ಆಗ ಯಜ ಮಾನನು ಸೇವಕನಿಗೆ--ನೀನು ಬೀದಿಗಳಿಗೂ ಬೇಲಿಗಳ ಬಳಿಗೂ ಹೊರಟುಹೋಗಿ ನನ್ನ ಮನೆ ತುಂಬಿಕೊಳ್ಳುವಂತೆ ಒಳಗೆ ಬರಲು ಅವರನ್ನು ಬಲ ವಂತಮಾಡು;
Cross references
ಇಗೋ, ಪ್ರಭುಗಳೇ, ನೀವು ನಿಮ್ಮ ದಾಸನ ಮನೆಯಲ್ಲಿ ಇಳುಕೊಂಡು ರಾತ್ರಿ ಕಳೆಯಿರಿ; ನಿಮ್ಮ ಕಾಲುಗಳನ್ನು ತೊಳೆದುಕೊಳ್ಳಿರಿ; ಬೆಳಿಗ್ಗೆ ಎದ್ದು ನಿಮ್ಮ ಮಾರ್ಗವನ್ನು ಹಿಡಿದು ಹೋಗಬಹುದು ಎಂದು ಬೇಡಿಕೊಂಡನು. ಅದಕ್ಕೆ ಅವರು--ಹಾಗಲ್ಲ; ನಾವು ರಾತ್ರಿಯೆಲ್ಲಾ ಬೀದಿಯಲ್ಲಿ ಇರುತ್ತೇವೆ ಅಂದರು.
ತನ್ನ ಕರುಣೆ ಯನ್ನೂ ಸತ್ಯತೆಯನ್ನೂ ಇಸ್ರಾಯೇಲಿನ ಮನೆಗೋಸ್ಕರ ಜ್ಞಾಪಕ ಮಾಡಿಕೊಂಡಿದ್ದಾನೆ; ಭೂಮಿಯ ಕೊನೆಗಳೆಲ್ಲಾ ನಮ್ಮ ದೇವರ ರಕ್ಷಣೆಯನ್ನು ನೋಡಿವೆ.
ಪರಿಶುದ್ಧ ತೆಯ ಸೌಂದರ್ಯಗಳಲ್ಲಿ ಉದಯದ ಗರ್ಭದಲ್ಲಿಂದ ನಿನ್ನ ಜನರು ಬಲದ ದಿವಸದಲ್ಲಿ ಸ್ವಇಷ್ಟವುಳ್ಳವ ರಾಗಿರುವರು; ಇಬ್ಬನಿಯಂತೆ ನಿನ್ನ ಯೌವನವು ನಿನಗೆ ಇರುವದು.
ಆ ದಿನದಲ್ಲಿ ಹುಡುಕುವ ಅನ್ಯಜನರಿಗೆ ಇಷ ಯನ ಬೇರು ಒಂದು ಗುರುತಾಗಿ ನಿಲ್ಲುವದು; ಅವನ ವಿಶ್ರಾಂತಿ ವೈಭವವುಳ್ಳದ್ದಾಗಿರುವದು.
ಆ ದಿನದಲ್ಲಿ ಇಸ್ರಾಯೇಲು ಐಗುಪ್ತ್ಯರ ಸಂಗ ಡಲೂ ಅಶ್ಶೂರ್ಯರ ಸಂಗಡಲೂ ಮೂರನೆಯ ದಾಗಿ ದೇಶದ ಮಧ್ಯದಲ್ಲಿ ಆಶೀರ್ವಾದವಾಗಿರುವದು.ನನ್ನ ಪ್ರಜೆಯಾದ ಐಗುಪ್ತಕ್ಕೂ ನನ್ನ ಕೈಗಳ ಕೆಲಸ ವಾದ ಅಶ್ಶೂರ್ಯಕ್ಕೂ ನನ್ನ ಸ್ವಾಸ್ತ್ಯವಾದ ಇಸ್ರಾಯೇ ಲಿಗೂ ನಿಮಗೆ ಆಶೀರ್ವಾದ ಎಂದು ಹೇಳಿ ಅವರಿಗೆ ಆಶೀರ್ವಾದ ಕೊಡುವನು.
