ಆಗ ಆತನು ಅವರಿಗೆ--ಮನುಷ್ಯರ ಮುಂದೆ ನೀತಿವಂತರಾಗಿ ಮಾಡಿ ಕೊಳ್ಳುವವರು ನೀವೇ; ಆದರೆ ದೇವರು ನಿಮ್ಮ ಹೃದಯಗಳನ್ನು ತಿಳಿದಿದ್ದಾನೆ; ಯಾಕಂದರೆ ಮನುಷ್ಯರಲ್ಲಿ ಯಾವದು ಶ್ರೇಷ್ಠವೆಂದು ಎಣಿಸಲ್ಪ ಡುತ್ತದೋ ಅದು ದೇವರ ದೃಷ್ಟಿಯಲ್ಲಿ ಅಸಹ್ಯವಾಗಿದೆ.
Cross references
ಆದರೆ ಕರ್ತನು ಸಮುವೇಲನಿಗೆ--ನೀನು ಅವನ ರೂಪವನ್ನೂ ಅವನ ದೇಹದ ಉದ್ದವನ್ನೂ ದೃಷ್ಟಿಸಬೇಡ; ಅವನನ್ನು ನಾನು ತಿರಸ್ಕರಿಸಿದೆನು; ಕರ್ತನು ಮನುಷ್ಯರಂತೆ ಹೊರಗಿನ ತೋರಿಕೆಯನ್ನು ಮಾತ್ರ ನೋಡದೆ ಹೃದಯವನ್ನೇ ನೋಡುವನು ಅಂದನು.
ನನ್ನ ಕರ್ತನೇ, ನೀನು ಹೃದಯವನ್ನು ಶೋಧಿಸಿ ಯಥಾರ್ಥವಾದವು ಗಳಲ್ಲಿ ಸಂತೋಷವಾಗಿದ್ದೀ ಎಂದು ನಾನು ಬಲ್ಲೆನು. ನಾನು ಯಥಾರ್ಥವಾದ ಹೃದಯದಿಂದ ಇವುಗಳನ್ನೆಲ್ಲಾ ಮನಃಪೂರ್ವಕವಾಗಿ ಅರ್ಪಿಸಿದ್ದೇನೆ. ಇದಲ್ಲದೆ ಇಲ್ಲಿ ರುವ ನಿನ್ನ ಜನರು ನಿನಗೆ ಮನಃಪೂರ್ವಕವಾಗಿ ಅರ್ಪಿ ಸುವದನ್ನು ಈಗ ಸಂತೋಷವಾಗಿ ಕಂಡೆನು.
ನೀನು ನಮ್ಮ ತಂದೆಗಳಿಗೆ ಕೊಟ್ಟ ದೇಶದಲ್ಲಿ ಅವರು ಬದು ಕುವ ವರೆಗೆ ಅವರು ನಿನಗೆ ಭಯಪಟ್ಟು ನಿನ್ನ ಮಾರ್ಗ ದಲ್ಲಿ ನಡೆಯುವ ಹಾಗೆ
ದುಷ್ಟರ ದುಷ್ಟತನವು ಮುಗಿದು ಹೋಗಲಿ, ಆದರೆ ನೀತಿವಂತನನ್ನು ದೃಢಪಡಿಸು. ನೀತಿಯುಳ್ಳ ದೇವರು ಹೃದಯವನ್ನೂ ಅಂತರಿಂದ್ರಿ ಯಗಳನ್ನೂ ಶೋಧಿಸುತ್ತಾನಲ್ಲಾ.
ದುಷ್ಟನು ತನ್ನ ಹೃದಯದ ಆಶೆಗೋಸ್ಕರ ಹೊಗಳಿಕೊಳ್ಳುತ್ತಾನೆ; ಕರ್ತನು ಅಸಹ್ಯಪಡುವ ಲೋಭಿಯನ್ನು ಅವನು ಆಶೀರ್ವದಿಸುತ್ತಾನೆ.
ಅವರ ಈ ಮಾರ್ಗವು ಅವರ ಹುಚ್ಚುತನ ವಾಗಿದೆ; ಆದರೆ ಅವರ ಸಂತಾನದವರು ಅವರ ಮಾತುಗಳನ್ನು ಮೆಚ್ಚುತ್ತಾರೆ. ಸೆಲಾ.
