ಆಗ ಅವನು ಪಾತಾಳದೊಳಗೆ ಯಾತನೆಯಲ್ಲಿ ದ್ದವನಾಗಿ ತನ್ನ ಕಣ್ಣುಗಳನ್ನು ಮೇಲಕ್ಕೆತ್ತಿ ದೂರದಿಂದ ಅಬ್ರಹಾಮನನ್ನೂ ಅವನ ಎದೆಯಲ್ಲಿದ್ದ ಲಾಜರನನೂ ನೋಡಿದನು.
Cross references
ದುಷ್ಟರೂ ದೇವರನ್ನು ಮರೆಯುವ ಎಲ್ಲಾ ಜನಾಂಗಗಳೂ ನರಕಕ್ಕೆ ಇಳಿಯುವರು.
ಯಾಕಂದರೆ ನೀನು ನನ್ನ ಆತ್ಮವನ್ನು ನರಕದಲ್ಲಿ ಬಿಟ್ಟುಬಿಡುವದಿಲ್ಲ; ನಿನ್ನ ಪರಿಶುದ್ಧನ ಕೊಳೆಯುವಿಕೆಯನ್ನು ನೋಡ ಗೊಡಿಸುವದಿಲ್ಲ.ಜೀವದ ಮಾರ್ಗವನ್ನು ನನಗೆ ತಿಳಿಸುವಿ; ನಿನ್ನ ಸಮ್ಮುಖದಲ್ಲಿ ಪರಿಪೂರ್ಣ ಸಂತೋಷ ವೂ ನಿನ್ನ ಬಲಗಡೆಯಲ್ಲಿ ಶಾಶ್ವತ ಭಾಗ್ಯವೂ ಇರುತ್ತವೆ.
ಆದರೆ ದೇವರು ನನ್ನ ಪ್ರಾಣವನ್ನು ಸಮಾಧಿಯ ಬಲದಿಂದ ವಿಮೋಚನೆ ಮಾಡುವನು, ಆತನು ನನ್ನನ್ನು ಅಂಗೀಕರಿಸುವನು. ಸೆಲಾ.
ನಿನ್ನ ಕರುಣೆಯು ನನ್ನ ಮೇಲೆ ದೊಡ್ಡದಾಗಿದೆ; ಪಾತಾಳ ದೊಳಗಿಂದ ನನ್ನ ಪ್ರಾಣವನ್ನು ಬಿಡಿಸಿದ್ದೀ.
ಅವಳ ಪಾದಗಳು ಮರಣದ ಕಡೆಗೆ ಇಳಿದು ಹೋಗು ತ್ತವೆ. ಅವಳ ಹೆಜ್ಜೆಗಳು ಪಾತಾಳವನ್ನು ಹಿಡಿಯುತ್ತವೆ.
ಅವಳ ಮನೆಯು ಪಾತಾಳದ ದಾರಿ, ಅದು ಮೃತ್ಯುವಿನ ಕೊಠಡಿಗೆ ಇಳಿದುಹೋಗುತ್ತದೆ.
ಆದರೆ ಸತ್ತವರು ಅಲ್ಲಿದ್ದಾರೆಂದೂ ಪಾತಾಳದ ಅಗಾಧಗಳಲ್ಲಿ ಅವಳ ಅಥಿತಿಗಳು ಇದ್ದಾ ರೆಂದೂ ಅವನಿಗೆ ತಿಳಿಯದು.
ಕೆಳಗಿನ ಪಾತಾಳವನ್ನು ತಪ್ಪಿಸಿಕೊಳ್ಳುವ ದಕ್ಕಾಗಿ ಜ್ಞಾನಿಗಳಿಗೆ ಜೀವದ ಮಾರ್ಗವು ಎತ್ತರದಲ್ಲಿದೆ.
ನಿನಗೋ ಸ್ಕರ ನಿನ್ನ ಬರೋಣವನ್ನು ಎದುರುಗೊಳ್ಳುವದಕ್ಕೆ ಪಾತಾಳವು ಕೆಳಗಿನಿಂದ ತಳಮಳಪಡುತ್ತದೆ. ಸತ್ತವ ರನ್ನೂ ಅಂದರೆ, ಭೂಲೋಕದ ಮುಖಂಡರಾಗಿದ್ದವರೆ ಲ್ಲರನ್ನೂ ಕಲಕಿ (ಎಚ್ಚರಿಸಿ) ಜನಾಂಗಗಳ ಎಲ್ಲಾ ರಾಜ ರುಗಳನ್ನು ಅವರ ಸಿಂಹಾಸನಗಳಿಂದ ಎಬ್ಬಿಸುತ್ತದೆ.
ಆದಾಗ್ಯೂ ಪಾತಾಳದ ಕುಣಿಯ ಪಾರ್ಶ್ವಗಳಿಗೆ ಇಳಿಸಲ್ಪಡುವಿ.
