ಅಷ್ಟರಲ್ಲಿ ಅಸಂಖ್ಯವಾದ ಜನಸಮೂಹವು ಒಬ್ಬರ ಮೇಲೊಬ್ಬರು ತುಳಿದಾಡುವಷ್ಟು ಒಟ್ಟುಗೂಡಿ ಬಂದಿರಲಾಗಿ ಆತನು ಎಲ್ಲಾದಕ್ಕಿಂತ ಮೊದಲು ತನ್ನ ಶಿಷ್ಯರಿಗೆ--ಫರಿಸಾಯರ ಕಪಟವೆಂಬ ಹುಳಿಯ ವಿಷಯದಲ್ಲಿ ನೀವು ಎಚ್ಚರವಾಗಿರ್ರಿ.
Cross references
ಅರಸನಿಗೆ ಹಸ್ತಕನಾದ ಆ ಅಧಿಕಾರಿಯನ್ನು ಅರಸನು ಪಟ್ಟಣದ ಬಾಗಲಿನ ಕಾವಲಿಗೆ ನೇಮಿಸಿದ್ದನು. ಅರಸನು ದೇವರ ಮನುಷ್ಯನ ಬಳಿಗೆ ಬಂದಾಗ ದೇವರ ಮನು ಷ್ಯನು ಹೇಳಿದ್ದ ಪ್ರಕಾರವೇ ಜನರು ಅವನನ್ನು ಪಟ್ಟ ಣದ ಬಾಗಲಲ್ಲಿ ತುಳಿದು ಹಾಕಿದ್ದರಿಂದ ಅವನು ಸತ್ತುಹೋದನು.
ಏನಂದರೆ, ದುಷ್ಟರ ಜಯವು ಸ್ವಲ್ಪ ಕಾಲದ್ದೂ ಕಪಟಿಗಳ ಸಂತೋಷವು ಕ್ಷಣ ಮಾತ್ರದ್ದೂ.
ದೇವರು ಕಪಟಿಯ ಪ್ರಾಣವನ್ನು ತಕ್ಕೊಂಡರೆ ಅವನು ಲಾಭ ಮಾಡುವದರಲ್ಲಿ ನಿರೀಕ್ಷೆ ಏನು?
ಹೃದಯದಲ್ಲಿ ಕಪಟ ಇರು ವವರು ಕೋಪವನ್ನು ಕೂಡಿಸುತ್ತಾರೆ. ಆತನು ಅವರನ್ನು ಬಂಧಿಸಿದರೆ ಅವರು ಮೊರೆಯಿಡುವದಿಲ್ಲ.
ಚೀಯೋನಿನಲ್ಲಿರುವ ಪಾಪಿಗಳು ಹೆದರುತ್ತಾರೆ. ಭಯವು ಕಪಟಿಗಳನ್ನು ಆಶ್ಚರ್ಯಕ್ಕೊಳಗಾಗಿ--ನಮ್ಮಲ್ಲಿ ಯಾರು ನುಂಗುವ ಅಗ್ನಿಯ ಸಂಗಡ ವಾಸಿಸಬಲ್ಲರು? ನಮ್ಮಲ್ಲಿ ಯಾರು ಸದಾ ಉರಿಯುವ ಜ್ವಾಲೆಗಳೊಡನೆ ತಂಗಿಯಾರು ಅಂದುಕೊಳ್ಳುವರು.
ಆಗ ಯೇಸು ಅವರಿಗೆ--ಫರಿಸಾಯರ ಮತ್ತು ಸದ್ದುಕಾಯರ ಹುಳಿಯ ವಿಷಯದಲ್ಲಿ ಎಚ್ಚರಿಕೆಯಿಂದ ಜಾಗರೂಕ ರಾಗಿರ್ರಿ ಎಂದು ಹೇಳಿದನು.
ಆತನು ಅವರಿಗೆ--ಫರಿಸಾಯರ ಹುಳಿಯ ವಿಷಯ ದಲ್ಲಿಯೂ ಹೆರೋದನ ಹುಳಿಯ ವಿಷಯದಲ್ಲಿಯೂ ನೀವು ಎಚ್ಚರಿಕೆಯಿಂದ ಇರ್ರಿ ಎಂದು ಖಂಡಿತವಾಗಿ ಹೇಳಿದನು.
ಇದಾದ ಮೇಲೆ ಆತನು ಗೆನೇಜರೆತ್ ಕೆರೆಯ ಬಳಿಯಲ್ಲಿ ನಿಂತುಕೊಂಡಿದ್ದಾಗ ಜನರು ದೇವರ ವಾಕ್ಯವನ್ನು ಕೇಳುವದಕ್ಕಾಗಿ ಆತನ ಮೇಲೆ ನೂಕಾಡುತ್ತಿದ್ದರು.
ಆದರೂ ಆತನ ಕೀರ್ತಿಯು ಇನ್ನೂ ಹೆಚ್ಚಾಗಿ ದೂರದವರೆಗೂ ಹರಡಿತು; ದೊಡ್ಡ ಸಮೂಹಗಳು ಆತನ ಉಪದೇಶವನ್ನು ಕೇಳುವದಕ್ಕೂ ತಮ್ಮ ರೋಗಗಳನ್ನು ಆತನಿಂದ ವಾಸಿಮಾಡಿಸಿಕೊಳ್ಳು ವದಕ್ಕೂ ಕೂಡಿ ಬಂದರು.
