Home Bibles ಲೂಕ 16:24 · ಕನ್ನಡ ಬೈಬಲ್
ಲೂಕ 16:24 · ಕನ್ನಡ ಬೈಬಲ್

ಅವನು--ತಂದೆಯಾದ ಅಬ್ರಹಾ ಮನೇ, ನನ್ನ ಮೇಲೆ ಕರುಣೆ ಇಟ್ಟು ಲಾಜರನು ತನ್ನ ತುದಿಬೆರಳನ್ನು ನೀರಲ್ಲಿ ಅದ್ದಿ ನನ್ನ ನಾಲಿಗೆಯನ್ನು ತಣ್ಣಗೆ ಮಾಡುವಂತೆ ಅವನನ್ನು ಕಳುಹಿಸು; ಯಾಕಂದರೆ ನಾನು ಈ ಉರಿಯಲ್ಲಿ ಯಾತನೆಪಡುತ್ತಾ ಇದ್ದೇನೆ ಎಂದು ಕೂಗಿ ಹೇಳಿದನು.

Cross references

1 ಸಮುವೇಲ 28:16

ಸಮುವೇಲನು ಅವನಿಗೆ--ಕರ್ತನು ನಿನ್ನನ್ನು ಬಿಟ್ಟುಹೋಗಿ ನಿನಗೆ ಶತ್ರುವಾಗಿರುವಾಗ ನೀನು ನನ್ನನ್ನು ಕೇಳುವದು ಯಾಕೆ? ಕರ್ತನು ನನ್ನ ಮುಖಾಂತರ ಹೇಳಿದ ಹಾಗೆಯೇ ನಿನಗೆ ಮಾಡಿದ್ದಾನೆ;

ಯೋಬ 20:21

ಅವನ ಊಟದಲ್ಲಿ ಏನೂ ಉಳಿಯದು; ಆದದರಿಂದ ಅವನ ವಸ್ತುಗಳನ್ನು ಯಾರೂ ನೋಡುವದಿಲ್ಲ.

ಯೆಶಾಯ 27:11

ಅಲ್ಲಿನ ರೆಂಬೆಗಳು ಒಣಗಿಹೋಗಿ ಮುರಿ ಯಲ್ಪಡುವವು, ಹೆಂಗಸರು ಬಂದು ಅವುಗಳಿಂದ ಬೆಂಕಿ ಹಚ್ಚಿ ಉರಿಸುವರು; ಅದು ವಿವೇಕವುಳ್ಳ ಜನ ವಲ್ಲ. ಆದದರಿಂದ ಅವರನ್ನು ಮಾಡಿದವನು ಅವರಿಗೆ ಕನಿಕರ ತೋರಿಸುವದಿಲ್ಲ. ಅವರನ್ನು ರೂಪಿಸಿದಾತನು ಅವರನ್ನು ಕರುಣಿಸುವದಿಲ್ಲ.

ಯೆಶಾಯ 41:17

ಬಡವರೂ ದರಿದ್ರರೂ ನೀರನ್ನು ಹುಡುಕಿ ಕಾಣದೇ ಬಾಯಾರಿಕೆಯಿಂದ ನಾಲಿಗೆ ಒಣಗಿದಾಗ ಕರ್ತನಾದ ನಾನೇ ಅವರನ್ನು ಅಲೈಸುವೆನು, ಇಸ್ರಾಯೇಲ್‌ ದೇವ ರಾಗಿರುವ ನಾನು ಅವರನ್ನು ಕೈಬಿಡೆನು.

ಯೆಶಾಯ 65:13

ಹೀಗಿರುವದರಿಂದ ದೇವರಾದ ಕರ್ತನು ಹೇಳು ವದೇನಂದರೆ--ಇಗೋ, ನನ್ನ ಸೇವಕರು ತಿನ್ನುವರು ಆದರೆ ನೀವು ಹಸಿದಿರುವಿರಿ; ಇಗೋ, ನನ್ನ ಸೇವಕರು ಕುಡಿಯುವರು, ಆದರೆ ನೀವು ಬಾಯಾರಿರುವಿರಿ; ಇಗೋ, ನನ್ನ ಸೇವಕರು ಸಂತೋಷಪಡುವರು; ಆದರೆ ನೀವು ನಾಚಿಕೆಪಡುವಿರಿ;

ಯೆಶಾಯ 66:24

ಅವರು ಮುಂದೆ ಹೋಗಿ ನನಗೆ ವಿರೋಧವಾಗಿ ದ್ರೋಹ ಮಾಡಿದ ಮನುಷ್ಯರ ಹೆಣಗಳನ್ನು ನೋಡುವರು; ಯಾಕಂದರೆ ಅವರ ಹುಳ ಸಾಯುವದಿಲ್ಲ; ಅವರ ಬೆಂಕಿ ಆರುವದಿಲ್ಲ; ಅವರು ಎಲ್ಲಾ ಮನುಷ್ಯರಿಗೆ ಹೇಸಿಕೆಯಾಗುವರು.

