ಅದೇ ಪ್ರಕಾರ ಮಾನಸಾಂತರಪಡುವ ಒಬ್ಬ ಪಾಪಿಯ ವಿಷಯವಾಗಿ ದೇವದೂತರ ಮುಂದೆ ಸಂತೋಷವಾಗುವದೆಂದು ನಾನು ನಿಮಗೆ ಹೇಳುತ್ತೇನೆ ಅಂದನು.
Cross references
ಆಗ ಆತನು ಕನಿಕರಪಟ್ಟು ಅವನ ಬಿನ್ನಹವನ್ನು ಕೇಳಿ ಯೆರೂಸ ಲೇಮಿಗೆ ತನ್ನ ರಾಜ್ಯಕ್ಕೆ ಅವನನ್ನು ತಿರಿಗಿ ಬರಮಾಡಿ ದನು. ಆಗ ಕರ್ತನೇ ದೇವರೆಂದು ಮನಸ್ಸೆಯು ತಿಳಿದುಕೊಂಡನು.
ದುಷ್ಟನು ಸಾಯುವದರಲ್ಲಿ ನನಗೆ ಸ್ವಲ್ಪವಾದರೂ ಸಂತೋಷವಿ ರುವದೋ ಎಂದು ದೇವರಾದ ಕರ್ತನು ಹೇಳುತ್ತಾನೆ; ಅವನು ತನ್ನ ನಡತೆಗಳಿಂದ ಹಿಂತಿರುಗಿಕೊಂಡು ಬದು ಕಿದರೆ ನನಗೆ ಸಂತೋಷವಲ್ಲವೇ?
ಸಾಯುವವನ ಸಾವಿನಲ್ಲಿ ನನಗೆ ಸಂತೋಷವಿಲ್ಲವೆಂದು ದೇವರಾದ ಕರ್ತನು ಹೇಳುತ್ತಾನೆ; ಆದಕಾರಣ ತಿರುಗಿಕೊಂಡು ಬಾಳಿರಿ.
ಅವರಿಗೆ ಹೀಗೆ ಹೇಳು ಎಂದು ದೇವರಾದ ಕರ್ತನು ಹೇಳುತ್ತಾನೆ --ನನ್ನ ಜೀವದಾಣೆ, ನನಗೆ ದುಷ್ಟನ ಸಾವಿನಿಂದ ಸಂತೋಷ ಸಿಗುವದಿಲ್ಲ; ಆದರೆ ಆ ದುಷ್ಟನು ದುರ್ಮಾ ರ್ಗದಿಂದ ತಿರುಗಿಕೊಂಡು ಜೀವಿಸುವದಾದರೆ ಅದರಲ್ಲಿಯೇ ನನಗೆ ಸಂತೋಷಸಿಗುವದು; ಇಸ್ರಾ ಯೇಲಿನ ಮನೆತನದವರೇ, ನೀವು ನಿಮ್ಮ ನಿಮ್ಮ ದುಷ್ಟಮಾರ್ಗಗಳನ್ನು ಬಿಟ್ಟು ತಿರುಗಿರಿ, ನೀವು ತಿರುಗಿ ಕೊಳ್ಳಿರಿ. ನೀವು ಸಾಯುವದು ಯಾಕೆ?
ಚಿಕ್ಕವರಲ್ಲಿ ಒಬ್ಬನನ್ನಾದರೂ ನೀವು ತಾತ್ಸಾರ ಮಾಡದಂತೆ ನೋಡಿಕೊಳ್ಳಿರಿ; ಯಾಕಂದರೆ ನಾನು ನಿಮಗೆ ಹೇಳುವದೇನಂದರೆ--ಪರಲೋಕದಲ್ಲಿ ಅವರ ದೂತರು ಪರಲೋಕದಲ್ಲಿರುವ ನನ್ನ ತಂದೆಯ ಮುಖವನ್ನು ಯಾವಾಗಲೂ ನೋಡುತ್ತಾರೆ.
ಅದರಂತೆಯೇ ಈ ಚಿಕ್ಕವರಲ್ಲಿ ಒಬ್ಬನಾದರೂ ನಾಶವಾಗುವದು ಪರಲೋಕದಲ್ಲಿರುವ ನಿಮ್ಮ ತಂದೆಯ ಚಿತ್ತವಲ್ಲ.
ಆ ದೂತನು ಸ್ತ್ರೀಯರಿಗೆ-- ನೀವು ಭಯಪಡಬೇಡಿರಿ; ಯಾಕಂದರೆ ಶಿಲುಬೆಗೆ ಹಾಕಲ್ಪಟ್ಟವನಾದ ಯೇಸುವನ್ನು ನೀವು ಹುಡುಕುತ್ತೀರೆಂದು ನಾನು ಬಲ್ಲೆನು.
ಆ ದಿನಗಳಲ್ಲಿ ಆದದ್ದೇನಂದರೆ ಲೋಕವೆಲ್ಲಾ ಖಾನೇಷುಮಾರಿ ಬರೆಯಿಸಿಕೊಳ್ಳಬೇಕೆಂದು ಕೈಸರನಾದ ಔಗುಸ್ತನಿಂದ ಆಜ್ಞೆಯು ಹೊರಟಿತು.
