ಇದಲ್ಲದೆ ಪೂರ್ವ ಪಶ್ಚಿಮ ಉತ್ತರ ದಕ್ಷಿಣಗಳಿಂದ ಅವರು ಬಂದು ದೇವರ ರಾಜ್ಯದಲ್ಲಿ ಕೂತುಕೊಳ್ಳುವರು.
Cross references
ನಿನ್ನ ಸಂತತಿಯು ಭೂಮಿಯ ಧೂಳಿನಷ್ಟು ಆಗುವದು; ನೀನು ಪಶ್ಚಿಮ ಪೂರ್ವ ಉತ್ತರ ದಕ್ಷಿಣಗಳಿಗೆ ಹರಡಿಕೊಳ್ಳುತ್ತೀ. ನಿನ್ನಿಂದಲೂ ನಿನ್ನ ಸಂತತಿಯಿಂದಲೂ ಭೂಮಿಯ ಎಲ್ಲಾ ಕುಲದವರು ಆಶೀರ್ವದಿಸಲ್ಪ ಡುವರು.
ನಾನು--ಒಪ್ಪಿಸಿಬಿಡು ಎಂದು ಉತ್ತರಕ್ಕೆ ತಡೆಯಬೇಡ ಎಂದು ದಕ್ಷಿಣಕ್ಕೆ ಹೇಳಿ, ದೂರದಲ್ಲಿರುವ ನನ್ನ ಕುಮಾರರನ್ನು ಭೂಮಿಯ ಅಂತ್ಯದಿಂದ ನನ್ನ ಕುಮಾರ್ತೆಯರನ್ನು
ಆತನೇ ಈಗ ಹೀಗನ್ನುತ್ತಾನೆ--ನೀನು ನನ್ನ ಸೇವಕನಾಗಿ ಮಾಡಬೇಕಾದವುಗಳಲ್ಲಿ ಯಾಕೋಬನ ಕುಲಗಳನ್ನು ಉನ್ನತಪಡಿ ಸುವದೂ ಇಸ್ರಾಯೇಲಿನಲ್ಲಿ ರಕ್ಷಿತರಾದವರನ್ನು ತಿರಿಗಿ ಬರಮಾಡುವದೂ ಅಲ್ಪ ಕಾರ್ಯವೇ; ನನ್ನ ರಕ್ಷಣೆಯು ಲೋಕದ ಕಟ್ಟಕಡೆಯ ವರೆಗೆ ವ್ಯಾಪಿಸುವಂತೆ ನಿನ್ನನ್ನು ಅನ್ಯಜನಾಂಗಗಳಿಗೆ ಬೆಳಕನ್ನಾಗಿ ದಯಪಾಲಿಸುವೆನು.
ನಿನ್ನ ಗುಡಾರದ ಸ್ಥಳವನ್ನು ವಿಸ್ತರಿಸು ನಿನ್ನ ನಿವಾಸದ ಪರದೆಗಳು ಹರಡಲಿ; ಹಿಂತೆ ಗೆಯಬೇಡ; ನಿನ್ನ ಹಗ್ಗಗಳನ್ನು ಉದ್ದ ಮಾಡಿ ಗೂಟ ಗಳನ್ನು ಬಲಪಡಿಸು.
ನಾನು ಅವರ ಕ್ರಿಯೆಗಳನ್ನೂ ಅವರ ಆಲೋಚನೆಗಳನ್ನೂ ಬಲ್ಲೆನು. ಎಲ್ಲಾ ಜನಾಂಗ ಗಳನ್ನೂ ಭಾಷೆಯವರನ್ನೂ ಇನ್ನು ಮುಂದೆ ಒಟ್ಟಿಗೆ ಬರಮಾಡುವೆನು; ಆಗ ಅವರು ಬಂದು ನನ್ನ ಮಹಿ ಮೆಯನ್ನು ನೋಡುವರು.
ಸೂರ್ಯೋದಯವು ಮೊದಲುಗೊಂಡು ಅದರ ಅಸ್ತಮಾನದ ವರೆಗೂ ನನ್ನ ಹೆಸರು ಅನ್ಯಜನಾಂಗ ಗಳಲ್ಲಿ ಘನವಾಗಿರುವದು; ಸಕಲ ಸ್ಥಳಗಳಲ್ಲಿ ನನ್ನ ಹೆಸರಿಗೆ ಧೂಪವೂ ಶುದ್ಧಕಾಣಿಕೆಯೂ ಅರ್ಪಿಸ ಲ್ಪಡುವದು; ನನ್ನ ಹೆಸರು ಅನ್ಯಜನಾಂಗಗಳಲ್ಲಿ ಘನ ವಾಗಿ ರುವದೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.