ಆ ದಿನದಲ್ಲಿ ಆಗುವದೇನಂದರೆ--ದೊಡ್ಡ ತುತೂರಿಯು ಊದಲ್ಪಡುವದು, ಆಗ ಅಶ್ಶೂರ ದೇಶ ದಲ್ಲಿ ಹಾಳಾದವರೂ ಐಗುಪ್ತದೇಶದಲ್ಲಿರುವ ತಳ್ಳಲ್ಪ ಟ್ಟವರೂ ಯೆರೂಸಲೇಮಿನಲ್ಲಿರುವ ಒಂದು ಪರಿಶುದ್ಧ ಪರ್ವತದ ಬಳಿಗೆ ಬಂದು ಕರ್ತನನ್ನು ಆರಾಧಿಸುವರು.
ಯಾಕೋಬನ್ನು ತನ್ನ ಕಡೆಗೆ ತಿರಿಗಿ ಸೇರಿಸಿಕೊಳ್ಳ ಬೇಕೆಂತಲೂ ಇಸ್ರಾಯೇಲು ತನ್ನ ಕಡೆಗೆ ಕೂಡಿಕೊಳ್ಳು ವಂತೆಯೂ ಆತನು ಗರ್ಭದಲ್ಲಿಯೇ ನನ್ನನ್ನು ತನ್ನ ಸೇವಕನನ್ನಾಗಿ ರೂಪಿಸಿದನು. ಆದರೂ ನಾನು ಕರ್ತನ ದೃಷ್ಟಿಯಲ್ಲಿ ಗೌರವವುಳ್ಳವನಾಗಿರುವೆನು; ನನ್ನ ದೇವರೇ ನನಗೆ ಬಲವಾಗಿರುವನು.
ಅವರ ಮಧ್ಯದಲ್ಲಿ ಒಂದು ಗುರುತನ್ನಿಟ್ಟು ಅವರಲ್ಲಿ ತಪ್ಪಿಸಿಕೊಂಡವರನ್ನು ಜನಾಂಗಗಳಿಗೂ ತಾರ್ಷೀಷಿಗೂ ಫೂಲಿಗೂ ಲೂದಿಗೂ ಬಿಲ್ಲು ಬೊಗ್ಗಿಸುವವರಿಗೂ ತೂಬಲಿಗೂ ಯಾವಾನಿಗೂ ನನ್ನ ಸಮಾಚಾರವನ್ನು ಕೇಳದೆ ನನ್ನ ಮಹಿಮೆಯನ್ನು ನೋಡದೆ ಇರುವ ದೂರದ ದ್ವೀಪ ಗಳಿಗೂ ಕಳುಹಿಸುವೆನು; ಅವರು ಅನ್ಯಜನಾಂಗಗಳಲ್ಲಿ ನನ್ನ ಮಹಿಮೆಯನ್ನು ತಿಳಿಸುವರು.
ಆ ದಿನದಲ್ಲಿ ಆಗುವದೇನಂದರೆ, ಯೆರೂಸಲೇಮಿ ನೊಳಗಿದ್ದ ಜೀವಜಲಗಳು ಹೊರಡುವವು; ಅವುಗ ಳಲ್ಲಿ ಅರ್ಧ ಪೂರ್ವ ಸಮುದ್ರಕ್ಕೆ ಅರ್ಧ ಪಶ್ಚಿಮ ಸಮುದ್ರಕ್ಕೆ ಹೋಗುವವು; ಅದು ಬೇಸಿಗೆ ಕಾಲ ದಲ್ಲಿಯೂ ಚಳಿಗಾಲದಲ್ಲಿಯೂ ಇರುವದು.
ಸೂರ್ಯೋದಯವು ಮೊದಲುಗೊಂಡು ಅದರ ಅಸ್ತಮಾನದ ವರೆಗೂ ನನ್ನ ಹೆಸರು ಅನ್ಯಜನಾಂಗ ಗಳಲ್ಲಿ ಘನವಾಗಿರುವದು; ಸಕಲ ಸ್ಥಳಗಳಲ್ಲಿ ನನ್ನ ಹೆಸರಿಗೆ ಧೂಪವೂ ಶುದ್ಧಕಾಣಿಕೆಯೂ ಅರ್ಪಿಸ ಲ್ಪಡುವದು; ನನ್ನ ಹೆಸರು ಅನ್ಯಜನಾಂಗಗಳಲ್ಲಿ ಘನ ವಾಗಿ ರುವದೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.
