Home Bibles ಲೂಕ 16:23 · ಕನ್ನಡ ಬೈಬಲ್
ಲೂಕ 16:23 · ಕನ್ನಡ ಬೈಬಲ್

ಆಗ ಅವನು ಪಾತಾಳದೊಳಗೆ ಯಾತನೆಯಲ್ಲಿ ದ್ದವನಾಗಿ ತನ್ನ ಕಣ್ಣುಗಳನ್ನು ಮೇಲಕ್ಕೆತ್ತಿ ದೂರದಿಂದ ಅಬ್ರಹಾಮನನ್ನೂ ಅವನ ಎದೆಯಲ್ಲಿದ್ದ ಲಾಜರನನೂ ನೋಡಿದನು.

Cross references

ಕೀರ್ತನೆಗಳು 9:17

ದುಷ್ಟರೂ ದೇವರನ್ನು ಮರೆಯುವ ಎಲ್ಲಾ ಜನಾಂಗಗಳೂ ನರಕಕ್ಕೆ ಇಳಿಯುವರು.

ಕೀರ್ತನೆಗಳು 16:10

ಯಾಕಂದರೆ ನೀನು ನನ್ನ ಆತ್ಮವನ್ನು ನರಕದಲ್ಲಿ ಬಿಟ್ಟುಬಿಡುವದಿಲ್ಲ; ನಿನ್ನ ಪರಿಶುದ್ಧನ ಕೊಳೆಯುವಿಕೆಯನ್ನು ನೋಡ ಗೊಡಿಸುವದಿಲ್ಲ.ಜೀವದ ಮಾರ್ಗವನ್ನು ನನಗೆ ತಿಳಿಸುವಿ; ನಿನ್ನ ಸಮ್ಮುಖದಲ್ಲಿ ಪರಿಪೂರ್ಣ ಸಂತೋಷ ವೂ ನಿನ್ನ ಬಲಗಡೆಯಲ್ಲಿ ಶಾಶ್ವತ ಭಾಗ್ಯವೂ ಇರುತ್ತವೆ.

ಕೀರ್ತನೆಗಳು 49:15

ಆದರೆ ದೇವರು ನನ್ನ ಪ್ರಾಣವನ್ನು ಸಮಾಧಿಯ ಬಲದಿಂದ ವಿಮೋಚನೆ ಮಾಡುವನು, ಆತನು ನನ್ನನ್ನು ಅಂಗೀಕರಿಸುವನು. ಸೆಲಾ.

ಕೀರ್ತನೆಗಳು 86:13

ನಿನ್ನ ಕರುಣೆಯು ನನ್ನ ಮೇಲೆ ದೊಡ್ಡದಾಗಿದೆ; ಪಾತಾಳ ದೊಳಗಿಂದ ನನ್ನ ಪ್ರಾಣವನ್ನು ಬಿಡಿಸಿದ್ದೀ.

ಸಾಮೇತಿಗಳು 5:5

ಅವಳ ಪಾದಗಳು ಮರಣದ ಕಡೆಗೆ ಇಳಿದು ಹೋಗು ತ್ತವೆ. ಅವಳ ಹೆಜ್ಜೆಗಳು ಪಾತಾಳವನ್ನು ಹಿಡಿಯುತ್ತವೆ.

ಸಾಮೇತಿಗಳು 7:27

ಅವಳ ಮನೆಯು ಪಾತಾಳದ ದಾರಿ, ಅದು ಮೃತ್ಯುವಿನ ಕೊಠಡಿಗೆ ಇಳಿದುಹೋಗುತ್ತದೆ.

ಸಾಮೇತಿಗಳು 9:18

ಆದರೆ ಸತ್ತವರು ಅಲ್ಲಿದ್ದಾರೆಂದೂ ಪಾತಾಳದ ಅಗಾಧಗಳಲ್ಲಿ ಅವಳ ಅಥಿತಿಗಳು ಇದ್ದಾ ರೆಂದೂ ಅವನಿಗೆ ತಿಳಿಯದು.