ನಾನು ನಿಮಗೆ ಹೇಳುವದೇನಂದರೆ-- ನಿಷ್ಕಾರಣವಾಗಿ ತನ್ನ ಸಹೋದರನ ಮೇಲೆ ಯಾವನಾದರೂ ಸಿಟ್ಟುಗೊಂಡರೆ ಅವನು ನ್ಯಾಯತೀರ್ಪಿನ ಅಪಾಯಕ್ಕೆ ಒಳಗಾಗುವನು; ಮತ್ತು ಯಾವನಾದರೂ ತನ್ನ ಸಹೋದರನಿಗೆ-- ವ್ಯರ್ಥವಾದವನೇ ಎಂದು ಹೇಳಿದರೆ ಅವನು ನ್ಯಾಯಸಭೆಯ ಅಪಾಯಕ್ಕೆ ಒಳಗಾಗುವನು
ಆದದರಿಂದ ನಿನ್ನ ಬಲಗಣ್ಣು ನಿನಗೆ ಅಭ್ಯಂತರವಾಗಿದ್ದರೆ ಅದನ್ನು ಕಿತ್ತು ನಿನ್ನಿಂದ ಬಿಸಾಡಿಬಿಡು; ಯಾಕಂದರೆ ನಿನ್ನ ಇಡೀ ಶರೀರವು ನರಕದಲ್ಲಿ ಹಾಕಲ್ಪಡುವದಕ್ಕಿಂತ ನಿನ್ನ ಅಂಗಗಳಲ್ಲಿ ಒಂದು ನಾಶವಾಗುವದು ನಿನಗೆ ಲಾಭಕರವಾಗಿದೆ.
ನಾನು ನಿಮಗೆ ಹೇಳುವದೇನಂದರೆ--ಬಹಳ ಜನರು ಪೂರ್ವದಿಂದಲೂ ಪಶ್ಚಿಮದಿಂದಲೂ ಬಂದು ಪರ ಲೋಕರಾಜ್ಯದಲ್ಲಿ ಅಬ್ರಹಾಮ್ ಇಸಾಕ್ ಯಾಕೋಬ್ ಅವರೊಂದಿಗೆ ಕೂತುಕೊಳ್ಳುವರು.
ಆಗ ಇಗೋ, ಅವರು--ಯೇಸುವೇ, ದೇವ ಕುಮಾರನೇ, ನಿನ್ನೊಂದಿಗೆ ನಮ್ಮ ಗೊಡವೆ ಏನು? ಸಮಯಕ್ಕೆ ಮುಂಚೆ ನಮ್ಮನ್ನು ಸಂಕಟಪಡಿಸು ವದಕ್ಕಾಗಿ ಇಲ್ಲಿಗೆ ಬಂದೆಯಾ ಎಂದು ಕೂಗಿ ಹೇಳಿದರು.
ಆಕಾಶದವರೆಗೂ ಹೆಚ್ಚಿಸಲ್ಪಟ್ಟ ಕಪೆರ್ನೌಮೇ, ನೀನು ಕೆಳಗೆ ಪಾತಾಳಕ್ಕೆ ದೊಬ್ಬಲ್ಪಡುವಿ; ಯಾಕಂದರೆ ನಿನ್ನೊಳಗೆ ನಡೆದಿರುವ ಮಹತ್ಕಾರ್ಯಗಳು ಸೊದೋಮಿನಲ್ಲಿ ನಡೆದಿದ್ದರೆ ಅದು ಈ ದಿನದವರೆಗೂ ಇರುತ್ತಿತ್ತು.
ನಿನ್ನ ಕಣ್ಣು ನಿನ್ನನ್ನು ಅಭ್ಯಂತರ ಪಡಿಸಿದರೆ ಅದನ್ನು ಕಿತ್ತು ನಿನ್ನಿಂದ ಬಿಸಾಡಿಬಿಡು; ನೀನು ಎರಡು ಕಣ್ಣುಳ್ಳವನಾಗಿ ನರಕದ ಬೆಂಕಿಯಲ್ಲಿ ಹಾಕಲ್ಪಡುವದಕ್ಕಿಂತ ಒಂದು ಕಣ್ಣುಳ್ಳವನಾಗಿ ಜೀವದಲ್ಲಿ ಪ್ರವೇಶಿಸುವದು ನಿನಗೆ ಒಳ್ಳೇದು.
ಹಾವು ಗಳೇ, ಸರ್ಪಸಂತತಿಯವರೇ, ನೀವು ನರಕದಂಡನೆ ಯಿಂದ ಹೇಗೆ ತಪ್ಪಿಸಿಕೊಂಡೀರಿ?
