ಯೇಸು ಸಬ್ಬತ್ ದಿನದಲ್ಲಿ ಸ್ವಸ್ಥಪಡಿಸಿದ ಕಾರಣ ಸಭಾಮಂದಿರದ ಅಧಿಕಾರಿಯು ಕೋಪದಿಂದ ಜನರಿಗೆ--ಆರು ದಿವಸಗಳಲ್ಲಿ ಮನು ಷ್ಯರು ಕೆಲಸ ಮಾಡತಕ್ಕದ್ದು. ಆದದರಿಂದ ಅವುಗಳಲ್ಲಿ ಅವರು ಬಂದು ಸ್ವಸ್ಥತೆ ಹೊಂದಲಿ; ಸಬ್ಬತ್ ದಿನದಲ್ಲಿ ಬೇಡ ಅಂದನು.
Cross references
ನೀನು ಆರು ದಿನಗಳು ದುಡಿದು ನಿನ್ನ ಕೆಲಸಗಳನ್ನೆಲ್ಲಾ ಮಾಡಿಕೋ.
ಆರು ದಿವಸ ನೀನು ನಿನ್ನ ಕೆಲಸಗಳನ್ನು ಮಾಡ ಬೇಕು; ಏಳನೆಯ ದಿನದಲ್ಲಿ ನೀನು ನಿನ್ನ ಎತ್ತು ಕತ್ತೆಗಳು ವಿಶ್ರಮಿಸಿಕೊಳ್ಳಬೇಕು. ಇದಲ್ಲದೆ ನಿನ್ನ ದಾಸಿಯ ಮಗನು ಪರದೇಶಸ್ಥನು ದಣಿವಾರಿಸಿಕೊಳ್ಳಲಿ.
ಆರು ದಿವಸ ಕೆಲಸಮಾಡಬೇಕು, ಆದರೆ ಏಳನೆಯ ದಿವಸವು ವಿಶ್ರಾಂತಿಯ ಸಬ್ಬತ್ ದಿವಸವಾಗಿ ಪರಿಶುದ್ಧ ಸಭಾಕೂಟವಾಗಿರುವದು; ನೀವು ಆ ದಿನ ದಲ್ಲಿ ಕೆಲಸಮಾಡಬಾರದು; ನಿಮ್ಮ ಎಲ್ಲಾ ನಿವಾಸಗಳಲ್ಲಿ ಅದು ಕರ್ತನ ಸಬ್ಬತ್ತಾಗಿರುವದು.
ಇದಲ್ಲದೆ ಅವರನ್ನು ಪರಿಶುದ್ಧ ಮಾಡುವ ಕರ್ತನು ನಾನೇ ಎಂದು ಅವರು ತಿಳಿಯುವ ಹಾಗೆ ನನಗೂ ಅವರಿಗೂ ಗುರುತಾಗಿರುವದಕ್ಕೆ ನನ್ನ ಸಬ್ಬತ್ ದಿನಗಳನ್ನು ನಾನು ಅವರಿಗೆ ಕೊಟ್ಟೆನು.
ಆದರೆ ಫರಿಸಾಯರು ಅದನ್ನು ನೋಡಿ ಆತನಿಗೆ--ಇಗೋ, ನಿನ್ನ ಶಿಷ್ಯರು ಸಬ್ಬತ್ದಿನದಲ್ಲಿ ಮಾಡ ಬಾರದ್ದನ್ನು ಮಾಡುತ್ತಾರೆ ಅಂದರು.
ಇಗೋ, ಅಲ್ಲಿ ಕೈ ಬತ್ತಿದ್ದ ಒಬ್ಬ ಮನುಷ್ಯನಿದ್ದನು. ಆಗ ಅವರು ಆತನ ಮೇಲೆ ತಪ್ಪು ಹೊರಿಸಬೇಕೆಂದು ಆತನಿಗೆ-- ಸಬ್ಬತ್ ದಿನಗಳಲ್ಲಿ ಸ್ವಸ್ಥ ಮಾಡುವದು ನ್ಯಾಯವೋ ಎಂದು ಕೇಳಿದರು.
ಅವರು ಆತನ ಮೇಲೆ ತಪ್ಪು ಹೊರಿಸಬೇಕೆಂದು ಸಬ್ಬತ್ ದಿನದಲ್ಲಿ ಆತನು ಅವನನ್ನು ಸ್ವಸ್ಥ ಮಾಡುವನೇನೋ ಎಂದು ಕಾಯು ತ್ತಿದ್ದರು.
