ಆಗ ಆ ಮನೆವಾರ್ತೆಯವನು ತನ್ನೊಳಗೆ--ನಾನೇನು ಮಾಡಲಿ? ಯಾಕಂದರೆ ನನ್ನ ಯಜಮಾನನು ನನ್ನನ್ನು ಮನೆವಾರ್ತೆಯ ಕೆಲಸದಿಂದ ತೆಗೆದುಬಿಡು ತ್ತಾನೆ; ನಾನು ಅಗೆಯಲಾರೆನು, ಭಿಕ್ಷೆ ಬೇಡುವದಕ್ಕೆ ನಾನು ನಾಚಿಕೊಳ್ಳುತ್ತೇನೆ.
Cross references
ಹಾಮಾನನು ಒಳಕ್ಕೆ ಬಂದಾಗ ಅರಸನು ಅವನಿಗೆ--ಅರಸನು ಇಷ್ಟಪಟ್ಟು ಘನಪಡಿಸಬೇಕೆಂದಿ ರುವ ಮನುಷ್ಯನಿಗೆ ಮಾಡಬೇಕಾದದ್ದೇನು ಅಂದನು. ಆಗ ಹಾಮಾನನು ತನ್ನ ಹೃದಯದಲ್ಲಿ--ಅರಸನು ನನಗಿಂತ ಹೆಚ್ಚಾಗಿ ಇನ್ನಾರನ್ನು ಘನಪಡಿಸಬೇಕೆಂದಿ ರುವನು ಎಂದು ಅಂದುಕೊಂಡನು.
ಸೋಮಾ ರಿಯ ಪ್ರಾಣವು ಅಪೇಕ್ಷಿಸಿದರೂ ಏನೂ ಹೊಂದುವ ದಿಲ್ಲ; ಜಾಗ್ರತೆಯುಳ್ಳವನ ಪ್ರಾಣವು ಪುಷ್ಟಿಯಾಗು ವದು.
ಸೋಮಾರಿಯ ಮಾರ್ಗವು ಮುಳ್ಳಿನ ಬೇಲಿಯಂತೆ ಇದೆ; ನೀತಿವಂತನ ಮಾರ್ಗವು ಸರಾಗವಾಗಿದೆ.
ಸೋಮಾರಿಯು ತನ್ನ ಕೆಲಸ ದಲ್ಲಿ ಬಹಳವಾಗಿ ಹಾಳುಮಾಡುವವನಿಗೆ ಸಹೋದ ರನು ಆಗಿದ್ದಾನೆ.
ಮೈಗಳ್ಳತನವು ಗಾಢ ನಿದ್ರೆಯಲ್ಲಿ ಮುಳು ಗಿಸುತ್ತದೆ; ಸೋಮಾರಿಯ ಪ್ರಾಣವು ಹಸಿವೆಗೊಳ್ಳು ವದು.
ಮೈಗಳ್ಳನು ಚಳಿಯ ನಿಮಿತ್ತವಾಗಿ ಉಳುವದಿಲ್ಲ; ಆದಕಾರಣ ಸುಗ್ಗಿಯಲ್ಲಿ ಅವನು ಬೇಡಿಕೊಂಡರೂ ಏನೂ ಸಿಕ್ಕುವದಿಲ್ಲ.
ಸೋಮಾರಿಯ ಆಶೆಯು ಅವನನ್ನು ಕೊಲ್ಲುತ್ತವೆ. ಅವನ ಕೈಗಳು ದುಡಿಯುವದಕ್ಕೆ ನಿರಾಕರಿಸುತ್ತವೆ.
ಸೋಮಾರಿಯ ಹೊಲದ ಪಕ್ಕದಲ್ಲಿಯೂ ಬುದ್ಧಿ ಹೀನನ ದ್ರಾಕ್ಷೇ ತೋಟದ ಕಡೆಯಲ್ಲಿಯೂ ನಾನು ಹಾದು ಹೋದೆನು;
ಸೋಮಾರಿಯು --ದಾರಿಯಲ್ಲಿ ಸಿಂಹವಿದೆ, ಬೀದಿಗಳಲ್ಲಿ ಸಿಂಹ ಇದೆ ಎಂದು ಹೇಳುತ್ತಾನೆ.
ನಿನ್ನ ಹಿಂಡುಗಳ ಸ್ಥಿತಿಯನ್ನು ತಿಳಿದುಕೊಳ್ಳುವಂತೆ ಶ್ರದ್ಧೆವಹಿಸು; ನಿನ್ನ ಮಂದೆಗಳನ್ನು ಚೆನ್ನಾಗಿ ನೋಡಿಕೋ.
ಬಾಲ್ಯದಿಂದ ತನ್ನ ಸೇವಕನನ್ನು ಕೋಮಲವಾಗಿ ಸಾಕುವವನು ತರುವಾಯ ತನಗೆ ಮಗನಂತೆ ಆಗುವನು.
ವಿಚಾರಣೆಯ ದಿನದಲ್ಲಿಯೂ ದೂರ ದಿಂದ ಬರುವ ನಾಶನದಲ್ಲಿಯೂ ನೀವು ಏನು ಮಾಡು ವಿರಿ? ಸಹಾಯಕ್ಕಾಗಿ ನೀವು ಯಾರ ಬಳಿಗೆ ಓಡುವಿರಿ? ನಿಮ್ಮ ವೈಭವವನ್ನು ಎಲ್ಲಿ ಬಿಡುವಿರಿ?