ಜೆಕರ್ಯ 14:12

ಯೆರೂಸಲೇಮಿಗೆ ವಿರೋಧವಾಗಿ ದಂಡುಕಟ್ಟಿ ಕೊಂಡಿರುವ ಎಲ್ಲಾ ಜನಗಳನ್ನು ಕರ್ತನು ವ್ಯಾಧಿ ಯಿಂದ ಬಾಧಿಸುವನು; ಹೀಗೆಯೇ ಅವರು ಕಾಲಿನ ಮೇಲೆ ನಿಲ್ಲುವಾಗ ಅವರ ಶರೀರವು ಕ್ಷಯಿಸಿಹೋಗು ವದು; ಅವರ ಕಣ್ಣುಗಳು ಗುಣಿಗಳಲ್ಲಿ ಇಂಗಿಹೋಗು ವವು; ಅವರ ನಾಲಿಗೆ ಅವರ ಬಾಯಲ್ಲಿ ಕ್ಷಯಿಸಿ ಹೋಗುವದು.

ಮತ್ತಾಯ 3:9

ಮತ್ತು -- ಅಬ್ರಹಾಮನು ನಮಗೆ ತಂದೆಯಾಗಿದ್ದಾನೆ ಎಂದು ನಿಮ್ಮ ನಿಮ್ಮೊಳಗೆ ಅಂದು ಕೊಳ್ಳಬೇಡಿರಿ; ಯಾಕಂದರೆ ದೇವರು ಅಬ್ರಹಾಮನಿಗೆ ಈ ಕಲ್ಲುಗಳಿಂದ ಮಕ್ಕಳನ್ನು ಎಬ್ಬಿಸ ಶಕ್ತನೆಂದು ನಾನು ನಿಮಗೆ ಹೇಳುತ್ತೇನೆ.

ಮತ್ತಾಯ 5:22

ನಾನು ನಿಮಗೆ ಹೇಳುವದೇನಂದರೆ-- ನಿಷ್ಕಾರಣವಾಗಿ ತನ್ನ ಸಹೋದರನ ಮೇಲೆ ಯಾವನಾದರೂ ಸಿಟ್ಟುಗೊಂಡರೆ ಅವನು ನ್ಯಾಯತೀರ್ಪಿನ ಅಪಾಯಕ್ಕೆ ಒಳಗಾಗುವನು; ಮತ್ತು ಯಾವನಾದರೂ ತನ್ನ ಸಹೋದರನಿಗೆ-- ವ್ಯರ್ಥವಾದವನೇ ಎಂದು ಹೇಳಿದರೆ ಅವನು ನ್ಯಾಯಸಭೆಯ ಅಪಾಯಕ್ಕೆ ಒಳಗಾಗುವನು

ಮತ್ತಾಯ 25:41

ಆತನು ಎಡಗಡೆ ಯಲ್ಲಿರುವವರಿಗೆ--ಶಾಪಗ್ರಸ್ತರೇ, ನೀವು ನನ್ನಿಂದ ತೊಲಗಿ ಸೈತಾನನಿಗೂ ಅವನ ದೂತರಿಗೂ ಸಿದ್ಧ ಮಾಡಲ್ಪಟ್ಟ ನಿತ್ಯ ಬೆಂಕಿಯೊಳಗೆ ಹೋಗಿರಿ.

ಮಾರ್ಕ 9:43

ನಿನ್ನ ಕೈ ನಿನಗೆ ಅಭ್ಯಂತರ ಮಾಡಿದರೆ ಅದನ್ನು ಕಡಿದುಹಾಕು; ಯಾಕಂದರೆ ಎರಡು ಕೈಗಳು ಳ್ಳವನಾಗಿ ಎಂದಿಗೂ ಆರದ ಬೆಂಕಿಯ ನರಕದೊಳಗೆ ಹೋಗುವದಕ್ಕಿಂತ ಅಂಗಹೀನನಾಗಿ ಜೀವದಲ್ಲಿ ಸೇರು ವದು ನಿನಗೆ ಒಳ್ಳೇದು;

ಮಾರ್ಕ 9:46

ಅಲ್ಲಿ ಅವರ ಹುಳವು ಸಾಯುವ ದಿಲ್ಲ ಮತ್ತು ಬೆಂಕಿಯು ಆರುವದಿಲ್ಲ.

