ಅದು ಒಬ್ಬ ಮನುಷ್ಯನು ಸಾಸಿವೆಕಾಳನ್ನು ತೆಗೆದುಕೊಂಡು ಹೋಗಿ ತನ್ನ ತೋಟ ದಲ್ಲಿ ಹಾಕಿದ್ದಕ್ಕೆ ಹೋಲಿಕೆಯಾಗಿದೆ; ಅದು ಬೆಳೆದು ಒಂದು ದೊಡ್ಡ ಮರವಾಯಿತು; ಆಕಾಶದ ಪಕ್ಷಿಗಳು ಅದರ ಕೊಂಬೆಗಳಲ್ಲಿ ವಾಸಮಾಡಿದವು ಅಂದನು.
Cross references
ಧಾನ್ಯದ ಸಮೃದ್ಧಿಯು ದೇಶದಲ್ಲಿ ಬೆಟ್ಟಗಳ ತುದಿಯ ಮೇಲೆ ಇರುವದು; ಅದರ ಫಲವು ಲೆಬನೋನಿನ ಹಾಗೆ ಕದಲುವದು. ಪಟ್ಟಣದ ವರು ಭೂಮಿಯ ಸೊಪ್ಪಿನ ಹಾಗೆ ವೃದ್ಧಿಯಾಗುವರು.
ನನ್ನ ಸಹೋದರಿಯು, ಪತ್ನಿಯು, ಮುಚ್ಚಲ್ಪಟ್ಟ ತೋಟವೂ ಮುಚ್ಚಲ್ಪಟ್ಟ ಒರತೆಯೂ ಮುದ್ರೆ ಹಾಕಲ್ಪಟ್ಟ ಬುಗ್ಗೆಯೂ ಆಗಿದ್ದಾಳೆ.
ಓ ಉತ್ತರ ಗಾಳಿಯೇ, ಎಚ್ಚರವಾಗು! ದಕ್ಷಿಣ ಗಾಳಿಯೇ, ಬಾ! ನನ್ನ ತೋಟದ ಮೇಲೆ ಬೀಸು; ಅದರ ಸುಗಂಧಗಳು ಹರಿಯಲಿ. ನನ್ನ ಪ್ರಿಯನು ತನ್ನ ತೋಟದಲ್ಲಿ ಬಂದು ತನ್ನ ರಮ್ಯವಾದ ಫಲಗ ಳನ್ನು ತಿನ್ನಲಿ.
ನನ್ನ ಪ್ರಿಯನು ತೋಟಗಳಲ್ಲಿ ಮೇಯಿಸುವದಕ್ಕೂ ತಾವರೆಗಳನ್ನು ಕೂಡಿಸುವದಕ್ಕೂ ತನ್ನ ತೋಟಕ್ಕೆ ಸುಗಂಧಗಳ ಮಡಿಗೆ ಹೋಗಿದ್ದಾನೆ.
ತೋಟಗಳಲ್ಲಿ ವಾಸವಾಗಿರುವವನೇ, ಜತೆ ಗಾರರು ನಿನ್ನ ಶಬ್ದವನ್ನು ಆಲೈಸುತ್ತಾರೆ. ನಾನು ಕೇಳುವಂತೆ ಮಾಡು.ನನ್ನ ಪ್ರಿಯನೇ, ತ್ವರೆಮಾಡು, ಜಿಂಕೆಯ ಹಾಗೆ ಇಲ್ಲವೆ ಸುಗಂಧವುಳ್ಳ ಪರ್ವತಗಳ ಮೇಲಿರುವ ದುಪ್ಪಿ ಮರಿಯ ಹಾಗೆಯೆ ಇರು.
