ಆದರೆ ಅವರೆಲ್ಲರೂ ಒಂದೇ ಮನ ಸ್ಸಿನಿಂದ ನೆವ ಹೇಳಲಾರಂಭಿಸಿ ಮೊದಲನೆಯವನು ಅವನಿಗೆ--ನಾನು ಒಂದು ತುಂಡು ಭೂಮಿಯನ್ನು ಕೊಂಡುಕೊಂಡಿದ್ದೇನೆ, ಹೋಗಿ ಅದನ್ನು ನೋಡುವದು ಅವಶ್ಯವಾಗಿದೆ; ನನ್ನನ್ನು ಕ್ಷಮಿಸಬೇಕೆಂದು ನಿನ್ನನ್ನು ಬೇಡಿಕೊಳ್ಳುತ್ತೇನೆ ಅಂದನು.
Cross references
ಆತನು ಮೊದಲು--ಇದೇ ನಿಮಗೆ ಅವಶ್ಯಕವಾದ ವಿಶ್ರಾಂತಿ. ಬಳಲಿದವರನ್ನು ವಿಶ್ರಮಗೊಳಿಸಿರಿ, ನಿಮಗೆ ಅನುಕೂಲವಾದ ಉಪ ಶಮನ ಇದೇ ಎಂದು ಹೇಳಿದಾಗ್ಯೂ ಅವರು ಕೇಳ ಲಿಲ್ಲ.
ದರ್ಶನವೆಲ್ಲಾ ನಿಮಗೆ ಮುದ್ರೆ ಹಾಕಿ ದ ವಾಕ್ಯಗಳ ಪುಸ್ತಕದ ಹಾಗಾಯಿತು; ಅದನ್ನು ಅಕ್ಷರ ಬಲ್ಲವನಿಗೆ ಕೊಟ್ಟು ಇದನ್ನು ಓದು ಎಂದು ಬೇಡಿದರೆ ಅವನು--ಮುದ್ರೆ ಹಾಕಿದೆಯಲ್ಲಾ, ಆಗುವದಿಲ್ಲ ಅನ್ನು ವನು;
ಅವಳಿಗೆ ವಿರೋಧವಾಗಿ ಯುದ್ಧವನ್ನು ಸಿದ್ಧಮಾಡಿರಿ; ಏಳಿರಿ, ಮಧ್ಯಾಹ್ನದಲ್ಲಿ ಏರಿ ಹೋಗೋಣ, ನಮಗೆ ಅಯ್ಯೋ! ಹೊತ್ತು ಮುಣುಗುತ್ತದಲ್ಲಾ; ಸಂಜೆಯ ನೆರಳುಗಳು ಉದ್ದವಾ ಗುತ್ತವೆ.
ಆಮೇಲೆ ಬಂದು ನನ್ನ ಹೆಸರಿನಲ್ಲಿ ಕರೆಯಲ್ಪಟ್ಟ ಈ ಆಲಯದಲ್ಲಿ ನನ್ನ ಮುಂದೆ ನಿಂತು ಕೊಂಡು--ನಾವು ಈ ಅಸಹ್ಯವಾದವುಗಳನ್ನೆಲ್ಲಾ ಮಾಡುವ ಹಾಗೆ ಒಪ್ಪಿಸಲ್ಪಟ್ಟಿದ್ದೇವೆಂದು ಹೇಳು ವಿರೋ?
ಆದದರಿಂದ ನೀನು ಈ ಜನರಿಗೋಸ್ಕರ ಪ್ರಾರ್ಥನೆ ಮಾಡಬೇಡ; ಅವರಿಗೋಸ್ಕರ ಮೊರೆ ಯನ್ನೂ ಪ್ರಾರ್ಥನೆಯನ್ನೂ ಎತ್ತಬೇಡ ಇಲ್ಲವೆ ನನಗೆ ವಿಜ್ಞಾಪನೆ ಮಾಡಬೇಡ; ನಾನು ಅದನ್ನು ಕೇಳಿಸಿಕೊಳ್ಳು ವದಿಲ್ಲ.