ಲೂಕ 3:8

ಹಾಗಾದರೆ ಮಾನಸಾ ಂತರಕ್ಕೆ ಯೋಗ್ಯವಾದ ಫಲಗಳನ್ನು ಫಲಿಸಿರಿ,--ಅಬ್ರಹಾಮನು ನಮಗೆ ತಂದೆಯಾಗಿದ್ದಾನೆಂದು ನಿಮ್ಮೊಳಗೆ ಅಂದುಕೊಳ್ಳುವದಕ್ಕೆ ಆರಂಭಿಸಬೇ ಡಿರಿ; ಯಾಕಂದರೆ--ದೇವರು ಅಬ್ರಹಾಮನಿಗೆ ಈ ಕಲ್ಲುಗಳಿಂದ ಮಕ್ಕಳನ್ನು ಎಬ್ಬಿಸಶಕ್ತನೆಂದು ನಾನು ನಿಮಗೆ ಹೇಳುತ್ತೇನೆ.

ಲೂಕ 16:30

ಆಗ ಅವನು--ಹಾಗಲ್ಲ, ತಂದೆ ಯಾದ ಅಬ್ರಹಾಮನೇ, ಸತ್ತವರೊಳಗಿಂದ ಒಬ್ಬನು ಅವರ ಬಳಿಗೆ ಹೋದರೆ ಅವರು ಮಾನಸಾಂತರ ಪಡುವರು ಅಂದನು.ಆದರೆ ಅವನು--ಅವರು ಮೋಶೆಯು ಮತ್ತು ಪ್ರವಾದಿಗಳು ಹೇಳಿದ್ದನ್ನು ಕೇಳದೆ ಹೋದರೆ ಸತ್ತವರೊಳಗಿಂದ ಒಬ್ಬನು ಎದ್ದರೂ ಅವರು ಒಪ್ಪುವದಿಲ್ಲ ಎಂದು ಅವನಿಗೆ ಹೇಳಿದನು.

ಯೋಹಾನ 4:10

ಯೇಸು ಪ್ರತ್ಯುತ್ತರವಾಗಿ ಆಕೆಗೆ--ದೇವರ ದಾನವೇನೆಂಬದೂ ಮತ್ತು--ನನಗೆ ಕುಡಿಯುವದಕ್ಕೆ ಕೊಡು ಎಂದು ನಿನ್ನನ್ನು ಕೇಳಿದಾತನು ಯಾರೆಂಬದೂ ನಿನಗೆ ತಿಳಿದಿದ್ದರೆ ನೀನು ಆತನನ್ನು ಕೇಳುತ್ತಿದ್ದಿ, ಆತನು ನಿನಗೆ ಜೀವಕರವಾದ ನೀರನ್ನು ಕೊಡುತ್ತಿದ್ದನು ಎಂದು ಹೇಳಿದನು.

ಯೋಹಾನ 4:14

ಆದರೆ ನಾನು ಕೊಡುವ ನೀರನ್ನು ಕುಡಿಯುವವನಿಗೆ ಎಂದಿಗೂ ನೀರ ಡಿಕೆಯಾಗುವದಿಲ್ಲ; ಯಾಕಂದರೆ ನಾನು ಅವನಿಗೆ ಕೊಡುವ ನೀರು ಅವನಲ್ಲಿ ನಿತ್ಯಜೀವಕ್ಕೆ ಉಕ್ಕುವ ನೀರಿನ ಬಾವಿಯಾಗಿರುವದು ಅಂದನು.

ಯೋಹಾನ 7:37

ಹಬ್ಬದ ಆ ಮಹಾದಿವಸವಾದ ಕಡೇ ದಿನದಲ್ಲಿ ಯೇಸು ನಿಂತುಕೊಂಡು--ಯಾವನಿಗಾದರೂ ನೀರಡಿಕೆ ಯಾಗಿದ್ದರೆ ಅವನು ನನ್ನ ಬಳಿಗೆ ಬಂದು ಕುಡಿಯಲಿ.

