ಆದರೆ ಫರಿಸಾಯರೇ, ನಿಮಗೆ ಅಯ್ಯೋ! ಯಾಕಂದರೆ ನೀವು ಮರುಗಪತ್ರೆ ಸದಾಪು ಸಕಲ ವಿಧವಾದ ಸೊಪ್ಪುಗಳಲ್ಲಿ ದಶಮಭಾಗವನ್ನು ಕೊಟ್ಟು ನ್ಯಾಯತೀರ್ಪನ್ನೂ ದೇವರಪ್ರೀತಿಯನ್ನೂ ಲಕ್ಷಿಸದೆ ಹೋಗುತ್ತೀರಿ. ಇವುಗಳನ್ನು ತಪ್ಪದೆ ಮಾಡಿ ಬೇರೆಯವು ಗಳನ್ನು ಬಿಡದೆ ಮಾಡಬೇಕಾಗಿತ್ತು.
Cross references
ಭೂಮಿಯ ಬೀಜದಲ್ಲಾಗಲಿ ಮರದ ಫಲದ ಲ್ಲಾಗಲಿ ಹತ್ತನೇ ಪಾಲೆಲ್ಲಾ ಕರ್ತನದೇ. ಅದು ಕರ್ತನಿಗೆ ಪರಿಶುದ್ಧವಾದದ್ದು.
ಈಗ ಇಸ್ರಾಯೇಲೇ, ನಿನ್ನ ಕರ್ತನಾದ ದೇವರಿಗೆ ಭಯಪಟ್ಟು ಆತನ ಎಲ್ಲಾ ಮಾರ್ಗಗಳಲ್ಲಿ ನಡೆದು ಕೊಂಡು ಆತನನ್ನು ಪ್ರೀತಿಮಾಡಿ ನಿನ್ನ ಕರ್ತನಾದ ದೇವರಿಗೆ ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಪ್ರಾಣದಿಂದಲೂ ಸೇವೆಮಾಡಿ
ಅದಕ್ಕೆ ಸಮುವೇಲನು--ಕರ್ತನ ವಾಕ್ಯಕ್ಕೆ ವಿಧೇಯನಾದರೆ ಕರ್ತನಿಗೆ ಆಗುವ ಸಂತೋಷ ದಹನ ಬಲಿಗಳಲ್ಲಿಯೂ ಬಲಿಗಳಲ್ಲಿಯೂ ಆಗುವದೋ? ಇಗೋ, ಬಲಿಗಿಂತ ವಿಧೇಯವಾಗುವದು ಟಗರುಗಳ ಕೊಬ್ಬಿಗಿಂತ ಆಲೈಸುವದು ಉತ್ತಮವಾಗಿರುವದು.
ಈ ಆಜ್ಞೆ ಹೊರಗೆ ಬಂದಾಗಲೇ ಇಸ್ರಾಯೇಲ್ ಮಕ್ಕಳು ಧಾನ್ಯ, ದ್ರಾಕ್ಷಾರಸ, ಎಣ್ಣೆ, ಜೇನು, ಹೊಲಗಳ ಹುಟ್ಟುವಳಿ ಇವುಗಳ ಮೊದಲನೇ ಪಾಲನ್ನು ಬಹಳವಾಗಿ ಒಳಗೆ ತಂದರು. ಹಾಗೆಯೇ ಸಮಸ್ತ ವಸ್ತುಗಳಲ್ಲಿ ದಶಮಾಂಶದ ಪಾಲನ್ನು ಬಹಳ ವಾಗಿ ತಂದರು;
ನಮ್ಮ ಹಿಟ್ಟಿನಲ್ಲಿ ಮೊದಲಿನ ಪಾಲನ್ನೂ ನಮ್ಮ ಕಾಣಿಕೆಗಳನ್ನೂ ಸಕಲ ಮರಗಳ ಫಲವನ್ನೂ ದ್ರಾಕ್ಷಾ ರಸವನ್ನೂ ಎಣ್ಣೆಯನ್ನೂ ಯಾಜಕರ ಬಳಿಗೆ ನಮ್ಮ ದೇವರ ಆಲಯದ ಕೊಠಡಿಗಳಲ್ಲಿ ತಂದಿಡುವದಕ್ಕೂ; ಲೇವಿಯರು ಒಕ್ಕಲುತನದವರಿರುವ ಪಟ್ಟಣಗಳಿಂದ ಹತ್ತರಲ್ಲೊಂದು ಪಾಲನ್ನು ಹೊಂದುವ ಹಾಗೆ ನಮ್ಮ ಭೂಮಿಯ ಹತ್ತರಲ್ಲೊಂದು ಪಾಲನ್ನು ಲೇವಿಯರಿಗೆ ತರುವದಕ್ಕೂ ಪ್ರಮಾಣಮಾಡಿದೆವು.
