ಅವನು--ತಂದೆಯಾದ ಅಬ್ರಹಾ ಮನೇ, ನನ್ನ ಮೇಲೆ ಕರುಣೆ ಇಟ್ಟು ಲಾಜರನು ತನ್ನ ತುದಿಬೆರಳನ್ನು ನೀರಲ್ಲಿ ಅದ್ದಿ ನನ್ನ ನಾಲಿಗೆಯನ್ನು ತಣ್ಣಗೆ ಮಾಡುವಂತೆ ಅವನನ್ನು ಕಳುಹಿಸು; ಯಾಕಂದರೆ ನಾನು ಈ ಉರಿಯಲ್ಲಿ ಯಾತನೆಪಡುತ್ತಾ ಇದ್ದೇನೆ ಎಂದು ಕೂಗಿ ಹೇಳಿದನು.
Cross references
ಸಮುವೇಲನು ಅವನಿಗೆ--ಕರ್ತನು ನಿನ್ನನ್ನು ಬಿಟ್ಟುಹೋಗಿ ನಿನಗೆ ಶತ್ರುವಾಗಿರುವಾಗ ನೀನು ನನ್ನನ್ನು ಕೇಳುವದು ಯಾಕೆ? ಕರ್ತನು ನನ್ನ ಮುಖಾಂತರ ಹೇಳಿದ ಹಾಗೆಯೇ ನಿನಗೆ ಮಾಡಿದ್ದಾನೆ;
ಅವನ ಊಟದಲ್ಲಿ ಏನೂ ಉಳಿಯದು; ಆದದರಿಂದ ಅವನ ವಸ್ತುಗಳನ್ನು ಯಾರೂ ನೋಡುವದಿಲ್ಲ.
ಅಲ್ಲಿನ ರೆಂಬೆಗಳು ಒಣಗಿಹೋಗಿ ಮುರಿ ಯಲ್ಪಡುವವು, ಹೆಂಗಸರು ಬಂದು ಅವುಗಳಿಂದ ಬೆಂಕಿ ಹಚ್ಚಿ ಉರಿಸುವರು; ಅದು ವಿವೇಕವುಳ್ಳ ಜನ ವಲ್ಲ. ಆದದರಿಂದ ಅವರನ್ನು ಮಾಡಿದವನು ಅವರಿಗೆ ಕನಿಕರ ತೋರಿಸುವದಿಲ್ಲ. ಅವರನ್ನು ರೂಪಿಸಿದಾತನು ಅವರನ್ನು ಕರುಣಿಸುವದಿಲ್ಲ.
ಬಡವರೂ ದರಿದ್ರರೂ ನೀರನ್ನು ಹುಡುಕಿ ಕಾಣದೇ ಬಾಯಾರಿಕೆಯಿಂದ ನಾಲಿಗೆ ಒಣಗಿದಾಗ ಕರ್ತನಾದ ನಾನೇ ಅವರನ್ನು ಅಲೈಸುವೆನು, ಇಸ್ರಾಯೇಲ್ ದೇವ ರಾಗಿರುವ ನಾನು ಅವರನ್ನು ಕೈಬಿಡೆನು.
ಹೀಗಿರುವದರಿಂದ ದೇವರಾದ ಕರ್ತನು ಹೇಳು ವದೇನಂದರೆ--ಇಗೋ, ನನ್ನ ಸೇವಕರು ತಿನ್ನುವರು ಆದರೆ ನೀವು ಹಸಿದಿರುವಿರಿ; ಇಗೋ, ನನ್ನ ಸೇವಕರು ಕುಡಿಯುವರು, ಆದರೆ ನೀವು ಬಾಯಾರಿರುವಿರಿ; ಇಗೋ, ನನ್ನ ಸೇವಕರು ಸಂತೋಷಪಡುವರು; ಆದರೆ ನೀವು ನಾಚಿಕೆಪಡುವಿರಿ;
ಅವರು ಮುಂದೆ ಹೋಗಿ ನನಗೆ ವಿರೋಧವಾಗಿ ದ್ರೋಹ ಮಾಡಿದ ಮನುಷ್ಯರ ಹೆಣಗಳನ್ನು ನೋಡುವರು; ಯಾಕಂದರೆ ಅವರ ಹುಳ ಸಾಯುವದಿಲ್ಲ; ಅವರ ಬೆಂಕಿ ಆರುವದಿಲ್ಲ; ಅವರು ಎಲ್ಲಾ ಮನುಷ್ಯರಿಗೆ ಹೇಸಿಕೆಯಾಗುವರು.
