ನೀನು ನಿನ್ನ ಎದುರಾಳಿಯ ಸಂಗಡ ನ್ಯಾಯಾ ಧಿಪತಿಯ ಎದುರಿಗೆ ಹೋಗುವಾಗ ಮಾರ್ಗದಲ್ಲಿಯೇ ಅವನಿಂದ ಬಿಡಿಸಿಕೊಳ್ಳುವದಕ್ಕೆ ಪ್ರಯತ್ನಮಾಡು; ಇಲ್ಲದಿದ್ದರೆ ಅವನು ನಿನ್ನನ್ನು ನ್ಯಾಯಾಧಿಪತಿಯ ಬಳಿಗೆ ಬಲವಂತವಾಗಿ ಎಳೆದಾನು; ಆಗ ನ್ಯಾಯಾಧಿ ಪತಿಯು ನಿನ್ನನ್ನು ಅಧಿಕಾರಿಗೆ ಒಪ್ಪಿಸಾನು ಮತ್ತು ಅಧಿಕಾರಿಯು ನಿನ್ನನ್ನು ಸೆನೀನು ಕೊನೆಯ ಕಾಸನ್ನು ಸಲ್ಲಿಸುವವರೆಗೂ ಅಲ್ಲಿಂದ ಬರುವದೇ ಇಲ್ಲವೆಂದು ನಾನು ನಿನಗೆ ಹೇಳುತ್ತೇನೆ ಅಂದನು.
Cross references
ಯಾಕೋಬನು ಎದೋಮ್ಯರ ದೇಶವಾದ ಸೇಯಾರಿನ ಸೀಮೆಯಲ್ಲಿರುವ ತನ್ನ ಸಹೋದರನಾದ ಏಸಾವನ ಬಳಿಗೆ ದೂತರನ್ನು ತನ್ನ ಮುಂದಾಗಿ ಕಳುಹಿಸಿದನು.
ಆಗ ಅಬೀಗೈಲಳು ಶೀಘ್ರವಾಗಿ ಇನ್ನೂರು ರೊಟ್ಟಿಗಳನ್ನೂ ಎರಡು ಬುದ್ದಲಿ ದ್ರಾಕ್ಷಾರಸ ವನ್ನೂ ಸಿದ್ಧಪಡಿಸಿದ ಐದು ಕುರಿಗಳ ಮಾಂಸವನ್ನೂ ಐದು ಸೇರು ಹುರಿದ ಕಾಳುಗಳನ್ನೂ ಒಣಗಿದ ನೂರು ದ್ರಾಕ್ಷೇ ಗೊಂಚಲುಗಳನ್ನೂ ಒಣಗಿದ ಇನ್ನೂರು ಅಂಜೂರದ ಉಂಡೆಗಳನ್ನೂ ತೆಗೆದು ಕತ್ತೆಗಳ ಮೇಲೆ ಹೇರಿಸಿಕೊಂಡು
ಆತನಿಗೆ ಪರಿಚಿತನಾಗಿ ಸಮಾಧಾನದಿಂದಿರು; ಇದರಿಂದ ನಿನಗೆ ಮೇಲು ಬರುವದು.
ಅಲ್ಲಿ ನೀತಿವಂತನು ಅವನ ಸಂಗಡ ತರ್ಕ ಮಾಡುವನು; ನಾನು ನಿತ್ಯವಾಗಿ ನನ್ನ ನ್ಯಾಯಾಧಿಪತಿಗೆ ತಪ್ಪಿಸಿಕೊಳ್ಳುವೆನು.
ಆದರೆ ನೀನು ದುಷ್ಟನ ನ್ಯಾಯವನ್ನು ಪೂರೈಸಿದಿ; ನ್ಯಾಯವೂ ತೀರ್ಪೂ ನಿನ್ನನ್ನು ಹಿಡಿಯುವವು.
ಇದಕ್ಕೋಸ್ಕರ ಭಕ್ತರೆಲ್ಲರು ನಿನ್ನನ್ನು ಕಂಡುಕೊಳ್ಳುವ ಕಾಲದಲ್ಲಿ ನಿನಗೆ ಪ್ರಾರ್ಥನೆ ಮಾಡುವರು; ನಿಶ್ಚಯವಾಗಿ ಬಹಳ ನೀರಿನ ಪ್ರವಾಹ ಗಳು ಅವನ ಸವಿಾಪಕ್ಕೆ ಬರುವದಿಲ್ಲ.
ದೇವರನ್ನು ಮರೆತು ಬಿಡುವವರೇ, ನಾನು ನಿಮ್ಮನ್ನು ಹರಿದು ಚೂರುಮಾಡ ದಂತೆ ನನ್ನ ಕೈಯಿಂದ ನಿಮ್ಮನ್ನು ಬಿಡಿಸುವವರು ಯಾರೂ ಇರುವದಿಲ್ಲವೆಂಬದನ್ನು ಗ್ರಹಿಸಿಕೊಳ್ಳಿರಿ.ಸ್ತೊತ್ರವನ್ನು ಅರ್ಪಿಸುವವನು ನನ್ನನ್ನು ಘನ ಪಡಿಸುತ್ತಾನೆ; ತನ್ನ ನಡವಳಿಕೆಯನ್ನು ಕ್ರಮಪಡಿಸಿ ಕೊಳ್ಳುವವನಿಗೆ ದೇವರ ರಕ್ಷಣೆಯನ್ನು ನಾನು ತೋರಿಸುವೆನು.