ಅವನು ಬದುಕಿದ್ದಾಗ ತನ್ನ ಪ್ರಾಣವನ್ನು ಸ್ತುತಿಸಿಕೊಂಡಾಗ್ಯೂ ನೀನು ನಿನಗೆ ಒಳ್ಳೇದನ್ನು ಮಾಡಿಕೊಂಡರೆ ಜನರು ನಿನ್ನನ್ನು ಕೊಂಡಾ ಡುವರು.
ಕರ್ತನೇ, ನನ್ನನ್ನು ಪರಿಶೋಧಿಸಿ ತಿಳುಕೊಂಡಿದ್ದೀ;
ಹೃದಯದಲ್ಲಿ ಗರ್ವಿಷ್ಠನಾದ ಪ್ರತಿಯೊಬ್ಬನೂ ಕರ್ತನಿಗೆ ಅಸಹ್ಯ. ಕೈಗೆ ಕೈ ಕೊಟ್ಟರೂ ದುಷ್ಟನು ಶಿಕ್ಷಿಸಲ್ಪಡದೆ ಇರುವದಿಲ್ಲ.
ಅನೇಕರಲ್ಲಿ ಪ್ರತಿಯೊ ಬ್ಬನು ತಮ್ಮ ಸ್ವಂತ ಸೌಜನ್ಯವನ್ನು ಸಾರುವನು; ನಂಬಿ ಗಸ್ತನಾದ ಮನುಷ್ಯನನ್ನು ಯಾರು ಕಂಡುಕೊಳ್ಳಬಲ್ಲರು?
ತನ್ನ ದೃಷ್ಟಿ ಯಲ್ಲಿ ಮನುಷ್ಯನ ಪ್ರತಿಯೊಂದು ಮಾರ್ಗವು ಸರಿ ಯಾಗಿದೆ; ಕರ್ತನು ಹೃದಯಗಳನ್ನು ಪರೀಕ್ಷಿಸುತ್ತಾನೆ.
ಸೊದೋಮಿನ ಅಧಿಪತಿಗಳೇ, ನೀವು ಕರ್ತನ ಮಾತನ್ನು ಕೇಳಿರಿ; ಗೊಮೋರದ ಪ್ರಜೆಗಳೇ, ನಮ್ಮ ದೇವರ ನ್ಯಾಯಪ್ರಮಾಣಕ್ಕೆ ಕಿವಿಗೊಡಿರಿ.
ಅದು ನನ್ನ ಸ್ವರಕ್ಕೆ ವಿಧೇಯವಾಗದೆ ನನ್ನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದರೆ ನಾನು ಅದಕ್ಕೆ ಮೇಲನ್ನು ಮಾಡುತ್ತೇನೆಂದು ಹೇಳಿದ ಒಳ್ಳೇದನ್ನು ಕುರಿತು ಪಶ್ಚಾತ್ತಾಪಪಡುವೆನು.
ನಿಮ್ಮ ನಿಮ್ಮ ಪರಿಶುದ್ಧ ಸಭೆಗಳನ್ನು ನಾನು ಮೂಸುವದಿಲ್ಲ.
ಈಗ ನಾವು ಗರ್ವಿಷ್ಠ ರನ್ನು ಭಾಗ್ಯವಂತರೆಂದನ್ನುತ್ತೇವೆ; ಹೌದು, ದುಷ್ಟತ್ವ ಮಾಡುವವರು ಅಭಿವೃದ್ಧಿಯಾಗುತ್ತಾರೆ; ಹೌದು, ದೇವರನ್ನು ಪರೀಕ್ಷಿಸುವವರೇ ರಕ್ಷಿಸಲ್ಪಟ್ಟಿದ್ದಾರೆ ಎಂದು ಹೇಳಿದ್ದೀರಿ.
ಆದದರಿಂದ ಕಪಟಿಗಳು ಜನರಿಂದ ಹೊಗಳಿಸಿ ಕೊಳ್ಳಬೇಕೆಂದು ಸಭಾಮಂದಿರಗಳಲ್ಲಿಯೂ ಬೀದಿಗಳ ಲ್ಲಿಯೂ ಮಾಡುವಂತೆ ನೀನು ದಾನ ಮಾಡುವಾಗ ನಿನ್ನ ಮುಂದೆ ತುತ್ತೂರಿಯನ್ನೂದಬೇಡ. ನಾನು ನಿಮಗೆ ನಿಜವಾಗಿ ಹೇಳುವದೇನಂದರೆ--ಅವರು ತಮ್ಮ ಪ್ರತಿಫಲವನ್ನು ಹೊಂದಿದ್ದಾರೆ.