ಯೆರೂಸಲೇಮಿಗೆ ವಿರೋಧವಾಗಿ ದಂಡುಕಟ್ಟಿ ಕೊಂಡಿರುವ ಎಲ್ಲಾ ಜನಗಳನ್ನು ಕರ್ತನು ವ್ಯಾಧಿ ಯಿಂದ ಬಾಧಿಸುವನು; ಹೀಗೆಯೇ ಅವರು ಕಾಲಿನ ಮೇಲೆ ನಿಲ್ಲುವಾಗ ಅವರ ಶರೀರವು ಕ್ಷಯಿಸಿಹೋಗು ವದು; ಅವರ ಕಣ್ಣುಗಳು ಗುಣಿಗಳಲ್ಲಿ ಇಂಗಿಹೋಗು ವವು; ಅವರ ನಾಲಿಗೆ ಅವರ ಬಾಯಲ್ಲಿ ಕ್ಷಯಿಸಿ ಹೋಗುವದು.
ಮತ್ತು -- ಅಬ್ರಹಾಮನು ನಮಗೆ ತಂದೆಯಾಗಿದ್ದಾನೆ ಎಂದು ನಿಮ್ಮ ನಿಮ್ಮೊಳಗೆ ಅಂದು ಕೊಳ್ಳಬೇಡಿರಿ; ಯಾಕಂದರೆ ದೇವರು ಅಬ್ರಹಾಮನಿಗೆ ಈ ಕಲ್ಲುಗಳಿಂದ ಮಕ್ಕಳನ್ನು ಎಬ್ಬಿಸ ಶಕ್ತನೆಂದು ನಾನು ನಿಮಗೆ ಹೇಳುತ್ತೇನೆ.
ನಾನು ನಿಮಗೆ ಹೇಳುವದೇನಂದರೆ-- ನಿಷ್ಕಾರಣವಾಗಿ ತನ್ನ ಸಹೋದರನ ಮೇಲೆ ಯಾವನಾದರೂ ಸಿಟ್ಟುಗೊಂಡರೆ ಅವನು ನ್ಯಾಯತೀರ್ಪಿನ ಅಪಾಯಕ್ಕೆ ಒಳಗಾಗುವನು; ಮತ್ತು ಯಾವನಾದರೂ ತನ್ನ ಸಹೋದರನಿಗೆ-- ವ್ಯರ್ಥವಾದವನೇ ಎಂದು ಹೇಳಿದರೆ ಅವನು ನ್ಯಾಯಸಭೆಯ ಅಪಾಯಕ್ಕೆ ಒಳಗಾಗುವನು
ಆತನು ಎಡಗಡೆ ಯಲ್ಲಿರುವವರಿಗೆ--ಶಾಪಗ್ರಸ್ತರೇ, ನೀವು ನನ್ನಿಂದ ತೊಲಗಿ ಸೈತಾನನಿಗೂ ಅವನ ದೂತರಿಗೂ ಸಿದ್ಧ ಮಾಡಲ್ಪಟ್ಟ ನಿತ್ಯ ಬೆಂಕಿಯೊಳಗೆ ಹೋಗಿರಿ.
ನಿನ್ನ ಕೈ ನಿನಗೆ ಅಭ್ಯಂತರ ಮಾಡಿದರೆ ಅದನ್ನು ಕಡಿದುಹಾಕು; ಯಾಕಂದರೆ ಎರಡು ಕೈಗಳು ಳ್ಳವನಾಗಿ ಎಂದಿಗೂ ಆರದ ಬೆಂಕಿಯ ನರಕದೊಳಗೆ ಹೋಗುವದಕ್ಕಿಂತ ಅಂಗಹೀನನಾಗಿ ಜೀವದಲ್ಲಿ ಸೇರು ವದು ನಿನಗೆ ಒಳ್ಳೇದು;
ಅಲ್ಲಿ ಅವರ ಹುಳವು ಸಾಯುವ ದಿಲ್ಲ ಮತ್ತು ಬೆಂಕಿಯು ಆರುವದಿಲ್ಲ.
