ಆಗ ಆತನ ಸಂಗಡ ಊಟಕ್ಕೆ ಕೂತವರಲ್ಲಿ ಒಬ್ಬನು ಈ ಸಂಗತಿಗಳನ್ನು ಕೇಳಿ ಆತನಿಗೆ--ದೇವರ ರಾಜ್ಯದಲ್ಲಿ ಊಟಮಾಡುವವನು ಧನ್ಯನು ಎಂದು ಹೇಳಿದನು.
Cross references
ನಾನು ನಿಮಗೆ ಹೇಳುವದೇನಂದರೆ--ಬಹಳ ಜನರು ಪೂರ್ವದಿಂದಲೂ ಪಶ್ಚಿಮದಿಂದಲೂ ಬಂದು ಪರ ಲೋಕರಾಜ್ಯದಲ್ಲಿ ಅಬ್ರಹಾಮ್ ಇಸಾಕ್ ಯಾಕೋಬ್ ಅವರೊಂದಿಗೆ ಕೂತುಕೊಳ್ಳುವರು.
ಅವರು ಕೊಂಡುಕೊಳ್ಳುವದಕ್ಕೆ ಹೋದಾಗ ಮದಲಿಂಗನು ಬಂದನು. ಆಗ ಸಿದ್ಧವಾಗಿ ದ್ದವರು ಮದುವೆಗೆ ಆತನೊಂದಿಗೆ ಒಳಕ್ಕೆ ಹೊದರು; ತರುವಾಯ ಬಾಗಲು ಮುಚ್ಚಲಾಯಿತು.
ಒಡೆಯನು ಬಂದಾಗ ಯಾರು ಎಚ್ಚರವಾಗಿರುವದನ್ನು ಅವನು ಕಾಣುವನೋ ಆ ಸೇವಕರು ಧನ್ಯರು; ನಾನು ನಿಮಗೆ ನಿಜವಾಗಿ ಹೇಳುತ್ತೇನೆ, ಅವನು ಬಂದು ನಡುಕಟ್ಟಿಕೊಂಡು ಅವರನ್ನು ಊಟಕ್ಕೆ ಕೂಡ್ರಿಸಿ ಅವರಿಗೆ ತಾನೇ ಉಪಚರಿಸುವನು.
ಇದಲ್ಲದೆ ಪೂರ್ವ ಪಶ್ಚಿಮ ಉತ್ತರ ದಕ್ಷಿಣಗಳಿಂದ ಅವರು ಬಂದು ದೇವರ ರಾಜ್ಯದಲ್ಲಿ ಕೂತುಕೊಳ್ಳುವರು.
ಹೀಗೆ ನೀವು ನನ್ನ ರಾಜ್ಯದಲ್ಲಿ ನನ್ನ ಮೇಜಿನ ಬಳಿಯಲ್ಲಿ ತಿಂದು ಕುಡಿದು ಮತ್ತು ಸಿಂಹಾಸನಗಳ ಮೇಲೆ ಕೂತುಕೊಂಡು ಇಸ್ರಾ ಯೇಲಿನ ಹನ್ನೆರಡು ಕುಲಗಳಿಗೆ ನ್ಯಾಯತೀರಿಸುವಿರಿ ಅಂದನು.
ನಾಶವಾಗುವ ಆಹಾರಕ್ಕಾಗಿ ಅಲ್ಲ, ನಿತ್ಯಜೀವ ವನ್ನುಂಟು ಮಾಡುವ ಆಹಾರಕ್ಕೋಸ್ಕರ ದುಡಿಯಿರಿ; ಅದನ್ನು ಮನುಷ್ಯಕುಮಾರನು ನಿಮಗೆ ಕೊಡುವನು; ತಂದೆಯಾದ ದೇವರು (ಇದಕ್ಕಾಗಿ) ಆತನಿಗೆ ಮುದ್ರೆ ಹಾಕಿದ್ದಾನೆ ಅಂದನು.
ಇದಲ್ಲದೆ ಅವನು--ಕುರಿಮರಿ ಯಾದಾತನ ವಿವಾಹದ ಔತಣಕ್ಕೆ ಕರೆಯಲ್ಪಟ್ಟವರು ಧನ್ಯರು ಎಂಬದಾಗಿ ಬರೆ ಎಂದು ನನಗೆ ಹೇಳಿದನು. ಇದಲ್ಲದೆ ಅವನು--ಇವುಗಳು ದೇವರ ನಿಜವಾದ ಮಾತುಗಳಾಗಿವೆ ಎಂದು ನನಗೆ ಹೇಳಿದನು.