿನಿಂದ ನನ್ನ ತಂದೆಗಳಾದ ಅಬ್ರಹಾಮ್ ಇಸಾಕ್ ಅವರ ಹೆಸರಿನಿಂದ ಅವರು ಕರೆಯಲ್ಪಡಲಿ. ಅವರು ಭೂಮಧ್ಯದಲ್ಲಿ ಸಮೂಹವಾಗಿ ಹೆಚ್ಚಲಿ ಅಂದನು.
ಈ ಮನೆಯಲ್ಲಿ ನಿನಗೆ ವಿಜ್ಞಾಪನೆ ಮಾಡಿದರೆ ಆಗ ನೀನು ಪರಲೋಕದಿಂದ ಕೇಳಿ ನಿನ್ನ ಜನರಾದ ಇಸ್ರಾಯೇಲ್ಯರ ಪಾಪವನ್ನು ಮನ್ನಿಸಿ ನೀನು ಅವರ ತಂದೆಗಳಿಗೆ ಕೊಟ್ಟ ದೇಶಕ್ಕೆ ಅವರನ್ನು ತಿರುಗಿ ಬರಮಾಡು.
ಆಗ ನೀನು ಪರಲೋಕದಿಂದ ಕೇಳಿ ನಿನ್ನ ಸೇವಕರಾದ ಇಸ್ರಾಯೇಲ್ ಜನರ ಪಾಪವನ್ನು ಮನ್ನಿಸಿ ಅವರು ನಡಿಯಬೇಕಾದ ಸನ್ಮಾರ್ಗವನ್ನು ಅವರಿಗೆ ಕಲಿಸುವ ಹಾಗೆ ನಿನ್ನ ಜನರಿಗೆ ಬಾಧ್ಯತೆಯಾಗಿ ಕೊಟ್ಟ ಭೂಮಿಯ ಮೇಲೆ ಮಳೆಯನ್ನು ಕೊಡು.
ಓ ಕರ್ತನೇ, ನನ್ನ ಅಕ್ರಮವು ಬಹಳ ವಾಗಿದೆ. ನಿನ್ನ ಹೆಸರಿನ ನಿಮಿತ್ತ ಅದನ್ನು ಮನ್ನಿಸು;
ನನ್ನ ಸಂಕಟವನ್ನೂ ನೋವನ್ನೂ ನೋಡು; ನನ್ನ ಪಾಪಗಳನ್ನೆಲ್ಲಾ ಕ್ಷಮಿಸು.
ಯಾವನ ದ್ರೋಹವು ಕ್ಷಮಿಸಲ್ಪಟ್ಟದೆಯೋ, ಯಾವನ ಪಾಪವು ಮುಚ್ಚಲ್ಪಟ್ಟಿದೆಯೋ, ಅವನೇ ಧನ್ಯನು.
ಓ ದೇವರೇ, ನನ್ನ ಮೇಲೆ ಕರುಣೆಯಿಡು; ನಿನ್ನ ಪ್ರೀತಿಕರುಣೆಯ ಪ್ರಕಾರ ನಿನ್ನ ಅತಿ ಶಯವಾದ ಅಂತಃಕರುಣೆಗಳ ಪ್ರಕಾರ ನನ್ನ ದ್ರೋಹ ಗಳನ್ನು ಅಳಿಸಿಬಿಡು.
ಕರ್ತನು ಎಲ್ಲಾ ಕೇಡಿನಿಂದ ನಿನ್ನನೂ ನಿನ್ನ ಪ್ರಾಣವನ್ನೂ ಕಾಪಾಡುವನು.ಕರ್ತನು ನಿನ್ನ ಹೋಗೋಣವನ್ನೂ ಬರೋಣವನ್ನೂ ಇಂದಿನಿಂದ ಸದಾಕಾಲವೂ ಕಾಪಾಡುವನು.
ಕರ್ತನೇ, ನೀನು ಅಕ್ರಮಗಳ ಮೇಲೆ ಕಣ್ಣಿಟ್ಟರೆ ಓ ಕರ್ತನೇ, ಯಾರು ನಿಲ್ಲುವರು?
