ಅದಕ್ಕೆ ಅವನು ಕೋಪಗೊಂಡು ಒಳಗೆ ಹೋಗಲೊಲ್ಲದೆ ಇದ್ದನು. ಆದಕಾರಣ ಅವನ ತಂದೆಯು ಹೊರಗೆ ಬಂದು ಅವನನ್ನು ಬೇಡಿ ಕೊಂಡನು.
Cross references
ಆದರೆ ಕಾಯಿನನನ್ನೂ ಅವನ ಕಾಣಿಕೆಯನ್ನೂ ಆತನು ಗೌರವಿಸಲಿಲ್ಲ. ಆಗ ಕಾಯಿ ನನು ಬಹು ಕೋಪಗೊಂಡನು, ಅವನ ಮುಖವು ಕಳೆಗುಂದಿತು.
ಆದರೆ ಅವನು ಆ ಮನುಷ್ಯರ ಸಂಗಡ ಮಾತನಾಡುತ್ತಿರು ವದನ್ನು ಅವನ ಹಿರಿಯ ಸಹೋದರನಾದ ಎಲೀಯಾ ಬನು ಕೇಳಿ ಅವನ ಮೇಲೆ ಕೋಪಗೊಂಡು--ನೀನು ಇಲ್ಲಿಗೆ ಬಂದದ್ದೇನು? ಅಡವಿಯಲ್ಲಿರುವ ಆ ಸ್ವಲ್ಪ ಕುರಿಗಳನ್ನು ಯಾರ ವಶಕ್ಕೆ ಒಪ್ಪಿಸಿ ಬಂದೆ? ನಿನ್ನ ಗರ್ವವನ್ನೂ ನಿನ್ನ ಹೃದಯದ ಅಹಂಕಾರವನ್ನೂ ನಾನು ಬಲ್ಲೆನು; ನೀನು ಯುದ್ಧವನ್ನು ನೋಡಲು ಇಳಿದು ಬಂದಿದ್ದೀ ಅಂದನು.
ಸೌಲನಿಗೆ ಬಹು ಕೋಪವಾಯಿತು; ಆ ಮಾತು ಅವನಿಗೆ ವ್ಯಸನಕರವಾಗಿತ್ತು. ಇವರು ದಾವೀದ ನಿಗೆ ಹತ್ತು ಸಾವಿರಗಳನ್ನು ಹೇಳಿದ್ದಾರೆ; ನನಗೆ ಸಾವಿರ ಗಳನ್ನು ಹೇಳಿದ್ದಾರೆ; ಅವನಿಗೆ ರಾಜ್ಯವಲ್ಲದೆ ಇನ್ನು ಹೆಚ್ಚು ಬೇಕಾದದ್ದೇನು ಅಂದನು.
ನಿನ್ನ ಷ್ಟಕ್ಕೆ ನೀನೇ ನಿಂತುಕೋ, ನನ್ನ ಬಳಿಗೆ ಬರಬೇಡ, ಯಾಕಂದರೆ ನಿನಗಿಂತ ನಾನು ಪರಿಶುದ್ಧನಾಗಿದ್ದೇ ನೆಂದು ಹೇಳುವವರು; ಇವರು ನನ್ನ ಮೂಗಿನಲ್ಲಿ ಹೊಗೆಯಾಗಿಯೂ ಹಗಲೆಲ್ಲಾ ಉರಿಯುವ ಬೆಂಕಿ ಯಾಗಿಯೂ ಇದ್ದಾರೆ.
