ಅವನ ಬಾಗಲಿನಲ್ಲಿ ಲಾಜರನೆಂಬ ಒಬ್ಬ ಭಿಕ್ಷುಕನು ಬಿದ್ದುಕೊಂಡಿದ್ದನು; ಅವನು ಮೈ ತುಂಬಾ ಹುಣ್ಣೆದ್ದವನು.
Cross references
ದರಿದ್ರನನ್ನು ಭೂಮಿಯ ಧೂಳಿನಿಂದ ಎತ್ತುವಾ ತನೂ ಭಿಕ್ಷುಕನನ್ನು ತಿಪ್ಪೆಗುಂಡಿಯಿಂದ ತೆಗೆದು ಉನ್ನತ ಮಾಡುವಾತನೂ ಆಗಿದ್ದಾನೆ. ಅವರನ್ನು ಪ್ರಧಾ ನರ ಮಧ್ಯದಲ್ಲಿ ಕೂಡ್ರಿಸುತ್ತಾನೆ; ಘನತೆಯ ಸಿಂಹಾ ಸನವನ್ನು ಬಾಧ್ಯವಾಗಿ ಕೊಡುತ್ತಾನೆ. ಯಾಕಂದರೆ ಭೂಮಿಯ ಆಧಾರಸ್ತಂಭಗಳು ಕರ್ತನದಾಗಿವೆ, ಭೂಲೋಕವನ್ನು ಅವುಗಳ ಮೇಲೆ ಇಟ್ಟಿದ್ದಾನೆ.
ಆಗ ಸೈತಾನನು ಕರ್ತನ ಸಮ್ಮುಖ ದಿಂದ ಹೊರಟು ಯೋಬನಿಗೆ ಅಂಗಾಲಿನಿಂದ ನೆತ್ತಿಯ ವರೆಗೆ ಕೆಟ್ಟ ಹುಣ್ಣುಗಳು ಬರುವ ಹಾಗೆ ಅವನನ್ನು ಹೊಡೆದನು.
ನೀತಿವಂತನಿಗೆ ಬರುವ ಕೇಡುಗಳು ಬಹಳವಾಗಿವೆ; ಆದರೆ ಅವೆಲ್ಲವುಗಳಿಂದ ಕರ್ತನು ಅವನನ್ನು ಬಿಡಿಸುತ್ತಾನೆ.
ನಾನು ದಿನವೆಲ್ಲಾ ವ್ಯಾಧಿ ಪೀಡಿತನಾಗಿದ್ದೇನೆ; ಪ್ರತಿ ಉದಯದಲ್ಲಿ ನನಗೆ ಶಿಕ್ಷೆ ಯಾಯಿತು.
ಅಂಗಾ ಲಿನಿಂದ ನಡುನೆತ್ತಿಯ ವರೆಗೂ ಬಾಸುಂಡೆ ಪೆಟ್ಟು, ಮಾಗದ ಗಾಯಗಳೇ ಹೊರತು ಏನೂ ಸೌಖ್ಯವಿಲ್ಲ; ಅವುಗಳನ್ನು ಮುಚ್ಚಿಲ್ಲ, ಕಟ್ಟಿಲ್ಲ, ಇಲ್ಲವೆ ಎಣ್ಣೆ ಸವರಿ ಮೃದುಮಾಡಿಲ್ಲ.
ಕರ್ತನು ಹೀಗೆ ಅನ್ನುತ್ತಾನೆ--ಮಾತನಾಡು, ಏನಂದರೆ ಮನು ಷ್ಯರ ಹೆಣಗಳು ಗೊಬ್ಬರದಂತೆ ಬಯಲಿನಲ್ಲಿ ಬೀಳು ವವು; ಧಾನ್ಯ ಕೊಯ್ಯುವವನು ಉಳಿಸಿದ ಕೈ ಹಿಡಿಯಂತೆ ಕೂಡಿಸುವವನಿಲ್ಲದೆ ಬೀಳುವವು.
ಐಶ್ವರ್ಯವಂತನ ಮೇಜಿ ನಿಂದ ಬೀಳುವ (ರೊಟ್ಟಿ) ತುಂಡುಗಳನ್ನು ತಿನ್ನುವದಕ್ಕೆ ಅವನು ಆಶೆಪಡುತ್ತಿದ್ದನು; ಇದಲ್ಲದೆ ನಾಯಿಗಳು ಬಂದು ಅವನ ಹುಣ್ಣುಗಳನ್ನು ನೆಕ್ಕುತ್ತಿದ್ದವು.
ಇದಾದ ಮೇಲೆ ಆತನು ಯೆರಿಕೋವಿನ ಸವಿಾಪಕ್ಕೆ ಬಂದಾಗ ಒಬ್ಬಾನೊಬ್ಬ ಕುರುಡನು ದಾರಿಯ ಬದಿಯಲ್ಲಿ ಕೂತುಕೊಂಡು ಭಿಕ್ಷೆ ಬೇಡು ತ್ತಿದ್ದನು;
ಮರಿಯಳ ಮತ್ತು ಆಕೆಯ ಸಹೋದರಿ ಯಾದ ಮಾರ್ಥಳ ಊರಾದ ಬೇಥಾನ್ಯ ದಲ್ಲಿ ಲಾಜರನೆಂಬವನೊಬ್ಬನು ಅಸ್ವಸ್ಥನಾಗಿದ್ದನು.
ಹುಟ್ಟು ಕುಂಟನಾಗಿದ್ದ ಒಬ್ಬಾನೊಬ್ಬ ಮನುಷ್ಯನು ದೇವಾಲಯಕ್ಕೆ ಹೋಗುತ್ತಿದ್ದವರಿಂದ ಭಿಕ್ಷೆ ಬೇಡುವದಕ್ಕಾಗಿ ಅವನನ್ನು ಕೆಲವರು ಹೊತ್ತು ಕೊಂಡು ಹೋಗಿ ದೇವಾಲಯದ ಸುಂದರವೆಂಬ ಬಾಗಲಿನಲ್ಲಿ ಪ್ರತಿ ದಿನ ಕೂಡ್ರಿಸುತ್ತಿದ್ದರು.
ಹೀನಸ್ಥಿತಿಯಲ್ಲಿರುವ ಸಹೋದರನು ತಾನು ಉನ್ನತ ಸ್ಥಿತಿಗೆ ಬಂದೆನೆಂದು ಉಲ್ಲಾಸಪಡಲಿ;
ನನ್ನ ಪ್ರಿಯ ಸಹೋದರರೇ, ಕೇಳಿರಿ; ದೇವರು ಈ ಲೋಕದ ಬಡವರನ್ನು ನಂಬಿಕೆಯಲ್ಲಿ ಐಶ್ವರ್ಯವಂತರಾಗಿಯೂ ತನ್ನನ್ನು ಪ್ರೀತಿಸುವವ ರಿಗೆ ತಾನು ವಾಗ್ದಾನ ಮಾಡಿದ ರಾಜ್ಯಕ್ಕೆ ಬಾಧ್ಯ ರಾಗಿಯೂ ಇರಬೇಕೆಂದು ಆರಿಸಿಕೊಳ್ಳಲಿಲ್ಲವೇ?