ಆತನು ಅವರೊಂದಿಗೆ ಕೆಳಗಿಳಿದು ಸಮ ಭೂಮಿಯ ಮೇಲೆ ನಿಂತಿದ್ದಾಗ ಆತನ ಶಿಷ್ಯರ ಗುಂಪು ಅಲ್ಲದೆ ಯೂದಾಯ ಯೆರೂಸಲೇಮಿನಿಂದಲೂ ತೂರ್ ಸೀದೋನಿನ ಸಮುದ್ರತೀರದಿಂದಲೂ ಆತನ ಉಪದೇಶವನ್ನು ಕೇಳುವದಕ್ಕೂ ತಮ್ಮ ರೋಗಗಳಿಂದ ಸ್ವಸ್ಥರಾಗುವದಕ್ಕೂ ಜನರು ದೊಡ್ಡ ಸಮೂಹವಾಗಿ ಬಂ
ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೊ! ಯಾಕಂದರೆ ನೀವು ಕಾಣಿಸದ ಸಮಾಧಿಗಳಂತೆ ಇದ್ದೀರಿ; ಅವುಗಳ ಮೇಲೆ ನಡೆದಾಡುವ ಮನುಷ್ಯರು ಅವುಗಳನ್ನು ಅರಿಯರು ಎಂದು ಹೇಳಿದನು.
ಕಪಟಿಗಳೇ, ಭೂಮ್ಯಾಕಾಶಗಳ ಭಾವವನ್ನು ಅರಿತು ಕೊಳ್ಳುತ್ತೀರಿ; ಆದರೆ ಈ ಕಾಲವನ್ನು ನೀವು ಅರಿತು ಕೊಳ್ಳದಿರುವದು ಹೇಗೆ?
ಅವರು ಅದನ್ನು ಕೇಳಿ ಕರ್ತನನ್ನು ಮಹಿಮೆಪಡಿಸಿ ಅವನಿಗೆ--ಸಹೋದರನೇ, ವಿಶ್ವಾಸಿ ಗಳಾದ ಯೆಹೂದ್ಯರು ಎಷ್ಟೋ ಸಾವಿರ ಮಂದಿ ಇದ್ದಾರೆಂಬದನ್ನು ನೀನು ನೋಡುತ್ತೀಯಲ್ಲಾ. ಅವರೆಲ್ಲರೂ ನ್ಯಾಯಪ್ರಮಾಣದ ವಿಷಯದಲ್ಲಿ ಅಭಿಮಾನವುಳ್ಳವರಾಗಿದ್ದಾರೆ.
ಆದದರಿಂದ ನೀವು ಹುಳಿ ಇಲ್ಲದ ವರಾದ ಕಾರಣ ಹೊಸ ಕಣಿಕವಾಗಿರುವಂತೆ ಆ ಹಳೇ ಹುಳಿಯನ್ನು ತೆಗೆದುಹಾಕಿರಿ. ಯಾಕಂದರೆ ನಮ್ಮ ಪಸ್ಕವಾಗಿರುವ ಕ್ರಿಸ್ತನೇ ನಮಗೋಸ್ಕರ ಯಜ್ಞಾರ್ಪಿತ ನಾಗಿದ್ದಾನೆ.
ನಾನು ಸಹ ಎಲ್ಲಾದಕ್ಕಿಂತಲೂ ಮೊದಲು ಹೊಂದಿದ್ದನ್ನು ನಿಮಗೆ ತಿಳಿಸಿದ್ದೇನೆ. ಅದೇನಂದರೆ, ಬರಹದ ಪ್ರಕಾರ ಕ್ರಿಸ್ತನು ನಮ್ಮ ಪಾಪಗಳಿಗಾಗಿ ಸತ್ತನು.
ಆದರೆ ಮೇಲಣಿಂದ ಬರುವ ಜ್ಞಾನವು ಮೊದಲು ನಿರ್ಮಲವಾದದ್ದು, ಆಮೇಲೆ ಸಮಾಧಾನಕರವಾದದ್ದು, ವಿನಯವುಳ್ಳದ್ದು, ಸುಲಭವಾಗಿ ಒಪ್ಪಿಕೊಳ್ಳುವಂಥದು, ಕರುಣೆಯಿಂದಲೂ ಒಳ್ಳೇ ಫಲಗಳಿಂದಲೂ ತುಂಬಿರುವಂಥದ್ದು ಆಗಿದೆ; ಅದರಲ್ಲಿ ಪಕ್ಷಪಾತವೂ ಕಪಟವೂ ಇಲ್ಲ.ಸಮಾಧಾನ ಪಡಿಸುವವರಿಗೆ ಸಮಾಧಾನದಲ್ಲಿ ನೀತಿಯ ಫಲವು ಬಿತ್ತಲ್ಪಡುತ್ತದೆ.
ಆದಕಾರಣ ಎಲ್ಲಾ ಕೆಟ್ಟತನವನ್ನೂ ಎಲ್ಲಾ ವಂಚನೆಯನ್ನೂ ಕಪಟವನ್ನೂ ಹೊಟ್ಟೇ ಕಿಚ್ಚನ್ನೂ ಎಲ್ಲಾ ಕೆಟ್ಟ ಮಾತುಗಳನ್ನೂ ವಿಸರ್ಜಿಸಿರಿ.