ಕರ್ತನ ವಾಕ್ಯವನ್ನು ಕೇಳಿರಿ, ಆತನ ವಾಕ್ಯಕ್ಕೆ ನಡಗುವವರೇ, ನಿಮ್ಮ ಸಹೋದರರು ನಿಮ್ಮನ್ನು ಹಗೆಮಾಡಿ ನನ್ನ ಹೆಸರಿಗೋಸ್ಕರ ನಿಮ್ಮನ್ನು ಹೊರಗೆ ಹಾಕಿ--ಕರ್ತನು ಮಹಿಮೆ ಹೊಂದಲೆಂದು ಹೇಳಿ ದ್ದಾರೆ; ಆದರೆ ಆತನು ನಿಮ್ಮ ಸಂತೋಷಕ್ಕಾಗಿ ಕಾಣಿಸಿ ಕೊಳ್ಳುವನು; ಅವರು ನಾಚಿಕೆಪಡುವರು.
ಆಗ ಆದದ್ದೇನಂದರೆ--ಅವರು ಆ ವಾಕ್ಯಗಳನ್ನೆಲ್ಲಾ ಕೇಳಿದ ಮೇಲೆ ಒಬ್ಬರಿಗೊಬ್ಬರು ಹೆದರಿಕೊಂಡು--ನಾವು ನಿಶ್ಚಯವಾಗಿ ಈ ವಾಕ್ಯಗಳನ್ನೆಲ್ಲಾ ಅರಸನಿಗೆ ತಿಳಿಸುತ್ತೇ ವೆಂದು ಬಾರೂಕನಿಗೆ ಹೇಳಿದರು.
ಆದರೆ ಅದು ಯೋನನಿಗೆ ತುಂಬಾಕರೆಕರೆಯಾಗಿ ಅವನಿಗೆ ಬಹು ಕೋಪ ಬಂತು.
ಆಗ ದೇವರು ಯೋನನಿಗೆ--ನೀನು ಸೋರೇ ಗಿಡವನ್ನು ಕುರಿತು ಕೋಪಮಾಡುವದು ಒಳ್ಳೇದೋ ಅಂದನು. ಅವನು --ನಾನು ಸಾಯುವಷ್ಟು ಕೋಪಮಾಡುವದು ಒಳ್ಳೇದೇ ಅಂದನು.
ಅವರು ಅದನ್ನು ಹೊಂದಿದಾಗ ಮನೇ ಯಜಮಾನನಿಗೆ ವಿರೋಧವಾಗಿ ಗುಣು ಗುಟ್ಟುತ್ತಾ--
ಆದರೆ ಅವರ ಶಾಸ್ತ್ರಿಗಳೂ ಫರಿಸಾಯರೂ ಆತನ ಶಿಷ್ಯರಿಗೆ ವಿರೋಧವಾಗಿ ಗುಣುಗುಟ್ಟುತ್ತಾ--ನೀವು ಯಾಕೆ ಸುಂಕದವರ ಮತ್ತು ಪಾಪಿಗಳ ಸಂಗಡ ತಿಂದು ಕುಡಿಯುತ್ತೀರಿ ಎಂದು ಕೇಳಿದರು.
ಆಗ ಆತನನ್ನು ಕರೆದ ಫರಿಸಾಯನು ಅದನ್ನು ನೋಡಿ ತನ್ನೊಳಗೆ--ಈ ಮನುಷ್ಯನು ಒಬ್ಬ ಪ್ರವಾದಿಯಾಗಿದ್ದರೆ ತನ್ನನ್ನು ಮುಟ್ಟುತ್ತಿದ್ದವಳು ಯಾರು ಎಂದೂ ಎಂಥತರವಾದ ಹೆಂಗಸು ಎಂದೂ ತಿಳಿದುಕೊಳ್ಳುತ್ತಿದ್ದನು; ಯಾಕಂದರೆ ಅವಳು ಒಬ್ಬ ಪಾಪಿ ಎಂದು ತನ್ನೊಳಗೆ ಅಂದು ಕೊಂಡನು.