ನೀನು ಪ್ರಾರ್ಥನೆ ಮಾಡುವಾಗ ಕಪಟಿಗಳಂತೆ ಇರಬೇಡ; ಯಾಕಂದರೆ ಜನರು ನೋಡುವಂತೆ ಸಭಾಮಂದಿರಗಳಲ್ಲಿಯೂ ಬೀದಿಗಳ ಮೂಲೆಗಳ ಲ್ಲಿಯೂ ನಿಂತು ಪ್ರಾರ್ಥನೆಮಾಡುವದನ್ನು ಅವರು ಪ್ರೀತಿಸುತ್ತಾರೆ. ನಾನು ನಿಮಗೆ ನಿಜವಾಗಿ ಹೇಳುವ ದೇನಂದರೆ--ಅವರು ತಮ್ಮ ಪ್ರತಿಫಲವನ್ನು ಹೊಂದಿ ದ್ದಾರೆ.
ಇದಲ್ಲದೆ ನೀವು ಉಪವಾಸ ಮಾಡುವಾಗ ಕಪಟಿಗಳ ಹಾಗೆ ವ್ಯಸನದ ಮುಖ ಮಾಡಿಕೊಳ್ಳ ಬೇಡಿರಿ. ಯಾಕಂದರೆ ತಾವು ಉಪವಾಸವಾಗಿ ದ್ದೇವೆಂದು ಜನರಿಗೆ ತೋರುವಂತೆ ಅವರು ತಮ್ಮ ಮುಖಗಳನ್ನು ವಿಕಾರ ಮಾಡಿಕೊಳ್ಳುತ್ತಾರೆ. ನಾನು ನಿಮಗೆ ನಿಜವಾಗಿ ಹೇಳುವದೇನಂದರೆ--ಅವರು ತಮ್ಮ ಪ್ರತಿ
ಆದರೆ ತಾವು ಮಾಡುವ ತಮ್ಮ ಕ್ರಿಯೆಗಳನ್ನೆಲ್ಲಾ ಜನರು ನೋಡುವಂತೆ ಮಾಡು ತ್ತಾರೆ. ಅವರು ತಮ್ಮ ಜ್ಞಾಪಕಪಟ್ಟಿಗಳನ್ನು ಅಗಲಮಾಡಿ ಉಡುಪುಗಳ ಅಂಚುಗಳನ್ನು ಉದ್ದ ಮಾಡುತ್ತಾ
ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೋ! ನೀವು ಪಾತ್ರೆಯ ಮತ್ತು ತಟ್ಟೆಯ ಹೊರಭಾಗವನ್ನು ಶುಚಿಮಾಡುತ್ತೀರಿ. ಆದರೆ ಅವು ಒಳಗೆ ಸುಲಿಗೆಯಿಂದಲೂ ದುರಾಶೆಯಿಂದಲೂ ತುಂಬಿರುತ್ತವೆ.
ಆದರೆ ಅವನು ತನ್ನನ್ನು ತಾನೇ ನೀತಿವಂತನೆಂದು ತೋರಿಸು ವದಕ್ಕೆ ಅಪೇಕ್ಷೆಯುಳ್ಳವನಾಗಿ ಯೇಸುವಿಗೆ--ನನ ನೆರೆಯವನು ಯಾರು ಎಂದು ಕೇಳಿದನು.
ಆಗ ಕರ್ತನು ಅವನಿಗೆ-- ಫರಿಸಾಯರಾದ ನೀವು ಪಾತ್ರೆಯ ಮತ್ತು ತಟ್ಟೆಯ ಹೊರಭಾಗವನ್ನು ಶುಚಿಮಾಡುತ್ತೀರಿ; ಆದರೆ ನಿಮ್ಮ ಒಳಭಾಗವು ಸುಲಿಗೆಯಿಂದಲೂ ಕೆಟ್ಟತನ ದಿಂದಲೂ ತುಂಬಿರುತ್ತದೆ
ಫರಿಸಾಯನು ನಿಂತುಕೊಂಡು ತನ್ನೊಳಗೆ ಹೀಗೆ ಪ್ರಾರ್ಥಿಸುತ್ತಾ--ದೇವರೇ, ಸುಲು ಕೊಳ್ಳುವವರೂ ಅನೀತಿವಂತರೂ ವ್ಯಭಿಚಾರಿಗಳೂ ಆಗಿರುವ ಮಿಕ್ಕಾದವರಂತೆ ಇಲ್ಲವೆ ಈ ಸುಂಕದವನ ಹಾಗೆ ನಾನು ಅಲ್ಲ, ಆದದರಿಂದ ನಾನು ನಿನಗೆ ಸ್ತೋತ್ರ ಸಲ್ಲಿಸುತ್ತೇನೆ.
