ನಾನು ನಿಮಗೆ ಹೇಳುವದೇನಂ ದರೆ--ಬೇಡಿಕೊಳ್ಳಿರಿ, ನಿಮಗೆ ಕೊಡಲ್ಪಡುವದು; ಹುಡುಕಿರಿ, ನೀವು ಕಂಡುಕೊಳ್ಳುವಿರಿ; ತಟ್ಟಿರಿ, ನಿಮಗೆ ತೆರೆಯಲ್ಪಡುವದು.
Cross references
ಒಂದ ನ್ನೇ ಕರ್ತನಿಂದ ಬಯಸಿದೆನು, ಅದನ್ನೇ ಹುಡುಕುವೆನು; ಕರ್ತನ ರಮ್ಯತೆಯನ್ನು ದೃಷ್ಟಿಸುವದೂ ಆತನ ಮಂದಿರ ದಲ್ಲಿ ವಿಚಾರಿಸುವದೂ ನನ್ನ ಜೀವನದ ದಿನಗಳಲ್ಲೆಲ್ಲಾ ಕರ್ತನ ಆಲಯದಲ್ಲಿ ವಾಸಮಾಡುವದೂ ಆಗಿದೆ.
ನೀನು--ನನ್ನ ಮುಖವನ್ನು ನೀವು ಹುಡುಕಿರಿ ಎಂದು ಹೇಳಿದಿಯಲ್ಲಾ. ಕರ್ತನೇ, ನಿನ್ನ ಮುಖವನ್ನು ಹುಡು ಕುವೆನು ಎಂದು ನನ್ನ ಹೃದಯವು ನಿನಗೆ ಹೇಳಿತು.
ನಾನು ಕರ್ತನನ್ನು ಹುಡು ಕಿದೆನು; ಆಗ ಆತನು ನನಗೆ ಉತ್ತರಕೊಟ್ಟು ನನ್ನ ಸಕಲ ಭೀತಿಗಳಿಂದ ನನ್ನನ್ನು ಬಿಡಿಸಿದನು.
ಪ್ರಾಯದ ಸಿಂಹಗಳು ಕೊರತೆಯಾಗಿ ಹಸಿಯುತ್ತವೆ; ಆದರೆ ಕರ್ತನನ್ನು ಹುಡುಕುವವರು ಯಾವ ಒಳ್ಳೆಯ ದಕ್ಕಾದರೂ ಕೊರತೆ ಪಡುವದಿಲ್ಲ.
ಇಕ್ಕಟ್ಟಿನ ದಿವಸದಲ್ಲಿ ನನ್ನನ್ನು ಕರೆ; ನಾನು ನಿನ್ನನ್ನು ತಪ್ಪಿಸಿಬಿಡುವೆನು; ಆಗ ನನ್ನನ್ನು ಘನಪಡಿಸುವಿ.
ಆತನ ಪರಿಶುದ್ಧ ನಾಮದಲ್ಲಿ ಹೊಗಳಿಕೊಳ್ಳಿರಿ; ಕರ್ತನನ್ನು ಹುಡುಕುವವರ ಹೃದಯವು ಸಂತೋಷಿಸಲಿ.
ಇಕ್ಕಟ್ಟಿನೊಳಗಿಂದ ಕರ್ತನಿಗೆ ಕೂಗಿದೆನು; ಕರ್ತನು ಉತ್ತರ ಕೊಟ್ಟು ನನ್ನನ್ನು ವಿಶಾಲ ಸ್ಥಳದಲ್ಲಿ ನಿಲ್ಲಿಸಿ ದನು.
ರಾತ್ರಿಯಲ್ಲಿ ನನ್ನ ಹಾಸಿಗೆಯ ಮೇಲೆ ನನ್ನ ಪ್ರಾಣ ಪ್ರಿಯನನ್ನು ಹುಡುಕಿದೆನು; ಅವನನ್ನು ಹುಡುಕಿದೆನು, ಆದರೆ ಕಾಣದೆಹೋದೆನು.