ಕರೆಯಲ್ಪಟ್ಟವರು ಅದನ್ನು ಅಲಕ್ಷ್ಯಮಾಡಿ ಒಬ್ಬನು ತನ್ನ ಹೊಲಕ್ಕೂ ಇನ್ನೊಬ್ಬನು ತನ್ನ ವ್ಯಾಪಾರಕ್ಕೂ ಹೊರಟುಹೋದರು.
ನೋಹನು ನಾವೆಯಲ್ಲಿ ಸೇರಿದ ದಿವಸದ ವರೆಗೆ ಪ್ರಳಯವು ಬರುವದಕ್ಕಿಂತ ಮುಂಚಿನ ಆ ದಿವಸಗಳಲ್ಲಿ ಜನರು ತಿನ್ನುತ್ತಾ ಕುಡಿಯುತ್ತಾ ಮದುವೆ ಮಾಡಿಕೊಳ್ಳುತ್ತಾ ಮದುವೆ ಮಾಡಿಕೊಡುತ್ತಾ ಇದ್ದರು.
ಮುಳ್ಳುಗಳ ಮಧ್ಯದಲ್ಲಿ ಬಿದ್ದ ಬೀಜದವರು ಯಾರಂದರೆ ಅವರು ಕೇಳಿದ ಮೇಲೆ ಮುಂದರಿದು ಈ ಜೀವನದ ಚಿಂತೆಗಳಿಂದಲೂ ಐಶ್ವರ್ಯಗಳಿಂದಲೂ ಭೋಗಗಳಿಂದಲೂ ಅಡಗಿಸ ಲ್ಪಟ್ಟು ಪರಿಪೂರ್ಣವಾಗಿ ಫಲಿಸದವರು.
ನೋಹನ ದಿವಸಗಳಲ್ಲಿ ಹೇಗೆ ಇತ್ತೋ ಅದೇ ರೀತಿಯಲ್ಲಿ ಮನುಷ್ಯಕುಮಾರನ ದಿವಸಗಳಲ್ಲಿಯೂ ಇರುವದು.
ಅವನು ಬಹಳ ವ್ಯಥೆಗೊಂಡದ್ದನ್ನು ಯೇಸು ನೋಡಿ--ಐಶ್ವರ್ಯ ವಂತರು ದೇವರ ರಾಜ್ಯದಲ್ಲಿ ಸೇರುವದು ಎಷ್ಟೋ ಕಷ್ಟ.
ಯೋಹಾನನ ಬಾಪ್ತಿಸ್ಮವು ಪರಲೋಕ ದಿಂದಲೋ ಇಲ್ಲವೆ ಮನುಷ್ಯರಿಂದಲೋ ಎಂದು ಕೇಳಿದನು.
ಆತನು ತನ್ನ ಸ್ವಂತದವರ ಬಳಿಗೆ ಬಂದನು. ಆತನ ಸ್ವಂತದವರು ಆತನನ್ನು ಅಂಗೀಕರಿಸಲಿಲ್ಲ.
ಆದರೆ ನೀವು ಜೀವವನ್ನು ಹೊಂದುವಂತೆ ನನ್ನ ಬಳಿಗೆ ಬರುವದಿಲ್ಲ.
ಆದರೆ ಯೆಹೂದ್ಯರು ಜನ ಸಮೂಹಗಳನ್ನು ನೋಡಿ ಹೊಟ್ಟೇಕಿಚ್ಚಿನಿಂದ ತುಂಬಿ ದವರಾಗಿ ಪೌಲನು ಹೇಳಿದವುಗಳನ್ನು ವಿರೋಧಿಸಿ ದೇವದೂಷಣೆ ಮಾಡುತ್ತಾ ಎದುರು ಮಾತನಾಡಿದರು.