ನಾನಾಗಿ ನಾನೇ ನನಗೋಸ್ಕರ ನಿನ್ನ ದ್ರೋಹಗಳನ್ನು ಅಳಿಸಿಬಿಡುತ್ತೇನೆ. ನಿನ್ನ ಪಾಪ ಗಳನ್ನು ನನ್ನ ನೆನಪಿನಲ್ಲಿಡೆನು.
ಓ ದೇವರೇ, ನಿನ್ನ ಪಟ್ಟಣವೂ ನಿನ್ನ ಜನರೂ ನಿನ್ನ ಹೆಸರಿನಿಂದ ಕರೆಯಲ್ಪಟ್ಟ ಕಾರಣ ಓ ಕರ್ತನೇ, ತಡಮಾಡದೆ ಕಿವಿಗೊಡು, ಓ ಕರ್ತನೇ, ಕ್ಷಮಿಸು; ಓ ಕರ್ತನೇ ಲಾಲಿಸು.
ಮಾತುಗಳನ್ನು ನಿಮ್ಮ ಸಂಗಡ ತೆಗೆದುಕೊಂಡು ಕರ್ತನ ಕಡೆಗೆ ತಿರಿಗಿಕೊಂಡು ಆತನಿಗೆ--ಎಲ್ಲಾ ದುಷ್ಕತ್ಯವನ್ನು ತೆಗೆದು ಹಾಕಿ ನಮ್ಮನ್ನು ಕೃಪೆಯಿಂದ ಸ್ವೀಕರಿಸು; ಆಗ ನಮ್ಮ ತುಟಿಗಳ ಯಜ್ಞಗಳನ್ನು ನಿನಗೆ ಅರ್ಪಿಸುವೆವು.
ನಮ್ಮ ಸಾಲಗಾರರನ್ನು ನಾವು ಕ್ಷಮಿಸುವಂತೆ ನಮ್ಮ ಸಾಲಗಳನ್ನು ನಮಗೆ ಕ್ಷಮಿಸು.
ಆ ಸಮಯದಲ್ಲಿ ಯೇಸು--ತಂದೆಯೇ, ಪರಲೋಕ ಮತ್ತು ಭೂಲೋಕಗಳ ಒಡೆಯನೇ, ನೀನು ಈ ಸಂಗತಿಗಳನ್ನು ಜ್ಞಾನಿಗಳಿಗೂ ಬುದ್ಧಿವಂತ ರಿಗೂ ಮರೆಮಾಡಿ ಶಿಶುಗಳಿಗೆ ಪ್ರಕಟಮಾಡಿ ರುವದಕ್ಕಾಗಿ ನಾನು ನಿನ್ನನ್ನು ಕೊಂಡಾಡುತ್ತೇನೆ.
ಅದರಂತೆಯೇ ನಿಮ್ಮಲ್ಲಿ ಪ್ರತಿಯೊ ಬ್ಬನು ಹೃದಯಪೂರ್ವಕವಾಗಿ ತನ್ನ ಸಹೋದರನ ತಪ್ಪುಗಳನ್ನು ಕ್ಷಮಿಸದೆಹೋದರೆ ಪರಲೋಕದಲ್ಲಿರುವ ನನ್ನ ತಂದೆಯೂ ನಿಮಗೆ ಹಾಗೆಯೇ ಮಾಡುವನು ಅಂದನು.
ನೀವು ಶೋಧನೆಗೆ ಒಳಗಾ ಗದಂತೆ ಎಚ್ಚರವಾಗಿದ್ದು ಪ್ರಾರ್ಥಿಸಿರಿ; ಆತ್ಮವು ಸಿದ್ಧವಾಗಿದೆ ನಿಜವೇ; ಆದರೆ ಶರೀರವು ಬಲಹೀನ ವಾಗಿದೆ ಅಂದನು.