ನಾನು ನನ್ನ ಪ್ರಿಯನಿಗೆ ಕದತೆರೆದೆನು; ಆದರೆ ನನ್ನ ಪ್ರಿಯನು ಹಿಂದಿರುಗಿ ಹೋಗಿದ್ದನು. ಅವನು ಮಾತನಾಡಿದಾಗ ನನ್ನ ಪ್ರಾಣವು ಸತ್ತಂತಿತ್ತು; ಅವನನ್ನು ಹುಡುಕಿದೆನು; ಸಿಕ್ಕದೆ ಹೋದನು; ಅವನನ್ನು ಕರೆದೆನು; ಪ್ರತ್ಯುತ್ತರ ಕೊಡದೆ ಹೋದನು.
ಭೂಮಿಯ ಕತ್ತಲಾದ ಸ್ಥಳದಲ್ಲಿ ರಹಸ್ಯವಾಗಿ ನಾನು ಮಾತನಾಡಲಿಲ್ಲ; ವ್ಯರ್ಥವಾಗಿ ನನ್ನನ್ನು ಹುಡುಕಿರಿ ಎಂದು ಯಾಕೋಬನ ವಂಶ ದವರಿಗೆ ನಾನು ಹೇಳಲಿಲ್ಲ, ಕರ್ತನಾದ ನಾನೇ ನೀತಿ ಯನ್ನು ಮಾತನಾಡಿ, ಯಥಾರ್ಥವಾದವುಗಳನ್ನೇ ತಿಳಿಸುತ್ತೇನೆ.
ಕರ್ತನು ಸಿಕ್ಕುವ ಕಾಲದಲ್ಲಿ ಆತನನ್ನು ಹುಡುಕಿರಿ; ಆತನು ಸವಿಾಪವಾಗಿರುವಾಗಲೇ ಆತನನ್ನು ಕರೆಯಿರಿ.
ಕರ್ತನು ಹೀಗೆ ಹೇಳುತ್ತಾನೆ--ನಿನ್ನ ಗಾಯವು ಗುಣಹೊಂದದು ನಿನ್ನ ಬಾಸುಂಡೆಯು ಅಘೋರ ವಾದದ್ದು.
ನೀನು ಅವನ ಕೈಯೊಳಗಿಂದ ತಪ್ಪಿಸಿಕೊಳ್ಳು ವದಿಲ್ಲ; ಆದರೆ ನಿಶ್ಚಯವಾಗಿ ಹಿಡಿಯಲ್ಪಟ್ಟು, ಅವನ ಕೈಯಲ್ಲಿ ಒಪ್ಪಿಸಲ್ಪಡುವಿ; ನಿನ್ನ ಕಣ್ಣುಗಳು ಬಾಬೆಲಿನ ಅರಸನ ಕಣ್ಣುಗಳನ್ನು ನೋಡುವವು, ಅವನು ಎದುರೆ ದುರಾಗಿ ಸಾಕ್ಷಾತ್ತಾಗಿ ನಿನ್ನ ಸಂಗಡ ಮಾತನಾಡು ವನು; ನೀನು ಬಾಬೆಲಿಗೆ ಹೋಗುವಿ.
ಉಪವಾಸದಿಂದ ಗೋಣಿತಟ್ಟನ್ನು ಸುತ್ತಿಕೊಂಡು, ಬೂದಿಯನ್ನು ಬಳಿದು ಕೊಂಡು, ದೇವರಾದ ಕರ್ತನನ್ನು ಹುಡುಕುವದಕ್ಕಾಗಿ ಪ್ರಾರ್ಥನೆಗಳಿಂದಲೂ ವಿಜ್ಞಾಪನೆ ಗಳಿಂದಲೂ ಆತನ ಕಡೆಗೆ ನನ್ನ ಮುಖವನ್ನು ತಿರುಗಿ ಸಿದೆನು.
ಕರ್ತನು ಇಸ್ರಾಯೇಲಿನ ಮನೆಯವರಿಗೆ ಹೀಗೆ ಹೇಳುತ್ತಾನೆ--ನೀವು ನನ್ನನ್ನು ಹುಡುಕಿ ಜೀವಿಸಿರಿ.
ಆದರೂ ನಾನು ನಿಮಗೆ ಹೇಳುವದೇನಂದರೆ-- ಸೊಲೊಮೋನನು ಸಹ ತನ್ನ ಎಲ್ಲಾ ವೈಭವದಲ್ಲಿಯೂ ಇವುಗಳಲ್ಲಿ ಒಂದರಂತೆಯಾದರೂ ಧರಿಸಿರಲಿಲ್ಲ.