ಆ ಅಂತ್ಯ ದಿನಗಳಲ್ಲಿ ಆಗುವದೇನಂದರೆ--ಕರ್ತನ ಆಲಯದ ಪರ್ವತವು ಗುಡ್ಡಗಳಿಗಿಂತ ಎತ್ತರ ವಾಗಿ ಪರ್ವತಗಳ ತುದಿಯಲ್ಲಿ ನೆಲೆಯಾಗಿರುವದು. ಎಲ್ಲಾ ಜನಾಂಗಗಳು ಅದರ ಕಡೆಗೆ ತಂಡ ತಂಡವಾಗಿ ಬರುವವು.
ಅದನ್ನು ನೇಮಿಸುವದಕ್ಕೂ ಇಂದಿನಿಂದ ಎಂದೆಂದಿಗೂ ನೀತಿ ನ್ಯಾಯಗಳೊಂದಿಗೆ ಅದನ್ನು ಸ್ಥಾಪಿಸುವದಕ್ಕೂ ದಾವೀದನ ಸಿಂಹಾಸನ ಕ್ಕಾಗಲಿ ಅವನ ರಾಜ್ಯಕ್ಕಾಗಲಿ ಅವನ ಪರಿಪಾಲ ನೆಯ ಮತ್ತು ಶಾಂತಿಯ ಅಭಿವೃದ್ಧಿಗಾಗಲಿ ಅಂತ್ಯವೇ ಇಲ್ಲ; ಸೈನ್ಯಗಳ ಕರ್ತನ ಆಸಕ್ತಿಯು ಇದನ್ನು ನೆರವೇರಿ ಸುವದು.
ನೀನು ಕಳಕೊಂಡ ಮಕ್ಕಳ ಸ್ಥಳವು ನನಗೆ ಇಕ್ಕಟ್ಟಾಯಿತು; ನಾನು ವಾಸಿಸುವದಕ್ಕೆ ಸ್ಥಳ ಕೊಡು ಎಂದು ಹೇಳುವರು.
ನಿಮ್ಮ ತಂದೆಯಾದ ಅಬ್ರಹಾಮನನ್ನು ಮತ್ತು ನಿಮ್ಮನ್ನು ಹೆತ್ತ ಸಾರಳನ್ನು ದೃಷ್ಟಿಸಿರಿ; ನಾನು ಅವನೊಬ್ಬನನ್ನೇ ಕರೆದು ಆಶೀರ್ವ ದಿಸಿ ವೃದ್ಧಿಗೊಳಿಸಿದೆನು.
ನಮ್ಮ ಸುದ್ಧಿಯನ್ನು ಯಾರು ನಂಬಿದ್ದಾರೆ? ಕರ್ತನ ತೋಳು ಯಾರಿಗೆ ಪ್ರಕಟವಾ ಯಿತು?
ಆದಾಗ್ಯೂ ಆತನನ್ನು ಜಜ್ಜುವದು ಕರ್ತನಿಗೆ ಮೆಚ್ಚಿಕೆ ಯಾಗಿತ್ತು. ಆತನು (ದೇವರು) ಆತನನ್ನು ಸಂಕಟಕ್ಕೆ ಒಳಪಡಿಸಿದನು; ನೀನು ಆತನ ಪ್ರಾಣವನ್ನು ಪಾಪ ಕ್ಕೋಸ್ಕರ ಬಲಿಯನ್ನಾಗಿ ಮಾಡುವಾಗ ಆತನು ತನ್ನ ಸಂತಾನವನ್ನು ನೋಡುವನು. ಆತನು ತನ್ನ ದಿವಸ ಗಳನ್ನು ಹೆಚ್ಚಿಸುವನು, ಕರ್ತನ ಸಂತೋಷವು ಆತನ ಕೈಯಲ್ಲಿ ಸಫಲವಾಗುವದು.
ಕರ್ತನು ನಿನ್ನನ್ನು ನಿತ್ಯವೂ ನಡಿಸುತ್ತಾ ಮಳೆಯಿಲ್ಲದ ಕಾಲದಲ್ಲಿ ನಿನ್ನ ಪ್ರಾಣವನ್ನು ತೃಪ್ತಿಗೊಳಿಸಿ ನಿನ್ನ ಎಲುಬುಗಳನ್ನು ಬಲಪಡಿಸುವನು ಮತ್ತು ನೀನು ನೀರು ಹಾಕಿದ ತೋಟದ ಹಾಗೆಯೂ ಮುಗಿಯದ ಜಲಬುಗ್ಗೆಯ ಹಾಗೆಯೂ ಇರುವಿ.