ಅದಕ್ಕವನು--ನನ್ನ ಬಾಲ್ಯದಿಂದ ನಾನು ಇವೆಲ್ಲವು ಗಳನ್ನು ಕೈಕೊಂಡಿದ್ದೇನೆ ಎಂದು ಹೇಳಿದನು.
ಅವರು ಆತನನ್ನು ಹೊಂಚಿ ನೋಡಿದವರಾಗಿ ಮಾತಿನಲ್ಲಿ ಆತನನ್ನು ಸಿಕ್ಕಿಸುವಂತೆಯೂ ಅಧಿಪತಿಯ ಬಲಕ್ಕೆ ಮತ್ತು ಅಧಿಕಾರಕ್ಕೆ ಒಪ್ಪಿಸುವಂತೆಯೂ ತಾವು ನೀತಿವಂತರೆಂದು ನಟಿಸುವ ಗೂಢಾಚಾರರನ್ನು ಕಳುಹಿಸಿದರು.
ಇವರು ವಿಧವೆಯರ ಮನೆಗಳನ್ನು ನುಂಗಿ ತೋರಿಕೆ ಗಾಗಿ ಉದ್ದವಾದ ಪ್ರಾರ್ಥನೆಗಳನ್ನು ಮಾಡುತ್ತಾರೆ; ಇವರೇ ಹೆಚ್ಚಾದ ದಂಡನೆಯನ್ನು ಹೊಂದುವರು ಅಂದನು.
ಆತನು ಮನುಷ್ಯರ ಅಂತರಂಗವನ್ನು ತಿಳಿದವನಾದ ಕಾರಣ ಯಾರೂ ಯಾವ ಮನುಷ್ಯನ ವಿಷಯದಲ್ಲಿಯೂ ಆತನಿಗೆ ಸಾಕ್ಷಿಕೊಡಬೇಕಾದ ಅವಶ್ಯವಿರಲಿಲ್ಲ.
ಆತನು ಮೂರನೆಯ ಸಾರಿ ಅವನಿಗೆ--ಯೋನನ ಮಗನಾದ ಸೀಮೋನನೇ, ನೀನು ನನ್ನನ್ನು ಪ್ರೀತಿಸುತ್ತೀಯೋ ಎಂದು ಕೇಳಿದನು. ಆತನು ಮೂರನೆಯ ಸಾರಿ--ನೀನು ನನ್ನನ್ನು ಪ್ರೀತಿಸುತ್ತೀಯೋ ಎಂದು ತನ್ನನ್ನು ಕೇಳಿದ್ದಕ್ಕೆ ಪೇತ್ರನು ದುಃಖಪಟ್ಟು--ಕರ್ತನೇ, ನಿನಗೆ ಎಲ್ಲವುಗಳು ತಿಳಿದವೆ; ನಾನು ನಿನ
ಈ ಮನುಷ್ಯನು ತನ್ನ ದ್ರೋಹದ ಫಲದಿಂದ ಹೊಲವನ್ನು ಕೊಂಡುಕೊಂಡನು; ತಲೆ ಕೆಳಗಾಗಿ ಬಿದ್ದು ಅವನ ಹೊಟ್ಟೆ ಒಡೆದು ಕರುಳು ಗಳೆಲ್ಲಾ ಹೊರಬಿದ್ದವು.
ಹೃದಯ ಗಳನ್ನು ಬಲ್ಲವನಾಗಿರುವ ದೇವರು ಹೇಗೆ ಪವಿತ್ರಾತ್ಮ ನನ್ನು ನಮಗೆ ದಯಪಾಲಿಸಿದನೋ ಹಾಗೆಯೇ ಅವರಿಗೂ ದಯಪಾಲಿಸಿ ಅವರ ವಿಷಯದಲ್ಲಿ ಸಾಕ್ಷಿಕೊಟ್ಟನು.
