ಆದರೆ ಅವನು ಪ್ರತ್ಯುತ್ತರವಾಗಿ ತನ್ನ ತಂದೆಗೆ--ಇಗೋ, ಇಷ್ಟು ವರುಷಗಳ ವರೆಗೆ ನಾನು ನಿನ್ನ ಸೇವೆ ಮಾಡುತ್ತಿದ್ದೇನೆ, ನಾನು ನಿನ್ನ ಅಪ್ಪಣೆ ಯನ್ನು ಎಂದಾದರೂ ವಿಾರಲಿಲ್ಲ; ಆದಾಗ್ಯೂ ನಾನು ನನ್ನ ಸ್ನೇಹಿತರೊಂದಿಗೆ ಸಂತೋಷಪಡುವದಕ್ಕಾಗಿ ನೀನ
Cross references
ಸಮುವೇಲನು ಸೌಲನ ಬಳಿಗೆ ಬಂದಾಗ ಸೌಲನು ಅವನಿಗೆ--ನಿನಗೆ ಕರ್ತನ ಆಶೀರ್ವಾದವಾಗಲಿ; ನಾನು ಕರ್ತನ ಆಜ್ಞೆಯನ್ನು ಈಡೇರಿಸಿದೆನು ಅಂದನು.
ಆದಾಗ್ಯೂ ಅವರು ನನ್ನನ್ನು ಪ್ರತಿನಿತ್ಯವೂ ಹುಡುಕು ತ್ತಾರೆ. ನನ್ನ ಮಾರ್ಗಗಳನ್ನು ತಿಳಿದುಕೊಳ್ಳುವದರಲ್ಲಿ ಸಂತೋಷಪಡುತ್ತಾರೆ. ತನ್ನ ದೇವರ ನ್ಯಾಯವನ್ನು ಬಿಡದೆ ನೀತಿಯನ್ನಾಚರಿಸುವ ಜನಾಂಗದ ಹಾಗೆಯೇ ನೀತಿಯುಳ್ಳ ನ್ಯಾಯಗಳನ್ನು ನನ್ನಿಂದ ಕೇಳುತ್ತಾರೆ. ದೇವರನ್ನು ಸವಿಾಪಿಸುವದರಲ್ಲಿ ಸಂತೋಷಿಸುತ್ತಾರೆ.
ನಿನ್ನ ಷ್ಟಕ್ಕೆ ನೀನೇ ನಿಂತುಕೋ, ನನ್ನ ಬಳಿಗೆ ಬರಬೇಡ, ಯಾಕಂದರೆ ನಿನಗಿಂತ ನಾನು ಪರಿಶುದ್ಧನಾಗಿದ್ದೇ ನೆಂದು ಹೇಳುವವರು; ಇವರು ನನ್ನ ಮೂಗಿನಲ್ಲಿ ಹೊಗೆಯಾಗಿಯೂ ಹಗಲೆಲ್ಲಾ ಉರಿಯುವ ಬೆಂಕಿ ಯಾಗಿಯೂ ಇದ್ದಾರೆ.
ಸೈನ್ಯಗಳ ಕರ್ತನ ಮನೆಯಲ್ಲಿದ್ದ ಯಾಜಕರ ಸಂಗಡಲೂ ಪ್ರವಾದಿಗಳ ಸಂಗಡಲೂ ನಾನು ಮಾತನಾಡಿ--ಇಷ್ಟು ವರುಷ ಮಾಡಿದ ಪ್ರಕಾರ ಐದನೇ ತಿಂಗಳಲ್ಲಿ ನನ್ನನ್ನು ಪ್ರತ್ಯೇಕಿಸಿಕೊಂಡು ಅಳಲೋ ಎಂದು ಹೇಳುವದಕ್ಕೂ ಅವರು ಸರೆಚರ ನನ್ನೂ ರೆಗೆಮ್ ಮೆಲೆಕನನ್ನೂ ಅವರ ಮನುಷ್ಯ ರನ್ನೂ ದೇವರ ಆಲಯಕ್ಕೆ ಕಳುಹಿಸಿದಾಗಲೇ ಅಂದನು.
ಆದರೆ ನೀವು--ಕರ್ತನ ಮೇಜು ಅಶುದ್ಧವಾ ದದ್ದೆಂದೂ ಅದರ ಫಲವೂ ಅದರ ಊಟವೂ ಹೀನ ವಾದದ್ದೆಂದೂ ಹೇಳಿ ಅದನ್ನು ಅಪವಿತ್ರಮಾಡಿದ್ದೀರಿ.