ಸೀಲ ತಿಮೊಥೆಯರು ಮಕೆದೋನ್ಯದಿಂದ ಬಂದಾಗ ಪೌಲನು ಆತ್ಮದಲ್ಲಿ ಒತ್ತಾಯ ಮಾಡಲ್ಪಟ್ಟು ಯೇಸುವೇ ಕ್ರಿಸ್ತನೆಂದು ಯೆಹೂದ್ಯರಿಗೆ ಸಾಕ್ಷಿಕೊಟ್ಟನು.
ಹೀಗೆ ಅವರಲ್ಲಿ ವಿಭಾಗವಾದಾಗ ಪೌಲನು ಅವರಿಗೆ--ಯೆಶಾಯನು ಪವಿತ್ರಾತ್ಮನಿಂದ ನಮ್ಮ ಪಿತೃಗಳಿಗೆ ವಿಹಿತ ವಾಗಿ ಹೇಳಿದ್ದೇನಂದರೆ--
ಆದರೆ ಐಶ್ವರ್ಯವಂತರಾಗ ಬೇಕೆಂದು ಮನಸ್ಸು ಮಾಡುವವರು ಶೋಧನೆಯಲ್ಲಿಯೂ ಉರ್ಲಿನಲ್ಲಿಯೂ ಸಿಕ್ಕಿಕೊಂಡು ಅನೇಕ ಬುದ್ಧಿಹೀನತೆಯ ಮತ್ತು ಹಾನಿಕರವಾದ ದುರಾಶೆಗಳಲ್ಲಿ ಬೀಳುತ್ತಾರೆ. ಇಂಥ ಆಶೆಗಳು ಮನುಷ್ಯರನ್ನು ಸಂಹಾರ ನಾಶನಗಳಲ್ಲಿ ಮುಳುಗಿಸುತ್ತವೆ.
ಅವರು ಸತ್ಯಕ್ಕೆ ಕಿವಿಗೊಡದೆ ಕಲ್ಪನಾಕಥೆಗಳನ್ನು ಕೇಳುವದಕ್ಕೆ ತಿರುಗಿಕೊಳ್ಳುವರು.
ಯಾಕಂದರೆ ದೇಮನು ಇಹಲೋಕವನ್ನು ಪ್ರೀತಿಸಿ ನನ್ನನ್ನು ತೊರೆದುಬಿಟ್ಟು ಥೆಸಲೋನಿಕಕ್ಕೆ ಹೋದನು; ಕ್ರೆಸ್ಕನು ಗಲಾತ್ಯಕ್ಕೂ ತೀತನು ದಲ್ಮಾತ್ಯಕ್ಕೂ ಹೋದರು;
ಯಾವ ಜಾರನಾಗಲಿ--ಏಸಾವನಂಥ ಪ್ರಾಪಂಚಿಕನಾಗಲಿ ನಿಮ್ಮಲ್ಲಿ ಇರದಂತೆಯೂ ಜಾಗ್ರತೆ ಯಿಂದ ನೋಡಿಕೊಳ್ಳಿರಿ. ಆ ಏಸಾವನು ಒಂದು ತುತ್ತನ್ನಕ್ಕಾಗಿ ತನ್ನ ಚೊಚ್ಚಲತನದ ಹಕ್ಕನ್ನು ಮಾರಿ ಬಿಟ್ಟನು;
ಲೋಕವನ್ನಾಗಲಿ ಲೋಕದಲ್ಲಿರುವವುಗಳ ನ್ನಾಗಲಿ ಪ್ರೀತಿಸಬೇಡಿರಿ. ಯಾವನಾದರೂ ಲೋಕ ವನ್ನು ಪ್ರೀತಿಸಿದರೆ ತಂದೆಯ ಪ್ರೀತಿಯು ಅವನಲ್ಲಿಲ್ಲ.