ಆದರೆ ಅಬ್ರಹಾ ಮನು--ಮಗನೇ, ನೀನು ನಿನ್ನ ಜೀವಿತಕಾಲದಲ್ಲಿ ನಿನ್ನ ಒಳ್ಳೆಯವುಗಳನ್ನು ಹೊಂದಿದಿ; ಅದೇ ರೀತಿಯಲ್ಲಿ ಲಾಜರನು ಕೆಟ್ಟವುಗಳನ್ನು ಹೊಂದಿದ್ದನ್ನು ನೆನಪಿಗೆ ತಂದುಕೋ. ಆದರೆ ಈಗ ಅವನು ಆದರಣೆ ಹೊಂದುತ್ತಾ ಇದ್ದಾನೆ; ನೀನು ಯಾತನೆಪಡುತ್ತಾ ಇದ್ದೀ.
Cross references
ನಿನ್ನ ಪುಟ್ಟಿಗೂ ಕಣಜಕ್ಕೂ ಶಾಪ.
ಸಂಪತ್ತಿನಲ್ಲಿ ತಮ್ಮ ದಿವಸ ಗಳನ್ನು ಕಳೆಯುತ್ತಾರೆ; ಕ್ಷಣದಲ್ಲಿ ಪಾತಾಳಕ್ಕೆ ಇಳಿ ಯುತ್ತಾರೆ.
ಆದರೆ ಆತನು ಅವರ ಮನೆಗಳನ್ನು ಒಳ್ಳೇದರಿಂದ ತುಂಬಿದ್ದಾನೆ; ಆದರೂ ದುಷ್ಟರ ಆಲೋಚನೆಯು ನನಗೆ ದೂರವಾಗಿದೆ.
ಓ ಕರ್ತನೇ, ನಿನ್ನ ಕೈಚಾಚಿ ಈ ಮನುಷ್ಯರಿಂದ ಅಂದರೆ ಜೀವನದಲ್ಲಿ ತಮ್ಮ ಪಾಲಿಗಿರುವ ಈ ಲೋಕದ ಜನರಿಂದ ನನ್ನನ್ನು ಪಾರುಮಾಡು. ಅವರ ಹೊಟ್ಟೆಯನ್ನು ಮರೆಯಾದ ನಿನ್ನ ನಿಕ್ಷೇಪದಿಂದ ತುಂಬಿಸುತ್ತೀ; ಅವರು ಮಕ್ಕಳಿಂದ ತೃಪ್ತರಾಗಿ ತಮ್ಮ ಮಿಕ್ಕ ಆಸ್ತಿಯನ್ನು ತಮ್ಮ ಶಿಶುಗಳಿಗೆ ಉಳಿಸುತ್ತಾರೆ.ನಾನಾದರೋ ನೀತಿಯಲ್ಲಿ ನಿನ್ನ ಮುಖವನ್ನು ದೃಷ್ಟಿಸುವೆನು; ನಾನು ಎಚ್ಚರವಾದಾಗ ನಿನ್ನ ಹೋಲಿಕೆಯೊಂದಿಗೆ ತೃಪ್ತಿಹೊಂದುವೆನು.
ದುಷ್ಟನು ದೊಡ್ಡ ಅಧಿಕಾರದಲ್ಲಿರು ವದನ್ನು ನಾನು ನೋಡಿದೆನು; ಅವನು ಹಸುರಾಗಿ ವಿಸ್ತರಿಸಿಕೊಂಡ ಮರದ ಹಾಗೆ ಇದ್ದನು.
ತಮ್ಮ ಮನೆಗಳು ಯುಗಯುಗಕ್ಕೂ ತಮ್ಮ ನಿವಾಸಗಳು ತಲತಲಾಂತರಕ್ಕೂ ಇರಬೇಕೆಂದು ಅಂತರ್ಯದಲ್ಲಿ ಯೋಚಿಸಿ ಭೂಮಿಗಳಿಗೆ ತಮ್ಮ ಹೆಸರುಗಳನ್ನು ಇಡು ತ್ತಾರೆ.
ಅವರ ಕಣ್ಣುಗಳು ಕೊಬ್ಬಿನಿಂದ ಉಬ್ಬಿಕೊಂಡಿರುತ್ತವೆ; ಅವರ ಹೃದಯವು ಆಶಿಸುವದಕ್ಕಿಂತಲೂ ಹೆಚ್ಚಾಗಿ ಅವರಿಗೆ ಇವೆ.
