ಮನೇಯಜಮಾನನು ಒಂದು ಸಾರಿ ಎದ್ದು ಬಾಗಲನ್ನು ಮುಚ್ಚಿಕೊಂಡರೆ ನೀವು ಹೊರಗೆ ನಿಂತು ಕೊಂಡು ಬಾಗಲನ್ನು ತಟ್ಟುತ್ತಾ--ಕರ್ತನೇ, ಕರ್ತನೇ, ನಮಗಾಗಿ ತೆರೆ ಎಂದು ಹೇಳುವದಕ್ಕೆ ಆರಂಭಿಸಿದಾಗ ಆತನು ನಿಮಗೆ ಪ್ರತ್ಯುತ್ತರವಾಗಿ--ನೀವು ಎಲ್ಲಿಯ ವರೋ ನಾನರಿಯೆ ಎಂದು ಹೇಳುವನು.
Cross references
ದೇವರು ಅಪ್ಪಣೆ ಕೊಟ್ಟಿದ್ದ ಪ್ರಕಾರ ಒಳಗೆ ಸೇರಿದವುಗಳು ಗಂಡು ಹೆಣ್ಣಾಗಿದ್ದ ಸಕಲ ಶರೀರಗಳು ಒಳಗೆ ಹೋದವು. ಆಗ ಕರ್ತನು ಅವನನ್ನು ಒಳಗೆ ಸೇರಿಸಿ (ಬಾಗಲನ್ನು) ಮುಚ್ಚಿದನು.
ಇದಕ್ಕೋಸ್ಕರ ಭಕ್ತರೆಲ್ಲರು ನಿನ್ನನ್ನು ಕಂಡುಕೊಳ್ಳುವ ಕಾಲದಲ್ಲಿ ನಿನಗೆ ಪ್ರಾರ್ಥನೆ ಮಾಡುವರು; ನಿಶ್ಚಯವಾಗಿ ಬಹಳ ನೀರಿನ ಪ್ರವಾಹ ಗಳು ಅವನ ಸವಿಾಪಕ್ಕೆ ಬರುವದಿಲ್ಲ.
ಕರ್ತನು ಸಿಕ್ಕುವ ಕಾಲದಲ್ಲಿ ಆತನನ್ನು ಹುಡುಕಿರಿ; ಆತನು ಸವಿಾಪವಾಗಿರುವಾಗಲೇ ಆತನನ್ನು ಕರೆಯಿರಿ.
ಕರ್ತನೇ, ಕರ್ತನೇ ಎಂದು ನನಗೆ ಹೇಳುವ ಪ್ರತಿಯೊಬ್ಬನು ಪರಲೋಕರಾಜ್ಯದಲ್ಲಿ ಪ್ರವೇಶಿಸು ವದಿಲ್ಲ; ಆದರೆ ಪರಲೋಕದಲ್ಲಿರುವ ನನ್ನ ತಂದೆಯ ಚಿತ್ತದಂತೆ ಮಾಡುವವನೇ ಅದರಲ್ಲಿ ಪ್ರವೇಶಿ ಸುವನು.
ಅವರು ಕೊಂಡುಕೊಳ್ಳುವದಕ್ಕೆ ಹೋದಾಗ ಮದಲಿಂಗನು ಬಂದನು. ಆಗ ಸಿದ್ಧವಾಗಿ ದ್ದವರು ಮದುವೆಗೆ ಆತನೊಂದಿಗೆ ಒಳಕ್ಕೆ ಹೊದರು; ತರುವಾಯ ಬಾಗಲು ಮುಚ್ಚಲಾಯಿತು.
ಆತನು ಎಡಗಡೆ ಯಲ್ಲಿರುವವರಿಗೆ--ಶಾಪಗ್ರಸ್ತರೇ, ನೀವು ನನ್ನಿಂದ ತೊಲಗಿ ಸೈತಾನನಿಗೂ ಅವನ ದೂತರಿಗೂ ಸಿದ್ಧ ಮಾಡಲ್ಪಟ್ಟ ನಿತ್ಯ ಬೆಂಕಿಯೊಳಗೆ ಹೋಗಿರಿ.
ನನ್ನನ್ನು ನೀವು--ಕರ್ತನೇ, ಕರ್ತನೇ ಎಂದು ಕರೆದು ನಾನು ಹೇಳುವವುಗಳನ್ನು ನೀವು ಮಾಡದೆ ಇರುವದು ಯಾಕೆ?
ಆದರೆ ಆತನು--ನೀವು ಎಲ್ಲಿ ಯವರೋ ನಾನರಿಯೆ; ಅಕ್ರಮ ಮಾಡುವವರಾದ ನೀವೆಲ್ಲರೂ ನನ್ನಿಂದ ಹೊರಟುಹೋಗಿರಿ ಎಂದು ಹೇಳುವನೆಂದು ನಾನು ನಿಮಗೆ ಹೇಳುತ್ತೇನೆ.
(ಆತನು--ಅಂಗೀಕಾರದ ಸಮಯದಲ್ಲಿ ನಾನು ನಿನ್ನ ಮನವಿಯನ್ನು ಕೇಳಿದೆನು, ರಕ್ಷಣೆಯ ದಿನದಲ್ಲಿ ನಾನು ನಿನಗೆ ಸಹಾಯಮಾಡಿದೆನು ಎಂದು ಹೇಳುತ್ತಾನೆ; ಇಗೋ, ಈಗಲೇ ಆ ಅಂಗೀಕಾರದ ಸಮಯ; ಇಗೋ, ಈಗಲೇ ಆ ರಕ್ಷಣೆಯ ದಿನ).
ಆದದರಿಂದ(ಪವಿತ್ರಾತ್ಮನು ಹೇಳುವ ಪ್ರಕಾರ--ನೀವು ಈ ದಿನ ದೇವರ ಶಬ್ದಕ್ಕೆ ಕಿವಿಗೊಟ್ಟರೆ
ತರುವಾಯ ಅವನು (ತನ್ನ ತಂದೆಯ) ಆಶೀರ್ವಾದವನ್ನು ಬಾಧ್ಯವಾಗಿ ಹೊಂದಬೇಕೆಂದು ಕಣ್ಣೀರು ಸುರಿಸುತ್ತಾ ಬೇಡಿಕೊಂಡರೂ ಪಶ್ಚಾತ್ತಾಪಕ್ಕೆ ಮಾರ್ಗವಿಲ್ಲದೆ ನಿರಾಕರಿಸಲ್ಪಟ್ಟನೆಂದು ನೀವು ಬಲ್ಲಿರಿ.