ಆದರೆ ನೀವು ದೇವರ ರಾಜ್ಯವನ್ನೇ ಹುಡುಕಿರಿ. ಆಗ ಇವೆಲ್ಲವುಗಳು ನಿಮಗೆ ಕೂಡಿಸಲ್ಪಡುವವು.
Cross references
ಆದದರಿಂದ ದೇವರು ಅವನಿಗೆ--ನೀನು ನಿನಗೋಸ್ಕರ ಹೆಚ್ಚಾದ ದಿವಸಗಳನ್ನು ಕೇಳದೆ ನಿನಗೋಸ್ಕರ ಐಶ್ವರ್ಯವನ್ನು ಕೇಳದೆ ನಿನ್ನ ಶತ್ರುಗಳ ಪ್ರಾಣವನ್ನು ಕೇಳದೆ ನ್ಯಾಯವನ್ನು ತಿಳಿಯಲು ನಿನಗೋಸ್ಕರ ಜ್ಞಾನವನ್ನು ಕೇಳಿದ್ದ ರಿಂದ
ಆತನ ಪರಿ ಶುದ್ಧರೇ, ನೀವು ಕರ್ತನಿಗೆ ಭಯಪಡಿರಿ; ಆತನಿಗೆ ಭಯಪಡುವವರಿಗೆ ಏನೂ ಕೊರತೆ ಇಲ್ಲ.
ಕರ್ತನಲ್ಲಿ ಭರವಸವಿಟ್ಟು ಒಳ್ಳೆಯದನ್ನು ಮಾಡು; ಆಗ ದೇಶದಲ್ಲಿ ವಾಸಮಾಡಿ ನಿಜವಾಗಿ ತೃಪ್ತಿ ಹೊಂದು ವಿ.
ವಿಪತ್ಕಾಲದಲ್ಲಿ ಅವರು ಆಶಾಭಂಗ ಪಡುವದಿಲ್ಲ; ಕ್ಷಾಮದ ದಿವಸಗಳಲ್ಲಿ ತೃಪ್ತಿಪಡುವರು.
ನಾನು ಬಾಲಕನಾಗಿದ್ದೆನು, ಈಗ ಮುದುಕನಾಗಿದ್ದೇನೆ; ಆದರೆ ನೀತಿವಂತನು ಕೈಬಿಡಲ್ಪಟ್ಟದ್ದನ್ನೂ ಅವನ ಸಂತತಿಯು ರೊಟ್ಟಿಗಾಗಿ ಭಿಕ್ಷೆಬೇಡುವದನ್ನೂ ನಾನು ನೋಡಲಿಲ್ಲ.
ದೇವರಾದ ಕರ್ತನು ಸೂರ್ಯ ನೂ ಗುರಾಣಿಯೂ ಆಗಿದ್ದಾನೆ; ಕರ್ತನು ಕೃಪೆಯನ್ನೂ ಮಹಿಮೆಯನ್ನೂ ಕೊಡುತ್ತಾನೆ; ಸಂಪೂರ್ಣವಾಗಿ ನಡೆದುಕೊಳ್ಳುವವರಿಗೆ ಆತನು ಯಾವ ಒಳ್ಳೇದನ್ನು ಹಿಂದೆಗೆಯುವದಿಲ್ಲ.ಸೈನ್ಯಗಳ ಓ ಕರ್ತನೇ, ನಿನ್ನಲ್ಲಿ ಭರವಸವಿಡುವ ಮನುಷ್ಯನು ಧನ್ಯನು.
ಬಂಡೆಗಳ ಕೋಟೆಗಳು ಅವನಿಗೆ ಆಶ್ರಯವಾಗಿ ರುವವು. ರೊಟ್ಟಿಯು ಅವನಿಗೆ ಕೊಡಲ್ಪಡುವದು, ನೀರು ತಪ್ಪುವದಿಲ್ಲ.
ಆದರೆ ಮೊದಲು ನೀವು ದೇವರ ರಾಜ್ಯವನ್ನೂ ಆತನ ನೀತಿಯನ್ನೂ ಹುಡುಕಿರಿ. ಇವುಗಳ ಕೂಡ ಅವೆಲ್ಲವುಗಳು ಕೂಡಿಸಲ್ಪಡುವವು.ಆದಕಾರಣ ನಾಳೆಗೋಸ್ಕರ ಚಿಂತೆ ಮಾಡಬೇಡಿರಿ; ಯಾಕಂದರೆ ನಾಳಿನ ದಿನವು ತನಗೆ ಸಂಬಂಧ ಪಟ್ಟವುಗಳಿಗಾಗಿ ತಾನೇ ಚಿಂತಿಸುವದು. ಆ ದಿನಕ್ಕೆ ಅದರ ಕಾಟ ಸಾಕು.
ಆದರೆ ಅವಶ್ಯವಾದದ್ದು ಒಂದೇ; ಮರಿಯಳು ಆ ಒಳ್ಳೇಭಾಗವನ್ನೇ ಆರಿಸಿ ಕೊಂಡಿದ್ದಾಳೆ. ಅದು ಆಕೆಯಿಂದ ತೆಗೆಯಲ್ಪಡುವದಿಲ್ಲ ಅಂದನು.
ನಾಶವಾಗುವ ಆಹಾರಕ್ಕಾಗಿ ಅಲ್ಲ, ನಿತ್ಯಜೀವ ವನ್ನುಂಟು ಮಾಡುವ ಆಹಾರಕ್ಕೋಸ್ಕರ ದುಡಿಯಿರಿ; ಅದನ್ನು ಮನುಷ್ಯಕುಮಾರನು ನಿಮಗೆ ಕೊಡುವನು; ತಂದೆಯಾದ ದೇವರು (ಇದಕ್ಕಾಗಿ) ಆತನಿಗೆ ಮುದ್ರೆ ಹಾಕಿದ್ದಾನೆ ಅಂದನು.
ಹಾಗಾದರೆ ಈ ವಿಷಯಗಳಲ್ಲಿ ನಾವು ಏನು ಹೇಳೋಣ? ದೇವರು ನಮ್ಮ ಕಡೆ ಇದ್ದರೆ ನಮ್ಮನ್ನು ಎದುರಿಸುವವರು ಯಾರು?
ದೇಹಸಾಧನೆಯು ಸ್ವಲ್ಪ ಮಟ್ಟಿಗೆ ಲಾಭಕರವಾಗಿದೆ, ಭಕ್ತಿಯಾದರೋ ಎಲ್ಲಾ ವಿಧದಲ್ಲಿ ಲಾಭಕರವಾದದ್ದು; ಆದಕ್ಕೆ ಈಗಲೂ ಮುಂದೆ ಬರುವದಕ್ಕೂ ಜೀವಾಗ್ದಾನ ಉಂಟು.
ನಿಮ್ಮ ನಡತೆಯು ದ್ರವ್ಯಾಶೆ ಯಿಲ್ಲದ್ದಾಗಿರಲಿ; ನಿಮಗಿರುವವುಗಳಲ್ಲಿ ತೃಪ್ತರಾಗಿರ್ರಿ; ಯಾಕಂದರೆ--ನಾನು ನಿನ್ನನ್ನು ಎಂದಿಗೂ ಕೈಬಿಡುವದಿಲ್ಲ ಇಲ್ಲವೆ ತೊರೆಯುವದಿಲ್ಲವೆಂದು ಆತನು ಹೇಳಿದ್ದಾನೆ.