ಆದರೆ ದೇವರು ಅವನಿಗೆ--ಬುದ್ಧಿಹೀನನೇ, ಈ ರಾತ್ರಿಯೇ ನಿನ್ನ ಪ್ರಾಣವು ನಿನ್ನಿಂದ ಕೇಳಲ್ಪಡುವದು; ಆಗ ನೀನು ಕೂಡಿಸಿಕೊಂಡವುಗಳು ಯಾರಿಗಾಗುವವು ಎಂದು ಹೇಳಿದನು.
Cross references
ಮೋಶೆಯು ಆರೋನನಿಗೆ--ನೀನು ಇಸ್ರಾ ಯೇಲ್ ಮಕ್ಕಳ ಸಭೆಗೆಲ್ಲಾ--ನಿಮ್ಮ ಗುಣುಗುಟ್ಟುವಿಕೆ ಯನ್ನು ಕರ್ತನು ಕೇಳಿದ್ದರಿಂದ ನೀವು ಆತನ ಸವಿಾಪಕ್ಕೆ ಆತನ ಮುಂದೆ ಬನ್ನಿರಿ ಎಂದು ಹೇಳು ಅಂದನು.
ತರುವಾಯ ಅಬೀಗೈಲಳು ನಾಬಾಲನ ಬಳಿಗೆ ಬಂದಾಗ ಇಗೋ, ಅರಸನ ಔತಣಕ್ಕೆ ಸಮಾನವಾದ ಔತಣ ಅವನ ಮನೆಯಲ್ಲಿತ್ತು. ಅವನು ಬಹಳವಾಗಿ ಕುಡಿದದ್ದರಿಂದ ಅವನ ಹೃದಯವು ಅವನಲ್ಲಿ ಉಲ್ಲಾಸ ಗೊಂಡಿತ್ತು. ಆದಕಾರಣ ಅವಳು ಉದಯವಾಗುವ ವರೆಗೆ ಅವನಿಗೆ ಕಡಿಮೆಯಾದದ್ದನ್ನಾಗಲಿ ಹೆಚ್ಚಾದದ್ದ ನ್ನಾಗಲಿ ತಿಳಿಸಲಿಲ್ಲ.
ಆದರೆ ಅಬ್ಷಾಲೋಮನು ತನ್ನ ಸೇವಕರಿಗೆ--ನೀವು ನೋಡಿಕೊಳ್ಳಿರಿ; ಅಮ್ನೋನನ ಹೃದಯವು ದ್ರಾಕ್ಷಾರಸ ದಿಂದ ಸಂಭ್ರಮವಾಗಿರುವಾಗ ನಾನು ನಿಮಗೆ ಅಮ್ನೋನ ನನ್ನು ಹೊಡೆಯಿರಿ ಎಂದು ಹೇಳುತ್ತಲೇ ಅವನನ್ನು ಕೊಂದುಹಾಕಿರಿ; ಭಯಪಡಬೇಡಿರಿ ನಾನು ನಿಮಗೆ ಆಜ್ಞಾಪಿಸಿದ್ದೇನಲ್ಲಾ. ಬಲವಾಗಿರಿ; ಪರಾಕ್ರಮಿಗಳಾ ಗಿರ್ರಿ; ಎಂದು ಆಜ್ಞಾಪಿಸಿ ಹೇಳಿದನು.
ಆದರೆ ತಿರ್ಚದಲ್ಲಿ ತನ್ನ ಮನೆಯ ಉಗ್ರಾಣಿಕ ನಾದ ಅರ್ಚನ ಮನೆಯಲ್ಲಿ ಅವನು ಕುಡಿದು ಮತ್ತನಾಗಿ ತಿರ್ಚದಲ್ಲಿರುವಾಗ ಅರ್ಧ ರಥಗಳಿಗೆ ಅಧಿಪತಿಯಾಗಿ ರುವ ಅವನ ಸೇವಕನಾದ ಜಿಮ್ರಿ ಅವನಿಗೆ ವಿರೋಧ ವಾಗಿ ಒಳಸಂಚು ಮಾಡಿದನು.