ನಾನು ನಿಮಗೆ ಹೇಳುವದೇನಂದರೆ--ಬಹಳ ಜನರು ಪೂರ್ವದಿಂದಲೂ ಪಶ್ಚಿಮದಿಂದಲೂ ಬಂದು ಪರ ಲೋಕರಾಜ್ಯದಲ್ಲಿ ಅಬ್ರಹಾಮ್ ಇಸಾಕ್ ಯಾಕೋಬ್ ಅವರೊಂದಿಗೆ ಕೂತುಕೊಳ್ಳುವರು.
ಆತನು ತನ್ನ ದೂತರನ್ನು ಕಳುಹಿಸಿ ಭೂಮಿಯ ಕಟ್ಟಕಡೆಯಿಂದ ಆಕಾಶದ ಕಟ್ಟಕಡೆಯ ವರೆಗೆ ತಾನು ಆರಿಸಿಕೊಂಡ ವರನ್ನು ನಾಲ್ಕು ದಿಕ್ಕುಗಳಿಂದಲೂ ಒಟ್ಟುಗೂಡಿಸುವನು.
ಆದಕಾರಣ ದೇವರ ರಕ್ಷಣೆಯು ಅನ್ಯಜನಾಂಗದವರಿಗೆ ಕಳುಹಿಸಲ್ಪಟ್ಟಿದೆ; ಅದನ್ನು ಅವರು ಕೇಳುವರು ಎಂಬದಾಗಿ ನಿಮಗೆ ತಿಳಿದಿರಲಿ ಅಂದನು.
ಅದೇನಂದರೆ, ಅನ್ಯಜನರು (ಯೆಹೂದ್ಯರೊಂದಿಗೆ) ಸಹ ಬಾಧ್ಯರೂ ಒಂದೇ ದೇಹದವರೂ ಸುವಾರ್ತೆಯಿಂದ ಕ್ರಿಸ್ತನ ಮೂಲಕ ಆತನ ವಾಗ್ದಾನದಲ್ಲಿ ಪಾಲುಗಾರರೂ ಆಗಿರಬೇಕೆಂ ಬದೇ.
ನೀವು ಸತ್ಯದಲ್ಲಿ ದೇವರ ಕೃಪೆಯನ್ನು ಕೇಳಿ ತಿಳುಕೊಂಡ ದಿವಸದಿಂದ ನಿಮ್ಮ ಬಳಿಗೆ ಬಂದ ಆ ಸುವಾರ್ತೆಯು ಲೋಕದಲ್ಲೆಲ್ಲಾ ಫಲಕೊಟ್ಟಂತೆ ನಿಮ್ಮಲ್ಲಿಯೂ ಫಲ ಕೊಡುತ್ತದೆ.
ಪೌಲನೆಂಬ ನಾನು ಈ ಸುವಾರ್ತೆಗೆ ಸೇವಕನಾದೆನು; ನೀವು ಕೇಳಿದಂಥ ಮತ್ತು ಆಕಾಶದ ಕೆಳಗಿರುವ ಸರ್ವಸೃಷ್ಟಿಗೆ ಸಾರಲ್ಪಟ್ಟಂಥ ಸುವಾರ್ತೆಯಿಂದ ಉಂಟಾದ ನಿರೀಕ್ಷೆ ಯನ್ನು ಬಿಟ್ಟು ತೊಲಗಿಹೋಗದೆ ಅಸ್ತಿವಾರದ ಮೇಲೆ ನಿಂತು ಸ್ಥಿರವಾಗಿದ್ದು ನಂಬಿಕೆಯಲ್ಲಿ ನೆಲೆಗೊಂಡಿರು ವದಾದರೆ
ಇದಾದ ಮೇಲೆ ಇಗೋ, ನಾನು ನೋಡಲಾಗಿ ಸಮಸ್ತ ಜನಾಂಗ ಕುಲ ಪ್ರಜೆ ಭಾಷೆಗಳೊಳಗಿಂದ ಯಾರೂ ಎಣಿಸಲಾಗದಂತ ಮಹಾ ಸಮೂಹವು ಬಿಳೀ ನಿಲುವಂಗಿಗಳನ್ನು ತೊಟ್ಟುಕೊಂಡವರಾಗಿ ತಮ್ಮ ಕೈಗಳಲ್ಲಿ ಖರ್ಜೂರದ ಗರಿಗಳನ್ನು ಹಿಡಿದುಕೊಂಡು ಸಿಂಹಾಸನದ ಮುಂದೆಯೂ ಕುರಿಮರಿಯಾದಾತನ ಮುಂದೆಯೂ