ಹಾಗಾದರೆ ಮಾನಸಾ ಂತರಕ್ಕೆ ಯೋಗ್ಯವಾದ ಫಲಗಳನ್ನು ಫಲಿಸಿರಿ,--ಅಬ್ರಹಾಮನು ನಮಗೆ ತಂದೆಯಾಗಿದ್ದಾನೆಂದು ನಿಮ್ಮೊಳಗೆ ಅಂದುಕೊಳ್ಳುವದಕ್ಕೆ ಆರಂಭಿಸಬೇ ಡಿರಿ; ಯಾಕಂದರೆ--ದೇವರು ಅಬ್ರಹಾಮನಿಗೆ ಈ ಕಲ್ಲುಗಳಿಂದ ಮಕ್ಕಳನ್ನು ಎಬ್ಬಿಸಶಕ್ತನೆಂದು ನಾನು ನಿಮಗೆ ಹೇಳುತ್ತೇನೆ.
ಆಗ ಅವನು--ಹಾಗಲ್ಲ, ತಂದೆ ಯಾದ ಅಬ್ರಹಾಮನೇ, ಸತ್ತವರೊಳಗಿಂದ ಒಬ್ಬನು ಅವರ ಬಳಿಗೆ ಹೋದರೆ ಅವರು ಮಾನಸಾಂತರ ಪಡುವರು ಅಂದನು.ಆದರೆ ಅವನು--ಅವರು ಮೋಶೆಯು ಮತ್ತು ಪ್ರವಾದಿಗಳು ಹೇಳಿದ್ದನ್ನು ಕೇಳದೆ ಹೋದರೆ ಸತ್ತವರೊಳಗಿಂದ ಒಬ್ಬನು ಎದ್ದರೂ ಅವರು ಒಪ್ಪುವದಿಲ್ಲ ಎಂದು ಅವನಿಗೆ ಹೇಳಿದನು.
ಯೇಸು ಪ್ರತ್ಯುತ್ತರವಾಗಿ ಆಕೆಗೆ--ದೇವರ ದಾನವೇನೆಂಬದೂ ಮತ್ತು--ನನಗೆ ಕುಡಿಯುವದಕ್ಕೆ ಕೊಡು ಎಂದು ನಿನ್ನನ್ನು ಕೇಳಿದಾತನು ಯಾರೆಂಬದೂ ನಿನಗೆ ತಿಳಿದಿದ್ದರೆ ನೀನು ಆತನನ್ನು ಕೇಳುತ್ತಿದ್ದಿ, ಆತನು ನಿನಗೆ ಜೀವಕರವಾದ ನೀರನ್ನು ಕೊಡುತ್ತಿದ್ದನು ಎಂದು ಹೇಳಿದನು.
ಆದರೆ ನಾನು ಕೊಡುವ ನೀರನ್ನು ಕುಡಿಯುವವನಿಗೆ ಎಂದಿಗೂ ನೀರ ಡಿಕೆಯಾಗುವದಿಲ್ಲ; ಯಾಕಂದರೆ ನಾನು ಅವನಿಗೆ ಕೊಡುವ ನೀರು ಅವನಲ್ಲಿ ನಿತ್ಯಜೀವಕ್ಕೆ ಉಕ್ಕುವ ನೀರಿನ ಬಾವಿಯಾಗಿರುವದು ಅಂದನು.
ಹಬ್ಬದ ಆ ಮಹಾದಿವಸವಾದ ಕಡೇ ದಿನದಲ್ಲಿ ಯೇಸು ನಿಂತುಕೊಂಡು--ಯಾವನಿಗಾದರೂ ನೀರಡಿಕೆ ಯಾಗಿದ್ದರೆ ಅವನು ನನ್ನ ಬಳಿಗೆ ಬಂದು ಕುಡಿಯಲಿ.