ಹಾಮಾನನು ತನ್ನ ಐಶ್ವರ್ಯದ ಘನವನ್ನೂ ತನ್ನ ಮಕ್ಕಳ ಹೆಚ್ಚಳವನ್ನೂ ಅರಸನು ತನ್ನನ್ನು ಯಾವದರಲ್ಲಿ ಹೆಚ್ಚಿಸಿದ್ದಾನೋ ಅರಸನ ಪ್ರಭು ಗಳ ಮೇಲೆಯೂ ಸೇವಕರ ಮೇಲೆಯೂ ತನ್ನನ್ನು ಹೇಗೆ ಎತ್ತಿದ್ದಾನೆಂದೂ ಎಲ್ಲವನ್ನೂ ಅವರಿಗೆ ವಿವರ ವಾಗಿ ಹೇಳಿದನು.
ಅದೇ ದಿನದಲ್ಲಿ ಅರಸನಾದ ಅಹಷ್ವೇರೋಷನು ಯೆಹೂದ್ಯರ ವೈರಿಯಾದ ಹಾಮಾನನ ಮನೆಯನ್ನು ರಾಣಿಯಾದ ಎಸ್ತೇರಳಿಗೆ ಕೊಟ್ಟನು. ಇದಲ್ಲದೆ ಮೊರ್ದೆಕೈ ಅರಸನ ಬಳಿಗೆ ಬಂದನು; ಅವನು ತನಗೆ ಏನಾಗಬೇಕೋ ಅದನ್ನು ಎಸ್ತೇರಳು ತಿಳಿಸಿದ್ದಳು.
ನಿಶ್ಚಯವಾಗಿ ಅವನು ತನ್ನ ಹೊಟ್ಟೆಯಲ್ಲಿ ಸೌಖ್ಯ ತಿಳುಕೊಳ್ಳುವದಿಲ್ಲ; ತನಗೆ ಇಷ್ಟವಾದದರಲ್ಲಿ ಏನೂ ಉಳಿಸಿಕೊಳ್ಳುವದಿಲ್ಲ.
ದೇವರು ಕಪಟಿಯ ಪ್ರಾಣವನ್ನು ತಕ್ಕೊಂಡರೆ ಅವನು ಲಾಭ ಮಾಡುವದರಲ್ಲಿ ನಿರೀಕ್ಷೆ ಏನು?
ಅವನು ಧೂಳಿನಂತೆ ಬೆಳ್ಳಿಯನ್ನು ಕೂಡಿಸಿಟ್ಟು ಮಣ್ಣಿನಂತೆ ವಸ್ತ್ರಗಳನ್ನು ಸಿದ್ಧಮಾಡಿ ಕೊಂಡಾಗ್ಯೂ
ನಿಶ್ಚಯವಾಗಿ ಮನುಷ್ಯನು ವ್ಯರ್ಥವಾದ ತೋರಿಕೆ ಯಲ್ಲಿ ನಡೆದುಕೊಳ್ಳುತ್ತಾನೆ; ನಿಶ್ಚಯವಾಗಿ ವ್ಯರ್ಥ ವಾದ ಗದ್ದಲ ಮಾಡುತ್ತಾರೆ. ಅವನು ಐಶ್ವರ್ಯವನ್ನು ಕುಪ್ಪೆ ಮಾಡುತ್ತಾನೆ; ಆದರೆ ಅದನ್ನು ಕೂಡಿಸುವವರು ಯಾರೋ ಅರಿಯನು.
ಅವನು ಸಾಯುವಾಗ ಏನೂ ತೆಗೆದುಕೊಂಡು ಹೋಗನು; ಅವನ ಘನವು ಅವನ ಹಿಂದೆ ಇಳಿದು ಹೋಗದು.