ಹಾದುಹೋಗುವವರಿಲ್ಲದೆ ನೀನು ಬಿಡಲ್ಪಟ್ಟವಳೂ ಹಗೆ ಮಾಡಲ್ಪಟ್ಟವಳೂ ಆಗಿ ದ್ದಕ್ಕೆ ಬದಲಾಗಿ ನಿನ್ನನ್ನು ನಿತ್ಯವಾದ ಘನತೆಯೂ ಅನೇಕ ಸಂತತಿಗಳಲ್ಲಿ ಉಲ್ಲಾಸವಾಗಿಯೂ ಮಾಡು ತ್ತೇನೆ.
ಭೂಮಿಯು ತನ್ನ ಮೊಳಕೆಯನ್ನು ಹೇಗೆ ಹೊರಡಿಸುವದೋ ತೋಟವು ತನ್ನಲ್ಲಿ ಬಿತ್ತಿದ್ದನ್ನು ಹೇಗೆ ಮೊಳಿಸುವದೋ ಹಾಗೆಯೇ ದೇವರಾದ ಕರ್ತನ ನೀತಿಯನ್ನೂ ಸ್ತೋತ್ರವನ್ನೂ ಎಲ್ಲಾ ಜನಾಂಗಗಳ ಮುಂದೆ ಮೊಳೆಯಿಸುವನು.
ಆ ಕ್ರಯಪತ್ರವನ್ನು ನನ್ನ ಚಿಕ್ಕಪ್ಪನ ಮಗನಾದ ಹನಮೇಲನ ಮುಂದೆಯೂ ಕ್ರಯಪತ್ರ ದಲ್ಲಿ ರುಜು ಹಾಕಿದ ಸಾಕ್ಷಿಗಳ ಮುಂದೆಯೂ ಸೆರೆ ಮನೆಯ ಅಂಗಳದಲ್ಲಿ ಕೂತುಕೊಂಡಿದ್ದ ಯೆಹೂದ್ಯ ರೆಲ್ಲರ ಮುಂದೆಯೂ ಮಹ್ಸೇಮನ ಮಗನಾದ ನೇರೀ ಯನ ಮಗನಾದ ಬಾರೂಕನಿಗೆ ಕೊಟ್ಟೆನು.
ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇದ ಲ್ಲದೆ ನಾನು ಉನ್ನತವಾದ ದೇವದಾರಿನ ಎತ್ತರವಾದ ರೆಂಬೆಗಳನ್ನು ತೆಗೆದುಕೊಂಡು ಅದನ್ನು ನೆಡುವೆನು; ಎಳೆಯದಾದ ಒಂದನ್ನು ಕತ್ತರಿಸಿ ಎತ್ತರವಾದ ಪರ್ವತದ ಮೇಲೆ ನಾಟುವೆನು.
ಅದರ ಕೊಂಬೆಗಳಲ್ಲಿ ಆಕಾಶದ ಎಲ್ಲಾ ಪಕ್ಷಿಗಳು ತಮ್ಮ ಗೂಡುಗಳನ್ನು ಮಾಡಿದವು; ಅದರ ರೆಂಬೆ ಗಳ ಕೆಳಗೆ ಬಯಲಿನ ಎಲ್ಲಾ ಮೃಗಗಳು ಮರಿಗಳಿಗೆ ಜನ್ಮಕೊಟ್ಟವು; ಅದರ ಕೆಳಗೆ ನೆರಳಿನಲ್ಲಿ ಎಲ್ಲಾ ಮಹಾಜನಾಂಗಗಳು ವಾಸಮಾಡಿದವು.