ಅದಕ್ಕೆ ಅವರು ಪ್ರತ್ಯುತ್ತರವಾಗಿ ಆತನಿಗೆ--ನಾವು ಅಬ್ರಹಾಮನ ಸಂತತಿಯವರಾಗಿರಲಾಗಿ ಯಾವ ಮನುಷ್ಯನಿಗೂ ಎಂದಿಗೂ ಗುಲಾಮರಾಗಿರಲಿಲ್ಲ; ಹಾಗಾದರೆ--ನಿಮಗೆ ಬಿಡುಗಡೆಯಾಗುವದೆಂದು ನೀನು ಹೇಗೆ ಹೇಳುತ್ತೀ ಅಂದರು.
ಸತ್ತುಹೋದ ನಮ್ಮ ತಂದೆ ಯಾದ ಅಬ್ರಹಾಮನಿಗಿಂತಲೂ ನೀನು ದೊಡ್ಡ ವನೋ? ಪ್ರವಾದಿಗಳೂ ಸತ್ತುಹೋದರು. ನಿನ್ನನ್ನು ಯಾರೆಂದು ನೀನು ಮಾಡಿಕೊಳ್ಳುತ್ತೀ ಎಂದು ಕೇಳಲು
ಇದಲ್ಲದೆ ಸುನ್ನತಿಯಿದ್ದವರಿಗೆ ತಂದೆಯಾದವನು ಸುನ್ನತಿಯವರಿಗೆ ಮಾತ್ರವಲ್ಲ, ಆದರೆ ಅಬ್ರಹಾಮನು ಸುನ್ನತಿ ಮಾಡಿಸಿಕೊಳ್ಳುವದಕ್ಕೆ ಮುಂಚೆ ನಡೆದ ನಂಬಿಕೆಯ ಹೆಜ್ಜೆಜಾಡಿನಲ್ಲಿ ನಡೆಯುತ್ತಿರುವ ಸುನ್ನತಿ ಯಿಲ್ಲದವರಿಗೂ ತಂದೆಯಾಗಿದ್ದಾನೆ.
ಇಲ್ಲವೆ ಅವರು ಅಬ್ರಹಾಮನ ಸಂತತಿಯವರಾದ ಕಾರಣ ಅವರೆ ಲ್ಲರೂ ಮಕ್ಕಳಲ್ಲ; ಆದರೆ--ಇಸಾಕನಲ್ಲಿಯೇ ನಿನ್ನ ಸಂತ ತಿಯು ಕರೆಯಲ್ಪಡುವದು ಎಂಬದೇ.
ಆತನು (ಕರ್ತನಾದ ಯೇಸು) ದೇವರನ್ನರಿಯ ದವರಿಗೆ ಮತ್ತು ಕರ್ತನಾದ ಯೇಸು ಕ್ರಿಸ್ತನ ಸುವಾರ್ತೆಗೆ ವಿಧೇಯರಾಗದವರಿಗೆ ಉರಿಯುವ ಬೆಂಕಿಯ ಮೂಲಕ ಪ್ರತೀಕಾರ ಮಾಡುವದೂ ದೇವರಿಗೆ ನ್ಯಾಯವಾಗಿದೆ;
ಕರುಣೆ ತೋರಿಸದೆ ಇರುವವನಿಗೆ ನ್ಯಾಯತೀರ್ಪಿನಲ್ಲಿ ಕರುಣೆಯು ತೋರಿಸಲ್ಪಡುವದಿಲ್ಲ. ಕರುಣೆಯು ನ್ಯಾಯತೀರ್ಪಿಗಿಂತ ಮೇಲಾಗಿ ಹಿಗ್ಗುತ್ತದೆ.
ನಾಲಿಗೆಯು ಬೆಂಕಿಯೂ ದುಷ್ಟಲೋಕವೂ ಆಗಿದೆ. ಹೀಗೆ ಅದು ನಮ್ಮ ಅಂಗಗಳಲ್ಲಿ ಇದ್ದು ದೇಹವನ್ನೆಲ್ಲಾ ಹೊಲೆಮಾಡಿ ಪ್ರಕೃತಿಯ ಕ್ರಮಕ್ಕೆ ಬೆಂಕಿ ಹಚ್ಚುವ ಹಾಗೆಯೂ ನರಕದ ಬೆಂಕಿಯನ್ನು ಹಚ್ಚಿಕೊಳ್ಳುವ ದಾಗಿಯೂ ಇದೆ.
