ಕರ್ತನು--ಹಾಗಾದರೆ ತಕ್ಕಕಾಲದಲ್ಲಿ ಅವರ ಪಾಲಿನ ಆಹಾರವನ್ನು ಕೊಡುವದಕ್ಕಾಗಿ ಒಡೆಯನು ತನ್ನ ಮನೆಯಮೇಲೆ ನೇಮಿಸುವ ನಂಬಿಗಸ್ತನೂ ವಿವೇಕಿಯೂ ಆಗಿರುವ ಮನೇವಾರ್ತೆಯವನು ಯಾರು?
Cross references
ಆಗ ಪರಿಶುದ್ಧ ಸ್ಥಳದ ಕೆಲಸವನ್ನು ಮಾಡುವ ಜ್ಞಾನಿಗಳೆಲ್ಲರೂ ತಾವು ಮಾಡುತ್ತಿದ್ದ ಕೆಲಸದಿಂದ ಬಂದು
ತನ್ನ ಜ್ಞಾನಕ್ಕನುಸಾರವಾಗಿ ಒಬ್ಬ ಮನುಷ್ಯನು ಹೊಗ ಳಲ್ಪಡುವನು; ವಕ್ರಹೃದಯವುಳ್ಳವನು ತಿರಸ್ಕರಿಸಲ್ಪಡು ವನು.
ತನ್ನ ಬಾಯಿಯ ಪ್ರತ್ಯುತ್ತರದಿಂದ ಮನುಷ್ಯನಿಗೆ ಆನಂದವಾ ಗುತ್ತದೆ; ತಕ್ಕಕಾಲದಲ್ಲಿ ಆಡಿದ ಮಾತು ಎಷ್ಟೋ ಒಳ್ಳೇದು!
ಬಳಲಿ ಹೋದವನನ್ನು ಹೇಗೆ ಮಾತಿನಿಂದ ಆದರಿಸುವಿ ಎಂಬದನ್ನು ನಾನು ತಿಳಿಯುವ ಹಾಗೆ ಕರ್ತನಾದ ದೇವರು ಶಿಕ್ಷಿತ ನಾಲಿಗೆಯನ್ನು ನನಗೆ ಕೊಟ್ಟಿದ್ದಾನೆ. ಆತನು ಹೊತ್ತಾರೆಯಿಂದ ಹೊತ್ತಾರೆಗೆ ನನ್ನನ್ನು ಎಚ್ಚರಿಸಿ ಸುಶಿಕ್ಷಿತರಂತೆ ನಾನು ಕೇಳುವ ಹಾಗೆ ನನ್ನ ಕಿವಿಯನ್ನು ಆತನು ಜಾಗರೂಕಗೊಳಿಸುತ್ತಾನೆ.
ಆಗ ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇನಂದರೆ --
ನೀವು ಕೊಬ್ಬನ್ನು ತಿನ್ನುತ್ತೀರಿ, ಉಣ್ಣೆಯ ಬಟ್ಟೆಯನ್ನು ಹಾಕುತ್ತೀರಿ, ಅವುಗಳಲ್ಲಿ ಕೊಬ್ಬಿದ್ದನ್ನು ಕೊಲ್ಲುತ್ತೀರಿ, ಆದರೆ ಮಂದೆಯನ್ನು ನೀವು ಮೇಯಿ ಸುವದಿಲ್ಲ,
ಆತನು ಅವರಿಗೆ--ಆದಕಾರಣ ಪರಲೋಕ ರಾಜ್ಯದ ವಿಷಯವಾಗಿ ಶಿಕ್ಷಣಹೊಂದಿದ ಪ್ರತಿಯೊಬ್ಬ ಶಾಸ್ತ್ರಿಯು ತನ್ನ ಬೊಕ್ಕಸದೊಳಗಿಂದ ಹೊಸ ಮತ್ತು ಹಳೆಯ ವಸ್ತುಗಳನ್ನು ಹೊರಗೆ ತರುವ ಒಬ್ಬ ಮನೇ ಯಜಮಾನನಿಗೆ ಹೋಲಿಕೆಯಾಗಿದ್ದಾನೆ ಅಂದನು.