ಇಗೋ, ಇಹಲೋಕದಲ್ಲಿ ವೃದ್ಧಿಯಾಗುವ ದುಷ್ಟರು ಇವರೇ, ಐಶ್ವರ್ಯದಲ್ಲಿ ಇವರು ಹೆಚ್ಚುತ್ತಾರೆ.
ಯೆರೂಸಲೇಮು ಕಷ್ಟ ಮತ್ತು ಸಂಕಟದಲ್ಲಿದ್ದಾಗ ಪೂರ್ವದಿನಗಳಲ್ಲಿ ತನಗಿದ್ದ ರಮ್ಯವಾದವುಗಳೆಲ್ಲವನ್ನು ಜ್ಞಾಪಕಮಾಡಿಕೊಂಡಿದ್ದಾಳೆ. ಆಕೆಯ ಜನರು ಶತ್ರುವಿನ ಕೈಯಲ್ಲಿ ಬಿದ್ದಾಗ ಯಾವನೂ ಸಹಾಯಮಾಡಲಿಲ್ಲ. ವೈರಿಗಳು ಅವಳನ್ನು ನೋಡಿ ಅವಳ ಸಬ್ಬತ್ತುಗಳ ವಿಷಯದಲ್ಲಿ ಅಪಹಾಸ್ಯಮಾಡಿದರು.
ಅವನ ಮಗನಾದ ಓ ಬೇಲ್ಯಚ್ಚರನೇ--ನೀನು ಇದನ್ನೆಲ್ಲಾ ತಿಳಿದರೂ ನಿನ್ನ ಹೃದಯವನ್ನು ತಗ್ಗಿಸದೆ
ಅದೇ ರಾತ್ರಿಯಲ್ಲಿ ಕಸ್ದೀಯರ ಅರಸನಾದ ಬೇಲ್ಯಚ್ಚರನು ಕೊಲ್ಲಲ್ಪಟ್ಟನು.ಮೇದ್ಯಯನಾದ ದಾರ್ಯಾವೆಷನು ಅರವತ್ತೆರಡು ವರುಷದವನಾಗಿ ರಾಜ್ಯವನ್ನು ವಶಪಡಿಸಿಕೊಂಡನು.
ನಿನ್ನ ಕಾಲು ನಿನಗೆ ಅಭ್ಯಂತರ ಮಾಡಿದರೆ ಅದನ್ನು ಕಡಿದು ಹಾಕು; ಯಾಕಂದರೆ ನೀನು ಎರಡು ಕಾಲುಗಳುಳ್ಳವ ನಾಗಿ ಎಂದಿಗೂ ಆರದ ಬೆಂಕಿಯ ನರಕದೊಳಗೆ ಹಾಕ ಲ್ಪಡುವದಕ್ಕಿಂತ ಕುಂಟನಾಗಿ ಜೀವದಲ್ಲಿ ಸೇರುವದು ನಿನಗೆ ಒಳ್ಳೇದು.
ಆದರೆ ಐಶ್ವರ್ಯವಂತರೇ, ನಿಮಗೆ ಅಯ್ಯೋ! ನೀವು ನಿಮ್ಮ ಆದರಣೆಯನ್ನು ಹೊಂದಿದ್ದೀರಿ.
ಅವನ ಬಾಗಲಿನಲ್ಲಿ ಲಾಜರನೆಂಬ ಒಬ್ಬ ಭಿಕ್ಷುಕನು ಬಿದ್ದುಕೊಂಡಿದ್ದನು; ಅವನು ಮೈ ತುಂಬಾ ಹುಣ್ಣೆದ್ದವನು.
ಆಗ ಅವನು ಪಾತಾಳದೊಳಗೆ ಯಾತನೆಯಲ್ಲಿ ದ್ದವನಾಗಿ ತನ್ನ ಕಣ್ಣುಗಳನ್ನು ಮೇಲಕ್ಕೆತ್ತಿ ದೂರದಿಂದ ಅಬ್ರಹಾಮನನ್ನೂ ಅವನ ಎದೆಯಲ್ಲಿದ್ದ ಲಾಜರನನೂ ನೋಡಿದನು.