ಆದದರಿಂದ ದೇವರು ಅದೇ ರೀತಿಯಲ್ಲಿ ನಿನ್ನನ್ನು ಸದಾಕಾಲಕ್ಕೂ ನಾಶಮಾಡಿ, ತೆಗೆದುಬಿಡುವನು. ನಿನ್ನ ವಾಸಸ್ಥಳದಿಂದ ಕಿತ್ತುಹಾಕುವನು; ಜೀವಿತರ ದೇಶ ದೊಳಗಿಂದ ನಿನ್ನನ್ನು ಬೇರುಸಹಿತ ಕೀಳುವನು. ಸೆಲಾ.
ಕ್ಷಣಮಾತ್ರದಲ್ಲಿ ಹೀಗೆ ನಾಶನಕ್ಕೆ ಅವರನ್ನು ಬರಮಾಡಿದಿ. ಅವರು ದಿಗಿಲುಗಳಿಂದ ಸಂಪೂರ್ಣವಾಗಿ ನಾಶವಾಗಿದ್ದಾರೆ.
ಅವರು ತಮ್ಮ ಆಶೆಯನ್ನು ಬಿಡದೆ ಅವರ ಊಟವು ಇನ್ನೂ ಅವರ ಬಾಯಿಯಲ್ಲಿ ಇರುವಾಗ
ಉಗ್ರತೆಯ ದಿನದಲ್ಲಿ ಐಶ್ವರ್ಯವು ಲಾಭಕರವಾಗುವದಿಲ್ಲ; ನೀತಿಯು ಮರಣ ದಿಂದ ಬಿಡಿಸುತ್ತದೆ.
ಬಡ್ಡಿಯಿಂದಲೂ ಅನ್ಯಾಯದ ಲಾಭದಿಂದಲೂ ತನ್ನ ಆಸ್ತಿಯನ್ನು ವೃದ್ಧಿಗೊಳಿಸುವವನು ಬಡವರ ಮೇಲೆ ದಯೆತೋರಿಸುವವನಿಗೆ ಅದನ್ನು ಕೂಡಿಸುವನು.
ಹೌದು, ಸೂರ್ಯನ ಕೆಳಗೆ ಪಟ್ಟ ನನ್ನ ಎಲ್ಲಾ ಪ್ರಯಾಸವನ್ನು ನಾನು ಹಗೆಮಾಡಿದೆನು; ನನ್ನ ತರು ವಾಯ ಬರುವ ಮನುಷ್ಯನಿಗೆ ನಾನು ಇದನ್ನೆಲ್ಲಾ ಬಿಟ್ಟುಬಿಡಬೇಕು.
ಆದರೆ ಕೆಟ್ಟ ಪ್ರಯಾ ಸದಿಂದ ಆ ಆಸ್ತಿಯು ನಾಶವಾಗುತ್ತದೆ; ಅವನು ಒಬ್ಬ ಮಗನನ್ನು ಪಡೆದಿದ್ದರೆ ಅವನ ಕೈಯಲ್ಲಿ ಏನೂ ಇರದು.
ಹೀಗಿರುವದರಿಂದ ಈಗ ಯೆಹೂದದ ಮನುಷ್ಯ ರಿಗೂ ಯೆರೂಸಲೇಮಿನ ನಿವಾಸಿಗಳಿಗೂ ನೀನು ಹೇಳಬೇಕಾದದ್ದೇನಂದರೆ, ಕರ್ತನು ಹೀಗೆ ಹೇಳುತ್ತಾನೆ --ಇಗೋ, ನಾನು ನಿಮಗೆ ವಿರೋಧವಾಗಿ ಕೆಟ್ಟದ್ದನ್ನು ಕಲ್ಪಿಸುತ್ತಾ ಇದ್ದೇನೆ; ನಿಮಗೆ ವಿರೋಧವಾಗಿ ಉಪಾಯವನ್ನು ಆಲೋಚಿಸುತ್ತಾ ಇದ್ದೇನೆ; ನಿಮ್ಮ ನಿಮ್ಮ ಕೆಟ್ಟ ಮಾರ್ಗಗಳನ್ನು ಬಿಟ್ಟು ಹಿಂತಿರುಗಿರಿ, ನಿಮ್ಮ ಮಾರ್ಗಗಳನ್ನೂ ಕ್ರಿಯೆಗಳನ್ನೂ ಒಳ್ಳೇದಾಗ ಮಾಡಿರಿ ಎಂಬದು.
