Home Bibles ಲೂಕ 11:42 · ಕನ್ನಡ ಬೈಬಲ್
ಲೂಕ 11:42 · ಕನ್ನಡ ಬೈಬಲ್

ಆದರೆ ಫರಿಸಾಯರೇ, ನಿಮಗೆ ಅಯ್ಯೋ! ಯಾಕಂದರೆ ನೀವು ಮರುಗಪತ್ರೆ ಸದಾಪು ಸಕಲ ವಿಧವಾದ ಸೊಪ್ಪುಗಳಲ್ಲಿ ದಶಮಭಾಗವನ್ನು ಕೊಟ್ಟು ನ್ಯಾಯತೀರ್ಪನ್ನೂ ದೇವರಪ್ರೀತಿಯನ್ನೂ ಲಕ್ಷಿಸದೆ ಹೋಗುತ್ತೀರಿ. ಇವುಗಳನ್ನು ತಪ್ಪದೆ ಮಾಡಿ ಬೇರೆಯವು ಗಳನ್ನು ಬಿಡದೆ ಮಾಡಬೇಕಾಗಿತ್ತು.

Cross references

ಲೇವ್ಯಕಾಂಡ 27:30

ಭೂಮಿಯ ಬೀಜದಲ್ಲಾಗಲಿ ಮರದ ಫಲದ ಲ್ಲಾಗಲಿ ಹತ್ತನೇ ಪಾಲೆಲ್ಲಾ ಕರ್ತನದೇ. ಅದು ಕರ್ತನಿಗೆ ಪರಿಶುದ್ಧವಾದದ್ದು.

ದ್ವಿತೀಯೋಪದೇಶಕಾಂಡ 10:12

ಈಗ ಇಸ್ರಾಯೇಲೇ, ನಿನ್ನ ಕರ್ತನಾದ ದೇವರಿಗೆ ಭಯಪಟ್ಟು ಆತನ ಎಲ್ಲಾ ಮಾರ್ಗಗಳಲ್ಲಿ ನಡೆದು ಕೊಂಡು ಆತನನ್ನು ಪ್ರೀತಿಮಾಡಿ ನಿನ್ನ ಕರ್ತನಾದ ದೇವರಿಗೆ ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಪ್ರಾಣದಿಂದಲೂ ಸೇವೆಮಾಡಿ

1 ಸಮುವೇಲ 15:22

ಅದಕ್ಕೆ ಸಮುವೇಲನು--ಕರ್ತನ ವಾಕ್ಯಕ್ಕೆ ವಿಧೇಯನಾದರೆ ಕರ್ತನಿಗೆ ಆಗುವ ಸಂತೋಷ ದಹನ ಬಲಿಗಳಲ್ಲಿಯೂ ಬಲಿಗಳಲ್ಲಿಯೂ ಆಗುವದೋ? ಇಗೋ, ಬಲಿಗಿಂತ ವಿಧೇಯವಾಗುವದು ಟಗರುಗಳ ಕೊಬ್ಬಿಗಿಂತ ಆಲೈಸುವದು ಉತ್ತಮವಾಗಿರುವದು.

2 ದಿನವೃತ್ತಾಂತ 31:5

ಈ ಆಜ್ಞೆ ಹೊರಗೆ ಬಂದಾಗಲೇ ಇಸ್ರಾಯೇಲ್‌ ಮಕ್ಕಳು ಧಾನ್ಯ, ದ್ರಾಕ್ಷಾರಸ, ಎಣ್ಣೆ, ಜೇನು, ಹೊಲಗಳ ಹುಟ್ಟುವಳಿ ಇವುಗಳ ಮೊದಲನೇ ಪಾಲನ್ನು ಬಹಳವಾಗಿ ಒಳಗೆ ತಂದರು. ಹಾಗೆಯೇ ಸಮಸ್ತ ವಸ್ತುಗಳಲ್ಲಿ ದಶಮಾಂಶದ ಪಾಲನ್ನು ಬಹಳ ವಾಗಿ ತಂದರು;