ನನ್ನಲ್ಲಿ ನಿಮಗೆ ಸಮಾಧಾನವು ಉಂಟಾಗುವಂತೆ ಇವುಗಳನ್ನು ನಾನು ನಿಮಗೆ ಹೇಳಿದ್ದೇನೆ, ಲೋಕದಲ್ಲಿ ನಿಮಗೆ ಸಂಕಟ ಇರುವದು; ಆದರೆ ಧೈರ್ಯವಾಗಿರ್ರಿ; ನಾನು ಲೋಕ ವನ್ನು ಜಯಿಸಿದ್ದೇನೆ ಅಂದನು.
ನಾವು ಬಹು ಸಂಕಟಗಳನ್ನು ಅನುಭವಿಸಿ ದೇವರ ರಾಜ್ಯದೊಳಗೆ ಸೇರಬೇಕೆಂಬ ದಾಗಿ ಹೇಳಿ ನಂಬಿಕೆಯಲ್ಲಿ ಸ್ಥಿರವಾಗಿರಬೇಕೆಂದು ಅವರನ್ನು ಎಚ್ಚರಿಸಿದರು.
ಶರೀರ ಸಂಬಂಧವಾದ ಮನಸ್ಸು ದೇವರಿಗೆ ಶತ್ರುತ್ವವು; ಕಾರಣವೇನಂದರೆ ಅಂಥ ಮನಸ್ಸು ದೇವರ ನಿಯಮಕ್ಕೆ ಒಳಪಡುವದಿಲ್ಲ, ಒಳಪಡುವದಕ್ಕಾಗುವದೂ ಇಲ್ಲ.
ನಾಶನವೇ ಅವರ ಅಂತ್ಯಾವಸ್ಥೆ, ಹೊಟ್ಟೆಯೇ ಅವರ ದೇವರು, ನಾಚಿಕೆ ಕೆಲಸಗಳಲ್ಲಿಯೇ ಅವರ ಗೌರವವು. ಅವರು ಭೂಸಂಬಂಧವಾದವುಗಳ ಮೇಲೆ ಮನಸ್ಸಿಡುತ್ತಾರೆ.)
ಹೀಗಿರುವಲ್ಲಿ ಈ ಸಂಕಟಗಳಿಂದ ಒಬ್ಬರೂ ಚಂಚಲರಾಗಬೇಡಿರಿ; ಯಾಕಂದರೆ ಸಂಕಟ ಗಳನ್ನು ಅನುಭವಿಸುವದಕ್ಕಾಗಿ ನಾವು ನೇಮಿಸಲ್ಪಟ್ಟವ ರೆಂದು ನೀವೇ ಬಲ್ಲಿರಷ್ಟೆ.
ಸ್ವಲ್ಪ ಕಾಲ ಪಾಪಭೋಗಗಳನ್ನನುಭವಿಸುವದಕ್ಕಿಂತ ದೇವಜನರೊಂದಿಗೆ ಕಷ್ಟವನ್ನನುಭವಿಸುವದನ್ನೇ ಆರಿಸಿ ಕೊಂಡನು.
ಲೋಕವನ್ನಾಗಲಿ ಲೋಕದಲ್ಲಿರುವವುಗಳ ನ್ನಾಗಲಿ ಪ್ರೀತಿಸಬೇಡಿರಿ. ಯಾವನಾದರೂ ಲೋಕ ವನ್ನು ಪ್ರೀತಿಸಿದರೆ ತಂದೆಯ ಪ್ರೀತಿಯು ಅವನಲ್ಲಿಲ್ಲ.
ಅದಕ್ಕೆ ನಾನು ಅಯ್ಯಾ, ನೀನೇ ಬಲ್ಲೆ ಅಂದೆನು. ಅವನು ನನಗೆ--ಇವರು ಮಹಾಸಂಕಟದೊಳಗಿಂದ ಬಂದವರು; ಕುರಿಮರಿಯಾ ದಾತನ ರಕ್ತದಲ್ಲಿ ತಮ್ಮ ನಿಲುವಂಗಿಗಳನ್ನು ತೊಳೆದು ಬೆಳ್ಳಗೆ ಮಾಡಿದ್ದಾರೆ.