ಆದದರಿಂದ ನಾನು ನಿಮಗೆ ಹೇಳುವದೇನಂದರೆ--ದೇವರ ರಾಜ್ಯವು ನಿಮ್ಮಿಂದ ತೆಗೆಯಲ್ಪಟ್ಟು ಅದರ ಫಲಗಳನ್ನು ಕೊಡುವ ಜನಾಂಗಕ್ಕೆ ಕೊಡಲ್ಪಡುವದು.
ಆದದರಿಂದ ನೀವು ಹೆದ್ದಾರಿಗಳಿಗೆ ಹೊರಟುಹೋಗಿ ಕಂಡವರನ್ನೆಲ್ಲಾ ಮದುವೆಗೆ ಕರೆಯಿರಿ ಅಂದನು.
ಆದದರಿಂದ ನೀವು ಹೋಗಿ ಎಲ್ಲಾ ಜನಾಂಗಗಳಿಗೆ ಬೋಧಿಸಿ ತಂದೆಯ, ಮಗನ, ಪರಿಶುದ್ಧಾತ್ಮನ ಹೆಸರಿನಲ್ಲಿ ಬಾಪ್ತಿಸ್ಮ ಮಾಡಿರಿ;ಇದಲ್ಲದೆ ನಾನು ನಿಮಗೆ ಆಜ್ಞಾಪಿಸಿದ್ದೆಲ್ಲವನ್ನು ಕೈಕೊಳ್ಳುವ ಹಾಗೆ ಅವರಿಗೆ ಬೋಧಿಸಿರಿ; ಮತ್ತು ಇಗೋ, ಲೋಕಾಂತ್ಯದ ವರೆಗೂ ಯಾವಾಗಲೂ ನಾನು ನಿಮ್ಮ ಸಂಗಡ ಇದ್ದೇನೆ ಅಂದನು. ಆಮೆನ್.
ಆದರೆ ಅವರು ಆತನಿಗೆ--ನಮ್ಮೊಂದಿಗೆ ಇರು; ಯಾಕಂದರೆ ಈಗ ಸಾಯಂಕಾಲ ವಾಗುತ್ತಾ ಇದೆ ಮತ್ತು ಹಗಲು ಬಹಳ ಮಟ್ಟಿಗೆ ಕಳೆಯಿತು ಎಂದು ಹೇಳಿ ಆತನನ್ನು ಬಲವಂತ ಮಾಡಿ ದರು. ಆಗ ಆತನು ಅವರೊಂದಿಗೆ ಇರುವದಕ್ಕಾಗಿ ಹೋದನು.
ಆದರೆ ಕರ್ತನು ಅವನಿಗೆ--ನೀನು ಹೋಗು; ಯಾಕಂದರೆ ಆ ಮನುಷ್ಯನು ಅನ್ಯಜನರ ಮುಂದೆಯೂ ಅರಸುಗಳ ಮುಂದೆಯೂ ಇಸ್ರಾಯೇಲ್ಯರ ಮುಂದೆಯೂ ನನ್ನ ಹೆಸರನ್ನು ಹೊರುವದಕ್ಕಾಗಿ ನಾನು ಆರಿಸಿಕೊಂಡ ಪಾತ್ರೆಯಾಗಿದ್ದಾನೆ.
ಪೇತ್ರನು ಈ ಮಾತುಗಳನ್ನು ಇನ್ನೂ ಹೇಳು ತ್ತಿರುವಾಗ ವಾಕ್ಯವನ್ನು ಕೇಳಿದವರೆಲ್ಲರ ಮೇಲೆ ಪವಿ ತ್ರಾತ್ಮನು ಇಳಿದನು.