ನೆಹೆಮ್ಯ 10:37

ನಮ್ಮ ಹಿಟ್ಟಿನಲ್ಲಿ ಮೊದಲಿನ ಪಾಲನ್ನೂ ನಮ್ಮ ಕಾಣಿಕೆಗಳನ್ನೂ ಸಕಲ ಮರಗಳ ಫಲವನ್ನೂ ದ್ರಾಕ್ಷಾ ರಸವನ್ನೂ ಎಣ್ಣೆಯನ್ನೂ ಯಾಜಕರ ಬಳಿಗೆ ನಮ್ಮ ದೇವರ ಆಲಯದ ಕೊಠಡಿಗಳಲ್ಲಿ ತಂದಿಡುವದಕ್ಕೂ; ಲೇವಿಯರು ಒಕ್ಕಲುತನದವರಿರುವ ಪಟ್ಟಣಗಳಿಂದ ಹತ್ತರಲ್ಲೊಂದು ಪಾಲನ್ನು ಹೊಂದುವ ಹಾಗೆ ನಮ್ಮ ಭೂಮಿಯ ಹತ್ತರಲ್ಲೊಂದು ಪಾಲನ್ನು ಲೇವಿಯರಿಗೆ ತರುವದಕ್ಕೂ ಪ್ರಮಾಣಮಾಡಿದೆವು.

ಸಾಮೇತಿಗಳು 21:3

ಯಜ್ಞಕ್ಕಿಂತ ನೀತಿನ್ಯಾಯಗಳನ್ನು ನಡಿಸುವದು ಕರ್ತ ನಿಗೆ ಎಷ್ಟೋ ಮೆಚ್ಚಿಕೆಯಾಗಿದೆ.

ಸಭಾಪ್ರಸಂಗಿ 7:18

ನೀನು ಇದನ್ನು ಹಿಡಿದುಕೊಳ್ಳುವದು ಒಳ್ಳೇದು. ಹೌದು, ಇದರಿಂದ ನಿನ್ನ ಕೈಯನ್ನು ಹಿಂತೆ ಗೆಯಬೇಡ; ದೇವರಿಗೆ ಭಯಪಡುವವನು ಅವೆಲ್ಲವು ಗಳಿಂದ ಹೊರಗೆ ಬರುವನು.

ಯೆಶಾಯ 1:10

ಸೊದೋಮಿನ ಅಧಿಪತಿಗಳೇ, ನೀವು ಕರ್ತನ ಮಾತನ್ನು ಕೇಳಿರಿ; ಗೊಮೋರದ ಪ್ರಜೆಗಳೇ, ನಮ್ಮ ದೇವರ ನ್ಯಾಯಪ್ರಮಾಣಕ್ಕೆ ಕಿವಿಗೊಡಿರಿ.

ಯೆಶಾಯ 58:2

ಆದಾಗ್ಯೂ ಅವರು ನನ್ನನ್ನು ಪ್ರತಿನಿತ್ಯವೂ ಹುಡುಕು ತ್ತಾರೆ. ನನ್ನ ಮಾರ್ಗಗಳನ್ನು ತಿಳಿದುಕೊಳ್ಳುವದರಲ್ಲಿ ಸಂತೋಷಪಡುತ್ತಾರೆ. ತನ್ನ ದೇವರ ನ್ಯಾಯವನ್ನು ಬಿಡದೆ ನೀತಿಯನ್ನಾಚರಿಸುವ ಜನಾಂಗದ ಹಾಗೆಯೇ ನೀತಿಯುಳ್ಳ ನ್ಯಾಯಗಳನ್ನು ನನ್ನಿಂದ ಕೇಳುತ್ತಾರೆ. ದೇವರನ್ನು ಸವಿಾಪಿಸುವದರಲ್ಲಿ ಸಂತೋಷಿಸುತ್ತಾರೆ.

ಯೆರೆಮಿಯ 7:2

ಅವರು ಪ್ರೀತಿಸಿ ಸೇವಿಸಿ ಹಿಂಬಾಲಿಸಿ ಹುಡುಕಿ ಆರಾಧಿಸಿದ ಸೂರ್ಯ ಚಂದ್ರ ಸಮಸ್ತ ಆಕಾಶ ಸೈನ್ಯದ ಮುಂದೆ ಅವುಗಳನ್ನು ಚೆಲ್ಲುವರು; ಅವು ಕೂಡಿಸಲ್ಪಡವು, ಹೂಣಿಡಲ್ಪಡವು, ಅವು ಭೂಮಿಯ ಮೇಲೆ ಗೊಬ್ಬರವಾಗುವವು.