ಓ ಯೆರೂಸಲೇಮೇ,ಯೆರೂಸಲೇಮೇ, ಪ್ರವಾದಿಗಳನ್ನು ಕೊಲ್ಲುವವಳೇ, ನಿನ್ನ ಬಳಿಗೆ ಕಳುಹಿಸಲ್ಪಟ್ಟವರಿಗೆ ಕಲ್ಲೆಸೆಯುವವಳೇ, ಕೋಳಿಯು ತನ್ನ ಮರಿಗಳನ್ನು ತನ್ನ ರೆಕ್ಕೆಗಳ ಕೆಳಗೆ ಕೂಡಿಸುವಂತೆ ನಾನು ನಿನ್ನ ಮಕ್ಕಳನ್ನು ಎಷ್ಟೋ ಸಾರಿ ಕೂಡಿಸಬೇಕೆಂದಿದ್ದೆನು; ಆದರೆ ನಿನಗೆ ಅದು ಮನಸ್ಸಿಇಗೋ, ನಿಮ್ಮ ಮನೆಯು ಹಾಳಾಗಿ ನಿಮಗೆ ಬಿಡಲ್ಪಟ್ಟಿದೆ; ಕರ್ತನ ಹೆಸರಿನಲ್ಲಿ ಬರುವಾತನು ಧನ್ಯನು ಎಂದು ನೀವು ಹೇಳುವ ಸಮಯವು ಬರುವ ತನಕ ನೀವು ನನ್ನನ್ನು ನೋಡುವದೇ ಇಲ್ಲ ಎಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ ಅಂದನು.
ಫರಿಸಾಯರು ಮತ್ತು ಶಾಸ್ತ್ರಿಗಳು--ಇವನು ಪಾಪಿಗಳನ್ನು ಅಂಗೀಕರಿಸಿ ಅವರೊಂದಿಗೆ ಊಟ ಮಾಡುತ್ತಾನೆ ಎಂದು ಹೇಳುತ್ತಾ ಗುಣುಗುಟ್ಟಿದರು.
ಯೆರೂಸಲೇಮು ಮೊದಲುಗೊಂಡು ಎಲ್ಲಾ ಜನಾಂಗದವ ರೊಳಗೆ ಆತನ ಹೆಸರಿನಲ್ಲಿ ಮಾನಸಾಂತರ ಮತ್ತು ಪಾಪಗಳ ಕ್ಷಮಾಪಣೆ ಸಾರಲ್ಪಡಬೇಕೆಂತಲೂ ಬರೆಯ ಲ್ಪಟ್ಟಿದೆ.
ಆದರೆ ಯೆಹೂದ್ಯರು ಜನ ಸಮೂಹಗಳನ್ನು ನೋಡಿ ಹೊಟ್ಟೇಕಿಚ್ಚಿನಿಂದ ತುಂಬಿ ದವರಾಗಿ ಪೌಲನು ಹೇಳಿದವುಗಳನ್ನು ವಿರೋಧಿಸಿ ದೇವದೂಷಣೆ ಮಾಡುತ್ತಾ ಎದುರು ಮಾತನಾಡಿದರು.
ಆದರೆ ಭಕ್ತಿಯುಳ್ಳ ಮತ್ತು ಗೌರವವುಳ್ಳ ಸ್ತ್ರೀಯರನ್ನೂ ಪಟ್ಟಣದ ಪ್ರಮುಖರನ್ನೂ ಯೆಹೂದ್ಯರು ಪ್ರೇರಿಸಿ ಪೌಲ ಬಾರ್ನಬರಿಗೆ ವಿರೋಧವಾಗಿ ಹಿಂಸೆ ಯನ್ನೆಬ್ಬಿಸಿ ತಮ್ಮ ಮೇರೆಗಳಿಂದ ಅವರನ್ನು ಅಟ್ಟಿಬಿಟ್ಟರು.
ಆದರೆ ನಂಬದೆಹೋದ ಯೆಹೂದ್ಯರು ಅನ್ಯಜನರ ಮನಸ್ಸನ್ನು ಸಹೋದರರಿಗೆ ವಿರುದ್ಧವಾಗಿ ರೇಗಿಸಿ ಕೆಡಿಸಿದರು.