ಆಮೇಲೆ ಅವನು ನನ್ನನ್ನು ಮತ್ತೆ ಆಲಯದ ಬಾಗಲಿನ ಕಡೆಗೆ ಕರೆದುಕೊಂಡು ಹೋದನು. ಇಗೋ, ಆಲಯದ ಹೊಸ್ತಿಲಿನ ಕೆಳಗಿ ನಿಂದ ನೀರು ಹೊರಟು ಪೂರ್ವದ ಕಡೆಗೆ ನೀರು ಹರಿಯಿತು; ಆಲಯದ ಮುಂಭಾಗದಲ್ಲಿ ನೀರು ಇತ್ತು; ಆ ನೀರು ಬಲಪಾರ್ಶ್ವದಿಂದ ಯಜ್ಞವೇದಿಯ ದಕ್ಷಿಣದ ಕಡೆಗೆ ಹರಿಯಿತು.
ನೀನು ನೋಡುತ್ತಿರಲಾಗಿ, ಒಂದು ಕಲ್ಲು ಕೈಗಳ ಸಹಾಯವಿಲ್ಲದೆ ಒಡೆಯಲ್ಪಟ್ಟು ಅರ್ಧ ಕಬ್ಬಿ ಣವೂ ಅರ್ಧ ಮಣ್ಣೂ ಆಗಿದ್ದ ಆ ವಿಗ್ರಹದ ಪಾದ ಗಳನ್ನು ಬಡಿದು ಅವುಗಳನ್ನು ಚೂರುಚೂರು ಮಾಡಿತು.
ಅರ ಸರ ದಿವಸಗಳಲ್ಲಿ ಪರಲೋಕದ ದೇವರು ಎಂದಿಗೂ ನಾಶವಾಗದ ರಾಜ್ಯವನ್ನು ಸ್ಥಾಪಿಸುವನು. ಅದರ ರಾಜ್ಯ ವನ್ನು ಬೇರೆ ಜನರಿಗೆ ಕೊಡದೆ ಆ ರಾಜ್ಯಗಳನ್ನೆಲ್ಲಾ ಧ್ವಂಸ ಮಾಡಿ ಮುಗಿಸಿ ಎಂದೆಂದಿಗೂ ನಿಲ್ಲುವದು.
ಅದರ ಎಲೆಗಳು ಅಂದವಾಗಿದ್ದವು, ಅದರ ಫಲವು ಬಹಳವಾಗಿತ್ತು; ಅದರಲ್ಲಿ ಎಲ್ಲರಿಗೂ ಆಹಾರವಿತ್ತು; ಬಯಲು ಮೃಗಗಳಿಗೆ ಅದರ ಕೆಳಗೆ ನೆರಳಿತ್ತು; ಆಕಾಶದ ಪಕ್ಷಿಗಳು ಅದರ ಕೊಂಬೆಗಳಲ್ಲಿ ವಾಸಿಸುತ್ತಿದ್ದವು, ಎಲ್ಲಾ ಜೀವಿಗಳಿಗೂ ಅದರಿಂದಲೇ ಆಹಾರ ಇರುತ್ತಿತ್ತು.
ಅದರ ಎಲೆಗಳು ಅಂದವಾಗಿದ್ದವು, ಫಲವು ಬಹಳವಾಗಿತ್ತು, ಅದರಲ್ಲಿ ಎಲ್ಲರಿಗೂ ಆಹಾರ ಇತ್ತು; ಅದರ ಕೆಳಗೆ ಬಯಲಿನ ಮೃಗಗಳು ವಾಸಮಾಡಿದ್ದವು; ಅದರ ಕೊಂಬೆಗಳಲ್ಲಿ ಆಕಾಶದ ಪಕ್ಷಿಗಳು ನಿವಾಸಮಾಡಿದ್ದವು.
