ಆದರೆ ನಾನು ಬಾಪ್ತಿಸ್ಮ ಮಾಡಿಸಿಕೊಳ್ಳುವ ಒಂದು ಬಾಪ್ತಿಸ್ಮ ಉಂಟು; ಅದು ನೆರವೇರುವ ತನಕ ನಾನು ಎಷ್ಟೋ ಇಕ್ಕಟ್ಟಿನಲ್ಲಿದ್ದೇನೆ!
Cross references
ಓ ನನ್ನ ದೇವರೇ ನಿನಗೆ ಮೆಚ್ಚಿಕೆಯಾದದ್ದನ್ನು ಮಾಡಲು ಸಂತೋಷಿಸುತ್ತೇನೆ; ನಿನ್ನ ನ್ಯಾಯ ಪ್ರಮಾಣವು ನನ್ನ ಅಂತರಂಗದಲ್ಲಿ ಅದೆ.
ತರುವಾಯ ಯೇಸು ಯೆರೂಸಲೇಮಿಗೆ ಹೋಗುತ್ತಿರುವಾಗ ಹನ್ನೆರಡು ಮಂದಿ ಶಿಷ್ಯರನ್ನು ದಾರಿಯಲ್ಲಿ ವಿಂಗಡವಾಗಿ ಕರೆದು ಅವರಿಗೆ--
ಆಗ ಅವರು ಯೆರೂಸಲೇಮಿಗೆ ಹೋಗುವ ದಾರಿಯಲ್ಲಿದ್ದರು; ಮತ್ತು ಯೇಸು ಅವರ ಮುಂದಾಗಿ ಹೋದದ್ದರಿಂದ ಅವರು ಆಶ್ಚರ್ಯಪಟ್ಟರು; ಮತ್ತು ಆತನನ್ನು ಹಿಂಬಾಲಿಸುತ್ತಿದ್ದಾಗ ಭಯಪಟ್ಟರು. ಆತನು ತನ್ನ ಹನ್ನೆರಡು ಮಂದಿಯನ್ನು ತಿರಿಗಿ ಕರೆದು ತನಗೆ ಸಂಭವಿಸುವವುಗಳು ಯಾವವೆಂದು ಅವರಿ
ಆದರೆ ಯೇಸು ಅವರಿಗೆ--ನನ್ನನ್ನು ಕಳುಹಿಸಿದಾತನ ಚಿತ್ತವನ್ನು ನೆರವೇರಿಸಿ ಆತನ ಕೆಲಸ ವನ್ನು ಪೂರೈಸುವದೇ ನನ್ನ ಆಹಾರ ಅಂದನು.
ತರುವಾಯ ಯೇಸು ಅವರಿಗೆ-- ನನ್ನ ಸಮಯವು ಇನ್ನೂ ಬಂದಿಲ್ಲ; ಆದರೆ ನಿಮ್ಮ ಸಮಯವು ಯಾವಾಗಲೂ ಸಿದ್ಧವಾಗಿದೆ.
ಆದರೆ ಆತನ ಸಹೋದರರು ಹೋದಮೇಲೆ ಆತನು ಸಹ ಹಬ್ಬಕ್ಕೆ ಬಹಿರಂಗವಾಗಿ ಹೋಗದೆ ಗುಪ್ತವಾಗಿ ಹೋದನು.
ಆದದರಿಂದ ತಿರಿಗಿ ಅವರು ಆತನನ್ನು ಹಿಡಿಯುವದಕ್ಕೆ ಹುಡುಕಿದರು; ಆದರೆ ಆತನು ಅವರ ಕೈಯಿಂದ ತಪ್ಪಿಸಿಕೊಂಡು
ಈಗ ನನ್ನ ಪ್ರಾಣವು ತತ್ತರಿಸುತ್ತದೆ. ನಾನು ಏನು ಹೇಳಲಿ? ತಂದೆಯೇ, ಈ ಗಳಿಗೆಯಿಂದ ನನ್ನನ್ನು ತಪ್ಪಿಸು; ಆದರೆ ಇದಕ್ಕಾಗಿಯೇ ನಾನು ಈ ಗಳಿಗೆಗೆ ಬಂದೆನು.
ಆಗ ಯೇಸು ಪೇತ್ರನಿಗೆ--ನಿನ್ನ ಕತ್ತಿಯನ್ನು ಒರೆಗೆಹಾಕು. ನನ್ನ ತಂದೆಯೂ ನನಗೆ ಕೊಟ್ಟ ಪಾತ್ರೆಯನ್ನು ನಾನು ಕುಡಿಯಬಾರದೋ ಎಂದು ಹೇಳಿದನು.
ಯೇಸು ಆ ಹುಳಿರಸವನ್ನು ತಕ್ಕೊಂಡ ಮೇಲೆ--ತೀರಿತು ಎಂದು ಹೇಳಿ ತನ್ನ ತಲೆಯನ್ನು ಬಾಗಿಸಿ ಆತ್ಮವನ್ನು ಒಪ್ಪಿಸಿಕೊಟ್ಟನು.
ಇಗೋ, ನಾನು ಈಗ ಆತ್ಮನಿರ್ಬಂಧವುಳ್ಳವನಾಗಿ ಯೆರೂಸಲೇ ಮಿಗೆ ಹೋಗುತ್ತೇನೆ. ಅಲ್ಲಿ ನನಗೆ ಏನು ಸಂಭವಿಸು ವವೋ ನಾನರಿಯೆ.