ಬಂಡೆಯ ನೆಲದವರು ಯಾರಂದರೆ, ಅವರು ವಾಕ್ಯವನ್ನು ಕೇಳಿದಾಗ ಸಂತೋಷದಿಂದ ಅಂಗೀಕರಿಸುವರು; ಇವರು ಬೇರಿಲ್ಲದಿರುವದರಿಂದ ಸ್ವಲ್ಪಕಾಲ ನಂಬಿ ಶೋಧನೆ ಬಂದಾಗ ಬಿದ್ದು ಹೋಗುವರು.
ನೀವು ನಿದ್ರೆ ಮಾಡುವದು ಯಾಕೆ? ಶೋಧನೆಗೆ ಒಳಗಾಗ ದಂತೆ ಎದ್ದು ಪ್ರಾರ್ಥಿಸಿರಿ ಅಂದನು.
ನೀನು ಅವರನ್ನು ಲೋಕದೊಳಗಿಂದ ತೆಗೆಯಬೇಕೆಂತಲ್ಲ; ಅವರನ್ನು ಕೇಡಿನಿಂದ ಕಾಪಾಡಬೇಕೆಂದು ನಾನು ಕೇಳಿಕೊಳ್ಳು ತ್ತೇನೆ.
ಮನುಷ್ಯನಿಗೆ ಸಾಮಾನ್ಯ ವಾಗಿ ಬರುವ ಶೋಧನೆಯೇ ಹೊರತು ಬೇರೆ ಯಾವದೂ ನಿಮಗೆ ಸಂಭವಿಸಲಿಲ್ಲ; ಆದರೆ ದೇವರು ನಂಬಿಗಸ್ತನು; ನೀವು ಸಹಿಸುವದಕ್ಕಿಂತ ಹೆಚ್ಚಿನ ಶೋಧನೆಯನ್ನು ಆತನು ನಿಮಗೆ ಬರಮಾಡುವದಿಲ್ಲ; ಆದರೆ ನೀವು ಅದನ್ನು ಸಹಿಸುವದಕ್ಕೆ ಶಕ್ತರಾಗುವಂತೆ ಶೋಧ
ಇದಲ್ಲದೆ ಹೇರಳವಾದ ಪ್ರಕಟಣೆಗಳ ಮೂಲಕ ನಾನು ಮಿತಿವಿಾರಿ ಹೆಚ್ಚಿಸಿ ಕೊಳ್ಳಬಾರದೆಂದು ನನ್ನನ್ನು ಗುದ್ದುವದಕ್ಕಾಗಿ ಸೈತಾನನ ದೂತನಂತೆ ನನ್ನ ಶರೀರದಲ್ಲಿ ಒಂದು ಮುಳ್ಳು ನನಗೆ ಕೊಡಲ್ಪಟ್ಟಿದೆ; ಹೀಗೆ ನಾನು ಮಿತಿವಿಾರಿ ಹೆಚ್ಚಿಸಿ ಕೊಳ್ಳಲಾರದಂತೆ ಇದಾಯಿತು.
ಎಲ್ಲಾ ದ್ವೇಷ, ಕೋಪ, ಕ್ರೋಧ, ಕಲಹ, ದೂಷಣೆ ಇವುಗಳನ್ನೂ ಸಕಲ ವಿಧವಾದ ದುಷ್ಟತನವನ್ನೂ ನಿಮ್ಮಿಂದ ದೂರ ಮಾಡಿರಿ.ದೇವರು ನಿಮಗೆ ಕ್ರಿಸ್ತನಲ್ಲಿ ಕ್ಷಮಿಸಿ ದಂತೆಯೇ ನೀವು ಒಬ್ಬರಿಗೊಬ್ಬರು ಉಪಕಾರಿಗಳಾ ಗಿಯೂ ಕರುಣೆಯುಳ್ಳವರಾಗಿಯೂ ಕ್ಷಮಿಸುವವ ರಾಗಿಯೂ ಇರ್ರಿ.