ಇನ್ನು ಮೇಲೆ ಅವರಿಗೆ ಹಸಿವೆಯಾಗಲಿ ಬಾಯಾರಿಕೆಯಾಗಲಿ ಆಗುವದೇ ಇಲ್ಲ; ಇದಲ್ಲದೆ ಅವರಿಗೆ ಬಿಸಿಲಾದರೂ ಯಾವ ಝಳವಾದರೂ ಬಡಿಯುವದಿಲ್ಲ.ಸಿಂಹಾಸನದ ಮಧ್ಯದಲ್ಲಿರುವ ಕುರಿಮರಿಯಾದಾತನು ಅವರನ್ನು ಮೇಯಿಸಿ ಜೀವ ಜಲದ ಒರತೆಗಳ ಬಳಿಗೆ ನಡಿಸುತ್ತಾನೆ; ಮತ್ತು ದೇವರು ಅವರ ಕಣ್ಣೀರನ್ನೆಲ್ಲಾ ಒರಸಿಬಿಡುವನು ಎಂದು ಹೇಳಿದನು.
ಅಂಥವನು ದೇವರ ಕೋಪವೆಂಬ ಪಾತ್ರೆ ಯಲ್ಲಿ ಏನೂ ಬೆರಸದೆ ಹಾಕಿದ ಆತನ ರೌದ್ರವೆಂಬ ದ್ರಾಕ್ಷಾರಸವನ್ನು ಕುಡಿಯುವನು. ಪರಿಶುದ್ಧ ದೂತರ ಮುಂದೆಯೂ ಕುರಿಮರಿಯಾದಾತನ ಮುಂದೆಯೂ ಬೆಂಕಿಯಿಂದ ಮತ್ತು ಗಂಧಕದಿಂದ ಯಾತನೆಪಡು ವನು.
ಆಗ ಮೃಗವು ಸೆರೆಸಿಕ್ಕಿತು; ಇದಲ್ಲದೆ ಮೃಗದ ಮುಂದೆ ಮಹತ್ಕಾರ್ಯಗಳನ್ನು ಮಾಡಿ ಮೃಗದ ಗುರುತು ಹಾಕಿಸಿಕೊಂಡವರನ್ನೂ ಅದರ ವಿಗ್ರಹವನ್ನು ಆರಾಧಿಸಿದವರನ್ನೂ ಮರುಳುಗೊಳಿಸಿದ ಆ ಸುಳ್ಳು ಪ್ರವಾದಿಯೂ ಆದರ ಜೊತೆಯಲ್ಲಿ ಸೆರೆ ಸಿಕ್ಕಿದನು. ಇವರಿಬ್ಬರೂ ಜೀವಸಹಿತವಾಗಿ ಗಂಧಕ ದಿಂದಮಿಕ್ಕಾದವರು ಆ ಕುದುರೆಯ ಮೇಲೆ ಕೂತಿದ್ದಾತನ ಕತ್ತಿಯಿಂದ ಅಂದರೆ ಆತನ ಬಾಯಿಂದ ಬಂದ ಕತ್ತಿ ಯಿಂದ ಹತರಾದರು; ಹಕ್ಕಿಗಳೆಲ್ಲಾ ಅವರ ಮಾಂಸವನು ಹೊಟ್ಟೆತುಂಬಾ ತಿಂದವು.
ಯಾವನ ಹೆಸರು ಜೀವಗ್ರಂಥದಲ್ಲಿ ಬರೆದದ್ದಾಗಿ ಕಾಣಲಿಲ್ಲವೋ ಅವನು ಬೆಂಕಿಯ ಕೆರೆಗೆ ದೊಬ್ಬಲ್ಪಟ್ಟನು.
ಆಮೇಲೆ ಅವನು ಸ್ಫಟಿಕದಂತೆ ಸ್ವಚ್ಛವಾದ ಮತ್ತು ಶುದ್ಧವಾದ ಜೀವಜಲದ ನದಿ ಯನ್ನು ನನಗೆ ತೋರಿಸಿದನು; ಅದು ದೇವರ ಮತ್ತು ಕುರಿಮರಿಯಾದಾತನ ಸಿಂಹಾಸನದಿಂದ ಹೊರಡುವ ದಾಗಿತ್ತು.