ಆದದರಿಂದ ನ್ಯಾಯಪ್ರಮಾಣದ ಕ್ರಿಯೆಗಳಿಂದ ಯಾವನೂ ಆತನ ದೃಷ್ಟಿಯಲ್ಲಿ ನೀತಿವಂತನೆಂದು ನಿರ್ಣ ಯಿಸಲ್ಪಡುವದಿಲ್ಲ. ಯಾಕಂದರೆ ನ್ಯಾಯಪ್ರಮಾಣ ದಿಂದಲೇ ಪಾಪದ ಅರುಹು ಉಂಟಾಗುತ್ತದೆ.
ಆದದರಿಂದ ಕಾಲಕ್ಕೆ ಮೊದಲು ಕರ್ತನು ಬರುವತನಕ ಯಾವದನ್ನೂ ಕುರಿತು ತೀರ್ಪು ಮಾಡಬೇಡಿರಿ; ಆತನು ಕತ್ತಲೆಯ ಲ್ಲಿರುವ ಗುಪ್ತಕಾರ್ಯಗಳನ್ನು ಬೆಳಕಿಗೆ ತರುವನು; ಹೃದಯದ ಯೋಚನೆಗಳನ್ನು ಪ್ರತ್ಯಕ್ಷಪಡಿಸುವನು; ಆಗ ಪ್ರತಿಯೊಬ್ಬನಿಗೆ ಬರತಕ್ಕ ಹೊಗಳಿಕೆಯು ದೇವ ರಿಂದ ಬರುವದು.
ನಮ್ಮ ಪಿತೃವಾದ ಅಬ್ರಹಾಮನು ತನ್ನ ಮಗನಾದ ಇಸಾಕನನ್ನು ಯಜ್ಞವೇದಿಯ ಮೇಲೆ ಅರ್ಪಿಸಿದಾಗ ನೀತಿ ನಿರ್ಣಯವನ್ನು ಹೊಂದಿದ್ದು ಕ್ರಿಯೆಗಳಿಂದಲ್ಲವೇ?
ಆದರೆ ಸಾತ್ವಿಕವಾದ ಶಾಂತ ಮನಸ್ಸು ಎಂಬ ಹೃದಯದ ಮರೆಯಾದ ಮನುಷ್ಯನ ಅಲಂಕಾರವೇ ನಿಮಗಿರಲಿ. ಇದು ಅಕ್ಷಯ ವಾಗಿದ್ದು ದೇವರ ದೃಷ್ಟಿಗೆ ಬಹು ಬೆಲೆಯುಳ್ಳದ್ದಾಗಿದೆ.
ಅದೇ ರೀತಿಯಾಗಿ ಯೌವನಸ್ಥರೇ, ಹಿರಿಯರಿಗೆ ಅಧೀನರಾಗಿರ್ರಿ; ನೀವೆಲ್ಲರೂ ದೀನತೆಯೆಂಬ ವಸ್ತ್ರವನ್ನು ಧರಿಸಿಕೊಂಡು ಒಬ್ಬರಿಗೊಬ್ಬರು ಅಧೀನರಾಗಿರ್ರಿ. ದೇವರು ಅಹಂಕಾರಿಗಳನ್ನು ಎದುರಿಸುತ್ತಾನೆ. ದೀನರಿ ಗಾದರೊ ಕೃಪೆಯನ್ನು ಅನುಗ್ರಹಿಸುತ್ತಾನೆ.
ಅವಳ ಮಕ್ಕಳನ್ನು ಕೊಂದೇಕೊಲ್ಲುವೆನು; ಆಗ ನಾನು ಅಂತರಿಂದ್ರಿಯಗ ಳನ್ನೂ ಹೃದಯಗಳನ್ನೂ ಪರೀಕ್ಷಿಸುವವನಾಗಿದ್ದೇನೆ ಂಬದು ಎಲ್ಲಾ ಸಭೆಗಳಿಗೆ ಗೊತ್ತಾಗುವದು; ನಿಮ್ಮಲ್ಲಿ ಪ್ರತಿಯೊಬ್ಬನಿಗೆ ನಿಮ್ಮ ಕೃತ್ಯಗಳ ಪ್ರಕಾರ ಕೊಡುವೆನು.