ಆಗ ಇಗೋ, ಸಭಾಮಂದಿರದ ಅಧಿಕಾರಿ ಗಳಲ್ಲಿ ಯಾಯಿರನೆಂದು ಹೆಸರಿದ್ದ ಒಬ್ಬನು ಬಂದು ಆತನನ್ನು ಕಂಡು ಆತನ ಪಾದಗಳಿಗೆ ಬಿದ್ದು--
ಆಗ ಶಾಸ್ತ್ರಿಗಳೂ ಫರಿಸಾಯರೂ ಆತನಿಗೆ ವಿರೋಧ ವಾಗಿ ತಪ್ಪು ಕಂಡುಹಿಡಿಯಬೇಕೆಂದು ಆತನು ಆ ಸಬ್ಬತ್ ದಿನದಲ್ಲಿ ಅವನನ್ನು ಸ್ವಸ್ಥಮಾಡುವನೇನೋ ಎಂದು ಕಾಯುತ್ತಿದ್ದರು.
ಆಗ ಅವರು ಕೋಪದಿಂದ ತುಂಬಿದವರಾಗಿ ಯೇಸುವಿಗೆ ತಾವು ಏನು ಮಾಡಬೇಕೆಂದು ಒಬ್ಬರಿಗೊಬ್ಬರು ಮಾತನಾಡಿಕೊಂಡರು.
ಆಗ ಇಗೋ, ಸಭಾಮಂದಿರದ ಅಧಿಕಾರಿಯಾಗಿದ್ದ ಯಾಯಾರನೆಂಬ ಹೆಸರಿನ ಮನುಷ್ಯನು ಬಂದು ಯೇಸುವಿನ ಪಾದಗಳ ಮುಂದೆ ಬಿದ್ದು ತನ್ನ ಮನೆಗೆ ಬರಬೇಕೆಂದು ಬೇಡಿಕೊಂಡನು.
ಆಗ ಯೇಸು ನ್ಯಾಯಶಾಸ್ತ್ರಿಗಳಿಗೂ ಫರಿಸಾಯರಿಗೂ--ಸಬ್ಬತ್ ದಿನದಲ್ಲಿ ಸ್ವಸ್ಥಮಾಡುವದು ನ್ಯಾಯವೋ ಎಂದು ಕೇಳಿದನು.
ಆಗ ಅವನು ಹೊರಟು ಹೋಗಿ ತನ್ನನ್ನು ಸ್ವಸ್ಥಪಡಿಸಿದಾತನು ಯೇಸುವೇ ಎಂದು ಯೆಹೂದ್ಯ ರಿಗೆ ತಿಳಿಸಿದನು.
ಯೇಸು ಕೆಸರುಮಾಡಿ ಅವನ ಕಣ್ಣುಗಳನ್ನು ತೆರೆದಾಗ ಅದು ಸಬ್ಬತ್ದಿನವಾಗಿತ್ತು.
ನ್ಯಾಯಪ್ರಮಾಣ ಮತ್ತು ಪ್ರವಾದಿಗಳಗ್ರಂಥವು ಪಾರಾಯಣವಾದ ಮೇಲೆ ಸಭಾಮಂದಿರದ ಅಧಿಕಾರಿ ಗಳು--ಜನರೇ, ಸಹೋದರರೇ, ಜನರಿಗೆ ಹೇಳತಕ್ಕ ಬುದ್ಧಿಮಾತೇನಾದರೂ ನಿಮಗಿದ್ದರೆ ಹೇಳಿರಿ ಎಂದು ಅವರಿಗೆ ಹೇಳಿ ಕಳುಹಿಸಿದರು.
ಸಭಾಮಂದಿರದ ಮುಖ್ಯಾಧಿಕಾರಿಯಾದ ಕ್ರಿಸ್ಪನು ತನ್ನ ಮನೆಯವರೆಲ್ಲರ ಸಹಿತ ಕರ್ತನಲ್ಲಿ ನಂಬಿಕೆಯಿಟ್ಟನು. ಕೊರಿಂಥ ದಲ್ಲಿ ಅನೇಕರು ಕೇಳಿ ನಂಬಿ ಬಾಸ್ತಿಸ್ಮ ಮಾಡಿಸಿಕೊಂಡರು.
ಆಗ ಗ್ರೀಕರೆಲ್ಲರೂ ಸಭಾಮಂದಿರದ ಮುಖ್ಯ ಅಧಿಕಾರಿಯಾಗಿದ್ದ ಸೋಸ್ಥೆನ ನನ್ನು ಹಿಡಿದುಕೊಂಡು ನ್ಯಾಯಸ್ಥಾನದ ಮುಂದೆ ಹೊಡೆದರು. ಗಲ್ಲಿಯೋನನಾದರೋ ಅವುಗಳಲ್ಲಿ ಒಂದಕ್ಕಾದರೂ ಲಕ್ಷ್ಯಕೊಡಲಿಲ್ಲ.
ದೇವರಲ್ಲಿ ಆಸಕ್ತರಾಗಿದ್ದಾರೆಂದು ನಾನು ಅವರ ವಿಷಯದಲ್ಲಿ ಸಾಕ್ಷಿಕೊಡುತ್ತೇನೆ; ಆದರೂ ಅವರ ಆಸಕ್ತಿಯು ಜ್ಞಾನಾನುಸಾರವಾದದ್ದಲ್ಲ.