ಸಾಮೇತಿಗಳು 15:24

ಕೆಳಗಿನ ಪಾತಾಳವನ್ನು ತಪ್ಪಿಸಿಕೊಳ್ಳುವ ದಕ್ಕಾಗಿ ಜ್ಞಾನಿಗಳಿಗೆ ಜೀವದ ಮಾರ್ಗವು ಎತ್ತರದಲ್ಲಿದೆ.

ಯೆಶಾಯ 14:9

ನಿನಗೋ ಸ್ಕರ ನಿನ್ನ ಬರೋಣವನ್ನು ಎದುರುಗೊಳ್ಳುವದಕ್ಕೆ ಪಾತಾಳವು ಕೆಳಗಿನಿಂದ ತಳಮಳಪಡುತ್ತದೆ. ಸತ್ತವ ರನ್ನೂ ಅಂದರೆ, ಭೂಲೋಕದ ಮುಖಂಡರಾಗಿದ್ದವರೆ ಲ್ಲರನ್ನೂ ಕಲಕಿ (ಎಚ್ಚರಿಸಿ) ಜನಾಂಗಗಳ ಎಲ್ಲಾ ರಾಜ ರುಗಳನ್ನು ಅವರ ಸಿಂಹಾಸನಗಳಿಂದ ಎಬ್ಬಿಸುತ್ತದೆ.

ಯೆಶಾಯ 14:15

ಆದಾಗ್ಯೂ ಪಾತಾಳದ ಕುಣಿಯ ಪಾರ್ಶ್ವಗಳಿಗೆ ಇಳಿಸಲ್ಪಡುವಿ.

ಮತ್ತಾಯ 5:22

ನಾನು ನಿಮಗೆ ಹೇಳುವದೇನಂದರೆ-- ನಿಷ್ಕಾರಣವಾಗಿ ತನ್ನ ಸಹೋದರನ ಮೇಲೆ ಯಾವನಾದರೂ ಸಿಟ್ಟುಗೊಂಡರೆ ಅವನು ನ್ಯಾಯತೀರ್ಪಿನ ಅಪಾಯಕ್ಕೆ ಒಳಗಾಗುವನು; ಮತ್ತು ಯಾವನಾದರೂ ತನ್ನ ಸಹೋದರನಿಗೆ-- ವ್ಯರ್ಥವಾದವನೇ ಎಂದು ಹೇಳಿದರೆ ಅವನು ನ್ಯಾಯಸಭೆಯ ಅಪಾಯಕ್ಕೆ ಒಳಗಾಗುವನು

ಮತ್ತಾಯ 5:29

ಆದದರಿಂದ ನಿನ್ನ ಬಲಗಣ್ಣು ನಿನಗೆ ಅಭ್ಯಂತರವಾಗಿದ್ದರೆ ಅದನ್ನು ಕಿತ್ತು ನಿನ್ನಿಂದ ಬಿಸಾಡಿಬಿಡು; ಯಾಕಂದರೆ ನಿನ್ನ ಇಡೀ ಶರೀರವು ನರಕದಲ್ಲಿ ಹಾಕಲ್ಪಡುವದಕ್ಕಿಂತ ನಿನ್ನ ಅಂಗಗಳಲ್ಲಿ ಒಂದು ನಾಶವಾಗುವದು ನಿನಗೆ ಲಾಭಕರವಾಗಿದೆ.

ಮತ್ತಾಯ 8:11

ನಾನು ನಿಮಗೆ ಹೇಳುವದೇನಂದರೆ--ಬಹಳ ಜನರು ಪೂರ್ವದಿಂದಲೂ ಪಶ್ಚಿಮದಿಂದಲೂ ಬಂದು ಪರ ಲೋಕರಾಜ್ಯದಲ್ಲಿ ಅಬ್ರಹಾಮ್‌ ಇಸಾಕ್‌ ಯಾಕೋಬ್‌ ಅವರೊಂದಿಗೆ ಕೂತುಕೊಳ್ಳುವರು.