ನೀವು--ದೇವರನ್ನು ಸೇವಿಸುವದು ವ್ಯರ್ಥವೆಂದೂ ನಾವು ಆತನ ನಿಯಮಗಳನ್ನು ಕೈಕೊಂಡು ಸೈನ್ಯಗಳ ಕರ್ತನ ಮುಂದೆ ದುಃಖವಾಗಿ ನಡೆದದ್ದರಿಂದ ಏನು ಪ್ರಯೋ ಜನವೆಂದೂ ಹೇಳಿದಿರಿ.
ಕಡೆಯವರಾದ ಇವರು ಒಂದೇ ತಾಸು ಕೆಲಸ ಮಾಡಿದ್ದಾರೆ; ಆದರೆ ದಿನವೆಲ್ಲಾ ಬಿಸಿಲಿನಲ್ಲಿ ಭಾರ ಹೊತ್ತು ಕೆಲಸ ಮಾಡಿದ ನಮಗೆ ನೀನು ಅವರನ್ನು ಸಮಮಾಡಿದ್ದೀ ಅಂದರು.
ಆದರಂತೆಯೇ ಮಾನಸಾಂತ ರಕ್ಕೆ ಅವಶ್ಯವಿಲ್ಲದ ತೊಂಭತ್ತೊಂಭತ್ತು ನೀತಿವಂತರಿಗಿಂತ ಮಾನಸಾಂತರಪಡುವ ಒಬ್ಬಪಾಪಿಯ ವಿಷಯವಾಗಿ ಪರಲೋಕದಲ್ಲಿ ಸಂತೋಷವಾಗುವದೆಂದು ನಾನು ನಿಮಗೆ ಹೇಳುತ್ತೇನೆ ಅಂದನು.
ಅದೇ ರೀತಿಯಾಗಿ ನಿಮಗೆ ಆಜ್ಞಾಪಿಸಿದವುಗಳನ್ನೆಲ್ಲಾ ನೀವು ಮಾಡಿದ ಮೇಲೆ-- ನಾವು ನಿಷ್ಪ್ರಯೋಜಕರಾದ ಆಳುಗಳು; ಯಾಕಂದರೆ ನಾವು ಮಾಡಬೇಕಾದದ್ದನ್ನೇ ಮಾಡಿದ್ದೇವೆ ಎಂದು ನೀವು ಅನ್ನಿರಿ ಎಂದು ಹೇಳಿದನು.
ತಾವು ನೀತಿವಂತರೆಂದು ತಮ್ಮಲ್ಲಿಯೇ ಭರವಸ ವನ್ನಿಟ್ಟುಕೊಂಡು ಬೇರೆಯವರನ್ನು ಅಸಡ್ಡೆ ಮಾಡಿದ ಕೆಲವರಿಗೆ ಈ ಸಾಮ್ಯವನ್ನು ಹೇಳಿದನು.
ಫರಿಸಾಯನು ನಿಂತುಕೊಂಡು ತನ್ನೊಳಗೆ ಹೀಗೆ ಪ್ರಾರ್ಥಿಸುತ್ತಾ--ದೇವರೇ, ಸುಲು ಕೊಳ್ಳುವವರೂ ಅನೀತಿವಂತರೂ ವ್ಯಭಿಚಾರಿಗಳೂ ಆಗಿರುವ ಮಿಕ್ಕಾದವರಂತೆ ಇಲ್ಲವೆ ಈ ಸುಂಕದವನ ಹಾಗೆ ನಾನು ಅಲ್ಲ, ಆದದರಿಂದ ನಾನು ನಿನಗೆ ಸ್ತೋತ್ರ ಸಲ್ಲಿಸುತ್ತೇನೆ.
ವ್ಯಭಿಚಾರ ಮಾಡಬೇಡ, ನರಹತ್ಯ ಮಾಡ ಬೇಡ, ಕದಿಯಬೇಡ, ಸುಳ್ಳುಸಾಕ್ಷಿ ಹೇಳಬೇಡ, ನಿನ್ನ ತಂದೆಯನ್ನು ಮತ್ತು ನಿನ್ನ ತಾಯಿಯನ್ನು ಸನ್ಮಾನಿಸಬೇಕು ಎಂಬ ಆಜ್ಞೆಗಳನ್ನು ನೀನು ಬಲ್ಲವನಾಗಿದ್ದೀ ಅಂದನು.
ಯಾಕಂದರೆ ನೀನು ಕಠಿಣವಾದ ಮನುಷ್ಯನು ಎಂದು ನಾನು ನಿನಗೆ ಭಯಪಟ್ಟೆನು; ನೀನು ಇಡದೆ ಇರುವದನ್ನು ತಕ್ಕೊಳ್ಳು ವವನೂ ಬಿತ್ತದೆ ಇರುವಲ್ಲಿ ಕೊಯ್ಯುವವನೂ ಆಗಿದ್ದೀ ಅಂದನು.