ಯೆರೆಮಿಯ 7:21

ನನ್ನ ಜನರ ಮಗಳ ಗಾಯ ದಿಂದ ನನಗೆ ಗಾಯವಾಯಿತು; ಕಪ್ಪಾದೆನು; ವಿಸ್ಮಯವು ನನ್ನನ್ನು ಹಿಡಿಯಿತು.ಗಿಲ್ಯಾದಿನಲ್ಲಿ ಮುಲಾಮು ಇಲ್ಲವೋ? ಅಲ್ಲಿ ವೈದ್ಯನಿಲ್ಲವೋ? ಹಾಗಾದರೆ ನನ್ನ ಜನರ ಮಗಳಿಗೆ ಯಾಕೆ ಸ್ವಸ್ಥವಾಗಲಿಲ್ಲ?

ಮೀಕ 6:8

ಮನುಷ್ಯನೇ, ಉತ್ತಮವಾದ ದ್ದನ್ನು ನಿನಗೆ ಆತನು ತಿಳಿಸಿದ್ದಾನೆ; ಹೌದು, ನ್ಯಾಯ ವನ್ನು ಮಾಡುವದೂ ಕರುಣೆಯನ್ನು ಪ್ರೀತಿಮಾಡು ವದೂ ನಿನ್ನ ದೇವರ ಸಂಗಡ ವಿನಯವಾಗಿ ನಡ ಕೊಳ್ಳುವದೂ ಇದನ್ನೇ ಹೊರತು ಕರ್ತನು ಇನ್ನೇನು ನಿನ್ನಿಂದ ಕೇಳುತ್ತಾನೆ.

ಮಲಾಕಿ 1:6

ಮಗನು ತಂದೆಯನ್ನು ದಾಸನು ಯಜಮಾನನನ್ನು ಸನ್ಮಾನಿಸುತ್ತಾನೆ; ನಾನು ತಂದೆಯಾಗಿದ್ದರೆ ನನ್ನ ಸನ್ಮಾನ ವೆಲ್ಲಿ? ನಾನು ಯಜಮಾನನಾಗಿದ್ದರೆ ನನ್ನ ಭಯವು ಎಲ್ಲಿ ಎಂದು ನನ್ನ ಹೆಸರನ್ನು ಅಸಡ್ಡೆ ಮಾಡುವ ಯಾಜಕರಾದ ನಿಮಗೆ ಸೈನ್ಯಗಳ ಕರ್ತನು ಹೇಳುತ್ತಾನೆ. ಆದರೆ ನೀವು--ನಿನ್ನ ಹೆಸರನ್ನು ಯಾವದರಲ್ಲಿ ನಾವು ಅಸಡ್ಡೆ ಮಾಡಿದ್ದೇವೆಂದು ಹೇಳುತ್ತೀರಿ.

ಮಲಾಕಿ 2:17

ನಿಮ್ಮ ಮಾತುಗಳಿಂದ ಕರ್ತನಿಗೆ ಬೇಸರಮಾಡಿ ದ್ದೀರಿ; ಆದಾಗ್ಯೂ--ನಾವು ಯಾವದರಲ್ಲಿ ಆತನಿಗೆ ಬೇಸರಮಾಡಿದ್ದೇವೆ ಎಂದು ಅನ್ನುತ್ತೀರಿ; ಕೆಟ್ಟದ್ದನ್ನು ಮಾಡುವವರೆಲ್ಲರೂ ಕರ್ತನ ದೃಷ್ಟಿಯಲ್ಲಿ ಒಳ್ಳೆಯವರು, ಅವರಲ್ಲಿ ಆತನು ಮೆಚ್ಚುತ್ತಾನೆಂದೂ ನ್ಯಾಯದ ದೇವರು ಎಲ್ಲಿ ಎಂದೂ ನೀವು ಹೇಳುವದರಿಂದಲೇ.

ಮಲಾಕಿ 3:8

ಮನುಷ್ಯನು ದೇವರದನ್ನು ಕಳ್ಳತನ ಮಾಡುವನೋ? ಆದರೆ ನೀವು ನನ್ನದನ್ನು ಕಳ್ಳತನ ಮಾಡಿದ್ದೀರಿ; ಆದರೆ ನೀವು--ಯಾವದರಲ್ಲಿ ನಿನ್ನದನ್ನು, ಕಳ್ಳತನ ಮಾಡಿದ್ದೇವೆಂದು ಅನ್ನುತ್ತೀರಿ? ದಶಮಭಾಗ ಮತ್ತು ಅರ್ಪಣೆಗಳನ್ನೇ.