ಪರಿಶುದ್ಧದಿನದ ಲ್ಲಿಯೂ ಕರ್ತನ ಹಬ್ಬದ ದಿನದಲ್ಲಿಯೂ ನೀವು ಏನು ಮಾಡುತ್ತೀರಿ?
ತರುವಾಯ ಅವರು ಯೆರಿಕೋವಿಗೆ ಬಂದರು; ಆತನು ತನ್ನ ಶಿಷ್ಯರೊಡನೆಯೂ ಬಹುಸಂಖ್ಯೆಯ ಜನರೊಡನೆಯೂ ಯೆರಿಕೋವಿನಿಂದ ಹೊರಟಾಗ ತಿಮಾಯನ ಮಗನಾದ ಕುರುಡ ಬಾರ್ತಿಮಾಯನು ಹೆದ್ದಾರಿಯ ಬದಿಯಲ್ಲಿ ಕೂತುಕೊಂಡು ಭಿಕ್ಷೆಬೇಡು ತ್ತಿದ್ದನು.
ಆಗ ಅವನು ತನ್ನೊಳಗೆ--ನಾನೇನು ಮಾಡಲಿ? ನನಗಿರುವ ಬೆಳೆಯನ್ನು ತುಂಬಿಡುವದಕ್ಕೆ ನನಗೆ ಸ್ಥಳವಿಲ್ಲ ಎಂದು ಆಲೋಚಿಸಿ ಅವನು--
ಅವನ ಬಾಗಲಿನಲ್ಲಿ ಲಾಜರನೆಂಬ ಒಬ್ಬ ಭಿಕ್ಷುಕನು ಬಿದ್ದುಕೊಂಡಿದ್ದನು; ಅವನು ಮೈ ತುಂಬಾ ಹುಣ್ಣೆದ್ದವನು.
ಇದಾದ ಮೇಲೆ ಆ ಭಿಕ್ಷುಕನು ಸತ್ತನು; ದೂತರು ಅವನನ್ನು ಅಬ್ರಹಾಮನ ಎದೆಗೆ ತೆಗೆದುಕೊಂಡು ಹೋದರು; ಐಶ್ವರ್ಯವಂತನು ಸಹ ಸತ್ತನು; ಅವನನ್ನು ಹೂಣಿ ಟ್ಟರು.
ಅವನು ಸ್ವಲ್ಪಕಾಲದವರೆಗೆ ಮನಸ್ಸಿಲ್ಲ ದವನಾಗಿದ್ದನು; ತರುವಾಯ ಅವನು ತನ್ನೊಳಗೆ--ನಾನು ದೇವರಿಗೆ ಭಯಪಡುವದಿಲ್ಲ, ಮನುಷ್ಯರನ್ನು ಲಕ್ಷ್ಯಮಾಡುವದೂ ಇಲ್ಲ.
ಹೀಗಿರುವದರಿಂದ ನೆರೆಯವರೂ ಅವನು ಮೊದಲು ಕುರುಡನಾಗಿದ್ದಾಗ ಅವನನ್ನು ನೋಡಿದವರೂ-- ಕೂತುಕೊಂಡು ಭಿಕ್ಷೆ ಬೇಡುತ್ತಿದ್ದವನು ಇವನೇ ಅಲ್ಲವೋ ಅಂದರು.
ಹುಟ್ಟು ಕುಂಟನಾಗಿದ್ದ ಒಬ್ಬಾನೊಬ್ಬ ಮನುಷ್ಯನು ದೇವಾಲಯಕ್ಕೆ ಹೋಗುತ್ತಿದ್ದವರಿಂದ ಭಿಕ್ಷೆ ಬೇಡುವದಕ್ಕಾಗಿ ಅವನನ್ನು ಕೆಲವರು ಹೊತ್ತು ಕೊಂಡು ಹೋಗಿ ದೇವಾಲಯದ ಸುಂದರವೆಂಬ ಬಾಗಲಿನಲ್ಲಿ ಪ್ರತಿ ದಿನ ಕೂಡ್ರಿಸುತ್ತಿದ್ದರು.
ಆಗ ಅವನು ವಿಸ್ಮಯಗೊಂಡು ನಡು ಗುತ್ತಾ--ಕರ್ತನೇ, ನಾನು ಏನು ಮಾಡಬೇಕೆಂದು ನೀನು ಕೋರುತ್ತೀ ಅಂದನು. ಅದಕ್ಕೆ ಕರ್ತನು ಅವನಿಗೆ--ನೀನೆದ್ದು ಊರೊಳಕ್ಕೆ ಹೋಗು, ನೀನು ಮಾಡಬೇಕಾದದ್ದು ನಿನಗೆ ತಿಳಿಸಲ್ಪಡುವದು ಎಂದು ಹೇಳಿದನು.
ಆದರೆ ನಿಮ್ಮಲ್ಲಿ ಕೆಲವರು ಯಾವ ಕೆಲಸವನ್ನೂ ಮಾಡದೆ ಇತರರ ಕೆಲಸದಲ್ಲಿ ಮಾತ್ರ ತಲೆಹಾಕಿ ಅಕ್ರಮವಾಗಿ ನಡೆಯುತ್ತಾರೆಂದು ಕೇಳಿದ್ದೇವೆ.