ಆದದರಿಂದ ನಾನು ಹೇಳುವದೇ ನಂದರೆ--ಬಹಳವಾಗಿರುವ ಅವಳ ಪಾಪಗಳು ಕ್ಷಮಿಸ ಲ್ಪಟ್ಟಿವೆ. ಯಾಕಂದರೆ ಅವಳು ಬಹಳವಾಗಿ ಪ್ರೀತಿಸಿ ದಳು; ಆದರೆ ಯಾವನಿಗೆ ಸ್ವಲ್ಪವಾಗಿ ಕ್ಷಮಿಸಲ್ಪಡು ವದೋ ಅವನು ಸ್ವಲ್ಪವಾಗಿ ಪ್ರೀತಿಸುವನು.
ಆದರೆ--ಹಾಗಲ್ಲ ವೆಂದು ನಾನು ನಿಮಗೆ ಹೇಳುತ್ತೇನೆ; ನೀವು ಮಾನ ಸಾಂತರಪಡದೆ ಹೋದರೆ ನೀವೆಲ್ಲರೂ ಅವರಂತೆಯೇ ನಾಶವಾಗುವಿರಿ ಅಂದನು.
ಆದರಂತೆಯೇ ಮಾನಸಾಂತ ರಕ್ಕೆ ಅವಶ್ಯವಿಲ್ಲದ ತೊಂಭತ್ತೊಂಭತ್ತು ನೀತಿವಂತರಿಗಿಂತ ಮಾನಸಾಂತರಪಡುವ ಒಬ್ಬಪಾಪಿಯ ವಿಷಯವಾಗಿ ಪರಲೋಕದಲ್ಲಿ ಸಂತೋಷವಾಗುವದೆಂದು ನಾನು ನಿಮಗೆ ಹೇಳುತ್ತೇನೆ ಅಂದನು.
ಆದರೆ ರಾತ್ರಿಯಲ್ಲಿ ಕರ್ತನ ದೂತನು ಸೆರೆ ಮನೆಯ ಬಾಗಿಲುಗಳನ್ನು ತೆರೆದು ಅವರನ್ನು ಹೊರಕ್ಕೆ ತಂದು--
ಹಗಲಿನಲ್ಲಿ ಸುಮಾರು ಒಂಭತ್ತನೆಯ ತಾಸಿಗೆ (ಮೂರು ಘಂಟೆಗೆ) ಅವನಿಗಾದ ದರ್ಶನದಲ್ಲಿ ಒಬ್ಬ ದೇವದೂತನು ಅವನ ಬಳಿಗೆ ಬಂದು--ಕೊರ್ನೇ ಲ್ಯನೇ ಎಂದು ಕರೆಯುವದನ್ನು ಅವನು ಪ್ರತ್ಯಕ್ಷವಾಗಿ ಕಂಡನು.
ಅವರು ಇವುಗಳನ್ನು ಕೇಳಿ ಮೌನವಾಗಿದ್ದು ದೇವ ರನ್ನು ಕೊಂಡಾಡಿ--ಹಾಗಾದರೆ ಅನ್ಯ ಜನಾಂಗದವ ರಿಗೂ ಜೀವಕ್ಕಾಗಿ ಮಾನಸಾಂತರವನ್ನು ದೇವರು ದಯಪಾಲಿಸಿದ್ದಾನೆ ಎಂದು ಹೇಳಿದರು.
ದೇವರ ಚಿತ್ತಾನುಸಾರ ವಾಗಿರುವ ದುಃಖವು ರಕ್ಷಣೆಗಾಗಿ ಮಾನಸಾಂತರ ವನ್ನುಂಟು ಮಾಡುತ್ತದೆ. ಮಾನಸಾಂತರದಲ್ಲಿ ಪಶ್ಚಾತ್ತಾಪಕ್ಕೆ ಅಸ್ಪದವಿಲ್ಲ; ಆದರೆ ಲೋಕಸಂಬಂಧ ವಾದ ದುಃಖವು ಮರಣವನ್ನುಂಟುಮಾಡುತ್ತದೆ.
ಅವನು ಸ್ವಲ್ಪಕಾಲ ನಿನ್ನಿಂದ ಅಗಲಿಸ ಲ್ಪಟ್ಟದ್ದು ನೀನು ಅವನನ್ನು ನಿರಂತರಕ್ಕೂ ಸೇರಿಸಿಕೊಳ್ಳುವ ದಕ್ಕೋ ಏನೋ.
ಇವರೆಲ್ಲರು ರಕ್ಷಣೆಯನ್ನು ಬಾಧ್ಯವಾಗಿ ಹೊಂದಬೇಕಾಗಿರುವವರ ಸೇವೆಗೋಸ್ಕರ ಕಳುಹಿ ಸಲ್ಪಟ್ಟ ಊಳಿಗದ ಆತ್ಮಗಳಲ್ಲವೋ?
ಇದಲ್ಲದೆ ನಾನು ನೋಡಲಾಗಿ ಸಿಂಹಾಸನದ, ಜೀವಿಗಳ ಮತ್ತು ಹಿರಿಯರ ಸುತ್ತಲು ಬಹುಮಂದಿ ದೂತರ ಶಬ್ದವನ್ನು ಕೇಳಿದೆನು; ಅವರ ಸಂಖ್ಯೆಯು ಕೋಟ್ಯಾನುಕೋಟಿ ಯಾಗಿಯೂ ಲಕ್ಷೋಪಲಕ್ಷವಾಗಿಯೂ ಇತ್ತು.