ಮತ್ತಾಯ 23:13

ಆದರೆ ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೋ! ನೀವು ಮನುಷ್ಯರ ಮುಂದೆ ಪರ ಲೋಕರಾಜ್ಯವನ್ನು ಮುಚ್ಚುತ್ತೀರಿ. ನೀವಂತೂ ಪ್ರವೇಶಿ ಸುವದಿಲ್ಲ, ಪ್ರವೇಶಿಸುವವರನ್ನೂ ನೀವು ಒಳಗೆ ಹೋಗಗೊಡಿಸುವದಿಲ್ಲ.

ಮತ್ತಾಯ 23:23

ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೋ! ನೀವು ಮರುಗ ಸೋಪು ಜೀರಿಗೆ ಗಳಲ್ಲಿ ದಶಮ ಭಾಗವನ್ನು ಸಲ್ಲಿಸುತ್ತೀರಿ. ಆದರೆ ನ್ಯಾಯ ಪ್ರಮಾಣದ ತೀರ್ಪು ಕರುಣೆ ನಂಬಿಕೆ ಎಂಬ ಈ ಪ್ರಾಮುಖ್ಯವಾದವುಗಳನ್ನು ಬಿಟ್ಟುಬಿಟ್ಟಿದ್ದೀರಿ. ಇವುಗ ಳೊಂದಿಗೆ ಆ ಬೇರೆಯವುಗಳನೂ

ಮತ್ತಾಯ 23:27

ಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೋ! ಯಾಕಂದರೆ ನೀವು ಸುಣ್ಣಾ ಹಚ್ಚಿದ ಸಮಾಧಿ ಗಳಿಗೆ ಹೋಲಿಕೆಯಾಗಿದ್ದೀರಿ. ಅವು ಹೊರಗೆ ನಿಜಕ್ಕೂ ಅಂದವಾಗಿ ಕಾಣುತ್ತವೆ; ಆದರೆ ಒಳಗೆ ಸತ್ತವರ ಎಲುಬು ಗಳಿಂದಲೂ ಎಲ್ಲಾ ಅಶುದ್ಧತೆಯಿಂದಲೂ ತುಂಬಿರು ತ್ತವೆ.

ಲೂಕ 18:12

ನಾನು ವಾರದಲ್ಲಿ ಎರಡು ಸಾರಿ ಉಪವಾಸ ಮಾಡುತ್ತೇನೆ; ನನಗಿರುವದೆ ಲ್ಲವುಗಳಲ್ಲಿ ದಶಾಂಶ ಕೊಡುತ್ತೇನೆ ಎಂದು ಹೇಳಿದನು.

ಯೋಹಾನ 5:42

ಆದರೆ ನಾನು ನಿಮ್ಮನ್ನು ಬಲ್ಲೆನು, ನಿಮ್ಮಲ್ಲಿ ದೇವರ ಪ್ರೀತಿ ಇಲ್ಲ.

ತೀತ 2:11

ಯಾಕಂದರೆ ಎಲ್ಲಾ ಮನುಷ್ಯರಿಗೆ ರಕ್ಷಣೆಯನ್ನುಂಟು ಮಾಡುವ ದೇವರ ಕೃಪೆಯು ಪ್ರತ್ಯಕ್ಷವಾಯಿತು.

1 ಯೋಹಾನ 4:20

ಒಬ್ಬನು--ನಾನು ದೇವರನ್ನು ಪ್ರೀತಿಸುತ್ತೇನೆ ಎಂದು ಹೇಳಿ ತನ್ನ ಸಹೋದರನನ್ನು ಹಗೆ ಮಾಡಿದರೆ ಅವನು ಸುಳ್ಳುಗಾರನಾಗಿದ್ದಾನೆ. ಯಾಕಂದರೆ ತಾನು ಕಾಣುವ ಸಹೋದರನನ್ನು ಪ್ರೀತಿಸದವನು ಕಾಣದಿರುವ ದೇವರನ್ನು ಅವನು ಹೇಗೆ ಪ್ರೀತಿಸಾನು?ದೇವರನ್ನು ಪ್ರೀತಿಸುವವನು ತನ್ನ ಸಹೋದರನನ್ನೂ ಪ್ರೀತಿಸಬೇಕೆಂಬ ಈ ಆಜ್ಞೆ ಯನ್ನು ನಾವು ಆತನಿಂದ ಹೊಂದಿದ್ದೇವೆ.

Interlinear

Choose Theme