ಅವರು ಇವುಗಳನ್ನು ಕೇಳಿ ಮೌನವಾಗಿದ್ದು ದೇವ ರನ್ನು ಕೊಂಡಾಡಿ--ಹಾಗಾದರೆ ಅನ್ಯ ಜನಾಂಗದವ ರಿಗೂ ಜೀವಕ್ಕಾಗಿ ಮಾನಸಾಂತರವನ್ನು ದೇವರು ದಯಪಾಲಿಸಿದ್ದಾನೆ ಎಂದು ಹೇಳಿದರು.
ಯಾಕಂ ದರೆ--ನೀನು ಲೋಕದ ಕಟ್ಟಕಡೆಯ ವರೆಗೆ ರಕ್ಷಣೆಗೆ ಕಾರಣವಾಗಿರುವಂತೆ ನಾನು ನಿನ್ನನ್ನು ಅನ್ಯಜನಾಂಗಗಳಿಗೂ ಬೆಳಕನ್ನಾಗಿ ನೇಮಿಸಿದ್ದೇನೆ ಎಂದು ಹೇಳಿದ ಹಾಗೆ ಕರ್ತನು ನಮಗೆ ಅಪ್ಪಣೆ ಕೊಟ್ಟಿದ್ದಾನೆ.
ಆಕೆಯೂ ಆಕೆಯ ಮನೆಯವರೂ ಬಾಪ್ತಿಸ್ಮ ಮಾಡಿಸಿಕೊಂಡ ಮೇಲೆ--ನಾನು ಕರ್ತನಿಗೆ ನಂಬಿಗಸ್ತಳಾದವಳೆಂದು ನೀವು ತೀರ್ಮಾನಿಸಿದರೆ ನನ್ನ ಮನೆಗೆ ಬಂದು ಇರಬೇಕು ಎಂದು ಆಕೆಯು ನಮ್ಮನ್ನು ಬೇಡಿಕೊಂಡು ಬಲವಂತಮಾಡಿದಳು.
ಅವರು ಎದುರಿಸಿ ದೇವದೂಷಣೆ ಮಾಡಲಾಗಿ ಅವನು ತನ್ನ ವಸ್ತ್ರವನ್ನು ಝಾಡಿಸಿ ಅವರಿಗೆ--ನಿಮ್ಮ ರಕ್ತವು ನಿಮ್ಮ ತಲೆಗಳ ಮೇಲೆ ಇರಲಿ; ನಾನು ಇಂದಿನಿಂದ ದೋಷರಹಿತನಾಗಿ ಅನ್ಯಜನರ ಬಳಿಗೆ ಹೋಗುತ್ತೇನೆ ಎಂದು ಹೇಳಿ
ಅದಕ್ಕೆ ಆತನು--ಹೋಗು, ನಾನು ನಿನ್ನನ್ನು ದೂರಕ್ಕೆ ಅನ್ಯಜನರ ಬಳಿಗೆ ಕಳುಹಿಸುವೆನು ಎಂದು ನನಗೆ ಹೇಳಿದನು.
ಅವರ ಕಣ್ಣುಗಳನ್ನು ತೆರೆಯುವದಕ್ಕೂ ಮತ್ತು ಕತ್ತಲೆಯಿಂದ ಬೆಳಕಿಗೂ ಸೈತಾನನ ಅಧಿಕಾರದಿಂದ ದೇವರ ಕಡೆಗೆ ಅವರನ್ನು ತಿರುಗಿಸುವದಕ್ಕೂ ಅವರು ನನ್ನಲ್ಲಿ ಇಡುವ ನಂಬಿಕೆಯಿಂದಾಗುವ ಪಾಪಕ್ಷಮಾ ಪಣೆಯನ್ನೂ ಪವಿತ್ರರಾದವರಲ್ಲಿ ಸ್ವಾಸ್ಥ್ಯವನ್ನೂ ಹೊಂದುವಂತೆ ಮಾಡುವದಕ್ಕಾಗಿ ನಾನು
ಆದಕಾರಣ ದೇವರ ರಕ್ಷಣೆಯು ಅನ್ಯಜನಾಂಗದವರಿಗೆ ಕಳುಹಿಸಲ್ಪಟ್ಟಿದೆ; ಅದನ್ನು ಅವರು ಕೇಳುವರು ಎಂಬದಾಗಿ ನಿಮಗೆ ತಿಳಿದಿರಲಿ ಅಂದನು.