ಬೇಡಿಕೊಳ್ಳಿರಿ, ಅದು ನಿಮಗೆ ಕೊಡಲ್ಪಡುವದು; ಹುಡುಕಿರಿ, ನಿಮಗೆ ಸಿಕ್ಕುವದು; ತಟ್ಟಿರಿ, ಅದು ನಿಮಗೆ ತೆರೆಯಲ್ಪಡುವದು.
ನೀವು ನಂಬುವವ ರಾಗಿ ಪ್ರಾರ್ಥನೆಯಲ್ಲಿ ಏನೇನೂ ಕೇಳುವಿರೋ ಅವುಗಳನ್ನೆಲ್ಲಾ ಹೊಂದುವಿರಿ ಅಂದನು.
ಈ ಇಬ್ಬರಲ್ಲಿ ಯಾವನು ತನ್ನ ತಂದೆಯ ಇಷ್ಟದಂತೆ ಮಾಡಿದನು ಎಂದು ಕೇಳಲು ಅವರು ಆತನಿಗೆ--ಮೊದಲನೆಯವನು ಅಂದರು. ಆಗ ಯೇಸು ಅವರಿಗೆ --ಸುಂಕದವರೂ ಸೂಳೆಯರೂ ನಿಮಗಿಂತ ಮೊದಲು ದೇವರರಾಜ್ಯದೊಳಗೆ ಸೇರುವರೆಂದು ನಿಮಗೆ ನಿಜವಾಗಿ ಹೇಳುತ್ತೇನೆ.
ಆದ ಕಾರಣ ನಾನು ನಿಮಗೆ ಹೇಳುವದೇನಂದರೆ--ನೀವು ಪ್ರಾರ್ಥನೆ ಮಾಡುವಾಗ ಯಾವವುಗಳನ್ನು ಆಶಿಸು ತ್ತೀರೋ ಅವು ನಿಮಗೆ ಸಿಕ್ಕುವವೆಂದು ನಂಬಿರಿ; ಮತ್ತು ಅವುಗಳನ್ನು ನೀವು ಹೊಂದುವಿರಿ.
ನಿಮಗೆ ಹೇಳುವದನ್ನು ನಾನು ಎಲ್ಲರಿಗೂ ಹೇಳು ತ್ತೇನೆ--ಎಚ್ಚರವಾಗಿರ್ರಿ ಅಂದನು.
ಇಕ್ಕಟ್ಟಾದ ಬಾಗಲಿನಿಂದ ಒಳಗೆ ಪ್ರವೇಶಿಸುವದಕ್ಕೆ ಪ್ರಯಾಸಪಡಿರಿ; ಯಾಕಂ ದರೆ ಅನೇಕರು ಒಳಗೆ ಪ್ರವೇಶಿಸುವದಕ್ಕೆ ಪ್ರಯತ್ನಿಸಿ ದರೂ ಆಗುವದಿಲ್ಲ ಎಂದು ನಾನು ನಿಮಗೆ ಹೇಳು ತ್ತೇನೆ.
ಫಿಲ್ಫಿಪನು ನತಾನಯೇಲನನ್ನು ಕಂಡು ಅವನಿಗೆ--ನ್ಯಾಯಪ್ರಮಾಣದಲ್ಲಿ ಮೋಶೆಯು ಮತ್ತು ಪ್ರವಾದಿಗಳು ಯಾವಾತನ ವಿಷಯವಾಗಿ ಬರೆದರೋ ಆತನನ್ನು ನಾವು ಕಂಡುಕೊಂಡೆವು; ಆತನು ಯೋಸೇ ಫನ ಮಗನಾದ ನಜರೇತಿನ ಯೇಸುವು ಅಂದನು.
ಯೇಸು ಪ್ರತ್ಯುತ್ತರವಾಗಿ ಆಕೆಗೆ--ದೇವರ ದಾನವೇನೆಂಬದೂ ಮತ್ತು--ನನಗೆ ಕುಡಿಯುವದಕ್ಕೆ ಕೊಡು ಎಂದು ನಿನ್ನನ್ನು ಕೇಳಿದಾತನು ಯಾರೆಂಬದೂ ನಿನಗೆ ತಿಳಿದಿದ್ದರೆ ನೀನು ಆತನನ್ನು ಕೇಳುತ್ತಿದ್ದಿ, ಆತನು ನಿನಗೆ ಜೀವಕರವಾದ ನೀರನ್ನು ಕೊಡುತ್ತಿದ್ದನು ಎಂದು ಹೇಳಿದನು.