ಅಂತ್ಯದಿವಸಗಳಲ್ಲಿ ಆಗುವದೇನಂದರೆ, ಕರ್ತನ ಆಲಯದ ಪರ್ವತವು ಬೆಟ್ಟಗಳ ತುದಿಯಲ್ಲಿ ನೆಲೆಯಾಗಿ ಗುಡ್ಡಗಳಿಗಿಂತ ಎತ್ತರ ವಾಗಿರುವದು; ಜನಗಳು ಅದರ ಬಳಿಗೆ ಪ್ರವಾಹದಂತೆ ಬರುವರು.
ಇದ ಲ್ಲದೆ ಆ ದಿನದಲ್ಲಿ ಅನೇಕ ಜನಾಂಗಗಳು ಕರ್ತನಿಗೆ ಅಂಟಿಕೊಂಡು ನನ್ನ ಜನರಾಗುವರು; ನಾನು ನಿನ್ನ ಮಧ್ಯದಲ್ಲಿ ವಾಸಮಾಡುವೆನು; ಸೈನ್ಯಗಳ ಕರ್ತನು ನನ್ನನ್ನು ನಿನ್ನ ಬಳಿಗೆ ಕಳುಹಿಸಿದ್ದಾನೆಂದು ತಿಳುಕೊಳ್ಳುವಿ.
ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಜನಗಳೂ ಅನೇಕ ಪಟ್ಟಣಗಳ ನಿವಾಸಿಗಳೂ ಇನ್ನು ಬರುವರು;
ಆದರೆ ಕರ್ತನಿಗೆ ತಿಳಿದಿರುವ ಒಂದು ದಿನ ಇರುವದು, ಅದು ಹಗಲೂ ಅಲ್ಲ, ರಾತ್ರಿಯೂ ಅಲ್ಲ; ಆದರೆ ಸಾಯಂಕಾಲದ ಸಮಯದಲ್ಲಿ ಬೆಳಕು ಇರುವದು.
ಆತನು ಮತ್ತೊಂದು ಸಾಮ್ಯವನ್ನು ಅವರಿಗೆ ಹೇಳಿದ್ದೇನಂದರೆ--ಒಬ್ಬ ಮನುಷ್ಯನು ತಕ್ಕೊಂಡು ಹೋಗಿ ತನ್ನ ಹೊಲದಲ್ಲಿ ಬಿತ್ತಿದ್ದ ಸಾಸಿವೆ ಕಾಳಿಗೆ ಪರಲೋಕರಾಜ್ಯವು ಹೋಲಿಕೆಯಾಗಿದೆ.
ಯೇಸು ಅವರಿಗೆ--ನಿಮ್ಮ ಅಪನಂಬಿಕೆಯ ದೆಸೆಯಿಂದಲೇ; ನಾನು ನಿಮಗೆ ನಿಜವಾಗಿ ಹೇಳುವದೇನಂದರೆ--ಸಾಸಿವೆ ಕಾಳಷ್ಟು ನಂಬಿಕೆ ನಿಮಗಿರುವದಾದರೆ ನೀವು ಈ ಬೆಟ್ಟಕ್ಕೆ--ಇಲ್ಲಿಂದ ಆ ಸ್ಥಳಕ್ಕೆ ಹೋಗು ಎಂದು ಹೇಳಿದರೆ ಅದು ಹೋಗುವದು; ಮತ್ತು ಯಾವದೂ ನಿಮಗೆ ಅಸಾಧ್ಯವಾಗಿರುವದಿಲ್ಲ.
ಭೂಮಿಯಲ್ಲಿರುವ ಎಲ್ಲಾ ಬೀಜಗಳಿಗಿಂತ ಚಿಕ್ಕದಾಗಿರುವ ಸಾಸಿವೆ ಕಾಳು ಭೂಮಿಯಲ್ಲಿ ಬಿತ್ತಲ್ಪಟ್ಟದ್ದಕ್ಕೆ ಅದು ಹೋಲಿಕೆ ಯಾಗಿದೆ.