ಆದರೆ--ಅವರು ಕೇಳಲಿಲ್ಲವೇನು ಎಂದು ನಾನು ಕೇಳುತ್ತೇನೆ. ಹೌದು ನಿಜವೇ, ಅವರ ಧ್ವನಿಯು ಭೂಮಿಯಲ್ಲೆಲ್ಲಾ ಪ್ರಸರಿಸಿತು, ಅವರ ನುಡಿಗಳು ಲೋಕದ ಕಟ್ಟಕಡೆಯ ವರೆಗೂ ವ್ಯಾಪಿಸಿದವು.
ಅನ್ಯಜನರಾದ ನಿಮ್ಮೊಂದಿಗೆ ನಾನು ಮಾತನಾಡು ತ್ತೇನೆ. ನಾನು ಅನ್ಯಜನಗಳಿಗೆ ಅಪೊಸ್ತಲನಾಗಿ ರುವದರಿಂದ ನನ್ನ ಉದ್ಯೋಗವನ್ನು ಗಣನೆಗೆ ತರುತ್ತೇನೆ.
ಈ ಕಾರಣದಿಂದ ನಾನು ಅನ್ಯಜನಗಳ ಮಧ್ಯದಲ್ಲಿ ನಿನ್ನನು ಅರಿಕೆ ಮಾಡಿ ನಿನ್ನ ನಾಮವನ್ನು ಸಂಕೀರ್ತಿಸುವೆನು ಎಂದು ಬರೆದಿರುವ ಪ್ರಕಾರ ಅನ್ಯಜನಗಳು ದೇವರ ಕರುಣೆಗಾಗಿ ಆತನನ್ನು ಮಹಿಮೆಪಡಿಸುವರು.
ಎಲ್ಲರಿಂದಲೂ ನಾನು ಸ್ವತಂತ್ರನಾಗಿದ್ದರೂ ಇನ್ನೂ ಹೆಚ್ಚು ಜನರನ್ನು ಸಂಪಾದಿಸಿಕೊಳ್ಳುವದಕ್ಕೋಸ್ಕರ ನನ್ನನ್ನು ಎಲ್ಲರಿಗೂ ಸೇವಕನನ್ನಾಗಿ ಮಾಡಿಕೊಂಡಿದ್ದೇನೆ.
ನಾವು ಕರ್ತನ ಭಯವನ್ನು ಅರಿತವರಾದ ಕಾರಣ ಮನುಷ್ಯರನ್ನು ಒಡಂಬಡಿಸುತ್ತೇವೆ; ಆದರೆ ನಾವು ದೇವರಿಗೂ ನಿಮ್ಮ ಮನಸ್ಸಾಕ್ಷಿಗಳಿಗೂ ತೋರಿ ಬಂದಿದ್ದೇವೆಂದು ನಾನು ಭರವಸವುಳ್ಳವನಾಗಿದ್ದೇನೆ.
ದೇವರೇ ನಮ್ಮ ಮೂಲಕ ನಿಮ್ಮನ್ನು ಬೇಡಿ ಕೊಳ್ಳುತ್ತಾನೋ ಎಂಬಂತೆ ನಾವು ಈಗ ಕ್ರಿಸ್ತನ ರಾಯಭಾರಿಗಳಾಗಿದ್ದೇವೆ. ದೇವರೊಂದಿಗೆ ಸಮಾ ಧಾನವಾಗಿರೆಂದು ಕ್ರಿಸ್ತನಿಗೆ ಬದಲಾಗಿ ನಾವು ನಿಮ್ಮನ್ನು ಬೇಡಿಕೊಳ್ಳುತ್ತೇವೆ.ನಾವು ಆತನಲ್ಲಿ ದೇವರ ನೀತಿಯಾಗುವಂತೆ ದೇವರು ಪಾಪವನ್ನರಿಯ ಆತನನ್ನು ನಮಗೋಸ್ಕರ ಪಾಪವಾಗ ಮಾಡಿದನು.