ಯಜ್ಞಕ್ಕಿಂತ ನೀತಿನ್ಯಾಯಗಳನ್ನು ನಡಿಸುವದು ಕರ್ತ ನಿಗೆ ಎಷ್ಟೋ ಮೆಚ್ಚಿಕೆಯಾಗಿದೆ.
ನೀನು ಇದನ್ನು ಹಿಡಿದುಕೊಳ್ಳುವದು ಒಳ್ಳೇದು. ಹೌದು, ಇದರಿಂದ ನಿನ್ನ ಕೈಯನ್ನು ಹಿಂತೆ ಗೆಯಬೇಡ; ದೇವರಿಗೆ ಭಯಪಡುವವನು ಅವೆಲ್ಲವು ಗಳಿಂದ ಹೊರಗೆ ಬರುವನು.
ಸೊದೋಮಿನ ಅಧಿಪತಿಗಳೇ, ನೀವು ಕರ್ತನ ಮಾತನ್ನು ಕೇಳಿರಿ; ಗೊಮೋರದ ಪ್ರಜೆಗಳೇ, ನಮ್ಮ ದೇವರ ನ್ಯಾಯಪ್ರಮಾಣಕ್ಕೆ ಕಿವಿಗೊಡಿರಿ.
ಆದಾಗ್ಯೂ ಅವರು ನನ್ನನ್ನು ಪ್ರತಿನಿತ್ಯವೂ ಹುಡುಕು ತ್ತಾರೆ. ನನ್ನ ಮಾರ್ಗಗಳನ್ನು ತಿಳಿದುಕೊಳ್ಳುವದರಲ್ಲಿ ಸಂತೋಷಪಡುತ್ತಾರೆ. ತನ್ನ ದೇವರ ನ್ಯಾಯವನ್ನು ಬಿಡದೆ ನೀತಿಯನ್ನಾಚರಿಸುವ ಜನಾಂಗದ ಹಾಗೆಯೇ ನೀತಿಯುಳ್ಳ ನ್ಯಾಯಗಳನ್ನು ನನ್ನಿಂದ ಕೇಳುತ್ತಾರೆ. ದೇವರನ್ನು ಸವಿಾಪಿಸುವದರಲ್ಲಿ ಸಂತೋಷಿಸುತ್ತಾರೆ.
ಅವರು ಪ್ರೀತಿಸಿ ಸೇವಿಸಿ ಹಿಂಬಾಲಿಸಿ ಹುಡುಕಿ ಆರಾಧಿಸಿದ ಸೂರ್ಯ ಚಂದ್ರ ಸಮಸ್ತ ಆಕಾಶ ಸೈನ್ಯದ ಮುಂದೆ ಅವುಗಳನ್ನು ಚೆಲ್ಲುವರು; ಅವು ಕೂಡಿಸಲ್ಪಡವು, ಹೂಣಿಡಲ್ಪಡವು, ಅವು ಭೂಮಿಯ ಮೇಲೆ ಗೊಬ್ಬರವಾಗುವವು.
