ಆದಾಗ್ಯೂ ಈ ದಿವಸ ನಾಳೆ ಮತ್ತು ನಾಡದ್ದು ನಾನು ಸಂಚರಿಸಲೇಬೇಕು; ಯಾಕಂದರೆ ಒಬ್ಬ ಪ್ರವಾದಿಯು ಯೆರೂಸಲೇಮಿನ ಹೊರಗೆ ಕೊಲ್ಲಲ್ಪಡಲಾರನು.
Cross references
ಇಗೋ, ನಾವು ಯೆರೂಸಲೇಮಿಗೆ ಹೋಗುತ್ತೇವೆ. ಅಲ್ಲಿ ಮನುಷ್ಯ ಕುಮಾರನು ಪ್ರಧಾನ ಯಾಜಕರಿಗೂ ಶಾಸ್ತ್ರಿಗಳಿಗೂ ಒಪ್ಪಿಸಲ್ಪಡುವನು; ಅವರು ಆತನಿಗೆ ಮರಣ ದಂಡನೆಯನ್ನು ವಿಧಿಸುವರು.
ಅದಕ್ಕೆ ಜನರ ಸಮೂಹವು --ಈತನು ಗಲಿಲಾಯ ದ ನಜರೇತಿನ ಪ್ರವಾದಿಯಾದ ಯೇಸುವು ಎಂದು ಹೇಳಿದರು.
ಆದರೆ ಅವರು ಆತನನ್ನು ಅಂಗೀಕರಿಸಲಿಲ್ಲ. ಯಾಕಂದರೆ ಆತನು ಯೆರೂಸಲೇ ಮಿಗೆ ಹೋಗುವಾತನೋ ಎಂಬಂತೆ ಆತನ ಮುಖ ವಿತ್ತು.
ಆದರೆ ಯೇಸು ಅವರಿಗೆ--ನನ್ನನ್ನು ಕಳುಹಿಸಿದಾತನ ಚಿತ್ತವನ್ನು ನೆರವೇರಿಸಿ ಆತನ ಕೆಲಸ ವನ್ನು ಪೂರೈಸುವದೇ ನನ್ನ ಆಹಾರ ಅಂದನು.
ನನ್ನನ್ನು ಕಳುಹಿಸಿದಾತನ ಕೆಲಸ ಗಳನ್ನು ಹಗಲಿರುವಾಗ ನಾನು ಮಾಡತಕ್ಕದ್ದು; ರಾತ್ರಿ ಬರುತ್ತದೆ, ಆಗ ಯಾವ ಮನುಷ್ಯನೂ ಕೆಲಸಮಾಡ ಲಾರನು.
ಯೇಸು--ಹಗಲಿಗೆ ಹನ್ನೆರಡು ತಾಸುಗಳು ಇವೆಯಲ್ಲವೇ? ಯಾವ ಮನುಷ್ಯನಾದರೂ ಹಗಲಿ ನಲ್ಲಿ ತಿರುಗಾಡಿದರೆ ಈ ಲೋಕದ ಬೆಳಕನ್ನು ನೋಡು ವದರಿಂದ ಅವನು ಎಡವುವದಿಲ್ಲ.
ಹೀಗಿರುವದರಿಂದ ಯೇಸು ಯೆಹೂದ್ಯರ ಮಧ್ಯದಲ್ಲಿ ಬಹಿರಂಗವಾಗಿ ತಿರುಗಾಡಲಿಲ್ಲ. ಆದರೆ ಅಲ್ಲಿಂದ ಅಡವಿಗೆ ಸವಿಾಪ ದಲ್ಲಿದ್ದ ಪ್ರದೇಶದ ಎಫ್ರಾಯಿಮ್ ಎಂಬ ಪಟ್ಟಣಕ್ಕೆ ಹೋಗಿ ಅಲ್ಲಿ ತನ್ನ ಶಿಷ್ಯರ ಸಂಗಡ ಇದ್ದನು.
ಆಗ ಯೇಸು ಅವ ರಿಗೆ--ಇನ್ನು ಸ್ವಲ್ಪಕಾಲವೇ ಬೆಳಕು ನಿಮ್ಮೊಂದಿಗೆ ಇರು ತ್ತದೆ. ಕತ್ತಲೆ ನಿಮ್ಮನ್ನು ಮುಸುಕಿಕೊಳ್ಳದಂತೆ ನಿಮಗೆ ಬೆಳಕಿರುವಾಗಲೇ ನಡೆಯಿರಿ; ಯಾಕಂದರೆ ಕತ್ತಲೆಯಲ್ಲಿ ನಡೆಯುವವನು ತಾನು ಎಲ್ಲಿಗೆ ಹೋಗುತ್ತಾನೆಂದು ತಿಳಿಯನು.
ದೇವರು ನಜರೇತಿನ ಯೇಸುವನ್ನು ಪವಿತ್ರಾತ್ಮನಿಂದಲೂ ಬಲದಿಂದಲೂ ಅಭಿಷೇಕಿಸಿದ ನೆಂಬದನ್ನೂ ಹೇಗೆ ಆತನು ಒಳ್ಳೇದನ್ನು ಮಾಡುತ್ತಾ ಸೈತಾನನಿಂದ ಬಾಧಿಸಲ್ಪಡುತ್ತಿರುವವರೆಲ್ಲರನ್ನು ಗುಣ ಮಾಡುತ್ತಾ ಸಂಚರಿಸಿದನೆಂಬದನ್ನು ನೀವು ತಿಳಿದಿದ್ದೀರಿ; ಯಾಕಂದರೆ ದೇವರು ಆತನ ಸಂಗಡ ಇದ್ದನು.
ಯೆರೂ ಸಲೇಮಿನಲ್ಲಿ ವಾಸವಾಗಿರುವವರೂ ಅವರ ಅಧಿಕಾರಿ ಗಳೂ ಆತನನ್ನಾಗಲೀ ಪ್ರತಿ ಸಬ್ಬತ್ದಿನದಲ್ಲಿ ಪಾರಾ ಯಣವಾಗುವ ಪ್ರವಾದಿಗಳ ವಾಕ್ಯಗಳನ್ನಾಗಲೀ ಗ್ರಹಿಸದೆ ಆತನನ್ನು ಅಪರಾಧಿಯೆಂದು ತೀರ್ಪುಮಾಡಿ ಆ ವಾಕ್ಯಗಳನ್ನೇ ನೆರವೇರಿಸಿದರು.