ನನ್ನ ಹೆಸರಿನಲ್ಲಿ ನೀವು ಏನೇನು ಬೇಡಿಕೊಳ್ಳುವಿರೋ ಅದನ್ನು ನಾನು ಮಾಡುವೆನು. ಹೀಗೆ ಮಗನಲ್ಲಿ ತಂದೆಯು ಮಹಿಮೆ ಹೊಂದುವನು.
ನೀವು ನನ್ನಲ್ಲಿಯೂ ನನ್ನ ವಾಕ್ಯಗಳು ನಿಮ್ಮಲ್ಲಿಯೂ ನೆಲೆಗೊಂಡಿದ್ದರೆ ನಿಮಗೆ ಬೇಕಾದದ್ದನ್ನು ಬೇಡಿಕೊಳ್ಳಿರಿ, ನಿಮಗೆ ಅದು ದೊರೆ ಯುವದು.
ನೀವು ನನ್ನನ್ನು ಆರಿಸಿಕೊಂಡಿಲ್ಲ; ಆದರೆ ನಾನು ನಿಮ್ಮನ್ನು ಆರಿಸಿ ಕೊಂಡು, ನೀವು ಹೋಗಿ ಫಲಕೊಡುವಂತೆಯೂ ನಿಮ್ಮ ಫಲವು ನೆಲೆಗೊಂಡಿರುವಂತೆಯೂ ನಿಮ್ಮನ್ನು ನೇಮಿಸಿದ್ದೇನೆ. ಆದಕಾರಣ ನೀವು ನನ್ನ ಹೆಸರಿನಲ್ಲಿ ತಂದೆಯನ್ನು ಏನು ಕೇಳಿಕೊಂಡರೂ ಆತನು ಅದನ್ನು ನಿಮಗೆ ಕೊಡುವನು.
ಆ ದಿನದಲ್ಲಿ ನೀವು ನನ್ನನ್ನು ಏನೂ ಕೇಳುವದಿಲ್ಲ. ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ--ನೀವು ನನ್ನ ಹೆಸರಿನಲ್ಲಿ ತಂದೆಯನ್ನು ಏನು ಕೇಳಿಕೊಂಡರೂ ಅದನ್ನು ಆತನು ನಿಮಗೆ ಕೊಡುವನು.
ಅವನು ಆ ದೂತನನ್ನು ದೃಷ್ಟಿಸಿ ನೋಡಿ ಭಯಹಿಡಿದವನಾಗಿ--ಕರ್ತನೇ, ಇದೇನು ಎಂದು ಕೇಳಲು ದೂತನು ಅವನಿಗೆ--ನಿನ್ನ ಪ್ರಾರ್ಥನೆಗಳೂ ನಿನ್ನ ದಾನಗಳೂ ದೇವರ ಮುಂದೆ ಜ್ಞಾಪಕಾರ್ಥವಾಗಿ ಮೇಲಕ್ಕೇರಿ ಬಂದವು.
ಯಾರು ಒಳ್ಳೆಯದನ್ನು ಮಾಡುವದರಲ್ಲಿ ತಾಳ್ಮೆಯಿಂದಿದ್ದು ಮಹಿಮೆ ಮಾನ ಮತ್ತು ನಿರ್ಲಯತ್ವವನ್ನು ಹುಡುಕು ತ್ತಾರೋ ಅವರಿಗೆ ನಿತ್ಯಜೀವವನ್ನೂ
(ಆತನು--ಅಂಗೀಕಾರದ ಸಮಯದಲ್ಲಿ ನಾನು ನಿನ್ನ ಮನವಿಯನ್ನು ಕೇಳಿದೆನು, ರಕ್ಷಣೆಯ ದಿನದಲ್ಲಿ ನಾನು ನಿನಗೆ ಸಹಾಯಮಾಡಿದೆನು ಎಂದು ಹೇಳುತ್ತಾನೆ; ಇಗೋ, ಈಗಲೇ ಆ ಅಂಗೀಕಾರದ ಸಮಯ; ಇಗೋ, ಈಗಲೇ ಆ ರಕ್ಷಣೆಯ ದಿನ).