ಮತ್ತಾಯ 8:29

ಆಗ ಇಗೋ, ಅವರು--ಯೇಸುವೇ, ದೇವ ಕುಮಾರನೇ, ನಿನ್ನೊಂದಿಗೆ ನಮ್ಮ ಗೊಡವೆ ಏನು? ಸಮಯಕ್ಕೆ ಮುಂಚೆ ನಮ್ಮನ್ನು ಸಂಕಟಪಡಿಸು ವದಕ್ಕಾಗಿ ಇಲ್ಲಿಗೆ ಬಂದೆಯಾ ಎಂದು ಕೂಗಿ ಹೇಳಿದರು.

ಮತ್ತಾಯ 11:23

ಆಕಾಶದವರೆಗೂ ಹೆಚ್ಚಿಸಲ್ಪಟ್ಟ ಕಪೆರ್ನೌಮೇ, ನೀನು ಕೆಳಗೆ ಪಾತಾಳಕ್ಕೆ ದೊಬ್ಬಲ್ಪಡುವಿ; ಯಾಕಂದರೆ ನಿನ್ನೊಳಗೆ ನಡೆದಿರುವ ಮಹತ್ಕಾರ್ಯಗಳು ಸೊದೋಮಿನಲ್ಲಿ ನಡೆದಿದ್ದರೆ ಅದು ಈ ದಿನದವರೆಗೂ ಇರುತ್ತಿತ್ತು.

ಮತ್ತಾಯ 18:9

ನಿನ್ನ ಕಣ್ಣು ನಿನ್ನನ್ನು ಅಭ್ಯಂತರ ಪಡಿಸಿದರೆ ಅದನ್ನು ಕಿತ್ತು ನಿನ್ನಿಂದ ಬಿಸಾಡಿಬಿಡು; ನೀನು ಎರಡು ಕಣ್ಣುಳ್ಳವನಾಗಿ ನರಕದ ಬೆಂಕಿಯಲ್ಲಿ ಹಾಕಲ್ಪಡುವದಕ್ಕಿಂತ ಒಂದು ಕಣ್ಣುಳ್ಳವನಾಗಿ ಜೀವದಲ್ಲಿ ಪ್ರವೇಶಿಸುವದು ನಿನಗೆ ಒಳ್ಳೇದು.

ಮತ್ತಾಯ 23:33

ಹಾವು ಗಳೇ, ಸರ್ಪಸಂತತಿಯವರೇ, ನೀವು ನರಕದಂಡನೆ ಯಿಂದ ಹೇಗೆ ತಪ್ಪಿಸಿಕೊಂಡೀರಿ?

ಲೂಕ 8:28

ಅವನು ಯೇಸುವನ್ನು ನೋಡಿದಾಗ ಆತನ ಮುಂದೆ ಬಿದ್ದು--ಯೇಸುವೇ, ಮಹೋನ್ನತ ನಾದ ದೇವರಕುಮಾರನೇ, ನನ್ನ ಗೊಡವೆ ನಿನಗೆ ಯಾಕೆ? ನನ್ನನ್ನು ಸಂಕಟಪಡಿಸಬೇಡವೆಂದು ನಿನ್ನನ್ನು ಬೇಡಿಕೊಳ್ಳುತ್ತೇನೆ ಎಂದು ಗಟ್ಟಿಯಾದ ಸ್ವರದಿಂದ ಕೂಗಿ ಹೇಳಿದನು.

ಲೂಕ 13:28

ಆದರೆ ನೀವು ಅಬ್ರಹಾಮ ಇಸಾಕ ಯಾಕೋಬ ಮತ್ತು ಎಲ್ಲಾ ಪ್ರವಾದಿಗಳು ದೇವರರಾಜ್ಯದಲ್ಲಿ ಇರುವದನ್ನೂ ನೀವು ಮಾತ್ರ ಹೊರಗೆ ದೊಬ್ಬಲ್ಪಟ್ಟಿರುವದನ್ನೂ ನೋಡು ವಾಗ ಅಲ್ಲಿ ನಿಮಗೆ ಗೋಳಾಟವೂ ಹಲ್ಲುಕಡಿ ಯೋಣವೂ ಇರುವವು.