ಅವನು ಯೇಸುವನ್ನು ನೋಡಿದಾಗ ಆತನ ಮುಂದೆ ಬಿದ್ದು--ಯೇಸುವೇ, ಮಹೋನ್ನತ ನಾದ ದೇವರಕುಮಾರನೇ, ನನ್ನ ಗೊಡವೆ ನಿನಗೆ ಯಾಕೆ? ನನ್ನನ್ನು ಸಂಕಟಪಡಿಸಬೇಡವೆಂದು ನಿನ್ನನ್ನು ಬೇಡಿಕೊಳ್ಳುತ್ತೇನೆ ಎಂದು ಗಟ್ಟಿಯಾದ ಸ್ವರದಿಂದ ಕೂಗಿ ಹೇಳಿದನು.
ಆದರೆ ನೀವು ಅಬ್ರಹಾಮ ಇಸಾಕ ಯಾಕೋಬ ಮತ್ತು ಎಲ್ಲಾ ಪ್ರವಾದಿಗಳು ದೇವರರಾಜ್ಯದಲ್ಲಿ ಇರುವದನ್ನೂ ನೀವು ಮಾತ್ರ ಹೊರಗೆ ದೊಬ್ಬಲ್ಪಟ್ಟಿರುವದನ್ನೂ ನೋಡು ವಾಗ ಅಲ್ಲಿ ನಿಮಗೆ ಗೋಳಾಟವೂ ಹಲ್ಲುಕಡಿ ಯೋಣವೂ ಇರುವವು.
ನನಗೆ ಐದುಮಂದಿ ಸಹೋದರರಿದ್ದಾರೆ; ಅವರು ಸಹ ಈ ಯಾತನೆಯ ಸ್ಥಳಕ್ಕೆ ಬಾರದ ಹಾಗೆ ಇವನು ಅವರಿಗೆ ಸಾಕ್ಷಿ ಕೊಡಲಿ ಅಂದನು.
ಓ ಮರಣವೇ, ನಿನ್ನ ಕೊಂಡಿಯೆಲ್ಲಿ? ಓ ಸಮಾಧಿಯೇ ನಿನ್ನ ಜಯವೆಲ್ಲಿ?
ಹೇಗೆಂದರೆ ದೂತರು ಪಾಪಮಾಡಿದಾಗ ದೇವರು ಅವರನ್ನು ಸುಮ್ಮನೆ ಬಿಡದೆ ನರಕಕ್ಕೆ ದೊಬ್ಬಿ ನ್ಯಾಯ ತೀರ್ಪನ್ನು ಹೊಂದುವದಕ್ಕೆ ಇಡಲ್ಪಟ್ಟವರಾಗಿರ ಬೇಕೆಂದು ಕತ್ತಲೆಯ ಸಂಕೋಲೆಗಳಿಗೆ ಒಪ್ಪಿಸಿದನು.
ಅಂಥವನು ದೇವರ ಕೋಪವೆಂಬ ಪಾತ್ರೆ ಯಲ್ಲಿ ಏನೂ ಬೆರಸದೆ ಹಾಕಿದ ಆತನ ರೌದ್ರವೆಂಬ ದ್ರಾಕ್ಷಾರಸವನ್ನು ಕುಡಿಯುವನು. ಪರಿಶುದ್ಧ ದೂತರ ಮುಂದೆಯೂ ಕುರಿಮರಿಯಾದಾತನ ಮುಂದೆಯೂ ಬೆಂಕಿಯಿಂದ ಮತ್ತು ಗಂಧಕದಿಂದ ಯಾತನೆಪಡು ವನು.
ಇದಲ್ಲದೆ ಅವರನ್ನು ಮರುಳುಗೊಳಿಸಿದ ಸೈತಾನನು ಬೆಂಕಿ ಗಂಧಕಗಳುರಿಯುವ ಕೆರೆಯಲ್ಲಿ ದೊಬ್ಬಲ್ಪಟ್ಟನು; ಅಲ್ಲಿ ಮೃಗವೂ ಸುಳ್ಳು ಪ್ರವಾದಿಯೂ ಕೂಡ ಇದ್ದಾರೆ; ಅವರು ಹಗಲಿರುಳು ಯುಗಯುಗಾಂತರಗಳಲ್ಲಿಯೂ ಯಾತನೆಪಡುತ್ತಿರುವರು.
ಸಮುದ್ರವು ತನ್ನೊಳಗಿದ್ದ ಸತ್ತವರನ್ನು ಒಪ್ಪಿಸಿತು; ಮೃತ್ಯುವೂ ಪಾತಾಳವೂ ತಮ್ಮ ವಶದಲ್ಲಿದ್ದ ಸತ್ತವರನ್ನು ಒಪ್ಪಿಸಿದವು; ಅವರಲ್ಲಿ ಪ್ರತಿಯೊಬ್ಬನಿಗೆ ಅವನವನ ಕೃತ್ಯಗಳ ಪ್ರಕಾರ ನ್ಯಾಯತೀರ್ಪಾಯಿತು.