ನನ್ನ ಮಗನೇ, ನಿನ್ನ ಸ್ನೇಹಿತನಿಗಾಗಿ ನೀನು ಹೊಣೆಯಾಗಿದ್ದರೆ ಪರನೊಂದಿಗೆ ನಿನ್ನ ಕೈಯನ್ನು ಒಡ್ಡಿದ್ದರೆ
ನಿನ್ನ ನೆರೆಯವನು ನಿನ್ನನ್ನು ಅವಮಾನಕ್ಕೆ ಗುರಿಮಾಡಿದಾಗ ಕಡೆಯಲ್ಲಿ ಏನು ಮಾಡಬೇಕೆಂಬದು ನೀನು ತಿಳಿಯ ದಂತೆ ದುಡುಕಿನಿಂದ ಕಲಹಮಾಡುವದಕ್ಕಾಗಿ ಹೋಗ ಬೇಡ.
ಕರ್ತನು ಸಿಕ್ಕುವ ಕಾಲದಲ್ಲಿ ಆತನನ್ನು ಹುಡುಕಿರಿ; ಆತನು ಸವಿಾಪವಾಗಿರುವಾಗಲೇ ಆತನನ್ನು ಕರೆಯಿರಿ.
ಆದದರಿಂದ ನೀನು ನಿನ್ನ ಕಾಣಿಕೆಯನ್ನು ಯಜ್ಞವೇದಿಯ ಬಳಿಗೆ ತಂದಾಗ ನಿನಗೆ ವಿರೋಧ ವಾದದ್ದು ನಿನ್ನ ಸಹೋದರನಿಗೆ ಇದೆಯೆಂದು ನೆನಪಿಗೆ ಬಂದರೆ
ಅವನು ಅದಕ್ಕೆ ಒಪ್ಪದೆ ಹೊರಟುಹೋಗಿ ತನ್ನ ಸಾಲವನ್ನು ತೀರಿಸುವ ವರೆಗೆ ಅವನನ್ನು ಸೆರೆಮನೆಯಲ್ಲಿ ಹಾಕಿಸಿದನು.
ಇಕ್ಕಟ್ಟಾದ ಬಾಗಲಿನಿಂದ ಒಳಗೆ ಪ್ರವೇಶಿಸುವದಕ್ಕೆ ಪ್ರಯಾಸಪಡಿರಿ; ಯಾಕಂ ದರೆ ಅನೇಕರು ಒಳಗೆ ಪ್ರವೇಶಿಸುವದಕ್ಕೆ ಪ್ರಯತ್ನಿಸಿ ದರೂ ಆಗುವದಿಲ್ಲ ಎಂದು ನಾನು ನಿಮಗೆ ಹೇಳು ತ್ತೇನೆ.
ಇಲ್ಲವೆ ಯಾವ ಅರಸನಾದರೂ ಬೇರೆ ಅರಸನಿಗೆ ವಿರೋಧ ವಾಗಿ ಯುದ್ಧಮಾಡುವದಕ್ಕೆ ಹೋಗುವಾಗ ಮೊದಲು ಕೂತುಕೊಂಡು ತನಗೆ ವಿರೋಧವಾಗಿ ಇಪ್ಪತ್ತು ಸಾವಿರ (ಸೈನ್ಯ)ದೊಂದಿಗೆ ಬರುವ ಆ ಅರಸನನ್ನು ತನ್ನ ಹತು ಸಾವಿರ (ಸೈನ್ಯ)ದೊಂದಿಗೆ ಎದುರಿಸಲು ಸಮರ್ಥನೋ ಎಂದು ವಿಚಾರಿಸುವದಿಲ್ಲವೋ?
(ಆತನು--ಅಂಗೀಕಾರದ ಸಮಯದಲ್ಲಿ ನಾನು ನಿನ್ನ ಮನವಿಯನ್ನು ಕೇಳಿದೆನು, ರಕ್ಷಣೆಯ ದಿನದಲ್ಲಿ ನಾನು ನಿನಗೆ ಸಹಾಯಮಾಡಿದೆನು ಎಂದು ಹೇಳುತ್ತಾನೆ; ಇಗೋ, ಈಗಲೇ ಆ ಅಂಗೀಕಾರದ ಸಮಯ; ಇಗೋ, ಈಗಲೇ ಆ ರಕ್ಷಣೆಯ ದಿನ).
ಆದದರಿಂದ(ಪವಿತ್ರಾತ್ಮನು ಹೇಳುವ ಪ್ರಕಾರ--ನೀವು ಈ ದಿನ ದೇವರ ಶಬ್ದಕ್ಕೆ ಕಿವಿಗೊಟ್ಟರೆ
ಆತನು ಆತ್ಮನಿಂದಲೇ ಸೆರೆಯಲ್ಲಿದ್ದ ಆತ್ಮಗಳಿಗೆ ಹೋಗಿ ಸಾರಿದನು;
ಆ ಸಾವಿರ ವರುಷಗಳು ತೀರಿದ ಮೇಲೆ ಸೈತಾನನಿಗೆ ಅವನ ಸೆರೆಯಿಂದ ಬಿಡುಗಡೆಯಾಗುವದು.