ಯೋಹಾನ 8:33

ಅದಕ್ಕೆ ಅವರು ಪ್ರತ್ಯುತ್ತರವಾಗಿ ಆತನಿಗೆ--ನಾವು ಅಬ್ರಹಾಮನ ಸಂತತಿಯವರಾಗಿರಲಾಗಿ ಯಾವ ಮನುಷ್ಯನಿಗೂ ಎಂದಿಗೂ ಗುಲಾಮರಾಗಿರಲಿಲ್ಲ; ಹಾಗಾದರೆ--ನಿಮಗೆ ಬಿಡುಗಡೆಯಾಗುವದೆಂದು ನೀನು ಹೇಗೆ ಹೇಳುತ್ತೀ ಅಂದರು.

ಯೋಹಾನ 8:53

ಸತ್ತುಹೋದ ನಮ್ಮ ತಂದೆ ಯಾದ ಅಬ್ರಹಾಮನಿಗಿಂತಲೂ ನೀನು ದೊಡ್ಡ ವನೋ? ಪ್ರವಾದಿಗಳೂ ಸತ್ತುಹೋದರು. ನಿನ್ನನ್ನು ಯಾರೆಂದು ನೀನು ಮಾಡಿಕೊಳ್ಳುತ್ತೀ ಎಂದು ಕೇಳಲು

ರೋಮಾಪುರದವರಿಗೆ 4:12

ಇದಲ್ಲದೆ ಸುನ್ನತಿಯಿದ್ದವರಿಗೆ ತಂದೆಯಾದವನು ಸುನ್ನತಿಯವರಿಗೆ ಮಾತ್ರವಲ್ಲ, ಆದರೆ ಅಬ್ರಹಾಮನು ಸುನ್ನತಿ ಮಾಡಿಸಿಕೊಳ್ಳುವದಕ್ಕೆ ಮುಂಚೆ ನಡೆದ ನಂಬಿಕೆಯ ಹೆಜ್ಜೆಜಾಡಿನಲ್ಲಿ ನಡೆಯುತ್ತಿರುವ ಸುನ್ನತಿ ಯಿಲ್ಲದವರಿಗೂ ತಂದೆಯಾಗಿದ್ದಾನೆ.

ರೋಮಾಪುರದವರಿಗೆ 9:7

ಇಲ್ಲವೆ ಅವರು ಅಬ್ರಹಾಮನ ಸಂತತಿಯವರಾದ ಕಾರಣ ಅವರೆ ಲ್ಲರೂ ಮಕ್ಕಳಲ್ಲ; ಆದರೆ--ಇಸಾಕನಲ್ಲಿಯೇ ನಿನ್ನ ಸಂತ ತಿಯು ಕರೆಯಲ್ಪಡುವದು ಎಂಬದೇ.

2 ತೆಸಲೋನಿಕದವರಿಗೆ 1:8

ಆತನು (ಕರ್ತನಾದ ಯೇಸು) ದೇವರನ್ನರಿಯ ದವರಿಗೆ ಮತ್ತು ಕರ್ತನಾದ ಯೇಸು ಕ್ರಿಸ್ತನ ಸುವಾರ್ತೆಗೆ ವಿಧೇಯರಾಗದವರಿಗೆ ಉರಿಯುವ ಬೆಂಕಿಯ ಮೂಲಕ ಪ್ರತೀಕಾರ ಮಾಡುವದೂ ದೇವರಿಗೆ ನ್ಯಾಯವಾಗಿದೆ;

ಯಾಕೋಬ 2:13

ಕರುಣೆ ತೋರಿಸದೆ ಇರುವವನಿಗೆ ನ್ಯಾಯತೀರ್ಪಿನಲ್ಲಿ ಕರುಣೆಯು ತೋರಿಸಲ್ಪಡುವದಿಲ್ಲ. ಕರುಣೆಯು ನ್ಯಾಯತೀರ್ಪಿಗಿಂತ ಮೇಲಾಗಿ ಹಿಗ್ಗುತ್ತದೆ.

ಯಾಕೋಬ 3:6

ನಾಲಿಗೆಯು ಬೆಂಕಿಯೂ ದುಷ್ಟಲೋಕವೂ ಆಗಿದೆ. ಹೀಗೆ ಅದು ನಮ್ಮ ಅಂಗಗಳಲ್ಲಿ ಇದ್ದು ದೇಹವನ್ನೆಲ್ಲಾ ಹೊಲೆಮಾಡಿ ಪ್ರಕೃತಿಯ ಕ್ರಮಕ್ಕೆ ಬೆಂಕಿ ಹಚ್ಚುವ ಹಾಗೆಯೂ ನರಕದ ಬೆಂಕಿಯನ್ನು ಹಚ್ಚಿಕೊಳ್ಳುವ ದಾಗಿಯೂ ಇದೆ.