ನನ್ನ ಜನರ ಮಗಳ ಗಾಯ ದಿಂದ ನನಗೆ ಗಾಯವಾಯಿತು; ಕಪ್ಪಾದೆನು; ವಿಸ್ಮಯವು ನನ್ನನ್ನು ಹಿಡಿಯಿತು.ಗಿಲ್ಯಾದಿನಲ್ಲಿ ಮುಲಾಮು ಇಲ್ಲವೋ? ಅಲ್ಲಿ ವೈದ್ಯನಿಲ್ಲವೋ? ಹಾಗಾದರೆ ನನ್ನ ಜನರ ಮಗಳಿಗೆ ಯಾಕೆ ಸ್ವಸ್ಥವಾಗಲಿಲ್ಲ?
ಮನುಷ್ಯನೇ, ಉತ್ತಮವಾದ ದ್ದನ್ನು ನಿನಗೆ ಆತನು ತಿಳಿಸಿದ್ದಾನೆ; ಹೌದು, ನ್ಯಾಯ ವನ್ನು ಮಾಡುವದೂ ಕರುಣೆಯನ್ನು ಪ್ರೀತಿಮಾಡು ವದೂ ನಿನ್ನ ದೇವರ ಸಂಗಡ ವಿನಯವಾಗಿ ನಡ ಕೊಳ್ಳುವದೂ ಇದನ್ನೇ ಹೊರತು ಕರ್ತನು ಇನ್ನೇನು ನಿನ್ನಿಂದ ಕೇಳುತ್ತಾನೆ.
ಮಗನು ತಂದೆಯನ್ನು ದಾಸನು ಯಜಮಾನನನ್ನು ಸನ್ಮಾನಿಸುತ್ತಾನೆ; ನಾನು ತಂದೆಯಾಗಿದ್ದರೆ ನನ್ನ ಸನ್ಮಾನ ವೆಲ್ಲಿ? ನಾನು ಯಜಮಾನನಾಗಿದ್ದರೆ ನನ್ನ ಭಯವು ಎಲ್ಲಿ ಎಂದು ನನ್ನ ಹೆಸರನ್ನು ಅಸಡ್ಡೆ ಮಾಡುವ ಯಾಜಕರಾದ ನಿಮಗೆ ಸೈನ್ಯಗಳ ಕರ್ತನು ಹೇಳುತ್ತಾನೆ. ಆದರೆ ನೀವು--ನಿನ್ನ ಹೆಸರನ್ನು ಯಾವದರಲ್ಲಿ ನಾವು ಅಸಡ್ಡೆ ಮಾಡಿದ್ದೇವೆಂದು ಹೇಳುತ್ತೀರಿ.
ನಿಮ್ಮ ಮಾತುಗಳಿಂದ ಕರ್ತನಿಗೆ ಬೇಸರಮಾಡಿ ದ್ದೀರಿ; ಆದಾಗ್ಯೂ--ನಾವು ಯಾವದರಲ್ಲಿ ಆತನಿಗೆ ಬೇಸರಮಾಡಿದ್ದೇವೆ ಎಂದು ಅನ್ನುತ್ತೀರಿ; ಕೆಟ್ಟದ್ದನ್ನು ಮಾಡುವವರೆಲ್ಲರೂ ಕರ್ತನ ದೃಷ್ಟಿಯಲ್ಲಿ ಒಳ್ಳೆಯವರು, ಅವರಲ್ಲಿ ಆತನು ಮೆಚ್ಚುತ್ತಾನೆಂದೂ ನ್ಯಾಯದ ದೇವರು ಎಲ್ಲಿ ಎಂದೂ ನೀವು ಹೇಳುವದರಿಂದಲೇ.
ಮನುಷ್ಯನು ದೇವರದನ್ನು ಕಳ್ಳತನ ಮಾಡುವನೋ? ಆದರೆ ನೀವು ನನ್ನದನ್ನು ಕಳ್ಳತನ ಮಾಡಿದ್ದೀರಿ; ಆದರೆ ನೀವು--ಯಾವದರಲ್ಲಿ ನಿನ್ನದನ್ನು, ಕಳ್ಳತನ ಮಾಡಿದ್ದೇವೆಂದು ಅನ್ನುತ್ತೀರಿ? ದಶಮಭಾಗ ಮತ್ತು ಅರ್ಪಣೆಗಳನ್ನೇ.