ತರುವಾಯ ಅಂತಿಯೋಕ್ಯದಿಂದಲೂ ಇಕೋನ್ಯ ದಿಂದಲೂ ಕೆಲವು ಯೆಹೂದ್ಯರು ಅಲ್ಲಿಗೆ ಬಂದು ಜನರನ್ನು ಪ್ರೇರೇಪಿಸಿ ಪೌಲನ ಮೇಲೆ ಕಲ್ಲೆಸೆದು ಅವನು ಸತ್ತನೆಂದು ಭಾವಿಸಿ ಪಟ್ಟಣದ ಹೊರಕ್ಕೆ ಎಳೆದುಬಿಟ್ಟರು.
ಅದಕ್ಕೆ ಆತನು--ಹೋಗು, ನಾನು ನಿನ್ನನ್ನು ದೂರಕ್ಕೆ ಅನ್ಯಜನರ ಬಳಿಗೆ ಕಳುಹಿಸುವೆನು ಎಂದು ನನಗೆ ಹೇಳಿದನು.
ಆದರೆ--ಇಸ್ರಾಯೇಲ್ಯರು ತಿಳುಕೊಳ್ಳಲಿಲ್ಲವೇನು ಎಂದು ನಾನು ಕೇಳುತ್ತೇನೆ. ಈ ವಿಷಯದಲ್ಲಿ--ನನ್ನ ಜನಾಂಗವಲ್ಲದವರ ಮೂಲಕ ನಿಮ್ಮಲ್ಲಿ ಹುರುಡು ಹುಟ್ಟಿಸುವೆನು; ವಿವೇಕವಿಲ್ಲದ ಜನರ ಮೂಲಕ ನಿಮ್ಮನ್ನು ಸಿಟ್ಟಿಗೆಬ್ಬಿಸುವೆನು ಎಂದು ಮೊದಲು ಮೋಶೆಯು ಹೇಳುತ್ತಾನೆ.
ದೇವರೇ ನಮ್ಮ ಮೂಲಕ ನಿಮ್ಮನ್ನು ಬೇಡಿ ಕೊಳ್ಳುತ್ತಾನೋ ಎಂಬಂತೆ ನಾವು ಈಗ ಕ್ರಿಸ್ತನ ರಾಯಭಾರಿಗಳಾಗಿದ್ದೇವೆ. ದೇವರೊಂದಿಗೆ ಸಮಾ ಧಾನವಾಗಿರೆಂದು ಕ್ರಿಸ್ತನಿಗೆ ಬದಲಾಗಿ ನಾವು ನಿಮ್ಮನ್ನು ಬೇಡಿಕೊಳ್ಳುತ್ತೇವೆ.ನಾವು ಆತನಲ್ಲಿ ದೇವರ ನೀತಿಯಾಗುವಂತೆ ದೇವರು ಪಾಪವನ್ನರಿಯ ಆತನನ್ನು ನಮಗೋಸ್ಕರ ಪಾಪವಾಗ ಮಾಡಿದನು.
ಅನ್ಯ ಜನರಿಗೆ ರಕ್ಷಣೆಯಾಗುವಂತೆ ಸುವಾರ್ತೆಯನ್ನು ಹೇಳುವ ನಮಗೆ ಅವರು ಅಡ್ಡಿ ಮಾಡುತ್ತಾರೆ; ಹೀಗೆ ತಮ್ಮ ಪಾಪಗಳನ್ನು ಯಾವಾಗಲೂ ಪರಿಪೂರ್ಣ ಮಾಡುವದಕ್ಕೆ ಹೋಗುತ್ತಾರೆ; ಆದರೆ ದೇವರ ಕೋಪವು ಅವರ ಮೇಲೆ ಸಂಪೂರ್ಣವಾಗುತ್ತಾ ಬಂತು.