ಯಾವನಿ ಗಾದರೂ ಒಬ್ಬನಿಗೆ ಇನ್ನೊಬ್ಬನ ಮೇಲೆ ವಿರೋಧವಾಗಿ ವ್ಯಾಜ್ಯವಿದ್ದರೂ ಒಬ್ಬರಿಗೊಬ್ಬರು ತಾಳಿಕೊಂಡು ಕ್ರಿಸ್ತನು ನಿಮ್ಮನ್ನು ಕ್ಷಮಿಸಿದಂತೆಯೇ ನೀವು ಒಬ್ಬರಿಗೊಬ್ಬರು ಕ್ಷಮಿಸಿರಿ.
ಆದರೆ ಕರ್ತನು ನಂಬಿಗಸ್ತನು; ಆತನು ನಿಮ್ಮನ್ನು ದೃಢಪಡಿಸಿ ನಿಮ್ಮನ್ನು ಕೇಡಿನಿಂದ ತಪ್ಪಿಸುವನು.
ನನ್ನನ್ನು ಪ್ರತಿಯೊಂದು ದುಷ್ಕೃತ್ಯದಿಂದ ಕರ್ತನು ತಪ್ಪಿಸಿ ತನ್ನ ಪರಲೋಕರಾಜ್ಯಕ್ಕೆ ನನ್ನನ್ನು ಕಾಪಾಡು ವನು. ಯುಗಯುಗಾಂತರಗಳಲ್ಲಿಯೂ ಆತನಿಗೆ ಮಹಿಮೆ. ಆಮೆನ್.
ಕರುಣೆ ತೋರಿಸದೆ ಇರುವವನಿಗೆ ನ್ಯಾಯತೀರ್ಪಿನಲ್ಲಿ ಕರುಣೆಯು ತೋರಿಸಲ್ಪಡುವದಿಲ್ಲ. ಕರುಣೆಯು ನ್ಯಾಯತೀರ್ಪಿಗಿಂತ ಮೇಲಾಗಿ ಹಿಗ್ಗುತ್ತದೆ.
ನಮ್ಮಲ್ಲಿ ಪಾಪವಿಲ್ಲ ವೆಂದು ನಾವು ಹೇಳಿದರೆ ನಮ್ಮನ್ನು ನಾವೇ ಮೋಸ ಪಡಿಸಿಕೊಳ್ಳುತ್ತೇವೆ, ಸತ್ಯವು ನಮ್ಮಲ್ಲಿಲ್ಲ.
ನಿನ್ನನ್ನು ಸಂಕಟಪಡಿಸುವವುಗಳಲ್ಲಿ ಯಾವ ದಕ್ಕೂ ಹೆದರಬೇಡ. ಇಗೋ, ನೀವು ಶೋಧಿಸಲ್ಪಡು ವಂತೆ ಸೈತಾನನು ನಿಮ್ಮಲ್ಲಿ ಕೆಲವರನ್ನು ಸೆರೆಮನೆಯೊಳಗೆ ಹಾಕುವನು; ಹತ್ತು ದಿವಸಗಳ ತನಕ ನಿಮಗೆ ಸಂಕಟವಿ ರುವದು. ನೀನು ಸಾಯಬೇಕಾದರೂ ನಂಬಿಗಸ್ತ ನಾಗಿರು; ನಾನು ನಿನಗೆ
ನೀನು ನನ್ನ ಸಹನ ವಾಕ್ಯವನ್ನು ಕಾಪಾಡಿದ್ದರಿಂದ ಭೂಮಿಯ ಮೇಲೆ ವಾಸ ಮಾಡುವವ ರನ್ನು ಪರೀಕ್ಷಿಸುವದಕ್ಕಾಗಿ ಲೋಕದ ಮೇಲೆಲ್ಲಾ ಬರು ವದಕ್ಕಿರುವ ಶೋಧನೆಯ ಸಮಯದಿಂದ ನಾನು ಸಹ ನಿನ್ನನ್ನು ಕಾಪಾಡುವೆನು.