ಹೀಗೆ ಸಾಯಂಕಾಲವಾದಾಗ ದ್ರಾಕ್ಷೇತೋಟ ದ ಯಜಮಾನನು ತನ್ನ ಮನೇವಾರ್ತೆಯವನಿಗೆ-- ಕೂಲಿಯಾಳುಗಳನ್ನು ಕರೆದು ಕೊನೆಯವನಿಂದ ಪ್ರಾರಂಭಿಸಿ ಮೊದಲನೆಯವನ ವರೆಗೆ ಕೂಲಿಯನ್ನು ಕೊಡು ಎಂದು ಹೇಳಿದನು.
ಹಾಗಾದರೆ ತನ್ನ ಮನೆಯಲ್ಲಿದ್ದವರಿಗೆ ತಕ್ಕ ಕಾಲ ದಲ್ಲಿ ಆಹಾರ ಕೊಡುವಂತೆ ಅವರ ಮೇಲೆ ತನ್ನ ಯಜಮಾನನು ನೇಮಿಸಿದ ಅಧಿಕಾರಿಯೂ ನಂಬಿಗಸ್ತನೂ ಜ್ಞಾನಿಯೂ ಆದ ಸೇವಕನು ಯಾರು?
ಆಗ ಐದು ತಲಾಂತುಗಳನ್ನು ಹೊಂದಿದ್ದವನು ಬಂದು ಬೇರೆ ಐದು ತಲಾಂತುಗಳನ್ನು ತಂದು--ಒಡೆಯನೇ, ನೀನು ನನಗೆ ಐದು ತಲಾಂತುಗಳನ್ನು ಒಪ್ಪಿಸಿದಿ; ಇಗೋ, ಅವುಗಳಲ್ಲದೆ ಬೇರೆ ಐದು ತಲಾಂತುಗಳನ್ನು ನಾನು ಸಂಪಾದಿಸಿದ್ದೇನೆ ಅಂದನು.
ಕರ್ತನು ಆಕೆಯನ್ನು ನೋಡಿ ಆಕೆಯ ಮೇಲೆ ಕನಿಕರಪಟ್ಟು ಆಕೆಗೆ--ಅಳಬೇಡ ಅಂದನು.
ತರುವಾಯ ಆತನು ತನ್ನ ಶಿಷ್ಯರಿಗೂ
ಇದಾದ ಮೇಲೆ ಅವನು ರಾಜ್ಯವನ್ನು ಪಡೆದು ಹಿಂದಿರುಗಿದಾಗ ವ್ಯಾಪಾ ರದಿಂದ ಪ್ರತಿಯೊಬ್ಬ ಮನುಷ್ಯನು ಎಷ್ಟು ಲಾಭವನ್ನು ಪಡೆದನೆಂದು ತಿಳುಕೊಳ್ಳುವಂತೆ ತಾನು ಹಣಕೊಟ್ಟ ಆ ಆಳುಗಳನ್ನು ತನ್ನ ಬಳಿಗೆ ಕರೆಯಬೇಕೆಂದು ಆಜ್ಞಾಪಿ ಸಿದನು.
