Cross references
ತರುವಾಯ ದೇವರು--ನಮ್ಮ ರೂಪದಲ್ಲಿ ನಮ್ಮ ಹೋಲಿಕೆಗೆ ಸರಿಯಾಗಿ ಮನುಷ್ಯನನ್ನು ಮಾಡೋಣ; ಅವರು ಸಮುದ್ರದ ವಿಾನುಗಳ ಮೇಲೆಯೂ ಆಕಾಶದ ಪಕ್ಷಿಗಳ ಮೇಲೆಯೂ ಪಶುಗಳ ಮೇಲೆಯೂ ಎಲ್ಲಾ ಭೂಮಿಯ ಮೇಲೆಯೂ ಭೂಮಿಯ ಮೇಲೆ ಹರಿದಾಡುವ ಪ್ರತಿಯೊಂದು ಕ್ರಿಮಿಯ ಮೇಲೆಯೂ ದೊರೆತನಮಾಡಲಿ ಅಂದನು.
ಕರ್ತನಾದ ದೇವರು ಭೂಮಿಯ ಮಣ್ಣಿನಿಂದ ಮನುಷ್ಯನನ್ನು ರೂಪಿಸಿ ಅವನ ಮೂಗಿನಲ್ಲಿ ಜೀವಶ್ವಾಸ ವನ್ನು ಊದಿದನು; ಆಗ ಮನುಷ್ಯನು ಜೀವಾತ್ಮ ನಾದನು.
ಆಗ ಅವರು ಬೋರಲು ಬಿದ್ದು--ಓ ದೇವರೇ, ಎಲ್ಲಾ ಶರೀರಾತ್ಮಗಳ ದೇವರೇ, ಒಬ್ಬ ಮನುಷ್ಯನ ಪಾಪದ ದೆಸೆಯಿಂದ ನೀನು ಸಮಸ್ತ ಸಭೆಯ ಮೇಲೆ ಕೋಪಿಸಿಕೊಳ್ಳು ತ್ತೀಯೋ ಅಂದರು.
ದೇವರಿಲ್ಲವೆಂದು ಮೂರ್ಖನು ತನ್ನ ಹೃದಯದಲ್ಲಿ ಹೇಳಿಕೊಂಡಿದ್ದಾನೆ. ಅವರು ಕೆಟ್ಟುಹೋಗಿ ಅಸಹ್ಯವಾದ ಕೃತ್ಯಗಳನ್ನು ಮಾಡಿದ್ದಾರೆ; ಒಳ್ಳೇದನ್ನು ಮಾಡುವವನು ಯಾವನೂ ಇಲ್ಲ.
ಅವರ ಹೃದಯ ಗಳನ್ನು ಏಕವಾಗಿ ರೂಪಿಸಿ ಅವರ ಕೆಲಸಗಳನ್ನೆಲ್ಲಾ ಗ್ರಹಿಸಿಕೊಳ್ಳುವವನು ಆತನೇ.
ಮೂರ್ಖತನದಿಂದ ವರ್ತಿಸಬೇಡಿರಿ ಎಂದು ಮೂರ್ಖರಿಗೆ ಹೇಳುತ್ತೇನೆ. ಕೊಂಬು ಎತ್ತಬೇಡಿರಿ ಎಂದು ದುಷ್ಟರಿಗೆ ಹೇಳಿದೆನು.
ಜನರಲ್ಲಿ ಪಶುಪ್ರಾಯದವರೇ, ನೀವು ಗ್ರಹಿಸಿರಿ; ಹುಚ್ಚರೇ, ಯಾವಾಗ ಬುದ್ಧಿವಂತರಾಗುವಿರಿ?
ಜ್ಞಾನ ಹೀನರೇ, ನೀವು ಎಷ್ಟು ಕಾಲ ಅಜ್ಞಾನವನ್ನು ಪ್ರೀತಿಸುವಿರಿ? ತಿರಸ್ಕರಿಸುವವರು ತಮ್ಮ ತಿರಸ್ಕರಿಸು ವಿಕೆಯಲ್ಲಿ ಎಷ್ಟುಕಾಲ ಆನಂದಿಸುವರು? ಜ್ಞಾನ ಹೀನರು ಎಷ್ಟು ಕಾಲ ತಿಳುವಳಿಕೆಯನ್ನು ಹಗೆ ಮಾಡುವರು?