ಲೂಕ 16:28

ನನಗೆ ಐದುಮಂದಿ ಸಹೋದರರಿದ್ದಾರೆ; ಅವರು ಸಹ ಈ ಯಾತನೆಯ ಸ್ಥಳಕ್ಕೆ ಬಾರದ ಹಾಗೆ ಇವನು ಅವರಿಗೆ ಸಾಕ್ಷಿ ಕೊಡಲಿ ಅಂದನು.

1 ಕೊರಿಂಥದವರಿಗೆ 15:55

ಓ ಮರಣವೇ, ನಿನ್ನ ಕೊಂಡಿಯೆಲ್ಲಿ? ಓ ಸಮಾಧಿಯೇ ನಿನ್ನ ಜಯವೆಲ್ಲಿ?

2 ಪೇತ್ರ 2:4

ಹೇಗೆಂದರೆ ದೂತರು ಪಾಪಮಾಡಿದಾಗ ದೇವರು ಅವರನ್ನು ಸುಮ್ಮನೆ ಬಿಡದೆ ನರಕಕ್ಕೆ ದೊಬ್ಬಿ ನ್ಯಾಯ ತೀರ್ಪನ್ನು ಹೊಂದುವದಕ್ಕೆ ಇಡಲ್ಪಟ್ಟವರಾಗಿರ ಬೇಕೆಂದು ಕತ್ತಲೆಯ ಸಂಕೋಲೆಗಳಿಗೆ ಒಪ್ಪಿಸಿದನು.

ಪ್ರಕಟನೆ 14:10

ಅಂಥವನು ದೇವರ ಕೋಪವೆಂಬ ಪಾತ್ರೆ ಯಲ್ಲಿ ಏನೂ ಬೆರಸದೆ ಹಾಕಿದ ಆತನ ರೌದ್ರವೆಂಬ ದ್ರಾಕ್ಷಾರಸವನ್ನು ಕುಡಿಯುವನು. ಪರಿಶುದ್ಧ ದೂತರ ಮುಂದೆಯೂ ಕುರಿಮರಿಯಾದಾತನ ಮುಂದೆಯೂ ಬೆಂಕಿಯಿಂದ ಮತ್ತು ಗಂಧಕದಿಂದ ಯಾತನೆಪಡು ವನು.

ಪ್ರಕಟನೆ 20:10

ಇದಲ್ಲದೆ ಅವರನ್ನು ಮರುಳುಗೊಳಿಸಿದ ಸೈತಾನನು ಬೆಂಕಿ ಗಂಧಕಗಳುರಿಯುವ ಕೆರೆಯಲ್ಲಿ ದೊಬ್ಬಲ್ಪಟ್ಟನು; ಅಲ್ಲಿ ಮೃಗವೂ ಸುಳ್ಳು ಪ್ರವಾದಿಯೂ ಕೂಡ ಇದ್ದಾರೆ; ಅವರು ಹಗಲಿರುಳು ಯುಗಯುಗಾಂತರಗಳಲ್ಲಿಯೂ ಯಾತನೆಪಡುತ್ತಿರುವರು.

ಪ್ರಕಟನೆ 20:13

ಸಮುದ್ರವು ತನ್ನೊಳಗಿದ್ದ ಸತ್ತವರನ್ನು ಒಪ್ಪಿಸಿತು; ಮೃತ್ಯುವೂ ಪಾತಾಳವೂ ತಮ್ಮ ವಶದಲ್ಲಿದ್ದ ಸತ್ತವರನ್ನು ಒಪ್ಪಿಸಿದವು; ಅವರಲ್ಲಿ ಪ್ರತಿಯೊಬ್ಬನಿಗೆ ಅವನವನ ಕೃತ್ಯಗಳ ಪ್ರಕಾರ ನ್ಯಾಯತೀರ್ಪಾಯಿತು.

Interlinear

Choose Theme