ಅವರು ಊಟಮಾಡಿದ ಮೇಲೆ ಯೇಸು ಸೀಮೋನ ಪೇತ್ರನಿಗೆ--ಯೋನನ ಮಗನಾದ ಸೀಮೋನನೇ, ನೀನು ಇವುಗಳಿಗಿಂತ ನನ್ನನ್ನು ಹೆಚ್ಚಾಗಿ ಪ್ರೀತಿಸುತ್ತೀಯೋ ಎಂದು ಕೇಳಲು ಅವನು ಆತ ನಿಗೆ--ಹೌದು, ಕರ್ತನೇ, ನಾನು ನಿನ್ನನ್ನು ಪ್ರೀತಿಸುತ್ತೇ ನೆಂಬದನ್ನು ನೀನೇ ಬಲ್ಲೆ ಅಂದನು. ಅದಕ್ಕೆ ಆತನು ಅವನಿಗೆ
ದೇವರು ತನ್ನ ಸ್ವರಕ್ತದಿಂದ ಕೊಂಡುಕೊಂಡ ಸಭೆಯನ್ನು ಪೋಷಿಸುವದಕ್ಕಾಗಿ ಪವಿತ್ರಾತ್ಮನು ನಿಮ್ಮನ್ನೇ ಆ ಹಿಂಡಿನಲ್ಲಿ ಅಧ್ಯಕ್ಷರನ್ನಾಗಿ ಇಟ್ಟಿರುವದರಿಂದ ನಿಮ್ಮ ವಿಷಯದಲ್ಲಿಯೂ ಎಲ್ಲಾ ಹಿಂಡಿನ ವಿಷಯದಲ್ಲಿಯೂ ಎಚ್ಚರಿಕೆಯಾಗಿರಿ.
ಒಬ್ಬನು ನಮ್ಮನ್ನು ಕ್ರಿಸ್ತನ ಸೇವಕರೆಂತಲೂ ದೇವರ ಮರ್ಮಗಳ ವಿಷಯದಲ್ಲಿ ಮನೆವಾರ್ತೆಯವರೆಂತಲೂ ಎಣಿಸಲಿ.
ಆದರೆ ಒಂದು ವೇಳೆ ನಾನು ತಡಮಾಡಿದರೂ ಸತ್ಯಕ್ಕೆ ಸ್ತಂಭವೂ ಆಧಾರವೂ ಆಗಿರುವ ದೇವರ ಮನೆಯಲ್ಲಿ ಅಂದರೆ ಜೀವಸ್ವರೂಪನಾದ ದೇವರ ಸಭೆಯಲ್ಲಿ ನಡೆದುಕೊಳ್ಳಬೇಕಾದ ರೀತಿಯು ನಿನಗೆ ಗೊತ್ತಾಗಬೇಕು.ದೇವಭಕ್ತಿಯ ಮರ್ಮವು ಮಹತ್ವವುಳ್ಳದ್ದೆಂಬದು ತರ್ಕವಿಲ್ಲದ್ದು, ಅದು ಯಾವದಂದರೆ--ದೇವರು ಶರೀರಧಾರಿಯಾಗಿ ಪ್ರತ್ಯಕ್ಷನಾದನು; ಆತ್ಮಸಂಬಂಧವಾಗಿ ನೀತಿವಂತನೆಂದು ನಿರ್ಣಯಿಸಲ್ಪಟ್ಟನು; ದೂತ ರಿಗೆ ಕಾಣಿಸಿಕೊಂಡನು; ಅನ್ಯಜನರಿಗೆ ಸಾರಲ್ಪಟ್ಟನು; ಲೋಕದಲ್ಲಿ ನಂಬಲ್ಪಟ್ಟನು; ಮಹಿಮೆಗೆ ಸೇರಿಸಲ
ಚೆನ್ನಾಗಿ ಅಧಿಕಾರ ನಡಿಸುವ ಹಿರಿಯರನ್ನು, ಅವ ರೊಳಗೆ ವಿಶೇಷವಾಗಿ ವಾಕ್ಯದಲ್ಲಿಯೂ ಬೋಧನೆ ಯಲ್ಲಿಯೂ ಕಷ್ಟಪಡುವವರನ್ನು ಇಮ್ಮಡಿಯಾದ ಮಾನಕ್ಕೆ ಯೋಗ್ಯರೆಂದು ಎಣಿಸಬೇಕು.
ವಾಕ್ಯವನ್ನು ಸಾರು, ಅನುಕೂಲವಾದ ಕಾಲದಲ್ಲಿಯೂ ಅನುಕೂಲವಿಲ್ಲದ ಕಾಲದಲ್ಲಿಯೂ ಅದರಲ್ಲಿ ಆಸಕ್ತ ನಾಗಿರು; ಪೂರ್ಣದೀರ್ಘಶಾಂತಿಯಿಂದಲೂ ಉಪ ದೇಶದಿಂದಲೂ ಖಂಡಿಸು, ಗದರಿಸು, ಎಚ್ಚರಿಸು.