ಓ ಜ್ಞಾನಹೀನರೇ, ಜ್ಞಾನವನ್ನು ಗ್ರಹಿಸಿರಿ; ಬುದ್ಧಿಹೀನರೇ, ನೀವು ತಿಳು ವಳಿಕೆಯ ಹೃದಯದವರಾಗಿರ್ರಿ.
ಆದದರಿಂದ ಕರ್ತನು ಹೀಗೆ ಹೇಳುತ್ತಾನೆ. ಇಗೋ, ನಾನು ಈ ಜನರ ಮುಂದೆ ಎಡೆತಡೆಗಳನ್ನು ಇಡುತ್ತೇನೆ; ತಂದೆ ಗಳೂ ಮಕ್ಕಳೂ ಕೂಡ ಅವುಗಳ ಮೇಲೆ ಬೀಳುವರು; ನೆರೆಯವನೂ ಅವನ ಸ್ನೇಹಿತನೂ ನಾಶವಾಗುವನು.
ಇಸ್ರಾಯೇಲಿನ ವಿಷಯವಾದ ಕರ್ತನ ವಾಕ್ಯದ ಭಾರವು ಆಕಾಶವನ್ನು ಹರಡಿಸು ವಾತನೂ ಭೂಮಿಯ ಅಸ್ತಿವಾರವನ್ನು ಹಾಕುವಾತನೂ ಮನುಷ್ಯನ ಆತ್ಮವನ್ನು ಅವನೊಳಗೆ ರೂಪಿಸುವಾತನೂ ಆದ ಕರ್ತನು ಹೇಳುವದೇನಂದರೆ--
ಮೂರ್ಖರೇ, ಕುರುಡರೇ, ಯಾವದು ದೊಡ್ಡದು? ಚಿನ್ನವೋ ಇಲ್ಲವೆ ಚಿನ್ನವನ್ನು ಪಾವನ ಮಾಡುವ ದೇವಾಲಯವೋ?
ಕುರುಡನಾದ ಫರಿಸಾಯನೇ, ಮೊದಲು ಪಾತ್ರೆಯ ಮತ್ತು ತಟ್ಟೆಯ ಒಳಗಿನ ಭಾಗ ವನ್ನು ಶುಚಿಮಾಡು; ಆಗ ಅವುಗಳ ಹೊರ ಭಾಗವೂ ಶುಚಿಯಾಗುವದು.
ಆದರೆ ದೇವರು ಅವನಿಗೆ--ಬುದ್ಧಿಹೀನನೇ, ಈ ರಾತ್ರಿಯೇ ನಿನ್ನ ಪ್ರಾಣವು ನಿನ್ನಿಂದ ಕೇಳಲ್ಪಡುವದು; ಆಗ ನೀನು ಕೂಡಿಸಿಕೊಂಡವುಗಳು ಯಾರಿಗಾಗುವವು ಎಂದು ಹೇಳಿದನು.
ಆಗ ಆತನು ಅವರಿಗೆ--ಓ ಬುದ್ದಿಹೀನರೇ, ಪ್ರವಾದಿಗಳು ಹೇಳಿ ದ್ದೆಲ್ಲವನ್ನು ನಂಬುವದರಲ್ಲಿ ಮಂದ ಹೃದಯದವರೇ,
ಮೂಢನು ನೀನು; ನೀನು ಬಿತ್ತಿರುವದು ಸಾಯದ ಹೊರತು ಜೀವಿತವಾಗು ವದಿಲ್ಲ.
ಇದು ಮಾತ್ರವಲ್ಲದೆ ನಮ್ಮನ್ನು ಶಿಕ್ಷಿಸಿದಂಥ ಶರೀರ ಸಂಬಂಧವಾದ ತಂದೆಗಳನ್ನು ಸನ್ಮಾನಿ ಸಿದೆವಷ್ಟೆ; ಆತ್ಮಗಳಿಗೆ ತಂದೆಯಾಗಿರುವಾತನಿಗೆ ನಾವು ಇನ್ನೂ ಎಷ್ಟೋ ಹೆಚ್ಚಾಗಿ ಒಳಪಟ್ಟು ಜೀವಿಸಬೇಕಲ್ಲವೇ?