ಆದದರಿಂದ ನ್ಯಾಯಪ್ರಮಾಣದ ಕ್ರಿಯೆಗಳಿಂದ ಯಾವನೂ ಆತನ ದೃಷ್ಟಿಯಲ್ಲಿ ನೀತಿವಂತನೆಂದು ನಿರ್ಣ ಯಿಸಲ್ಪಡುವದಿಲ್ಲ. ಯಾಕಂದರೆ ನ್ಯಾಯಪ್ರಮಾಣ ದಿಂದಲೇ ಪಾಪದ ಅರುಹು ಉಂಟಾಗುತ್ತದೆ.
ಹಾಗಾದರೆ ಹೊಗಳಿಕೊಳ್ಳುವದು ಹೇಗೆ? ಅದು ಇಲ್ಲದೆ ಹೋಯಿತು. ಯಾವ ನಿಯಮದಿಂದ? ಕ್ರಿಯೆಗಳಿಂದಲೋ? ಅಲ್ಲ; ವಿಶ್ವಾಸ ನಿಯಮವನ್ನು ಅನುಸರಿಸುವದರಿಂದಲೇ.
ಮೊದಲು ನಾನು ನ್ಯಾಯಪ್ರಮಾಣವಿಲ್ಲದವನಾಗಿದ್ದು ಜೀವದಿಂದಿದ್ದೆನು. ಆಜ್ಞೆಯು ಬಂದಾಗ ಪಾಪವು ಪುನರ್ಜೀವವಾಗಿ ನಾನು ಸತ್ತೆನು.
ಅವರು ದೇವ ರಿಂದ ದೊರಕುವ ನೀತಿಯನ್ನರಿಯದೆ ಸ್ವನೀತಿಯನ್ನೇ ಸ್ಥಾಪಿಸಬೇಕೆಂದು ಪ್ರಯತ್ನಿಸುತ್ತಾ ಇದ್ದದರಿಂದ ದೇವರ ನೀತಿಗೆ ಅಧೀನರಾಗಲಿಲ್ಲ.
ನಾನಾದರೋ ಶರೀರ ಸಂಬಂಧವಾದವು ಗಳಲ್ಲಿ ಭರವಸವಿಟ್ಟರೂ ಇಡಬಹುದು, ಬೇರೆ ಯಾವ ನಾದರೂ ಶರೀರ ಸಂಬಂಧವಾದವುಗಳಲ್ಲಿ ಭರವಸವಿಡ ಬಹುದೆಂದು ಯೋಚಿಸುವದಾದರೆ ನಾನು ಅವನಿ ಗಿಂತಲೂ ಹೆಚ್ಚಾಗಿ ಹಾಗೆ ಯೋಚಿಸಬಹುದು.
ನಮ್ಮಲ್ಲಿ ಪಾಪವಿಲ್ಲ ವೆಂದು ನಾವು ಹೇಳಿದರೆ ನಮ್ಮನ್ನು ನಾವೇ ಮೋಸ ಪಡಿಸಿಕೊಳ್ಳುತ್ತೇವೆ, ಸತ್ಯವು ನಮ್ಮಲ್ಲಿಲ್ಲ.
ಆತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ. ಯಾವನೂ ಜಯಹೊಂದುತ್ತಾನೋ ಅವನಿಗೆ ಬಚ್ಚಿಟ್ಟಿರುವ ಮನ್ನವನ್ನು ತಿನ್ನುವದಕ್ಕೆ ನಾನು ಕೊಡು ವೆನು; ಇದಲ್ಲದೆ ಅವನಿಗೆ ಹೊಸ ಹೆಸರು ಬರೆದಿರುವ ಬಿಳೀ ಕಲ್ಲನ್ನು ಕೊಡುವೆನು ಅದನ್ನು ಹೊಂದಿದವನಿಗೇ ಹೊರತು ಅದು ಇನ್ನಾರಿಗೂ ತಿ
ನೀನು--ನಾನು ಐಶ್ವರ್ಯವಂತನು, ಧನವೃದ್ಧಿಯುಳ್ಳವನು, ಯಾವದರ ಲ್ಲಿಯೂ ಕೊರತೆಯಿಲ್ಲದವನು ಎಂದು ಹೇಳಿಕೊಳ್ಳುತ್ತೀ; ಆದರೆ ನೀನು ಕೇವಲ ನಿರ್ಗತಿಕನು, ದರಿದ್ರನು, ಬಡವನು, ಕುರುಡನು, ಬೆತ್ತಲೆಯಾದವನು ಆಗಿರುವ ದನ್ನು ತಿಳಿಯದೆ ಇದ್ದೀ.