ಯಾಕಂದರೆ ಸಭಾಧ್ಯಕ್ಷನು ದೇವರ ಮನೆವಾರ್ತೆಯವನಾಗಿರುವದರಿಂದ ನಿಂದಾ ರಹಿತನಾಗಿರಬೇಕು; ಅವನು ಸ್ವೇಚ್ಛಾಪರನೂ ಮುಂಗೋಪಿಯೂ ಕುಡಿಯುವವನೂ ಹೊಡೆದಾಡು ವವನೂ ನೀಚಲಾಭವನ್ನು ಅಪೇಕ್ಷಿಸುವವನೂ ಆಗಿರದೆ
ನಿಜವಾಗಿಯೂ ಮೋಶೆಯು ಸೇವಕನಾಗಿ ದೇವರ ಮನೆಯಲ್ಲೆಲ್ಲಾ ನಂಬಿಗಸ್ತನಾಗಿದ್ದನು; ಅವನು ಮುಂದೆ ಪ್ರಕಟವಾಗಬೇಕಾಗಿದ್ದವುಗಳಿಗೆ ಸಾಕ್ಷಿಯಾಗಿ ದ್ದನು.
ನಿಮಗೆ ದೇವರ ವಾಕ್ಯವನ್ನು ತಿಳಿಸಿದ ನಿಮ್ಮ ನಾಯಕರನ್ನು ಜ್ಞಾಪಕಮಾಡಿಕೊಳ್ಳಿರಿ; ಅವರು ಅಂತ್ಯದ ವರೆಗೆ ಯಾವ ರೀತಿಯಿಂದ ನಡೆದುಕೊಂಡರೆಂದು ಆಲೋಚಿಸಿರಿ; ಅವರ ನಂಬಿಕೆಯನ್ನು ಅನುಸರಿಸಿರಿ.
ನಿಮ್ಮ ನಾಯಕರಿಗೆ ವಿಧೇಯರಾಗಿದ್ದು ಅವರಿಗೆ ಅಧೀನರಾಗಿರ್ರಿ. ಯಾಕಂದರೆ ಅವರು ಲೆಕ್ಕ ಒಪ್ಪಿಸಬೇಕಾ ದವರಾಗಿ ನಿಮ್ಮ ಆತ್ಮಗಳನ್ನು ಕಾಯುವವರಾಗಿದ್ದಾರೆ. ಅವರು ವ್ಯಸನಪಡದೆ ಸಂತೋಷದಿಂದ ಇದನ್ನು ಮಾಡುವವರಾಗಲಿ; ಅವರು ವ್ಯಸನದಿಂದಿರುವದು ನಿಮಗೆ ಪ್ರಯೋಜನಕರವಾದದ್ದಲ್ಲ.
ನೀವೆಲ್ಲರು ದೇವರ ವಿವಿಧ ಕೃಪೆಯ ವಿಷಯದಲ್ಲಿ ಒಳ್ಳೇ ಮನೆವಾರ್ತೆಯವರಾಗಿದ್ದು ಪ್ರತಿಯೊಬ್ಬನು ತಾನು ಹೊಂದಿದ ವರವನ್ನು ಎಲ್ಲರ ಸೇವೆಯಲ್ಲಿ ಉಪಯೋಗಿಸಲಿ.
ಜೊತೆ ಹಿರಿಯನೂ ಕ್ರಿಸ್ತನ ಶ್ರಮೆಗಳ ಸಾಕ್ಷಿಯೂ ಪ್ರತ್ಯಕ್ಷವಾಗಲಿರುವ ಪ್ರಭಾವ ದಲ್ಲಿ ಪಾಲುಗಾರನು ಆಗಿರುವ ನಾನು ನಿಮ್ಮಲ್ಲಿರುವ ಹಿರಿಯರನ್ನು ಎಚ್ಚರಿಸುವದೇನಂದರೆ,