ಈ ವಿಷಯದಲ್ಲಿ ಅದು ನನ್ನನ್ನು ಬಿಟ್ಟುಹೋಗಬೇಕೆಂದು ಮೂರು ಸಾರಿ ಕರ್ತನನ್ನು ಬೇಡಿಕೊಂಡೆನು.
ಆದದರಿಂದ ನಾವು ಕರುಣೆಯನ್ನು ಹೊಂದುವಂತೆಯೂ ಆತನ ಕೃಪೆಯಿಂದ ಸಮಯೋಚಿತವಾದ ಸಹಾಯವು ನಮಗೆ ದೊರೆಯುವಂತೆಯೂ ಧೈರ್ಯದಿಂದ ಕೃಪಾ ಸಿಂಹಾಸನದ ಬಳಿಗೆ ಬರೋಣ.
ಆದರೆ ನಂಬಿಕೆಯಿಲ್ಲದೆ ದೇವರನ್ನು ಮೆಚ್ಚಿಸುವದು ಅಸಾಧ್ಯ; ಯಾಕಂದರೆ ದೇವರ ಬಳಿಗೆ ಬರುವವನು ದೇವರು ಇದ್ದಾನೆ, ತನ್ನನ್ನು ಜಾಗ್ರತೆಯಾಗಿ ಹುಡುಕು ವವನಿಗೆ ಪ್ರತಿಫಲವನ್ನು ಕೊಡುತ್ತಾನೆ ಎಂದು ನಂಬು ವದು ಅವಶ್ಯ.
ನಿಮ್ಮಲ್ಲಿ ಯಾವನಿಗಾದರೂ ಜ್ಞಾನ ಕಡಿಮೆ ಯಾಗಿದ್ದರೆ ಅವನು ದೇವರನ್ನು ಕೇಳಿಕೊಳ್ಳಲಿ, ಅದು ಅವನಿಗೆ ದೊರಕುವದು; ದೇವರು ಹಂಗಿಸದೆ ಎಲ್ಲ ರಿಗೂ ಉದಾರ ಮನಸ್ಸಿನಿಂದ ಕೊಡುವಾತನಾಗಿದ್ದಾನೆ.
ನಂಬಿಕೆಯಿಂದ ಮಾಡಿದ ಪ್ರಾರ್ಥನೆ ಯು ರೋಗಿಯನ್ನು ರಕ್ಷಿಸುವದು; ಕರ್ತನು ಅವನನ್ನು ಎಬ್ಬಿಸುವನು, ಪಾಪಗಳನ್ನು ಮಾಡಿದವನಾಗಿದ್ದರೆ ಅವು ಕ್ಷಮಿಸಲ್ಪಡುವವು.
ನಾವು ಏನೇನು ಬೇಡಿಕೊಳ್ಳುತ್ತೇವೋ ಆತನಿಂದ ನಾವು ಹೊಂದಿಕೊಳ್ಳುತ್ತೇವೆ. ಯಾಕಂದರೆ ನಾವು ಆತನ ಆಜ್ಞೆಗಳನ್ನು ಕೈಕೊಂಡು ಆತನ ದೃಷ್ಟಿಯಲ್ಲಿ ಮೆಚ್ಚಿಕೆಯಾದವುಗಳನ್ನು ಮಾಡುವವರಾಗಿದ್ದೇವೆ.
ನಾವು ಆತನ ಚಿತ್ತಾನುಸಾರ ವಾಗಿ ಏನಾದರೂ ಬೇಡಿಕೊಂಡರೆ ಆತನು ಕೇಳು ತ್ತಾನೆಂಬ ಭರವಸವು ಆತನಲ್ಲಿ ನಮಗುಂಟು.
ಆದರೆ ನಿಮಗೂ ಥುವತೈರದಲ್ಲಿರುವ ಮಿಕ್ಕಾದವ ರಿಗೂ ನಾನು ಹೇಳುವದೇನಂದರೆ, ಅವರು ಹೇಳಿಕೊ ಳ್ಳುವಂಥ ಸೈತಾನನ ಅಗಾಧವಾದ ಬೋಧನೆಯು ಯಾರಾರಲ್ಲಿ ಇರುವದಿಲ್ಲವೋ ಯಾರು ಅದನ್ನು ಅರಿ ಯದೆ ಇದ್ದಾರೋ ಅವರ ಮೇಲೆ ನಾನು ಬೇರೆ ಯಾವ ಭಾರವನ್ನೂ ಹಾಕುವದಿಲ್ಲ.