ಆದದರಿಂದ ನಾವು ಆತನೊಂದಿಗೆ ಕೆಲಸ ನಡಿಸುವವರಾಗಿದ್ದೇವೆ; ನೀವು ಸಹ ಹೊಂದಿದ ದೇವರ ಕೃಪೆಯನ್ನು ವ್ಯರ್ಥಮಾಡಿ ಕೊಳ್ಳಬೇಡಿರಿ ಎಂದು ನಿಮ್ಮನ್ನು ಬೇಡಿಕೊಳ್ಳುತ್ತೇವೆ.
ಆದಕಾರಣ ಪೂರ್ವಕಾಲದಲ್ಲಿ ಶಾರೀರಿಕವಾಗಿ ಅನ್ಯಜನರಾಗಿದ್ದು ಶರೀರದಲ್ಲಿ ಕೈಗಳಿಂದ ಮಾಡಲ್ಪಟ ಸುನ್ನತಿಯಿದ್ದವರೆಂದು ಕರೆಯಲ್ಪಟ್ಟವರಿಂದ ಸುನ್ನತಿಯಿಲ್ಲ ದವರೆಂದು ನೀವು ಕರೆಯಲ್ಪಟ್ಟಿದ್ದೀರಿ.
ಪೌಲನೆಂಬ ನಾನು ಈ ಸುವಾರ್ತೆಗೆ ಸೇವಕನಾದೆನು; ನೀವು ಕೇಳಿದಂಥ ಮತ್ತು ಆಕಾಶದ ಕೆಳಗಿರುವ ಸರ್ವಸೃಷ್ಟಿಗೆ ಸಾರಲ್ಪಟ್ಟಂಥ ಸುವಾರ್ತೆಯಿಂದ ಉಂಟಾದ ನಿರೀಕ್ಷೆ ಯನ್ನು ಬಿಟ್ಟು ತೊಲಗಿಹೋಗದೆ ಅಸ್ತಿವಾರದ ಮೇಲೆ ನಿಂತು ಸ್ಥಿರವಾಗಿದ್ದು ನಂಬಿಕೆಯಲ್ಲಿ ನೆಲೆಗೊಂಡಿರು ವದಾದರೆ
ಕ್ರಿಸ್ತ ಯೇಸುವಿನಲ್ಲಿ ಪ್ರತಿಯೊಬ್ಬನನ್ನು ಪರಿಪೂರ್ಣ ನನ್ನಾಗಿ ಮಾಡುವಂತೆ ಪ್ರತಿಯೊಬ್ಬನನ್ನು ಎಚ್ಚರಿಸುತ್ತಾ ಎಲ್ಲಾ ಜ್ಞಾನದಲ್ಲಿ ಪ್ರತಿಯೊಬ್ಬನಿಗೂ ಬೋಧಿಸುತ್ತಾ ನಾವು ಆತನನ್ನು ಸಾರುವವರಾಗಿದ್ದೇವೆ.ನನ್ನಲ್ಲಿ ಬಲದಿಂದ ಕಾರ್ಯ ಮಾಡುವಾತನ ಕೆಲಸಕ್ಕನು ಸಾರವಾಗಿ ನಾನು ಸಹ ಅದಕ್ಕಾಗಿ ಪ್ರಯಾಸಪಡುತ್ತಾ ಹೋರಾಡುತ್ತೇನೆ.
ವಾಕ್ಯವನ್ನು ಸಾರು, ಅನುಕೂಲವಾದ ಕಾಲದಲ್ಲಿಯೂ ಅನುಕೂಲವಿಲ್ಲದ ಕಾಲದಲ್ಲಿಯೂ ಅದರಲ್ಲಿ ಆಸಕ್ತ ನಾಗಿರು; ಪೂರ್ಣದೀರ್ಘಶಾಂತಿಯಿಂದಲೂ ಉಪ ದೇಶದಿಂದಲೂ ಖಂಡಿಸು, ಗದರಿಸು, ಎಚ್ಚರಿಸು.