ಇದಲ್ಲದೆ ಪಿಲಾತನು ಗಲಿಲಾಯದವರ ರಕ್ತವನ್ನು ಅವರ ಬಲಿಗಳೊಂದಿಗೆ ಬೆರಸಿದ ವಿಷಯವನ್ನು ಆತನಿಗೆ ತಿಳಿಸಿದ ಕೆಲವರು ಆ ಸಮಯ ದಲ್ಲಿ ಅಲ್ಲಿದ್ದರು.
Cross references
ಓ ಕರ್ತನೇ, ನೋಡು, ನೀನು ಇದನ್ನು ಯಾರಿಗೆ ಮಾಡಿದಿಯೋ ಯೋಚಿಸು. ಸ್ತ್ರೀಯರು ತಮ್ಮ ಫಲವಾದ ಗೇಣುದ್ದದ ಕೂಸುಗಳನ್ನು ತಿನ್ನಬೇಕೇ? ಯಾಜಕನು ಪ್ರವಾದಿಯು ಕರ್ತನ ಪರಿಶುದ್ಧ ಸ್ಥಳದಲ್ಲಿ ಕೊಲ್ಲಲ್ಪಡಬೇಕೋ?
ಅದನ್ನು ನಾನು ಕೇಳುತ್ತಿರುವಾಗ ಇತರರಿಗೆ ಅವನು ಹೇಳಿದ್ದೇನಂದರೆ --ನೀವೂ ಅವನ ಹಿಂದೆ ಪಟ್ಟಣದಲ್ಲಿ ಹಾದು ಹೋಗಿ ಹೊಡೆಯಿರಿ; ನಿಮ್ಮ ಕಣ್ಣುಗಳು ಕನಿಕರಿಸದೆ ಇರಲಿ, ಕಟಾಕ್ಷಿಸದೆಯೂ ಇರಲಿ.
ಮತ್ತು ಅವರು ಆತನನ್ನು ಕಟ್ಟಿ ತೆಗೆದುಕೊಂಡು ಹೋಗಿ ಅಧಿಪತಿಯಾದ ಪೊಂತ್ಯ ಪಿಲಾತನಿಗೆ ಒಪ್ಪಿಸಿದರು.
ಈ ಮನುಷ್ಯನ ತರುವಾಯ ಖಾನೇಷುಮಾರಿಯ ದಿನ ಗಳಲ್ಲಿ ಗಲಿಲಾಯದ ಯೂದನು ಎದ್ದು ತನ್ನನ್ನು ಹಿಂಬಾಲಿಸುವಂತೆ ಅನೇಕ ಜನರನ್ನು ಸೆಳೆದನು. ಆದರೆ ಅವನು ಸಹ ನಾಶವಾದನು. ಅವನಿಗೆ ವಿಧೇಯರಾದ ವರೆಲ್ಲರೂ ಚದರಿಹೋದರು ಎಂದು ಹೇಳಿದನು.
ದೇವರ ಮನೆಯಲ್ಲಿ ಪ್ರಾರಂಭವಾಗತಕ್ಕ ನ್ಯಾಯ ತೀರ್ಪಿನ ಸಮಯವು ಬಂದದೆ; ಅದು ಮೊದಲು ನಮ್ಮಲ್ಲಿ ಪ್ರಾರಂಭವಾದರೆ ದೇವರ ಸುವಾರ್ತೆಗೆ ಅವಿಧೇಯರಾದವರ ಅಂತ್ಯವು ಏನಾಗಿರುವದು?