ಇಲ್ಲವೆ ಸಿಲೊವಾಮಿನಲ್ಲಿ ಗೋಪುರವು ಬಿದ್ದು ಸತ್ತ ಆ ಹದಿನೆಂಟು ಜನರು ಯೆರೂಸಲೇಮಿನಲ್ಲಿ ವಾಸವಾಗಿರುವ ಎಲ್ಲಾ ಮನುಷ್ಯರಿಗಿಂತಲೂ ಪಾಪಿಷ್ಠ ರೆಂದು ಯೋಚಿಸುತ್ತೀರೋ?
Cross references
ಮಿಕ್ಕಾದವರು ಅಫೇಕ್ ಪಟ್ಟಣದೊಳಗೆ ಓಡಿ ಹೋದರು. ಅಲ್ಲಿ ಒಂದು ಗೋಡೆಯು ಉಳಿದ ಇಪ್ಪತ್ತೇಳು ಸಾವಿರ ಮಂದಿಯ ಮೇಲೆ ಬಿತ್ತು. ಆದರೆ ಬೆನ್ಹದದನು ಪಟ್ಟಣಕ್ಕೆ ಓಡಿಬಂದು ಕೊಠಡಿಯ ಒಳ ಕೊಠಡಿಯಲ್ಲಿ ಬಚ್ಚಿಟ್ಟುಕೊಂಡನು.
ಆದರೆ ಮಿಚ್ಚದ ಅರ್ಧಪಾಲಿಗೆ ಅಧಿಪತಿಯಾದ ಕೊಲ್ಹೋಜೆಯ ಮಗನಾದ ಶಲ್ಲೂನನು ಬುಗ್ಗೆಯ ಬಾಗಲನ್ನು ಭದ್ರಪಡಿಸಿ ಮಾಳಿಗೆಯನ್ನು ಹಾಕಿಸಿ ಅದರ ಕದಗಳನ್ನೂ ಜೋಡಣೆಗಳನ್ನೂ ಅಗುಳಿಗಳನ್ನೂ ನಿಲ್ಲಿಸಿ ಅರಸನ ತೋಟದ ಬಳಿಯಲ್ಲಿರುವ ಸಿಲೋವ ಎಂಬ ಕೊಳದ ಗೋಡೆಯನ್ನು ದಾವೀದನ ಪಟ್ಟಣದಿಂದ ಇಳಿಯುವ ಮೆಟ್ಟಲುಗಳ ಮಟ್ಟಿಗೂ ಕಟ್ಟಿಸಿದನು.
ಅಗೋ, ದೊಡ್ಡ ಗಾಳಿ ಬಂದು ಮನೆಯ ನಾಲ್ಕು ಮೂಲೆಗಳಿಗೆ ಹೊಡೆದದ್ದರಿಂದ ಅದು ಯೌವನಸ್ಥರ ಮೇಲೆ ಬಿತ್ತು; ಅವರು ಸತ್ತರು; ನಾನೊಬ್ಬನು ಮಾತ್ರ ನಿನಗೆ ತಿಳಿಸುವುದಕ್ಕೆ ತಪ್ಪಿಸಿಕೊಂಡೆನು ಅಂದನು.
ನಮ್ಮ ಸಾಲಗಾರರನ್ನು ನಾವು ಕ್ಷಮಿಸುವಂತೆ ನಮ್ಮ ಸಾಲಗಳನ್ನು ನಮಗೆ ಕ್ಷಮಿಸು.
ಅವನು ಲೆಕ್ಕವನ್ನು ತಕ್ಕೊಳ್ಳಲು ಪ್ರಾರಂಭಿಸಿದಾಗ ಹತ್ತು ಸಾವಿರ ತಲಾಂತುಗಳನ್ನು ಸಾಲ ಕೊಡಬೇಕಾದವನನ್ನು ಅವನ ಬಳಿಗೆ ತಂದರು.
ಸಾಲಕೊಡುವ ಒಬ್ಬನಿಗೆ ಇಬ್ಬರು ಸಾಲಗಾರರಿದ್ದರು; ಒಬ್ಬನು ಐದುನೂರು ನಾಣ್ಯಗಳನ್ನೂ ಮತ್ತೊಬ್ಬನು ಐವತ್ತು ನಾಣ್ಯಗಳನ್ನೂ ಕೊಡಬೇಕಾಗಿತ್ತು.
ನಮಗೆ ಸಾಲಗಾರ ರಾಗಿರುವ ಪ್ರತಿಯೊಬ್ಬನನ್ನು ಕ್ಷಮಿಸುವಂತೆಯೇ ನಮ್ಮ ಪಾಪಗಳನ್ನು ನಮಗೆ ಕ್ಷಮಿಸು; ನಮ್ಮನ್ನು ಶೋಧನೆ ಯೊಳಗೆ ಸೇರಿಸಬೇಡ; ಆದರೆ ಕೇಡಿನಿಂದ ನಮ್ಮನ್ನು ತಪ್ಪಿಸು ಎಂದು ಹೇಳಿರಿ ಅಂದನು.
ಅವನಿಗೆ--ಹೋಗು, ಸಿಲೋವ ಕೊಳ ದಲ್ಲಿ ತೊಳೆದುಕೋ(ಸಿಲೋವ ಅಂದರೆ ಕಳುಹಿಸಲ್ಪಟ್ಟ ವನು ಎಂದರ್ಥ) ಅಂದನು. ಅವನು ಹೋಗಿ ತೊಳೆದುಕೊಂಡು ದೃಷ್ಟಿಯುಳ್ಳವನಾಗಿ ಬಂದನು.
ಅವನು ಪ್ರತ್ಯುತ್ತರವಾಗಿ--ಯೇಸು ಎಂದು ಕರೆಯಲ್ಪಟ್ಟ ಮನುಷ್ಯನು ಕೆಸರುಮಾಡಿ ನನ್ನ ಕಣ್ಣಿಗೆ ಹಚ್ಚಿ ನನಗೆ--ಸಿಲೋವಕೊಳಕ್ಕೆ ಹೋಗಿ ತೊಳೆ ದುಕೋ ಎಂದು ಹೇಳಲು ನಾನು ಹೋಗಿ ತೊಳೆದು ಕೊಂಡು ದೃಷ್ಟಿಯನ್ನು ಹೊಂದಿದೆನು ಅಂದನು.