ಪ್ರಕಟನೆ 7:16

ಇನ್ನು ಮೇಲೆ ಅವರಿಗೆ ಹಸಿವೆಯಾಗಲಿ ಬಾಯಾರಿಕೆಯಾಗಲಿ ಆಗುವದೇ ಇಲ್ಲ; ಇದಲ್ಲದೆ ಅವರಿಗೆ ಬಿಸಿಲಾದರೂ ಯಾವ ಝಳವಾದರೂ ಬಡಿಯುವದಿಲ್ಲ.ಸಿಂಹಾಸನದ ಮಧ್ಯದಲ್ಲಿರುವ ಕುರಿಮರಿಯಾದಾತನು ಅವರನ್ನು ಮೇಯಿಸಿ ಜೀವ ಜಲದ ಒರತೆಗಳ ಬಳಿಗೆ ನಡಿಸುತ್ತಾನೆ; ಮತ್ತು ದೇವರು ಅವರ ಕಣ್ಣೀರನ್ನೆಲ್ಲಾ ಒರಸಿಬಿಡುವನು ಎಂದು ಹೇಳಿದನು.

ಪ್ರಕಟನೆ 14:10

ಅಂಥವನು ದೇವರ ಕೋಪವೆಂಬ ಪಾತ್ರೆ ಯಲ್ಲಿ ಏನೂ ಬೆರಸದೆ ಹಾಕಿದ ಆತನ ರೌದ್ರವೆಂಬ ದ್ರಾಕ್ಷಾರಸವನ್ನು ಕುಡಿಯುವನು. ಪರಿಶುದ್ಧ ದೂತರ ಮುಂದೆಯೂ ಕುರಿಮರಿಯಾದಾತನ ಮುಂದೆಯೂ ಬೆಂಕಿಯಿಂದ ಮತ್ತು ಗಂಧಕದಿಂದ ಯಾತನೆಪಡು ವನು.

ಪ್ರಕಟನೆ 19:20

ಆಗ ಮೃಗವು ಸೆರೆಸಿಕ್ಕಿತು; ಇದಲ್ಲದೆ ಮೃಗದ ಮುಂದೆ ಮಹತ್ಕಾರ್ಯಗಳನ್ನು ಮಾಡಿ ಮೃಗದ ಗುರುತು ಹಾಕಿಸಿಕೊಂಡವರನ್ನೂ ಅದರ ವಿಗ್ರಹವನ್ನು ಆರಾಧಿಸಿದವರನ್ನೂ ಮರುಳುಗೊಳಿಸಿದ ಆ ಸುಳ್ಳು ಪ್ರವಾದಿಯೂ ಆದರ ಜೊತೆಯಲ್ಲಿ ಸೆರೆ ಸಿಕ್ಕಿದನು. ಇವರಿಬ್ಬರೂ ಜೀವಸಹಿತವಾಗಿ ಗಂಧಕ ದಿಂದಮಿಕ್ಕಾದವರು ಆ ಕುದುರೆಯ ಮೇಲೆ ಕೂತಿದ್ದಾತನ ಕತ್ತಿಯಿಂದ ಅಂದರೆ ಆತನ ಬಾಯಿಂದ ಬಂದ ಕತ್ತಿ ಯಿಂದ ಹತರಾದರು; ಹಕ್ಕಿಗಳೆಲ್ಲಾ ಅವರ ಮಾಂಸವನು ಹೊಟ್ಟೆತುಂಬಾ ತಿಂದವು.

ಪ್ರಕಟನೆ 20:15

ಯಾವನ ಹೆಸರು ಜೀವಗ್ರಂಥದಲ್ಲಿ ಬರೆದದ್ದಾಗಿ ಕಾಣಲಿಲ್ಲವೋ ಅವನು ಬೆಂಕಿಯ ಕೆರೆಗೆ ದೊಬ್ಬಲ್ಪಟ್ಟನು.

ಪ್ರಕಟನೆ 22:1

ಆಮೇಲೆ ಅವನು ಸ್ಫಟಿಕದಂತೆ ಸ್ವಚ್ಛವಾದ ಮತ್ತು ಶುದ್ಧವಾದ ಜೀವಜಲದ ನದಿ ಯನ್ನು ನನಗೆ ತೋರಿಸಿದನು; ಅದು ದೇವರ ಮತ್ತು ಕುರಿಮರಿಯಾದಾತನ ಸಿಂಹಾಸನದಿಂದ ಹೊರಡುವ ದಾಗಿತ್ತು.

Interlinear

Choose Theme