ಆದರೆ ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೋ! ನೀವು ಮನುಷ್ಯರ ಮುಂದೆ ಪರ ಲೋಕರಾಜ್ಯವನ್ನು ಮುಚ್ಚುತ್ತೀರಿ. ನೀವಂತೂ ಪ್ರವೇಶಿ ಸುವದಿಲ್ಲ, ಪ್ರವೇಶಿಸುವವರನ್ನೂ ನೀವು ಒಳಗೆ ಹೋಗಗೊಡಿಸುವದಿಲ್ಲ.
ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೋ! ನೀವು ಮರುಗ ಸೋಪು ಜೀರಿಗೆ ಗಳಲ್ಲಿ ದಶಮ ಭಾಗವನ್ನು ಸಲ್ಲಿಸುತ್ತೀರಿ. ಆದರೆ ನ್ಯಾಯ ಪ್ರಮಾಣದ ತೀರ್ಪು ಕರುಣೆ ನಂಬಿಕೆ ಎಂಬ ಈ ಪ್ರಾಮುಖ್ಯವಾದವುಗಳನ್ನು ಬಿಟ್ಟುಬಿಟ್ಟಿದ್ದೀರಿ. ಇವುಗ ಳೊಂದಿಗೆ ಆ ಬೇರೆಯವುಗಳನೂ
ಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೋ! ಯಾಕಂದರೆ ನೀವು ಸುಣ್ಣಾ ಹಚ್ಚಿದ ಸಮಾಧಿ ಗಳಿಗೆ ಹೋಲಿಕೆಯಾಗಿದ್ದೀರಿ. ಅವು ಹೊರಗೆ ನಿಜಕ್ಕೂ ಅಂದವಾಗಿ ಕಾಣುತ್ತವೆ; ಆದರೆ ಒಳಗೆ ಸತ್ತವರ ಎಲುಬು ಗಳಿಂದಲೂ ಎಲ್ಲಾ ಅಶುದ್ಧತೆಯಿಂದಲೂ ತುಂಬಿರು ತ್ತವೆ.
ನಾನು ವಾರದಲ್ಲಿ ಎರಡು ಸಾರಿ ಉಪವಾಸ ಮಾಡುತ್ತೇನೆ; ನನಗಿರುವದೆ ಲ್ಲವುಗಳಲ್ಲಿ ದಶಾಂಶ ಕೊಡುತ್ತೇನೆ ಎಂದು ಹೇಳಿದನು.
ಆದರೆ ನಾನು ನಿಮ್ಮನ್ನು ಬಲ್ಲೆನು, ನಿಮ್ಮಲ್ಲಿ ದೇವರ ಪ್ರೀತಿ ಇಲ್ಲ.
ಯಾಕಂದರೆ ಎಲ್ಲಾ ಮನುಷ್ಯರಿಗೆ ರಕ್ಷಣೆಯನ್ನುಂಟು ಮಾಡುವ ದೇವರ ಕೃಪೆಯು ಪ್ರತ್ಯಕ್ಷವಾಯಿತು.
ಒಬ್ಬನು--ನಾನು ದೇವರನ್ನು ಪ್ರೀತಿಸುತ್ತೇನೆ ಎಂದು ಹೇಳಿ ತನ್ನ ಸಹೋದರನನ್ನು ಹಗೆ ಮಾಡಿದರೆ ಅವನು ಸುಳ್ಳುಗಾರನಾಗಿದ್ದಾನೆ. ಯಾಕಂದರೆ ತಾನು ಕಾಣುವ ಸಹೋದರನನ್ನು ಪ್ರೀತಿಸದವನು ಕಾಣದಿರುವ ದೇವರನ್ನು ಅವನು ಹೇಗೆ ಪ್ರೀತಿಸಾನು?ದೇವರನ್ನು ಪ್ರೀತಿಸುವವನು ತನ್ನ ಸಹೋದರನನ್ನೂ ಪ್ರೀತಿಸಬೇಕೆಂಬ ಈ ಆಜ್ಞೆ ಯನ್ನು ನಾವು ಆತನಿಂದ ಹೊಂದಿದ್ದೇವೆ.