ಅರಸನಾದ ಬೆಲ್ಯಚ್ಚರನು ತನ್ನ ಪ್ರಭುಗಳಲ್ಲಿ ಸಾವಿರ ಮಂದಿಗೆ ದೊಡ್ಡ ಔತಣವನ್ನು ಮಾಡಿಸಿ, ಆ ಸಾವಿರ ಮಂದಿಯ ಮುಂದೆ ಅವನು ದ್ರಾಕ್ಷಾರಸವನ್ನು ಕುಡಿದನು.
ಆ ಬರಹವು ಏನಂದರೆ ಮೆನೇ ಮೆನೇ ತೇಕಲ್ ಉಫ ರ್ಸಿನ್,
ಅವರು ಮುಳ್ಳುಗಳ ಹಾಗೆ ಹೊಂದಿಕೊಂಡಿದ್ದರೂ ತಮ್ಮ ದ್ರಾಕ್ಷಾರಸದಿಂದ ಮತ್ತ ರಾಗಿದ್ದರೂ ಪೂರ್ಣವಾಗಿ ಒಣಗಿದ ಕೊಳೆಯಂತೆ ನಾಶವಾಗುವರು.
ಆದರೆ ಆ ಕೆಟ್ಟ ಸೇವಕನು ತನ್ನ ಹೃದಯದಲ್ಲಿ--ನನ್ನ ಯಜಮಾನನು ಬರುವದಕ್ಕೆ ತಡಮಾಡುತ್ತಾನೆ ಎಂದು ಅಂದುಕೊಂಡು
ಮೂರ್ಖರೇ, ಹೊರ ಭಾಗವನ್ನು ಮಾಡಿದಾತನು ಒಳಭಾಗವನ್ನು ಸಹ ಮಾಡಿದನಲ್ಲವೇ?
ಇದಾದ ಮೇಲೆ ಆ ಭಿಕ್ಷುಕನು ಸತ್ತನು; ದೂತರು ಅವನನ್ನು ಅಬ್ರಹಾಮನ ಎದೆಗೆ ತೆಗೆದುಕೊಂಡು ಹೋದರು; ಐಶ್ವರ್ಯವಂತನು ಸಹ ಸತ್ತನು; ಅವನನ್ನು ಹೂಣಿ ಟ್ಟರು.
ಆದರೆ--ಸಮಾಧಾನವಾಗಿಯೂ ಸುರಕ್ಷಿತವಾಗಿಯೂ ಇರುತ್ತೇ ವೆಂದು ಜನರು ಹೇಳುತ್ತಿರುವಾಗಲೇ ಅವರ ಮೇಲೆ ನಾಶನವು ಗರ್ಭಿಣಿಗೆ ಪ್ರಸವವೇದನೆ ಬರುವ ಪ್ರಕಾರ ಬರುವದು; ಅವರು ಹೇಗೂ ತಪ್ಪಿಸಿಕೊಳ್ಳಲಾರರು.
ನಾವು ಲೋಕದೊಳಗೆ ಏನೂ ತಕ್ಕೊಂಡು ಬರಲಿಲ್ಲವಷ್ಟೆ; ನಿಶ್ಚಯವಾಗಿ ಅದರೊಳಗಿಂದ ಏನೂ ತಕ್ಕೊಂಡು ಹೋಗಲಾರೆವು.
ನಾಳೆ ಏನಾಗುವದೋ ನಿಮಗೆ ತಿಳಿಯದು. ನಿಮ್ಮ ಜೀವ ಮಾನವು ಎಂಥದ್ದು? ಅದು ಸ್ವಲ್ಪ ಹೊತ್ತು ಕಾಣಿಸಿ ಕೊಂಡು ಆಮೇಲೆ ಕಾಣದೆ ಹೋಗುವ ಹಬೆಯಂತಿದೆ.