ಕರ್ತನು ಅವರಿಗೆ-- ನಿಮಗೆ ಸಾಸಿವೆ ಕಾಳಿನಷ್ಟು ನಂಬಿಕೆ ಇರುವದಾದರೆ ನೀವು ಈ ಆಲದ ಮರಕ್ಕೆ--ನೀನು ಬೇರು ಸಹಿತ ಕಿತ್ತುಕೊಂಡು ಹೋಗಿ ಸಮುದ್ರದಲ್ಲಿ ನಾಟಿಕೋ ಎಂದು ಹೇಳುವದಾದರೆ ಅದು ನಿಮಗೆ ವಿಧೇಯ ವಾಗುವದು.
ಆಗ ಅವನ ಮಾತನ್ನು ಸಂತೋಷವಾಗಿ ಅಂಗೀಕರಿಸಿದವರು ಬಾಪ್ತಿಸ್ಮ ಮಾಡಿಸಿಕೊಂಡರು. ಅದೇ ದಿನದಲ್ಲಿ ಸುಮಾರು ಮೂರು ಸಾವಿರ ಜನರು ಅವರೊಂದಿಗೆ ಸೇರಿಸಲ್ಪಟ್ಟರು.
ಆದಾಗ್ಯೂ ವಾಕ್ಯವನ್ನು ಕೇಳಿದವರಲ್ಲಿ ಅನೇಕರು ನಂಬಿದರು; ಗಂಡಸರ ಸಂಖ್ಯೆ ಸುಮಾರು ಐದು ಸಾವಿರವಾಗಿತ್ತು.
ದೇವರು ಮೊದಲೇ ಅನ್ಯಜನರನ್ನು ದರ್ಶಿಸಿ ತನ್ನ ಹೆಸರಿಗಾಗಿ ಅವರೊ ಳಗಿಂದ ಒಂದು ಪ್ರಜೆಯನ್ನು ಆರಿಸಿಕೊಂಡ ವಿಧವನ್ನು ಸಿಮೆಯೋನನು ವಿವರಿಸಿದನಷ್ಟೆ.
ಅವರು ಅದನ್ನು ಕೇಳಿ ಕರ್ತನನ್ನು ಮಹಿಮೆಪಡಿಸಿ ಅವನಿಗೆ--ಸಹೋದರನೇ, ವಿಶ್ವಾಸಿ ಗಳಾದ ಯೆಹೂದ್ಯರು ಎಷ್ಟೋ ಸಾವಿರ ಮಂದಿ ಇದ್ದಾರೆಂಬದನ್ನು ನೀನು ನೋಡುತ್ತೀಯಲ್ಲಾ. ಅವರೆಲ್ಲರೂ ನ್ಯಾಯಪ್ರಮಾಣದ ವಿಷಯದಲ್ಲಿ ಅಭಿಮಾನವುಳ್ಳವರಾಗಿದ್ದಾರೆ.
ಹೀಗೆ ಯೆರೂಸಲೇಮ್ ಮೊದಲು ಗೊಂಡು ಇಲ್ಲುರಿಕದ ಸುತ್ತಲೂ ನಾನು ಕ್ರಿಸ್ತನ ಸುವಾರ್ತೆಯನ್ನು ಪೂರ್ಣವಾಗಿ ಸಾರಿದ್ದೇನೆ.
ಏಳನೆಯ ದೂತನು ತುತೂರಿಯನ್ನೂದಿದನು. ಆಗ ಪರಲೋಕದಲ್ಲಿ ಮಹಾಶಬ್ದಗಳುಂಟಾಗಿ-- ಈ ಲೋಕದ ರಾಜ್ಯಗಳು ನಮ್ಮ ಕರ್ತನ ಮತ್ತು ಆತನ ಕ್ರಿಸ್ತನ ರಾಜ್ಯಗಳಾದವು; ಆತನು ಯುಗ ಯುಗಾಂತರಗಳಲ್ಲಿಯೂ ಆಳುವನು ಎಂದು ಹೇಳಿ ದವು.